Homeಮುಖಪುಟಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

"ಶೆರೆ ಅಂಗಡಿಯೂ ತೆರೆದಿರುವಾಗ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಓಡಾಡಿದರೆ ತೊಂದರೆ ಅನ್ನುತ್ತೆ ಅನ್ನೋದು ಸರಿಯಾ?"

- Advertisement -
- Advertisement -

ಪತ್ರಿಕೆ: ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಪರಿಶೀಲನೆಗೆ ಸ್ಪೀಕರ್ ತಡೆ ನೀಡಬಹುದಾ?

ಎಚ್.ಕೆ.ಪಾಟೀಲ್ : ಅವರು ನೀವು ಇದರ ಪರಿಶೀಲನೆ ಮಾಡಬೇಡಿ ಎಂದು ಹೇಳಕ್ಕೆ ಆಗಲ್ಲ. ಕೊರೊನಾ ಸೋಂಕಿನ ಕಾರಣಕ್ಕೆ ನಿಮ್ಮ ಹಿತದೃಷ್ಟಿಯಿಂದ ಅದಕ್ಕೆ ಅವಕಾಶ ಕೊಡುವುದಿಲ್ಲ ಎನ್ನುವ ಹಾಗೆ ಹೇಳಿದ್ದಾರೆ. ಆದರೆ ಶೆರೆ ಅಂಗಡಿ ಓಪೆನ್ ಮಾಡಿದ್ದಾರೆ. ಬಸ್ಸುಗಳು, ರೈಲುಗಳನ್ನು ಓಡಿಸ್ತಿದಾರೆ. ವ್ಯಾಪಾರ ನಡೀತಿದೆ. ದೇವಸ್ಥಾನಗಳು, ಮಸೀದಿ, ಚರ್ಚ್‍ಗಳಿಗೆ ಅವಕಾಶ ಕೊಡ್ತೀವಿ ಅಂತಿದಾರೆ. ಸಾರ್ವಜನಿಕರಿಗೆ ಚಿಕಿತ್ಸೆ ಹೇಗೆ ನಡೀತಿದೆ, ಎಲ್ಲವೂ ಸರಿಯಾಗಿದೆಯಾ, ಸರ್ಕಾರ ಯಾವ ಅನುಕೂಲಗಳನ್ನ ಕಲ್ಪಿಸಿದೆ ಅಂತ ಶಾಸನಸಭೆಯ ಸದಸ್ಯರು ಇರುವ ಸಮಿತಿಗೆ ಮಾತ್ರ ತೊಂದರೆ ಆಗಿಬಿಡುತ್ತದಾ? ಇದರಿಂದ ನಾವು ಅರ್ಥ ಮಾಡಿಕೊಳ್ಳಬೇಕು.

ಪತ್ರಿಕೆ: ಹಾಗಾದರೆ ನಿಮಗೆ ಬಂದಿರುವ ಭ್ರಷ್ಟಾಚಾರದ ಕುರಿತ ದೂರಿನ ತನಿಖೆ ಮಾಡಲು ಏನೂ ಅಡ್ಡಿಯಿಲ್ಲ ಅಲ್ಲವಾ?

ಎಚ್.ಕೆ.ಪಾಟೀಲ್: ನಾವು ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳಿಗೆ ಸಂಬಂಧಪಟ್ಟ ದೂರುಗಳ ಆಧಾರದ ಮೇಲೆ ಪರಿಶೀಲನೆ ಮಾಡಿ ವರದಿ ಕೊಡಿ ಎಂದು ಕೇಳಿದ್ದೇವೆ. ಅವರು ನಮಗೆ ಇದುವರೆಗೂ ಏನನ್ನೂ ಕೊಟ್ಟಿಲ್ಲ. ಇಂದು ನಮ್ಮ ಸಮಿತಿ ಸಭೆ ಇತ್ತು. ಅಲ್ಲಿ ಇದನ್ನ ಗಮನಕ್ಕೆ ತೆಗೆದುಕೊಂಡಿದೀವಿ, ಮುಂದಿನ ಮಂಗಳವಾರದ ಒಳಗೆ ಅವರು ಉತ್ತರ ಕೊಡಲಿಲ್ಲ ಅಂದರೆ ಮುಂದಿನ ಕ್ರಮಕ್ಕೆ ಮುಂದಾಗ್ತೀವಿ.

ಪತ್ರಿಕೆ: ಅಂದರೆ ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡ್ತೀವಿ ಅಂದಿದ್ರಲ್ಲಾ, ಅದಕ್ಕೆ ಮುಂದಾಗ್ತೀರಾ?

