Homeಕರ್ನಾಟಕಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ರಾಜೀನಾಮೆ ಅಂಗೀಕಾರವಾಗುವವರೆಗೆ ಮುಂಬೈ ಹೋಟೆಲ್‍ಗೆ ಹೋಗಿ ಕೂತಿದ್ದು ಅನೈತಿಕತೆಯ ವಾಸನೆ ಹೊಡಿಸ್ತು

- Advertisement -
- Advertisement -

15ಕ್ಕೂ ಹೆಚ್ಚು ಶಾಸಕರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಮುಂಬೈಗೆ ಹಾರಿಹೋದಾಗಿನಿಂದ ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಂಡು ಅಸಹ್ಯ ಹುಟ್ಟಿಸುತ್ತಿದೆ. ಇದನ್ನು ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಡಿನ ಹಿರಿಯ ಸಾಕ್ಷಿಪ್ರಜ್ಞೆಗಳಾದ ದೇವನೂರು ಮಹಾದೇವ ಮತ್ತು ಎಚ್.ಎಸ್ ದೊರೆಸ್ವಾಮಿಯವರು ಸ್ಪೀಕರ್ ರಮೇಶ್ ಕುಮಾರ್ ರವರಿಗೆ ಪತ್ರ ಬರೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಾನುಗೌರಿ.ಕಾಂ ವತಿಯಿಂದ ದೇವನೂರು ಮಹಾದೇವರನ್ನು ಸಂದರ್ಶಿಸಲಾಯಿತು.

ಪತ್ರಿಕೆ: ನೀವು ಸ್ಪೀಕರ್‍ರಿಗೆ ಪತ್ರ ಬರೆಯಬೇಕೆಂದುಕೊಂಡಿದ್ದು ಯಾಕೆ ಸಾರ್?
ದೇವನೂರ ಮಹಾದೇವ: ರಾಜ್ಯದ ಶಾಸಕರ ನಾಪತ್ತೆ ರಾಜಕಾರಣವನ್ನು ಮಾಧ್ಯಮಗಳೆಲ್ಲವೂ ಹೈಡ್ರಾಮಾ ಎಂದು ಬಿಂಬಿಸುತ್ತಿವೆ. ಆದರೆ ನಡೀತಿರೋದು ಕೊಳಕು ಡ್ರಾಮಾ. ಈಗ ಏನು ನಡೀತಿದೆ ಗೊತ್ತೇ? ಇದು ಪಕ್ಷಾಂತರ ನಿಷೇಧ ಕಾಯ್ದೆಯ ಜೀವ ತೆಗೀತಿರೋದು. ಇದಕ್ಕೆ ನಮ್ಮ ನ್ಯಾಯಾಂಗ, ರಾಜ್ಯಪಾಲರು ಹಾಗೂ ರಾಜಕಾರಣಿಗಳು ಒಂದಲ್ಲಾ ಒಂದು ರೀತಿ ಕಾರಣರಾಗಿದ್ದಾರೆ. ಮೇಲ್ಕಂಡವರಿಗೆ ಸಂವಿಧಾನದ ಬಗ್ಗೆ, ನ್ಯಾಯಾಲಯದ ಬಗ್ಗೆ ನಂಬಿಕೆ ಗೌರವ ಇದೆಯಾ ಎನ್ನೋ ಅನುಮಾನ ದಿನೇ ದಿನೇ ಹೆಚ್ಚಾಗ್ತಿದೆ. ಹೀಗಾಗಿ ಸುಮ್ಮನಿರಬಾರ್ದು ಅನ್ನಿಸ್ತು.

ಪತ್ರಿಕೆ: ಸ್ಪೀಕರ್‍ರಿಗೇ ಯಾಕೆ ಬರೆದ್ರಿ?
ದೇ.ಮ: ನೋಡಿ, ಇಲ್ಲಿ ಕೆಲವ್ರು ಆಪರೇಷನ್ ಮಾಡ್ತಾ ಇದಾರೆ. ಕೆಲವ್ರು ಆಪರೇಷನ್ ಮಾಡಿಸ್ಕತಾ ಇದಾರೆ. ಕೊನೇಗೆ ಇದು ನಮ್ಮನ್ನ ಎಲ್ಲಿಗೆ ಕರೆದೊಯ್ತದೆ? ಈ ರೆಸಾರ್ಟ್ ರಾಜಕಾರಣದಿಂದ ನಾವೂ ತಲೆ ತಗ್ಗಿಸೋಂಗಾಗಿದೆ. ಸ್ಪೀಕರ್ ನಡೆ ನುಡಿ ನೋಡಿದರೆ ಅವ್ರು ಸಾಕ್ಷಿಪ್ರಜ್ಞೆ ಇಟ್ಟುಕೊಂಡು ಸೂಕ್ತವಾಗಿ ನಿರ್ವಹಿಸಬಹುದು ಅಂತ ಅನ್ನಿಸ್ತು. ಹಾಗಾಗಿ ಅವ್ರಲ್ಲಿ ಪ್ರಾರ್ಥನೆ ಮಾಡ್ಕೊಂಡ್ವಿ. ಅದಕ್ಕಿಂತ ಮುಖ್ಯವಾಗಿ ಸ್ಪೀಕರ್ ಶಾಸಕಾಂಗದ, ಶಾಸಕರ ಕಸ್ಟೋಡಿಯನ್ ಎಂಬ ಭಾವನೆ ಇದೆ. ಈ ಮಾತು ಅನೇಕ ಸಲ ಶಾಸನ ಸಭೆಯ ಚರ್ಚೆಯಲ್ಲೂ ಬಂದಿದೆ. ಅವ್ರು ಪ್ರತ್ಯಕ್ಷವಾಗಿ ಶಾಸಕರ ಕಸ್ಟೋಡಿಯನ್ ಆಗಿರುವುದಾದರೆ, ಪರೋಕ್ಷವಾಗಿ ಆ ಶಾಸಕರನ್ನು ಆರಿಸಿದ ಮತದಾರರ ಆಯ್ಕೆಯ ಹಕ್ಕಿನ ಕಸ್ಟೋಡಿಯನ್ ಸಹಾ ಆಗ್ಬೇಕು. ಆದ್ರಿಂದ ಅವ್ರಿಗೆ ಪತ್ರ ಬರೆದೆವು.

