Homeಮುಖಪುಟಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

ಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

- Advertisement -
- Advertisement -

ಮಣಿಪುರ ಹಿಂಸಾಚಾರಕ್ಕೆ ಅಲ್ಪಸಂಖ್ಯಾತರ ಬಗೆಗಿನ ಅಸಹಿಷ್ಣುತೆ ಕಾರಣವಾಗಿದೆ ಮತ್ತು ಎಲ್ಲಾ ಅಲ್ಪಸಂಖ್ಯಾತರನ್ನು ಭಾರತ ಸರ್ಕಾರ ರಕ್ಷಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಗುರುವಾರ ಅಂಗೀಕರಿಸಿದರು.

”ಯುರೋಪಿಯನ್ ಸಂಸತ್ತಿನ ಸದಸ್ಯರು (MEP) ಹಿಂಸಾಚಾರವನ್ನು ಪರಿಶೀಲಿಸಲು ಸ್ವತಂತ್ರ ತನಿಖೆಗಳಿಗೆ ಅವಕಾಶ ನೀಡಬೇಕು. ಆ ರಾಜ್ಯದಲ್ಲಿ ನಿರ್ಭಯದ ವಾತಾವರಣ ನಿರ್ಮಿಸಲು ಇಂಟರ್ನೆಟ್ ನಿಷೇಧವನ್ನು ತೆಗೆದುಹಾಕಬೇಕು” ಎಂದು ಶಾಸಕರು ನಿರ್ಣಯದಲ್ಲಿ ತಿಳಿಸಿದ್ದಾರೆ.

ಮಣಿಪುರವು ಮೇ 3 ರಿಂದ ಕುಕಿ ಮತ್ತು ಬಹುಸಂಖ್ಯಾತ ಮೈತಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಿದೆ. ವ್ಯಾಪಕವಾದ ಹಿಂಸಾಚಾರ ಮತ್ತು ಬೆಂಕಿ ಹಚ್ಚುವ ಘಟನೆಗಳು ರಾಜ್ಯದಲ್ಲಿ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸುತ್ತಿವೆ. 140ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳಿಂದ ಸ್ಥಾಳಾಂತರಗೊಂಡಿದ್ದಾರೆ.

ಹಿಂಸಾಚಾರ ಪ್ರಾರಂಭವಾದಾಗಿನಿಂದ ರಾಜ್ಯದಾದ್ಯಂತ ಇಂಟರ್ನೆಟ್ ನಿಷೇಧಿಸಲಾಗಿದೆ, ರಾಜ್ಯದ ಆರ್ಥಿಕತೆಯು ನೆಲಕಚ್ಚಿದೆ. ಇಂಟರ್ನೆಟ್ ಮೇಲಿನ ನಿಷೇಧವನ್ನು ಕಳೆದ ವಾರ ಭಾಗಶಃ ತೆಗೆದುಹಾಕಲಾಗಿದೆ.

ಭಾರತದಲ್ಲಿ ರಾಜಕೀಯವಾಗಿ ಪ್ರೇರಿತಗೊಂಡು ಹಿಂದೂ ಬಹುಸಂಖ್ಯಾತತೆಯನ್ನು ಉತ್ತೇಜಿಸುವ ವಿಭಜಕ ನೀತಿಗಳನ್ನು ಅನುಸರಿಸುತ್ತಿದೆ ಎಂದು ಯುರೋಪಿಯನ್ ಪಾರ್ಲಿಮೆಂಟ್‌ನಲ್ಲಿನ ನಿರ್ಣಯದಲ್ಲಿ ಕಳವಳ ವ್ಯಕ್ತಪಡಿಸಿದೆ.

ಭದ್ರತಾ ಪಡೆಗಳು ಹತ್ಯೆಯಲ್ಲಿ ಭಾಗಿ

”ಮಣಿಪುರ ರಾಜ್ಯ ಸರ್ಕಾರವು ಇಂಟರ್ನೆಟ್ ಸಂಪರ್ಕಗಳನ್ನು ಸ್ಥಗಿತಗೊಳಿಸಿದೆ ಮತ್ತು ಮಾಧ್ಯಮಗಳಿಗೂ ವರದಿ ಮಾಡಲು ಅಡ್ಡಿಪಡಿಸಿದೆ. ಇಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಲ್ಲಿ ಭದ್ರತಾ ಪಡೆಗಳು ಭಾಗಿಯಾಗಿವೆ, ಇದು ಅಧಿಕಾರಿಗಳ ಮೇಲಿನ ಅವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಅದು ಹೇಳಿದೆ.

ಭದ್ರತಾ ಪಡೆಗಳು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 11ರಂದು ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದರು. ಉಗ್ರರು ತಮ್ಮ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಸೇನೆ ಹೇಳಿದರೆ, ಗ್ರಾಮ ರಕ್ಷಣಾ ಸ್ವಯಂಸೇವಕರ ಗುಂಪು ತಮ್ಮ ಮೇಲೆ ಗುಂಡು ಹಾರಿಸಿದ್ದು ಭದ್ರತಾ ಸಿಬ್ಬಂದಿ ಎಂದು ಹೇಳಿಕೊಂಡಿದ್ದು, ಅವರು ಪ್ರತಿದಾಳಿ ನಡೆಸಿದರು.