ಎಚ್.ಕೆ.ಪಾಟೀಲ್: ಇಲ್ಲಾ, ಇವತ್ತು ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಒಂದು ತೀರ್ಮಾನಕ್ಕೆ ಬಂದಿದೀವಿ. ಈ ಬಗ್ಗೆ ನಾನು ಸಭಾಧ್ಯಕ್ಷರಿಗೆ ಪತ್ರ ಬರೆಯುತ್ತಿದ್ದೀನಿ. ಅವರೂ ನಾನು ಜೊತೆ ಸೇರಿ ಸಭೆ ಮಾಡಿ ಈ ವಿಚಾರದಲ್ಲಿ ಏನೇ ಅಡೆತಡೆಗಳಿದ್ದರೂ ಅದನ್ನ ಬಗೆಹರಿಸಿಕೊಂಡು, ಸಾರ್ವಜನಿಕರ ಹಿತದಿಂದ ಕೆಲಸ ನಿರ್ವಹಿಸಬೇಕು ಅಂತ. ಅದಕ್ಕೆ ಅವರು ಹೇಗೆ ಸ್ಪಂದಿಸ್ತಾರೆ ಅನ್ನೋದನ್ನು ಗಮನಿಸಿ ಮುಂದಕ್ಕೆ ಹೋಗ್ಬೇಕಾಗತ್ತೆ.

ಪತ್ರಿಕೆ: ಲಾಕ್‍ಡೌನ್ ಸಂದರ್ಭ ಇದ್ದುದರಿಂದ ವಿಧಾನಮಂಡಲದ ಇಂತಹ ಸಮಿತಿಗಳೂ ಸಭೆ ಸೇರ್ತಿರ್ಲಿಲ್ಲ ಅಲ್ವಾ? ಇದಕ್ಕಾಗಿಯೇ ಸೇರಿದ್ರಾ?

ಎಚ್.ಕೆ.ಪಾಟೀಲ್: ಕೊರೊನಾ ಬಂದು, ವಿಧಾನಮಂಡಲದ ಅಧಿವೇಶನವೂ ಮುಂದಕ್ಕೆ ಹೋದ ನಂತರ ಸಮಿತಿ ಸಭೆಗಳು ನಡೆಯುತ್ತಿರಲಿಲ್ಲ. ಈಗ 3 ವಾರದ ಹಿಂದಿನವರೆಗೂ ಅದೇ ಪರಿಸ್ಥಿತಿ ಇತ್ತು. ಅದಾದ ನಂತರ ಸಭೆ ಸೇರ್ತಿದೀವಿ. ಎಲ್ಲಾ ಸಮಿತಿಗಳೂ ಸೇರಿರದೇ ಇರಬಹುದು. ಕೆಲವು ಸಮಿತಿಗಳ ಸಭೆಗಳು ನಡೀತಿದಾವೆ.

ಪತ್ರಿಕೆ: ನೀವು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದವರು. ಇದೀಗ ವಲಸೆ ಕಾರ್ಮಿಕರ ಸಮಸ್ಯೆಯನ್ನು ನೋಡಿದ್ದೀರಿ. ದೇಶದಲ್ಲಿ ಗ್ರಾಮೀಣಾಭಿವೃದ್ಧಿಯಲ್ಲಿ ಆದ ಸಮಸ್ಯೆಗಳ ಕಾರಣದಿಂದ ಈ ವಲಸೆ ಸಮಸ್ಯೆ ಸೃಷ್ಟಿಯಾಯಿತು ಅಲ್ವಾ?

ಎಚ್.ಕೆ.ಪಾಟೀಲ್: ಗುಳೆ ಹೋದ ಕಾರ್ಮಿಕರಿಗಾಗಿ ನಾವೆಲ್ಲರೂ ಏನು ಮಾಡಿದ್ದೇವೆ ಅಂತ ನೋಡಬೇಕು. ಇದರಲ್ಲಿ ಆ ಪಕ್ಷ, ಈ ಪಕ್ಷ ಅಂತ ನೋಡದೇ ಇಂತಹ ಜನರೇ ದೇಶ ಕಟ್ಟಿದವರು ಅನ್ನೋದನ್ನ ಮರೀಬಾರದು. ಅವರಲ್ಲಿ ಹೆಚ್ಚಿನವರು ಕಟ್ಟಡ ಕಾರ್ಮಿಕರಿದ್ದಾರೆ. ಅವರ ಹೆಸರಿನಲ್ಲೇ ಸಾವಿರಾರು ಕೋಟಿ ರೂ. ಹಣ ಕಲ್ಯಾಣನಿಧಿಯಲ್ಲಿದೆ. ಅವರದ್ದೇ ಹಣವನ್ನು ಅವರಿಗೆ ಖರ್ಚು ಮಾಡೋಕೆ ಏನು ಸಮಸ್ಯೆ? ಕರ್ನಾಟಕದಲ್ಲೇ 9,000 ಕೋಟಿ ರೂ ಇದೆ. ಇದನ್ನು ಬಳಸಿಕೊಂಡು ಅವರಿಗೆ ಸೂಕ್ತ ಸೌಲಭ್ಯ ಕಲ್ಪಿಸುವುದನ್ನು ಬಿಟ್ಟು ಅವರುಗಳು ತಮ್ಮೂರಿಗೆ ಹೊರಡ್ತಾರೆ ಅಂತ ಅದನ್ನ ತಡೆಯೋಕೆ ಹೋಗೋದು ಮಾನವೀಯತೆಯಾ? ಆ ಕೆಲಸವನ್ನು ಈ ಸರ್ಕಾರ ಮಾಡಿತು.

