Homeಮುಖಪುಟಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

ಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

- Advertisement -
- Advertisement -

ಮಣಿಪುರ ಹಿಂಸಾಚಾರಕ್ಕೆ ಅಲ್ಪಸಂಖ್ಯಾತರ ಬಗೆಗಿನ ಅಸಹಿಷ್ಣುತೆ ಕಾರಣವಾಗಿದೆ ಮತ್ತು ಎಲ್ಲಾ ಅಲ್ಪಸಂಖ್ಯಾತರನ್ನು ಭಾರತ ಸರ್ಕಾರ ರಕ್ಷಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಗುರುವಾರ ಅಂಗೀಕರಿಸಿದರು.

”ಯುರೋಪಿಯನ್ ಸಂಸತ್ತಿನ ಸದಸ್ಯರು (MEP) ಹಿಂಸಾಚಾರವನ್ನು ಪರಿಶೀಲಿಸಲು ಸ್ವತಂತ್ರ ತನಿಖೆಗಳಿಗೆ ಅವಕಾಶ ನೀಡಬೇಕು. ಆ ರಾಜ್ಯದಲ್ಲಿ ನಿರ್ಭಯದ ವಾತಾವರಣ ನಿರ್ಮಿಸಲು ಇಂಟರ್ನೆಟ್ ನಿಷೇಧವನ್ನು ತೆಗೆದುಹಾಕಬೇಕು” ಎಂದು ಶಾಸಕರು ನಿರ್ಣಯದಲ್ಲಿ ತಿಳಿಸಿದ್ದಾರೆ.

ಮಣಿಪುರವು ಮೇ 3 ರಿಂದ ಕುಕಿ ಮತ್ತು ಬಹುಸಂಖ್ಯಾತ ಮೈತಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಿದೆ. ವ್ಯಾಪಕವಾದ ಹಿಂಸಾಚಾರ ಮತ್ತು ಬೆಂಕಿ ಹಚ್ಚುವ ಘಟನೆಗಳು ರಾಜ್ಯದಲ್ಲಿ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸುತ್ತಿವೆ. 140ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳಿಂದ ಸ್ಥಾಳಾಂತರಗೊಂಡಿದ್ದಾರೆ.

ಹಿಂಸಾಚಾರ ಪ್ರಾರಂಭವಾದಾಗಿನಿಂದ ರಾಜ್ಯದಾದ್ಯಂತ ಇಂಟರ್ನೆಟ್ ನಿಷೇಧಿಸಲಾಗಿದೆ, ರಾಜ್ಯದ ಆರ್ಥಿಕತೆಯು ನೆಲಕಚ್ಚಿದೆ. ಇಂಟರ್ನೆಟ್ ಮೇಲಿನ ನಿಷೇಧವನ್ನು ಕಳೆದ ವಾರ ಭಾಗಶಃ ತೆಗೆದುಹಾಕಲಾಗಿದೆ.

ಭಾರತದಲ್ಲಿ ರಾಜಕೀಯವಾಗಿ ಪ್ರೇರಿತಗೊಂಡು ಹಿಂದೂ ಬಹುಸಂಖ್ಯಾತತೆಯನ್ನು ಉತ್ತೇಜಿಸುವ ವಿಭಜಕ ನೀತಿಗಳನ್ನು ಅನುಸರಿಸುತ್ತಿದೆ ಎಂದು ಯುರೋಪಿಯನ್ ಪಾರ್ಲಿಮೆಂಟ್‌ನಲ್ಲಿನ ನಿರ್ಣಯದಲ್ಲಿ ಕಳವಳ ವ್ಯಕ್ತಪಡಿಸಿದೆ.

ಭದ್ರತಾ ಪಡೆಗಳು ಹತ್ಯೆಯಲ್ಲಿ ಭಾಗಿ

”ಮಣಿಪುರ ರಾಜ್ಯ ಸರ್ಕಾರವು ಇಂಟರ್ನೆಟ್ ಸಂಪರ್ಕಗಳನ್ನು ಸ್ಥಗಿತಗೊಳಿಸಿದೆ ಮತ್ತು ಮಾಧ್ಯಮಗಳಿಗೂ ವರದಿ ಮಾಡಲು ಅಡ್ಡಿಪಡಿಸಿದೆ. ಇಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಲ್ಲಿ ಭದ್ರತಾ ಪಡೆಗಳು ಭಾಗಿಯಾಗಿವೆ, ಇದು ಅಧಿಕಾರಿಗಳ ಮೇಲಿನ ಅವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಅದು ಹೇಳಿದೆ.

ಭದ್ರತಾ ಪಡೆಗಳು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 11ರಂದು ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದರು. ಉಗ್ರರು ತಮ್ಮ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಸೇನೆ ಹೇಳಿದರೆ, ಗ್ರಾಮ ರಕ್ಷಣಾ ಸ್ವಯಂಸೇವಕರ ಗುಂಪು ತಮ್ಮ ಮೇಲೆ ಗುಂಡು ಹಾರಿಸಿದ್ದು ಭದ್ರತಾ ಸಿಬ್ಬಂದಿ ಎಂದು ಹೇಳಿಕೊಂಡಿದ್ದು, ಅವರು ಪ್ರತಿದಾಳಿ ನಡೆಸಿದರು.

