Homeಕರ್ನಾಟಕಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ಪಕ್ಷಾಂತರ ನೀಷೇಧ ಕಾಯ್ದೆಯ ಜೀವ ತೆಗೆಯುತ್ತಿದ್ದಾರೆ: ದೇವನೂರು ಮಹಾದೇವ

ರಾಜೀನಾಮೆ ಅಂಗೀಕಾರವಾಗುವವರೆಗೆ ಮುಂಬೈ ಹೋಟೆಲ್‍ಗೆ ಹೋಗಿ ಕೂತಿದ್ದು ಅನೈತಿಕತೆಯ ವಾಸನೆ ಹೊಡಿಸ್ತು

- Advertisement -
- Advertisement -

15ಕ್ಕೂ ಹೆಚ್ಚು ಶಾಸಕರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಮುಂಬೈಗೆ ಹಾರಿಹೋದಾಗಿನಿಂದ ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಂಡು ಅಸಹ್ಯ ಹುಟ್ಟಿಸುತ್ತಿದೆ. ಇದನ್ನು ವಿರೋಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಡಿನ ಹಿರಿಯ ಸಾಕ್ಷಿಪ್ರಜ್ಞೆಗಳಾದ ದೇವನೂರು ಮಹಾದೇವ ಮತ್ತು ಎಚ್.ಎಸ್ ದೊರೆಸ್ವಾಮಿಯವರು ಸ್ಪೀಕರ್ ರಮೇಶ್ ಕುಮಾರ್ ರವರಿಗೆ ಪತ್ರ ಬರೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಾನುಗೌರಿ.ಕಾಂ ವತಿಯಿಂದ ದೇವನೂರು ಮಹಾದೇವರನ್ನು ಸಂದರ್ಶಿಸಲಾಯಿತು.

ಪತ್ರಿಕೆ: ನೀವು ಸ್ಪೀಕರ್‍ರಿಗೆ ಪತ್ರ ಬರೆಯಬೇಕೆಂದುಕೊಂಡಿದ್ದು ಯಾಕೆ ಸಾರ್?
ದೇವನೂರ ಮಹಾದೇವ: ರಾಜ್ಯದ ಶಾಸಕರ ನಾಪತ್ತೆ ರಾಜಕಾರಣವನ್ನು ಮಾಧ್ಯಮಗಳೆಲ್ಲವೂ ಹೈಡ್ರಾಮಾ ಎಂದು ಬಿಂಬಿಸುತ್ತಿವೆ. ಆದರೆ ನಡೀತಿರೋದು ಕೊಳಕು ಡ್ರಾಮಾ. ಈಗ ಏನು ನಡೀತಿದೆ ಗೊತ್ತೇ? ಇದು ಪಕ್ಷಾಂತರ ನಿಷೇಧ ಕಾಯ್ದೆಯ ಜೀವ ತೆಗೀತಿರೋದು. ಇದಕ್ಕೆ ನಮ್ಮ ನ್ಯಾಯಾಂಗ, ರಾಜ್ಯಪಾಲರು ಹಾಗೂ ರಾಜಕಾರಣಿಗಳು ಒಂದಲ್ಲಾ ಒಂದು ರೀತಿ ಕಾರಣರಾಗಿದ್ದಾರೆ. ಮೇಲ್ಕಂಡವರಿಗೆ ಸಂವಿಧಾನದ ಬಗ್ಗೆ, ನ್ಯಾಯಾಲಯದ ಬಗ್ಗೆ ನಂಬಿಕೆ ಗೌರವ ಇದೆಯಾ ಎನ್ನೋ ಅನುಮಾನ ದಿನೇ ದಿನೇ ಹೆಚ್ಚಾಗ್ತಿದೆ. ಹೀಗಾಗಿ ಸುಮ್ಮನಿರಬಾರ್ದು ಅನ್ನಿಸ್ತು.

ಪತ್ರಿಕೆ: ಸ್ಪೀಕರ್‍ರಿಗೇ ಯಾಕೆ ಬರೆದ್ರಿ?
ದೇ.ಮ: ನೋಡಿ, ಇಲ್ಲಿ ಕೆಲವ್ರು ಆಪರೇಷನ್ ಮಾಡ್ತಾ ಇದಾರೆ. ಕೆಲವ್ರು ಆಪರೇಷನ್ ಮಾಡಿಸ್ಕತಾ ಇದಾರೆ. ಕೊನೇಗೆ ಇದು ನಮ್ಮನ್ನ ಎಲ್ಲಿಗೆ ಕರೆದೊಯ್ತದೆ? ಈ ರೆಸಾರ್ಟ್ ರಾಜಕಾರಣದಿಂದ ನಾವೂ ತಲೆ ತಗ್ಗಿಸೋಂಗಾಗಿದೆ. ಸ್ಪೀಕರ್ ನಡೆ ನುಡಿ ನೋಡಿದರೆ ಅವ್ರು ಸಾಕ್ಷಿಪ್ರಜ್ಞೆ ಇಟ್ಟುಕೊಂಡು ಸೂಕ್ತವಾಗಿ ನಿರ್ವಹಿಸಬಹುದು ಅಂತ ಅನ್ನಿಸ್ತು. ಹಾಗಾಗಿ ಅವ್ರಲ್ಲಿ ಪ್ರಾರ್ಥನೆ ಮಾಡ್ಕೊಂಡ್ವಿ. ಅದಕ್ಕಿಂತ ಮುಖ್ಯವಾಗಿ ಸ್ಪೀಕರ್ ಶಾಸಕಾಂಗದ, ಶಾಸಕರ ಕಸ್ಟೋಡಿಯನ್ ಎಂಬ ಭಾವನೆ ಇದೆ. ಈ ಮಾತು ಅನೇಕ ಸಲ ಶಾಸನ ಸಭೆಯ ಚರ್ಚೆಯಲ್ಲೂ ಬಂದಿದೆ. ಅವ್ರು ಪ್ರತ್ಯಕ್ಷವಾಗಿ ಶಾಸಕರ ಕಸ್ಟೋಡಿಯನ್ ಆಗಿರುವುದಾದರೆ, ಪರೋಕ್ಷವಾಗಿ ಆ ಶಾಸಕರನ್ನು ಆರಿಸಿದ ಮತದಾರರ ಆಯ್ಕೆಯ ಹಕ್ಕಿನ ಕಸ್ಟೋಡಿಯನ್ ಸಹಾ ಆಗ್ಬೇಕು. ಆದ್ರಿಂದ ಅವ್ರಿಗೆ ಪತ್ರ ಬರೆದೆವು.

