Homeಮುಖಪುಟಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

ಭ್ರಷ್ಟಾಚಾರ ತನಿಖೆಗೆ ಅಡ್ಡಿ ಏಕೆ? : ಹೆಚ್.ಕೆ.ಪಾಟೀಲ್‍ರವರ ಸಂದರ್ಶನ

"ಶೆರೆ ಅಂಗಡಿಯೂ ತೆರೆದಿರುವಾಗ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಓಡಾಡಿದರೆ ತೊಂದರೆ ಅನ್ನುತ್ತೆ ಅನ್ನೋದು ಸರಿಯಾ?"

- Advertisement -
- Advertisement -

ಪತ್ರಿಕೆ: ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಪರಿಶೀಲನೆಗೆ ಸ್ಪೀಕರ್ ತಡೆ ನೀಡಬಹುದಾ?

ಎಚ್.ಕೆ.ಪಾಟೀಲ್ : ಅವರು ನೀವು ಇದರ ಪರಿಶೀಲನೆ ಮಾಡಬೇಡಿ ಎಂದು ಹೇಳಕ್ಕೆ ಆಗಲ್ಲ. ಕೊರೊನಾ ಸೋಂಕಿನ ಕಾರಣಕ್ಕೆ ನಿಮ್ಮ ಹಿತದೃಷ್ಟಿಯಿಂದ ಅದಕ್ಕೆ ಅವಕಾಶ ಕೊಡುವುದಿಲ್ಲ ಎನ್ನುವ ಹಾಗೆ ಹೇಳಿದ್ದಾರೆ. ಆದರೆ ಶೆರೆ ಅಂಗಡಿ ಓಪೆನ್ ಮಾಡಿದ್ದಾರೆ. ಬಸ್ಸುಗಳು, ರೈಲುಗಳನ್ನು ಓಡಿಸ್ತಿದಾರೆ. ವ್ಯಾಪಾರ ನಡೀತಿದೆ. ದೇವಸ್ಥಾನಗಳು, ಮಸೀದಿ, ಚರ್ಚ್‍ಗಳಿಗೆ ಅವಕಾಶ ಕೊಡ್ತೀವಿ ಅಂತಿದಾರೆ. ಸಾರ್ವಜನಿಕರಿಗೆ ಚಿಕಿತ್ಸೆ ಹೇಗೆ ನಡೀತಿದೆ, ಎಲ್ಲವೂ ಸರಿಯಾಗಿದೆಯಾ, ಸರ್ಕಾರ ಯಾವ ಅನುಕೂಲಗಳನ್ನ ಕಲ್ಪಿಸಿದೆ ಅಂತ ಶಾಸನಸಭೆಯ ಸದಸ್ಯರು ಇರುವ ಸಮಿತಿಗೆ ಮಾತ್ರ ತೊಂದರೆ ಆಗಿಬಿಡುತ್ತದಾ? ಇದರಿಂದ ನಾವು ಅರ್ಥ ಮಾಡಿಕೊಳ್ಳಬೇಕು.

ಪತ್ರಿಕೆ: ಹಾಗಾದರೆ ನಿಮಗೆ ಬಂದಿರುವ ಭ್ರಷ್ಟಾಚಾರದ ಕುರಿತ ದೂರಿನ ತನಿಖೆ ಮಾಡಲು ಏನೂ ಅಡ್ಡಿಯಿಲ್ಲ ಅಲ್ಲವಾ?

ಎಚ್.ಕೆ.ಪಾಟೀಲ್: ನಾವು ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳಿಗೆ ಸಂಬಂಧಪಟ್ಟ ದೂರುಗಳ ಆಧಾರದ ಮೇಲೆ ಪರಿಶೀಲನೆ ಮಾಡಿ ವರದಿ ಕೊಡಿ ಎಂದು ಕೇಳಿದ್ದೇವೆ. ಅವರು ನಮಗೆ ಇದುವರೆಗೂ ಏನನ್ನೂ ಕೊಟ್ಟಿಲ್ಲ. ಇಂದು ನಮ್ಮ ಸಮಿತಿ ಸಭೆ ಇತ್ತು. ಅಲ್ಲಿ ಇದನ್ನ ಗಮನಕ್ಕೆ ತೆಗೆದುಕೊಂಡಿದೀವಿ, ಮುಂದಿನ ಮಂಗಳವಾರದ ಒಳಗೆ ಅವರು ಉತ್ತರ ಕೊಡಲಿಲ್ಲ ಅಂದರೆ ಮುಂದಿನ ಕ್ರಮಕ್ಕೆ ಮುಂದಾಗ್ತೀವಿ.

ಪತ್ರಿಕೆ: ಅಂದರೆ ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡ್ತೀವಿ ಅಂದಿದ್ರಲ್ಲಾ, ಅದಕ್ಕೆ ಮುಂದಾಗ್ತೀರಾ?