ಮತ್ತೊಂದು ನಿದರ್ಶನದಲ್ಲಿ, ”ಬೆಂಕಿ ಹಚ್ಚಲಾದ ಕಟ್ಟಡದ ದೃಶ್ಯಗಳನ್ನು ರೆಕಾರ್ಡ್ ಮಾಡುತ್ತಿದ್ದಾಗ ಮೂವರು ಪತ್ರಕರ್ತರ ಮೇಲೆ ಭದ್ರತಾ ಸಿಬ್ಬಂದಿ ಲಾಠಿಗಳಿಂದ ಹಲ್ಲೆ ನಡೆಸಿದ ಘಟನೆ ಇಂಫಾಲ್‌ನ ನ್ಯೂ ಚೆಕ್‌ಕಾನ್ ಪ್ರದೇಶದಲ್ಲಿ ನಡೆದಿದೆ” ಎಂದು ಆರೋಪಿಸಲಾಗಿದೆ.

”ಇರೋಪಿಯನ್ ಒಕ್ಕೂಟ-ಭಾರತದ ಮಾನವ ಹಕ್ಕುಗಳ ಸಂವಾದವನ್ನು ಬಲಪಡಿಸಬೇಕು. ಇರೋಪಿಯನ್ ಒಕ್ಕೂಟ ಮತ್ತು ಅದರ ಸದಸ್ಯ ರಾಷ್ಟ್ರಗಳಲ್ಲಿ ವ್ಯವಸ್ಥಿತವಾಗಿ ಮತ್ತು ಸಾರ್ವಜನಿಕವಾಗಿ ಮಾನವ ಹಕ್ಕುಗಳ ಕಾಳಜಿಯನ್ನು ಹೆಚ್ಚಿಸಲು ಪ್ರೋತ್ಸಾಹಿಸಲು ಸಹ ಸಲಹೆ ನೀಡುತ್ತವೆ. ವಿಶೇಷವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯ, ಧರ್ಮ ಮತ್ತು ನಾಗರಿಕ ಸಮಾಜಕ್ಕೆ ಕುಗ್ಗುತ್ತಿರುವ ಸ್ಥಳಗಳ ಬಗ್ಗೆ ಕಾಳಜಿ ವಹಿಸುತ್ತದೆ..” ಎಂದು ಯುರೋಪಿಯನ್ ಸಂಸತ್ತಿನ ಸದಸ್ಯರು ಹೇಳಿದ್ದಾರೆ.

ಜೂನ್ 11 ರಂದು ಯುರೋಪಿಯನ್ ಪಾರ್ಲಿಮೆಂಟ್‌ನಲ್ಲಿ ಮಣಿಪುರದ ನಿರ್ಣಯದ ಪ್ರಸ್ತಾಪವನ್ನು ಆರು ಸಂಸದೀಯ ಗುಂಪುಗಳು – ಎಡ ಗುಂಪು, ವರ್ಟ್ಸ್ / ಎಎಲ್ಇ ಗುಂಪು, ಎಸ್ & ಡಿ ಗ್ರೂಪ್, ರಿನ್ಯೂ ಗ್ರೂಪ್, ಇಸಿಆರ್ ಗ್ರೂ ಮತ್ತು ಪಿಪಿಇ ಗ್ರೂಪ್ ಮೂಲಕ ಮಂಡಿಸಲಾಯಿತು.

ಆರು ಸಂಸದೀಯ ಗುಂಪುಗಳು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ನಾಗರಿಕ ಸಮಾಜ ಮತ್ತು ಪತ್ರಕರ್ತರನ್ನು ದಮನ ಮಾಡಿದೆ ಎಂದು ಆರೋಪಿಸಿದೆ. ಈ ನಿರ್ಣಯವು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಜೀವಹಾನಿ ಮತ್ತು ಆಸ್ತಿ ನಾಶವನ್ನು ಖಂಡಿಸಿದೆ.

ಕೇಂದ್ರ ಮತ್ತು ಮಣಿಪುರದ ಬಿಜೆಪಿ ಸರ್ಕಾರಗಳು ರಾಜ್ಯಗಳಲ್ಲಿನ ಹಿಂಸಾಚಾರವನ್ನು ತಡೆಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಿಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿಲ್ಲ ಅಥವಾ ಅಲ್ಲಿನ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಇನ್ನೂ ಸುಡುತ್ತಿರುವ ಮಣಿಪುರ; ಸಣ್ಣಸಣ್ಣ ಸಮುದಾಯಗಳ ಬಗ್ಗೆ ಪ್ರಭುತ್ವದ ನಿರ್ಲಜ್ಜ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...