Homeಕರ್ನಾಟಕಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ರಾಜೀನಾಮೆ ಅಂಗೀಕಾರವಾಗುವವರೆಗೆ ಮುಂಬೈ ಹೋಟೆಲ್‍ಗೆ ಹೋಗಿ ಕೂತಿದ್ದು ಅನೈತಿಕತೆಯ ವಾಸನೆ ಹೊಡಿಸ್ತು

- Advertisement -
- Advertisement -

15ಕ್ಕೂ ಹೆಚ್ಚು ಶಾಸಕರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಮುಂಬೈಗೆ ಹಾರಿಹೋದಾಗಿನಿಂದ ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಂಡು ಅಸಹ್ಯ ಹುಟ್ಟಿಸುತ್ತಿದೆ. ಇದನ್ನು ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಡಿನ ಹಿರಿಯ ಸಾಕ್ಷಿಪ್ರಜ್ಞೆಗಳಾದ ದೇವನೂರು ಮಹಾದೇವ ಮತ್ತು ಎಚ್.ಎಸ್ ದೊರೆಸ್ವಾಮಿಯವರು ಸ್ಪೀಕರ್ ರಮೇಶ್ ಕುಮಾರ್ ರವರಿಗೆ ಪತ್ರ ಬರೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಾನುಗೌರಿ.ಕಾಂ ವತಿಯಿಂದ ದೇವನೂರು ಮಹಾದೇವರನ್ನು ಸಂದರ್ಶಿಸಲಾಯಿತು.

ಪತ್ರಿಕೆ: ನೀವು ಸ್ಪೀಕರ್‍ರಿಗೆ ಪತ್ರ ಬರೆಯಬೇಕೆಂದುಕೊಂಡಿದ್ದು ಯಾಕೆ ಸಾರ್?
ದೇವನೂರ ಮಹಾದೇವ: ರಾಜ್ಯದ ಶಾಸಕರ ನಾಪತ್ತೆ ರಾಜಕಾರಣವನ್ನು ಮಾಧ್ಯಮಗಳೆಲ್ಲವೂ ಹೈಡ್ರಾಮಾ ಎಂದು ಬಿಂಬಿಸುತ್ತಿವೆ. ಆದರೆ ನಡೀತಿರೋದು ಕೊಳಕು ಡ್ರಾಮಾ. ಈಗ ಏನು ನಡೀತಿದೆ ಗೊತ್ತೇ? ಇದು ಪಕ್ಷಾಂತರ ನಿಷೇಧ ಕಾಯ್ದೆಯ ಜೀವ ತೆಗೀತಿರೋದು. ಇದಕ್ಕೆ ನಮ್ಮ ನ್ಯಾಯಾಂಗ, ರಾಜ್ಯಪಾಲರು ಹಾಗೂ ರಾಜಕಾರಣಿಗಳು ಒಂದಲ್ಲಾ ಒಂದು ರೀತಿ ಕಾರಣರಾಗಿದ್ದಾರೆ. ಮೇಲ್ಕಂಡವರಿಗೆ ಸಂವಿಧಾನದ ಬಗ್ಗೆ, ನ್ಯಾಯಾಲಯದ ಬಗ್ಗೆ ನಂಬಿಕೆ ಗೌರವ ಇದೆಯಾ ಎನ್ನೋ ಅನುಮಾನ ದಿನೇ ದಿನೇ ಹೆಚ್ಚಾಗ್ತಿದೆ. ಹೀಗಾಗಿ ಸುಮ್ಮನಿರಬಾರ್ದು ಅನ್ನಿಸ್ತು.

ಪತ್ರಿಕೆ: ಸ್ಪೀಕರ್‍ರಿಗೇ ಯಾಕೆ ಬರೆದ್ರಿ?
ದೇ.ಮ: ನೋಡಿ, ಇಲ್ಲಿ ಕೆಲವ್ರು ಆಪರೇಷನ್ ಮಾಡ್ತಾ ಇದಾರೆ. ಕೆಲವ್ರು ಆಪರೇಷನ್ ಮಾಡಿಸ್ಕತಾ ಇದಾರೆ. ಕೊನೇಗೆ ಇದು ನಮ್ಮನ್ನ ಎಲ್ಲಿಗೆ ಕರೆದೊಯ್ತದೆ? ಈ ರೆಸಾರ್ಟ್ ರಾಜಕಾರಣದಿಂದ ನಾವೂ ತಲೆ ತಗ್ಗಿಸೋಂಗಾಗಿದೆ. ಸ್ಪೀಕರ್ ನಡೆ ನುಡಿ ನೋಡಿದರೆ ಅವ್ರು ಸಾಕ್ಷಿಪ್ರಜ್ಞೆ ಇಟ್ಟುಕೊಂಡು ಸೂಕ್ತವಾಗಿ ನಿರ್ವಹಿಸಬಹುದು ಅಂತ ಅನ್ನಿಸ್ತು. ಹಾಗಾಗಿ ಅವ್ರಲ್ಲಿ ಪ್ರಾರ್ಥನೆ ಮಾಡ್ಕೊಂಡ್ವಿ. ಅದಕ್ಕಿಂತ ಮುಖ್ಯವಾಗಿ ಸ್ಪೀಕರ್ ಶಾಸಕಾಂಗದ, ಶಾಸಕರ ಕಸ್ಟೋಡಿಯನ್ ಎಂಬ ಭಾವನೆ ಇದೆ. ಈ ಮಾತು ಅನೇಕ ಸಲ ಶಾಸನ ಸಭೆಯ ಚರ್ಚೆಯಲ್ಲೂ ಬಂದಿದೆ. ಅವ್ರು ಪ್ರತ್ಯಕ್ಷವಾಗಿ ಶಾಸಕರ ಕಸ್ಟೋಡಿಯನ್ ಆಗಿರುವುದಾದರೆ, ಪರೋಕ್ಷವಾಗಿ ಆ ಶಾಸಕರನ್ನು ಆರಿಸಿದ ಮತದಾರರ ಆಯ್ಕೆಯ ಹಕ್ಕಿನ ಕಸ್ಟೋಡಿಯನ್ ಸಹಾ ಆಗ್ಬೇಕು. ಆದ್ರಿಂದ ಅವ್ರಿಗೆ ಪತ್ರ ಬರೆದೆವು.