ಮತ್ತೊಂದು ನಿದರ್ಶನದಲ್ಲಿ, ”ಬೆಂಕಿ ಹಚ್ಚಲಾದ ಕಟ್ಟಡದ ದೃಶ್ಯಗಳನ್ನು ರೆಕಾರ್ಡ್ ಮಾಡುತ್ತಿದ್ದಾಗ ಮೂವರು ಪತ್ರಕರ್ತರ ಮೇಲೆ ಭದ್ರತಾ ಸಿಬ್ಬಂದಿ ಲಾಠಿಗಳಿಂದ ಹಲ್ಲೆ ನಡೆಸಿದ ಘಟನೆ ಇಂಫಾಲ್‌ನ ನ್ಯೂ ಚೆಕ್‌ಕಾನ್ ಪ್ರದೇಶದಲ್ಲಿ ನಡೆದಿದೆ” ಎಂದು ಆರೋಪಿಸಲಾಗಿದೆ.

”ಇರೋಪಿಯನ್ ಒಕ್ಕೂಟ-ಭಾರತದ ಮಾನವ ಹಕ್ಕುಗಳ ಸಂವಾದವನ್ನು ಬಲಪಡಿಸಬೇಕು. ಇರೋಪಿಯನ್ ಒಕ್ಕೂಟ ಮತ್ತು ಅದರ ಸದಸ್ಯ ರಾಷ್ಟ್ರಗಳಲ್ಲಿ ವ್ಯವಸ್ಥಿತವಾಗಿ ಮತ್ತು ಸಾರ್ವಜನಿಕವಾಗಿ ಮಾನವ ಹಕ್ಕುಗಳ ಕಾಳಜಿಯನ್ನು ಹೆಚ್ಚಿಸಲು ಪ್ರೋತ್ಸಾಹಿಸಲು ಸಹ ಸಲಹೆ ನೀಡುತ್ತವೆ. ವಿಶೇಷವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯ, ಧರ್ಮ ಮತ್ತು ನಾಗರಿಕ ಸಮಾಜಕ್ಕೆ ಕುಗ್ಗುತ್ತಿರುವ ಸ್ಥಳಗಳ ಬಗ್ಗೆ ಕಾಳಜಿ ವಹಿಸುತ್ತದೆ..” ಎಂದು ಯುರೋಪಿಯನ್ ಸಂಸತ್ತಿನ ಸದಸ್ಯರು ಹೇಳಿದ್ದಾರೆ.

ಜೂನ್ 11 ರಂದು ಯುರೋಪಿಯನ್ ಪಾರ್ಲಿಮೆಂಟ್‌ನಲ್ಲಿ ಮಣಿಪುರದ ನಿರ್ಣಯದ ಪ್ರಸ್ತಾಪವನ್ನು ಆರು ಸಂಸದೀಯ ಗುಂಪುಗಳು – ಎಡ ಗುಂಪು, ವರ್ಟ್ಸ್ / ಎಎಲ್ಇ ಗುಂಪು, ಎಸ್ & ಡಿ ಗ್ರೂಪ್, ರಿನ್ಯೂ ಗ್ರೂಪ್, ಇಸಿಆರ್ ಗ್ರೂ ಮತ್ತು ಪಿಪಿಇ ಗ್ರೂಪ್ ಮೂಲಕ ಮಂಡಿಸಲಾಯಿತು.

ಆರು ಸಂಸದೀಯ ಗುಂಪುಗಳು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ನಾಗರಿಕ ಸಮಾಜ ಮತ್ತು ಪತ್ರಕರ್ತರನ್ನು ದಮನ ಮಾಡಿದೆ ಎಂದು ಆರೋಪಿಸಿದೆ. ಈ ನಿರ್ಣಯವು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಜೀವಹಾನಿ ಮತ್ತು ಆಸ್ತಿ ನಾಶವನ್ನು ಖಂಡಿಸಿದೆ.

ಕೇಂದ್ರ ಮತ್ತು ಮಣಿಪುರದ ಬಿಜೆಪಿ ಸರ್ಕಾರಗಳು ರಾಜ್ಯಗಳಲ್ಲಿನ ಹಿಂಸಾಚಾರವನ್ನು ತಡೆಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಿಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿಲ್ಲ ಅಥವಾ ಅಲ್ಲಿನ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಇನ್ನೂ ಸುಡುತ್ತಿರುವ ಮಣಿಪುರ; ಸಣ್ಣಸಣ್ಣ ಸಮುದಾಯಗಳ ಬಗ್ಗೆ ಪ್ರಭುತ್ವದ ನಿರ್ಲಜ್ಜ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...