ಎಚ್.ಕೆ.ಪಾಟೀಲ್: ಇಲ್ಲಾ, ಇವತ್ತು ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಒಂದು ತೀರ್ಮಾನಕ್ಕೆ ಬಂದಿದೀವಿ. ಈ ಬಗ್ಗೆ ನಾನು ಸಭಾಧ್ಯಕ್ಷರಿಗೆ ಪತ್ರ ಬರೆಯುತ್ತಿದ್ದೀನಿ. ಅವರೂ ನಾನು ಜೊತೆ ಸೇರಿ ಸಭೆ ಮಾಡಿ ಈ ವಿಚಾರದಲ್ಲಿ ಏನೇ ಅಡೆತಡೆಗಳಿದ್ದರೂ ಅದನ್ನ ಬಗೆಹರಿಸಿಕೊಂಡು, ಸಾರ್ವಜನಿಕರ ಹಿತದಿಂದ ಕೆಲಸ ನಿರ್ವಹಿಸಬೇಕು ಅಂತ. ಅದಕ್ಕೆ ಅವರು ಹೇಗೆ ಸ್ಪಂದಿಸ್ತಾರೆ ಅನ್ನೋದನ್ನು ಗಮನಿಸಿ ಮುಂದಕ್ಕೆ ಹೋಗ್ಬೇಕಾಗತ್ತೆ.

ಪತ್ರಿಕೆ: ಲಾಕ್‍ಡೌನ್ ಸಂದರ್ಭ ಇದ್ದುದರಿಂದ ವಿಧಾನಮಂಡಲದ ಇಂತಹ ಸಮಿತಿಗಳೂ ಸಭೆ ಸೇರ್ತಿರ್ಲಿಲ್ಲ ಅಲ್ವಾ? ಇದಕ್ಕಾಗಿಯೇ ಸೇರಿದ್ರಾ?

ಎಚ್.ಕೆ.ಪಾಟೀಲ್: ಕೊರೊನಾ ಬಂದು, ವಿಧಾನಮಂಡಲದ ಅಧಿವೇಶನವೂ ಮುಂದಕ್ಕೆ ಹೋದ ನಂತರ ಸಮಿತಿ ಸಭೆಗಳು ನಡೆಯುತ್ತಿರಲಿಲ್ಲ. ಈಗ 3 ವಾರದ ಹಿಂದಿನವರೆಗೂ ಅದೇ ಪರಿಸ್ಥಿತಿ ಇತ್ತು. ಅದಾದ ನಂತರ ಸಭೆ ಸೇರ್ತಿದೀವಿ. ಎಲ್ಲಾ ಸಮಿತಿಗಳೂ ಸೇರಿರದೇ ಇರಬಹುದು. ಕೆಲವು ಸಮಿತಿಗಳ ಸಭೆಗಳು ನಡೀತಿದಾವೆ.

ಪತ್ರಿಕೆ: ನೀವು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದವರು. ಇದೀಗ ವಲಸೆ ಕಾರ್ಮಿಕರ ಸಮಸ್ಯೆಯನ್ನು ನೋಡಿದ್ದೀರಿ. ದೇಶದಲ್ಲಿ ಗ್ರಾಮೀಣಾಭಿವೃದ್ಧಿಯಲ್ಲಿ ಆದ ಸಮಸ್ಯೆಗಳ ಕಾರಣದಿಂದ ಈ ವಲಸೆ ಸಮಸ್ಯೆ ಸೃಷ್ಟಿಯಾಯಿತು ಅಲ್ವಾ?

ಎಚ್.ಕೆ.ಪಾಟೀಲ್: ಗುಳೆ ಹೋದ ಕಾರ್ಮಿಕರಿಗಾಗಿ ನಾವೆಲ್ಲರೂ ಏನು ಮಾಡಿದ್ದೇವೆ ಅಂತ ನೋಡಬೇಕು. ಇದರಲ್ಲಿ ಆ ಪಕ್ಷ, ಈ ಪಕ್ಷ ಅಂತ ನೋಡದೇ ಇಂತಹ ಜನರೇ ದೇಶ ಕಟ್ಟಿದವರು ಅನ್ನೋದನ್ನ ಮರೀಬಾರದು. ಅವರಲ್ಲಿ ಹೆಚ್ಚಿನವರು ಕಟ್ಟಡ ಕಾರ್ಮಿಕರಿದ್ದಾರೆ. ಅವರ ಹೆಸರಿನಲ್ಲೇ ಸಾವಿರಾರು ಕೋಟಿ ರೂ. ಹಣ ಕಲ್ಯಾಣನಿಧಿಯಲ್ಲಿದೆ. ಅವರದ್ದೇ ಹಣವನ್ನು ಅವರಿಗೆ ಖರ್ಚು ಮಾಡೋಕೆ ಏನು ಸಮಸ್ಯೆ? ಕರ್ನಾಟಕದಲ್ಲೇ 9,000 ಕೋಟಿ ರೂ ಇದೆ. ಇದನ್ನು ಬಳಸಿಕೊಂಡು ಅವರಿಗೆ ಸೂಕ್ತ ಸೌಲಭ್ಯ ಕಲ್ಪಿಸುವುದನ್ನು ಬಿಟ್ಟು ಅವರುಗಳು ತಮ್ಮೂರಿಗೆ ಹೊರಡ್ತಾರೆ ಅಂತ ಅದನ್ನ ತಡೆಯೋಕೆ ಹೋಗೋದು ಮಾನವೀಯತೆಯಾ? ಆ ಕೆಲಸವನ್ನು ಈ ಸರ್ಕಾರ ಮಾಡಿತು.