ಪತ್ರಿಕೆ: ಶಾಸಕರಿಗೆ ರಾಜೀನಾಮೆ ನೀಡೋ ಹಕ್ಕೇ ಇಲ್ಲ ಅಂತ ಹೇಳೋಕಾಗುತ್ತಾ?
ದೇ.ಮ: ಖಂಡಿತವಾಗ್ಲೂ ಇಲ್ಲ. ನಾವು ಯಾರಿಗೂ ರಾಜೀನಾಮೆ ಕೊಡೋದು ಬೇಡ ಅಂತ ಹೇಳಲ್ಲ. ಆದರೆ ಆ ಶಾಸಕರು ರಾಜೀನಾಮೆ ಊರ್ಜಿತವಾಗೋ ತನಕವಾದರೂ ಆ ಕಾಲವಧಿಯಲ್ಲಿ ಜನರ ಜೊತೆ ಇರಬೇಕೆಂದು ಕೇಳುವುದು ನ್ಯಾಯ ತಾನೇ? ಅದು ನೈತಿಕವಾಗಿ ಸರಿ ತಾನೇ? ತಮ್ಮದೇ ನಿರ್ಧಾರದ ಬಗ್ಗೆ ಗ್ಯಾರಂಟಿ ಇಲ್ಲದೇ ಬೇರೆ ರಾಜ್ಯದ ರೆಸಾರ್ಟ್‍ನಲ್ಲಿ ಕೂರೋದು ಕೊಡೋ ಸಂದೇಶ ಏನಂದ್ರೆ ಅದ್ರಲ್ಲಿ ಒಂದೋ ಬೇರೆ ಅನೈತಿಕ ಹಿತಾಸಕ್ತಿ ಇದೆ, ಇಲ್ಲವೇ ಯಾರೋ ಇವ್ರನ್ನ ಹಿಡ್ಕೊಂಡು ಕೂರಿಸ್ಕೊಂಡಿದಾರೆ ಅಂತ.

ಪತ್ರಿಕೆ: ಇದನ್ನ ತಡೆಯೋಕೆ ಏನು ಮಾಡಬೇಕು ಅನಿಸುತ್ತೆ ಸಾರ್?
ದೇ.ಮ: ರಾಜೀನಾಮೆ ಕೊಡೋರು ತಮ್ಮ ಮತದಾರರ ಜೊತೆಗೇ ಇರಬೇಕು ಅಂತ ಮಾಡ್ಬೇಕು. ಇಂತಹ ಹೊಸದೊಂದು ಪರಂಪರೆಯನ್ನು ನಮ್ಮ ಸ್ಪೀಕರ್ ರವರು ಹುಟ್ಟು ಹಾಕುತ್ತಾರೆಂಬ ನಂಬಿಕೆ ನಮಗಿದೆ. ಅಂತಹ ಕಾನೂನು ಸಹಾ ಇಲ್ಲ ನಿಜ. ಇವೆಲ್ಲವನ್ನ ಕೇವಲ ಕಾನೂನಿನ ನಿಯಮಗಳ ಪುಸ್ತಕ ಇಟ್ಕೊಂಡೇ ಬದಲಾಯಿಸಕ್ಕೆ ಆಗಲ್ಲ. ಆದ್ರೆ, ಇವತ್ತಿನ ಸಂದರ್ಭದಲ್ಲಿ ರೆಸಾರ್ಟ್ ರಾಜಕಾರಣದಂತಹ ಚೆಂಗಲು, ಎಂಜಲು ಮತ್ತು ಅಹಂನ ಮದದ ರಾಜಕಾರಣಿಗಳಿಗೆ ಮಾನ ಮರ್ಯಾದೆಗೆ ಹೆದರೋ ಥರದ ಒಂದು ತೀರ್ಮಾನ ಸ್ಪೀಕರ್ ಕಡೆಯಿಂದ ಆಗ್ಲೇಬೇಕು ಅಂತ ನನಗೆ ಅನ್ನಿಸುತ್ತೆ.

ಇದನ್ನೂ ಓದಿ: ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...