ಪತ್ರಿಕೆ: ಶಾಸಕರಿಗೆ ರಾಜೀನಾಮೆ ನೀಡೋ ಹಕ್ಕೇ ಇಲ್ಲ ಅಂತ ಹೇಳೋಕಾಗುತ್ತಾ?
ದೇ.ಮ: ಖಂಡಿತವಾಗ್ಲೂ ಇಲ್ಲ. ನಾವು ಯಾರಿಗೂ ರಾಜೀನಾಮೆ ಕೊಡೋದು ಬೇಡ ಅಂತ ಹೇಳಲ್ಲ. ಆದರೆ ಆ ಶಾಸಕರು ರಾಜೀನಾಮೆ ಊರ್ಜಿತವಾಗೋ ತನಕವಾದರೂ ಆ ಕಾಲವಧಿಯಲ್ಲಿ ಜನರ ಜೊತೆ ಇರಬೇಕೆಂದು ಕೇಳುವುದು ನ್ಯಾಯ ತಾನೇ? ಅದು ನೈತಿಕವಾಗಿ ಸರಿ ತಾನೇ? ತಮ್ಮದೇ ನಿರ್ಧಾರದ ಬಗ್ಗೆ ಗ್ಯಾರಂಟಿ ಇಲ್ಲದೇ ಬೇರೆ ರಾಜ್ಯದ ರೆಸಾರ್ಟ್‍ನಲ್ಲಿ ಕೂರೋದು ಕೊಡೋ ಸಂದೇಶ ಏನಂದ್ರೆ ಅದ್ರಲ್ಲಿ ಒಂದೋ ಬೇರೆ ಅನೈತಿಕ ಹಿತಾಸಕ್ತಿ ಇದೆ, ಇಲ್ಲವೇ ಯಾರೋ ಇವ್ರನ್ನ ಹಿಡ್ಕೊಂಡು ಕೂರಿಸ್ಕೊಂಡಿದಾರೆ ಅಂತ.

ಪತ್ರಿಕೆ: ಇದನ್ನ ತಡೆಯೋಕೆ ಏನು ಮಾಡಬೇಕು ಅನಿಸುತ್ತೆ ಸಾರ್?
ದೇ.ಮ: ರಾಜೀನಾಮೆ ಕೊಡೋರು ತಮ್ಮ ಮತದಾರರ ಜೊತೆಗೇ ಇರಬೇಕು ಅಂತ ಮಾಡ್ಬೇಕು. ಇಂತಹ ಹೊಸದೊಂದು ಪರಂಪರೆಯನ್ನು ನಮ್ಮ ಸ್ಪೀಕರ್ ರವರು ಹುಟ್ಟು ಹಾಕುತ್ತಾರೆಂಬ ನಂಬಿಕೆ ನಮಗಿದೆ. ಅಂತಹ ಕಾನೂನು ಸಹಾ ಇಲ್ಲ ನಿಜ. ಇವೆಲ್ಲವನ್ನ ಕೇವಲ ಕಾನೂನಿನ ನಿಯಮಗಳ ಪುಸ್ತಕ ಇಟ್ಕೊಂಡೇ ಬದಲಾಯಿಸಕ್ಕೆ ಆಗಲ್ಲ. ಆದ್ರೆ, ಇವತ್ತಿನ ಸಂದರ್ಭದಲ್ಲಿ ರೆಸಾರ್ಟ್ ರಾಜಕಾರಣದಂತಹ ಚೆಂಗಲು, ಎಂಜಲು ಮತ್ತು ಅಹಂನ ಮದದ ರಾಜಕಾರಣಿಗಳಿಗೆ ಮಾನ ಮರ್ಯಾದೆಗೆ ಹೆದರೋ ಥರದ ಒಂದು ತೀರ್ಮಾನ ಸ್ಪೀಕರ್ ಕಡೆಯಿಂದ ಆಗ್ಲೇಬೇಕು ಅಂತ ನನಗೆ ಅನ್ನಿಸುತ್ತೆ.

ಇದನ್ನೂ ಓದಿ: ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...