Homeಕರ್ನಾಟಕಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ರಾಜೀನಾಮೆ ಅಂಗೀಕಾರವಾಗುವವರೆಗೆ ಮುಂಬೈ ಹೋಟೆಲ್‍ಗೆ ಹೋಗಿ ಕೂತಿದ್ದು ಅನೈತಿಕತೆಯ ವಾಸನೆ ಹೊಡಿಸ್ತು

- Advertisement -
- Advertisement -

15ಕ್ಕೂ ಹೆಚ್ಚು ಶಾಸಕರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಮುಂಬೈಗೆ ಹಾರಿಹೋದಾಗಿನಿಂದ ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಂಡು ಅಸಹ್ಯ ಹುಟ್ಟಿಸುತ್ತಿದೆ. ಇದನ್ನು ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಡಿನ ಹಿರಿಯ ಸಾಕ್ಷಿಪ್ರಜ್ಞೆಗಳಾದ ದೇವನೂರು ಮಹಾದೇವ ಮತ್ತು ಎಚ್.ಎಸ್ ದೊರೆಸ್ವಾಮಿಯವರು ಸ್ಪೀಕರ್ ರಮೇಶ್ ಕುಮಾರ್ ರವರಿಗೆ ಪತ್ರ ಬರೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಾನುಗೌರಿ.ಕಾಂ ವತಿಯಿಂದ ದೇವನೂರು ಮಹಾದೇವರನ್ನು ಸಂದರ್ಶಿಸಲಾಯಿತು.

ಪತ್ರಿಕೆ: ನೀವು ಸ್ಪೀಕರ್‍ರಿಗೆ ಪತ್ರ ಬರೆಯಬೇಕೆಂದುಕೊಂಡಿದ್ದು ಯಾಕೆ ಸಾರ್?
ದೇವನೂರ ಮಹಾದೇವ: ರಾಜ್ಯದ ಶಾಸಕರ ನಾಪತ್ತೆ ರಾಜಕಾರಣವನ್ನು ಮಾಧ್ಯಮಗಳೆಲ್ಲವೂ ಹೈಡ್ರಾಮಾ ಎಂದು ಬಿಂಬಿಸುತ್ತಿವೆ. ಆದರೆ ನಡೀತಿರೋದು ಕೊಳಕು ಡ್ರಾಮಾ. ಈಗ ಏನು ನಡೀತಿದೆ ಗೊತ್ತೇ? ಇದು ಪಕ್ಷಾಂತರ ನಿಷೇಧ ಕಾಯ್ದೆಯ ಜೀವ ತೆಗೀತಿರೋದು. ಇದಕ್ಕೆ ನಮ್ಮ ನ್ಯಾಯಾಂಗ, ರಾಜ್ಯಪಾಲರು ಹಾಗೂ ರಾಜಕಾರಣಿಗಳು ಒಂದಲ್ಲಾ ಒಂದು ರೀತಿ ಕಾರಣರಾಗಿದ್ದಾರೆ. ಮೇಲ್ಕಂಡವರಿಗೆ ಸಂವಿಧಾನದ ಬಗ್ಗೆ, ನ್ಯಾಯಾಲಯದ ಬಗ್ಗೆ ನಂಬಿಕೆ ಗೌರವ ಇದೆಯಾ ಎನ್ನೋ ಅನುಮಾನ ದಿನೇ ದಿನೇ ಹೆಚ್ಚಾಗ್ತಿದೆ. ಹೀಗಾಗಿ ಸುಮ್ಮನಿರಬಾರ್ದು ಅನ್ನಿಸ್ತು.

ಪತ್ರಿಕೆ: ಸ್ಪೀಕರ್‍ರಿಗೇ ಯಾಕೆ ಬರೆದ್ರಿ?
ದೇ.ಮ: ನೋಡಿ, ಇಲ್ಲಿ ಕೆಲವ್ರು ಆಪರೇಷನ್ ಮಾಡ್ತಾ ಇದಾರೆ. ಕೆಲವ್ರು ಆಪರೇಷನ್ ಮಾಡಿಸ್ಕತಾ ಇದಾರೆ. ಕೊನೇಗೆ ಇದು ನಮ್ಮನ್ನ ಎಲ್ಲಿಗೆ ಕರೆದೊಯ್ತದೆ? ಈ ರೆಸಾರ್ಟ್ ರಾಜಕಾರಣದಿಂದ ನಾವೂ ತಲೆ ತಗ್ಗಿಸೋಂಗಾಗಿದೆ. ಸ್ಪೀಕರ್ ನಡೆ ನುಡಿ ನೋಡಿದರೆ ಅವ್ರು ಸಾಕ್ಷಿಪ್ರಜ್ಞೆ ಇಟ್ಟುಕೊಂಡು ಸೂಕ್ತವಾಗಿ ನಿರ್ವಹಿಸಬಹುದು ಅಂತ ಅನ್ನಿಸ್ತು. ಹಾಗಾಗಿ ಅವ್ರಲ್ಲಿ ಪ್ರಾರ್ಥನೆ ಮಾಡ್ಕೊಂಡ್ವಿ. ಅದಕ್ಕಿಂತ ಮುಖ್ಯವಾಗಿ ಸ್ಪೀಕರ್ ಶಾಸಕಾಂಗದ, ಶಾಸಕರ ಕಸ್ಟೋಡಿಯನ್ ಎಂಬ ಭಾವನೆ ಇದೆ. ಈ ಮಾತು ಅನೇಕ ಸಲ ಶಾಸನ ಸಭೆಯ ಚರ್ಚೆಯಲ್ಲೂ ಬಂದಿದೆ. ಅವ್ರು ಪ್ರತ್ಯಕ್ಷವಾಗಿ ಶಾಸಕರ ಕಸ್ಟೋಡಿಯನ್ ಆಗಿರುವುದಾದರೆ, ಪರೋಕ್ಷವಾಗಿ ಆ ಶಾಸಕರನ್ನು ಆರಿಸಿದ ಮತದಾರರ ಆಯ್ಕೆಯ ಹಕ್ಕಿನ ಕಸ್ಟೋಡಿಯನ್ ಸಹಾ ಆಗ್ಬೇಕು. ಆದ್ರಿಂದ ಅವ್ರಿಗೆ ಪತ್ರ ಬರೆದೆವು.