ಪತ್ರಿಕೆ: ಆದರೆ ವಿರೋಧ ಪಕ್ಷವಾಗಿ ನಿಮ್ಮ ಪಕ್ಷ ಈ ಕಾರ್ಮಿಕರ ಪರವಾಗಿ ಇಷ್ಟೇನಾ ಮಾಡೋಕೆ ಸಾಧ್ಯವಿದ್ದದ್ದು? ವಿರೋಧ ಪಕ್ಷಗಳು ಇನ್ನೂ ಕ್ರಿಯಾಶೀಲರಾಗಿ ಇರಬೇಕಿತ್ತು ಅಲ್ವಾ?

ಎಚ್.ಕೆ.ಪಾಟೀಲ್: ನಮ್ಮ ಪಕ್ಷದ ವತಿಯಿಂದ ನಮ್ಮ ಕೆಲಸ ಮಾಡಿದ್ದೇವೆ. ನಾನು ಹಲವಾರು ಪತ್ರಗಳನ್ನು ಸರ್ಕಾರಕ್ಕೆ ಬರೆದಿದ್ದೇನೆ. ವಲಸೆ ಕಾರ್ಮಿಕರಿಗೆ ಮೂರು ಪಟ್ಟು ಟಿಕೆಟ್ ಹಣ ತೆಗೆದುಕೊಂಡು ಬಸ್ಸುಗಳನ್ನು ಓಡಿಸ್ತಿದ್ದಾರೆ ಅಂತ ಗೊತ್ತಾದಾಗ ಕೆಪಿಸಿಸಿ ಅಧ್ಯಕ್ಷರು ಒಂದು ಕೋಟಿ ರೂ. ಚೆಕ್ ಬರೆದು ಖುದ್ದಾಗಿ ಬಸ್‍ಸ್ಟಾಂಡಿಗೆ ಹೋದರು. ನಾವೆಲ್ಲರೂ ಜೊತೆಗಿದ್ದೆವು. ಆ ನಂತರವೇ ಸರ್ಕಾರ ಉಚಿತವಾಗಿ ಬಸ್ಸು ಬಿಡ್ತೀನಿ ಅಂತ ಹೇಳಿದ್ದು.

ಪತ್ರಿಕೆ: ಇದನ್ನೇ ಅನುಸರಿಸಿ ಕೇಂದ್ರದ ಮೇಲೂ ಒತ್ತಡ ತಂದು ಉಚಿತ ರೈಲು ಬರುವ ಹಾಗೆ ಮಾಡಿದ್ವಿ ಅಂತ ಕಾಂಗ್ರೆಸ್‍ನವರು ಹೇಳಿಕೊಂಡಿರಿ. ಆದರೆ ಆ ಭರವಸೆ ನೀಡಿದ ಕೇಂದ್ರ ಸರ್ಕಾರವು ಉಚಿತ ರೈಲನ್ನು ಬಹಳ ಕಾಲ ಓಡಿಸಲೇ ಇಲ್ಲ. ವಿಚಾರ ಕೋರ್ಟಿಗೆ ಹೋಗುವತನಕ ಎಚ್ಚೆತ್ತುಕೊಳ್ಳಲಿಲ್ಲ. ಕಾಂಗ್ರೆಸ್‍ನವರೂ ಫಾಲೋಅಪ್ ಮಾಡಲಿಲ್ಲ.

ಎಚ್.ಕೆ.ಪಾಟೀಲ್: ನೋಡಿ, ಒಂದು ಆಡಳಿತ ಪಕ್ಷಕ್ಕೆ ನೀವು ಇಂತಹ ಸಂದರ್ಭದಲ್ಲಿ ಉಚಿತವಾಗಿ ಬಸ್ಸು, ರೈಲು ಓಡಿಸಬೇಕು ಅಂತ ವಿರೋಧ ಪಕ್ಷ ಹೇಳುವ ಸಂದರ್ಭವೇ ಬರಬಾರದು. ಒಂದು ವೇಳೆ ವಿರೋಧಪಕ್ಷ ಹೇಳಿದರೆ ಅದನ್ನು ತಿದ್ದುಕೊಂಡು ಮುಂದುವರೆಯಬೇಕು. ಆದರೆ ಈ ಸರ್ಕಾರವು ಹಾಗೆ ಮಾಡಲಿಲ್ಲ.


ಇದನ್ನು ಓದಿ: ರಾಜ್ಯದಲ್ಲಿ ಅಸಂವಿಧಾನಾತ್ಮಕವಾಗಿ ಇನ್ನೊಬ್ಬ ಮುಖ್ಯಮಂತ್ರಿಯಿದ್ದಾರೆ: ಸಿದ್ದರಾಮಯ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...