ಪತ್ರಿಕೆ: ಶಾಸಕರಿಗೆ ರಾಜೀನಾಮೆ ನೀಡೋ ಹಕ್ಕೇ ಇಲ್ಲ ಅಂತ ಹೇಳೋಕಾಗುತ್ತಾ?
ದೇ.ಮ: ಖಂಡಿತವಾಗ್ಲೂ ಇಲ್ಲ. ನಾವು ಯಾರಿಗೂ ರಾಜೀನಾಮೆ ಕೊಡೋದು ಬೇಡ ಅಂತ ಹೇಳಲ್ಲ. ಆದರೆ ಆ ಶಾಸಕರು ರಾಜೀನಾಮೆ ಊರ್ಜಿತವಾಗೋ ತನಕವಾದರೂ ಆ ಕಾಲವಧಿಯಲ್ಲಿ ಜನರ ಜೊತೆ ಇರಬೇಕೆಂದು ಕೇಳುವುದು ನ್ಯಾಯ ತಾನೇ? ಅದು ನೈತಿಕವಾಗಿ ಸರಿ ತಾನೇ? ತಮ್ಮದೇ ನಿರ್ಧಾರದ ಬಗ್ಗೆ ಗ್ಯಾರಂಟಿ ಇಲ್ಲದೇ ಬೇರೆ ರಾಜ್ಯದ ರೆಸಾರ್ಟ್‍ನಲ್ಲಿ ಕೂರೋದು ಕೊಡೋ ಸಂದೇಶ ಏನಂದ್ರೆ ಅದ್ರಲ್ಲಿ ಒಂದೋ ಬೇರೆ ಅನೈತಿಕ ಹಿತಾಸಕ್ತಿ ಇದೆ, ಇಲ್ಲವೇ ಯಾರೋ ಇವ್ರನ್ನ ಹಿಡ್ಕೊಂಡು ಕೂರಿಸ್ಕೊಂಡಿದಾರೆ ಅಂತ.

ಪತ್ರಿಕೆ: ಇದನ್ನ ತಡೆಯೋಕೆ ಏನು ಮಾಡಬೇಕು ಅನಿಸುತ್ತೆ ಸಾರ್?
ದೇ.ಮ: ರಾಜೀನಾಮೆ ಕೊಡೋರು ತಮ್ಮ ಮತದಾರರ ಜೊತೆಗೇ ಇರಬೇಕು ಅಂತ ಮಾಡ್ಬೇಕು. ಇಂತಹ ಹೊಸದೊಂದು ಪರಂಪರೆಯನ್ನು ನಮ್ಮ ಸ್ಪೀಕರ್ ರವರು ಹುಟ್ಟು ಹಾಕುತ್ತಾರೆಂಬ ನಂಬಿಕೆ ನಮಗಿದೆ. ಅಂತಹ ಕಾನೂನು ಸಹಾ ಇಲ್ಲ ನಿಜ. ಇವೆಲ್ಲವನ್ನ ಕೇವಲ ಕಾನೂನಿನ ನಿಯಮಗಳ ಪುಸ್ತಕ ಇಟ್ಕೊಂಡೇ ಬದಲಾಯಿಸಕ್ಕೆ ಆಗಲ್ಲ. ಆದ್ರೆ, ಇವತ್ತಿನ ಸಂದರ್ಭದಲ್ಲಿ ರೆಸಾರ್ಟ್ ರಾಜಕಾರಣದಂತಹ ಚೆಂಗಲು, ಎಂಜಲು ಮತ್ತು ಅಹಂನ ಮದದ ರಾಜಕಾರಣಿಗಳಿಗೆ ಮಾನ ಮರ್ಯಾದೆಗೆ ಹೆದರೋ ಥರದ ಒಂದು ತೀರ್ಮಾನ ಸ್ಪೀಕರ್ ಕಡೆಯಿಂದ ಆಗ್ಲೇಬೇಕು ಅಂತ ನನಗೆ ಅನ್ನಿಸುತ್ತೆ.

ಇದನ್ನೂ ಓದಿ: ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....