ಪತ್ರಿಕೆ: ಶಾಸಕರಿಗೆ ರಾಜೀನಾಮೆ ನೀಡೋ ಹಕ್ಕೇ ಇಲ್ಲ ಅಂತ ಹೇಳೋಕಾಗುತ್ತಾ?
ದೇ.ಮ: ಖಂಡಿತವಾಗ್ಲೂ ಇಲ್ಲ. ನಾವು ಯಾರಿಗೂ ರಾಜೀನಾಮೆ ಕೊಡೋದು ಬೇಡ ಅಂತ ಹೇಳಲ್ಲ. ಆದರೆ ಆ ಶಾಸಕರು ರಾಜೀನಾಮೆ ಊರ್ಜಿತವಾಗೋ ತನಕವಾದರೂ ಆ ಕಾಲವಧಿಯಲ್ಲಿ ಜನರ ಜೊತೆ ಇರಬೇಕೆಂದು ಕೇಳುವುದು ನ್ಯಾಯ ತಾನೇ? ಅದು ನೈತಿಕವಾಗಿ ಸರಿ ತಾನೇ? ತಮ್ಮದೇ ನಿರ್ಧಾರದ ಬಗ್ಗೆ ಗ್ಯಾರಂಟಿ ಇಲ್ಲದೇ ಬೇರೆ ರಾಜ್ಯದ ರೆಸಾರ್ಟ್‍ನಲ್ಲಿ ಕೂರೋದು ಕೊಡೋ ಸಂದೇಶ ಏನಂದ್ರೆ ಅದ್ರಲ್ಲಿ ಒಂದೋ ಬೇರೆ ಅನೈತಿಕ ಹಿತಾಸಕ್ತಿ ಇದೆ, ಇಲ್ಲವೇ ಯಾರೋ ಇವ್ರನ್ನ ಹಿಡ್ಕೊಂಡು ಕೂರಿಸ್ಕೊಂಡಿದಾರೆ ಅಂತ.

ಪತ್ರಿಕೆ: ಇದನ್ನ ತಡೆಯೋಕೆ ಏನು ಮಾಡಬೇಕು ಅನಿಸುತ್ತೆ ಸಾರ್?
ದೇ.ಮ: ರಾಜೀನಾಮೆ ಕೊಡೋರು ತಮ್ಮ ಮತದಾರರ ಜೊತೆಗೇ ಇರಬೇಕು ಅಂತ ಮಾಡ್ಬೇಕು. ಇಂತಹ ಹೊಸದೊಂದು ಪರಂಪರೆಯನ್ನು ನಮ್ಮ ಸ್ಪೀಕರ್ ರವರು ಹುಟ್ಟು ಹಾಕುತ್ತಾರೆಂಬ ನಂಬಿಕೆ ನಮಗಿದೆ. ಅಂತಹ ಕಾನೂನು ಸಹಾ ಇಲ್ಲ ನಿಜ. ಇವೆಲ್ಲವನ್ನ ಕೇವಲ ಕಾನೂನಿನ ನಿಯಮಗಳ ಪುಸ್ತಕ ಇಟ್ಕೊಂಡೇ ಬದಲಾಯಿಸಕ್ಕೆ ಆಗಲ್ಲ. ಆದ್ರೆ, ಇವತ್ತಿನ ಸಂದರ್ಭದಲ್ಲಿ ರೆಸಾರ್ಟ್ ರಾಜಕಾರಣದಂತಹ ಚೆಂಗಲು, ಎಂಜಲು ಮತ್ತು ಅಹಂನ ಮದದ ರಾಜಕಾರಣಿಗಳಿಗೆ ಮಾನ ಮರ್ಯಾದೆಗೆ ಹೆದರೋ ಥರದ ಒಂದು ತೀರ್ಮಾನ ಸ್ಪೀಕರ್ ಕಡೆಯಿಂದ ಆಗ್ಲೇಬೇಕು ಅಂತ ನನಗೆ ಅನ್ನಿಸುತ್ತೆ.

ಇದನ್ನೂ ಓದಿ: ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...