ಪತ್ರಿಕೆ: ಆದರೆ ವಿರೋಧ ಪಕ್ಷವಾಗಿ ನಿಮ್ಮ ಪಕ್ಷ ಈ ಕಾರ್ಮಿಕರ ಪರವಾಗಿ ಇಷ್ಟೇನಾ ಮಾಡೋಕೆ ಸಾಧ್ಯವಿದ್ದದ್ದು? ವಿರೋಧ ಪಕ್ಷಗಳು ಇನ್ನೂ ಕ್ರಿಯಾಶೀಲರಾಗಿ ಇರಬೇಕಿತ್ತು ಅಲ್ವಾ?

ಎಚ್.ಕೆ.ಪಾಟೀಲ್: ನಮ್ಮ ಪಕ್ಷದ ವತಿಯಿಂದ ನಮ್ಮ ಕೆಲಸ ಮಾಡಿದ್ದೇವೆ. ನಾನು ಹಲವಾರು ಪತ್ರಗಳನ್ನು ಸರ್ಕಾರಕ್ಕೆ ಬರೆದಿದ್ದೇನೆ. ವಲಸೆ ಕಾರ್ಮಿಕರಿಗೆ ಮೂರು ಪಟ್ಟು ಟಿಕೆಟ್ ಹಣ ತೆಗೆದುಕೊಂಡು ಬಸ್ಸುಗಳನ್ನು ಓಡಿಸ್ತಿದ್ದಾರೆ ಅಂತ ಗೊತ್ತಾದಾಗ ಕೆಪಿಸಿಸಿ ಅಧ್ಯಕ್ಷರು ಒಂದು ಕೋಟಿ ರೂ. ಚೆಕ್ ಬರೆದು ಖುದ್ದಾಗಿ ಬಸ್‍ಸ್ಟಾಂಡಿಗೆ ಹೋದರು. ನಾವೆಲ್ಲರೂ ಜೊತೆಗಿದ್ದೆವು. ಆ ನಂತರವೇ ಸರ್ಕಾರ ಉಚಿತವಾಗಿ ಬಸ್ಸು ಬಿಡ್ತೀನಿ ಅಂತ ಹೇಳಿದ್ದು.

ಪತ್ರಿಕೆ: ಇದನ್ನೇ ಅನುಸರಿಸಿ ಕೇಂದ್ರದ ಮೇಲೂ ಒತ್ತಡ ತಂದು ಉಚಿತ ರೈಲು ಬರುವ ಹಾಗೆ ಮಾಡಿದ್ವಿ ಅಂತ ಕಾಂಗ್ರೆಸ್‍ನವರು ಹೇಳಿಕೊಂಡಿರಿ. ಆದರೆ ಆ ಭರವಸೆ ನೀಡಿದ ಕೇಂದ್ರ ಸರ್ಕಾರವು ಉಚಿತ ರೈಲನ್ನು ಬಹಳ ಕಾಲ ಓಡಿಸಲೇ ಇಲ್ಲ. ವಿಚಾರ ಕೋರ್ಟಿಗೆ ಹೋಗುವತನಕ ಎಚ್ಚೆತ್ತುಕೊಳ್ಳಲಿಲ್ಲ. ಕಾಂಗ್ರೆಸ್‍ನವರೂ ಫಾಲೋಅಪ್ ಮಾಡಲಿಲ್ಲ.

ಎಚ್.ಕೆ.ಪಾಟೀಲ್: ನೋಡಿ, ಒಂದು ಆಡಳಿತ ಪಕ್ಷಕ್ಕೆ ನೀವು ಇಂತಹ ಸಂದರ್ಭದಲ್ಲಿ ಉಚಿತವಾಗಿ ಬಸ್ಸು, ರೈಲು ಓಡಿಸಬೇಕು ಅಂತ ವಿರೋಧ ಪಕ್ಷ ಹೇಳುವ ಸಂದರ್ಭವೇ ಬರಬಾರದು. ಒಂದು ವೇಳೆ ವಿರೋಧಪಕ್ಷ ಹೇಳಿದರೆ ಅದನ್ನು ತಿದ್ದುಕೊಂಡು ಮುಂದುವರೆಯಬೇಕು. ಆದರೆ ಈ ಸರ್ಕಾರವು ಹಾಗೆ ಮಾಡಲಿಲ್ಲ.


ಇದನ್ನು ಓದಿ: ರಾಜ್ಯದಲ್ಲಿ ಅಸಂವಿಧಾನಾತ್ಮಕವಾಗಿ ಇನ್ನೊಬ್ಬ ಮುಖ್ಯಮಂತ್ರಿಯಿದ್ದಾರೆ: ಸಿದ್ದರಾಮಯ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....