Homeಮುಖಪುಟಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

ಅಲ್ಪಸಂಖ್ಯಾತರ ಮೇಲಿನ ಅಸಹಿಷ್ಣುತೆಯೇ ಮಣಿಪುರ ಹಿಂಸಾಚಾರಕ್ಕೆ ಕಾರಣ: ಯುರೋಪಿಯನ್ ಪಾರ್ಲಿಮೆಂಟ್ ನಿರ್ಣಯ

- Advertisement -
- Advertisement -

ಮಣಿಪುರ ಹಿಂಸಾಚಾರಕ್ಕೆ ಅಲ್ಪಸಂಖ್ಯಾತರ ಬಗೆಗಿನ ಅಸಹಿಷ್ಣುತೆ ಕಾರಣವಾಗಿದೆ ಮತ್ತು ಎಲ್ಲಾ ಅಲ್ಪಸಂಖ್ಯಾತರನ್ನು ಭಾರತ ಸರ್ಕಾರ ರಕ್ಷಿಸಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಗುರುವಾರ ಅಂಗೀಕರಿಸಿದರು.

”ಯುರೋಪಿಯನ್ ಸಂಸತ್ತಿನ ಸದಸ್ಯರು (MEP) ಹಿಂಸಾಚಾರವನ್ನು ಪರಿಶೀಲಿಸಲು ಸ್ವತಂತ್ರ ತನಿಖೆಗಳಿಗೆ ಅವಕಾಶ ನೀಡಬೇಕು. ಆ ರಾಜ್ಯದಲ್ಲಿ ನಿರ್ಭಯದ ವಾತಾವರಣ ನಿರ್ಮಿಸಲು ಇಂಟರ್ನೆಟ್ ನಿಷೇಧವನ್ನು ತೆಗೆದುಹಾಕಬೇಕು” ಎಂದು ಶಾಸಕರು ನಿರ್ಣಯದಲ್ಲಿ ತಿಳಿಸಿದ್ದಾರೆ.

ಮಣಿಪುರವು ಮೇ 3 ರಿಂದ ಕುಕಿ ಮತ್ತು ಬಹುಸಂಖ್ಯಾತ ಮೈತಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಿದೆ. ವ್ಯಾಪಕವಾದ ಹಿಂಸಾಚಾರ ಮತ್ತು ಬೆಂಕಿ ಹಚ್ಚುವ ಘಟನೆಗಳು ರಾಜ್ಯದಲ್ಲಿ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸುತ್ತಿವೆ. 140ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳಿಂದ ಸ್ಥಾಳಾಂತರಗೊಂಡಿದ್ದಾರೆ.

ಹಿಂಸಾಚಾರ ಪ್ರಾರಂಭವಾದಾಗಿನಿಂದ ರಾಜ್ಯದಾದ್ಯಂತ ಇಂಟರ್ನೆಟ್ ನಿಷೇಧಿಸಲಾಗಿದೆ, ರಾಜ್ಯದ ಆರ್ಥಿಕತೆಯು ನೆಲಕಚ್ಚಿದೆ. ಇಂಟರ್ನೆಟ್ ಮೇಲಿನ ನಿಷೇಧವನ್ನು ಕಳೆದ ವಾರ ಭಾಗಶಃ ತೆಗೆದುಹಾಕಲಾಗಿದೆ.

ಭಾರತದಲ್ಲಿ ರಾಜಕೀಯವಾಗಿ ಪ್ರೇರಿತಗೊಂಡು ಹಿಂದೂ ಬಹುಸಂಖ್ಯಾತತೆಯನ್ನು ಉತ್ತೇಜಿಸುವ ವಿಭಜಕ ನೀತಿಗಳನ್ನು ಅನುಸರಿಸುತ್ತಿದೆ ಎಂದು ಯುರೋಪಿಯನ್ ಪಾರ್ಲಿಮೆಂಟ್‌ನಲ್ಲಿನ ನಿರ್ಣಯದಲ್ಲಿ ಕಳವಳ ವ್ಯಕ್ತಪಡಿಸಿದೆ.

ಭದ್ರತಾ ಪಡೆಗಳು ಹತ್ಯೆಯಲ್ಲಿ ಭಾಗಿ

”ಮಣಿಪುರ ರಾಜ್ಯ ಸರ್ಕಾರವು ಇಂಟರ್ನೆಟ್ ಸಂಪರ್ಕಗಳನ್ನು ಸ್ಥಗಿತಗೊಳಿಸಿದೆ ಮತ್ತು ಮಾಧ್ಯಮಗಳಿಗೂ ವರದಿ ಮಾಡಲು ಅಡ್ಡಿಪಡಿಸಿದೆ. ಇಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಲ್ಲಿ ಭದ್ರತಾ ಪಡೆಗಳು ಭಾಗಿಯಾಗಿವೆ, ಇದು ಅಧಿಕಾರಿಗಳ ಮೇಲಿನ ಅವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಅದು ಹೇಳಿದೆ.

ಭದ್ರತಾ ಪಡೆಗಳು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 11ರಂದು ನಡೆದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದರು. ಉಗ್ರರು ತಮ್ಮ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಸೇನೆ ಹೇಳಿದರೆ, ಗ್ರಾಮ ರಕ್ಷಣಾ ಸ್ವಯಂಸೇವಕರ ಗುಂಪು ತಮ್ಮ ಮೇಲೆ ಗುಂಡು ಹಾರಿಸಿದ್ದು ಭದ್ರತಾ ಸಿಬ್ಬಂದಿ ಎಂದು ಹೇಳಿಕೊಂಡಿದ್ದು, ಅವರು ಪ್ರತಿದಾಳಿ ನಡೆಸಿದರು.

ಮತ್ತೊಂದು ನಿದರ್ಶನದಲ್ಲಿ, ”ಬೆಂಕಿ ಹಚ್ಚಲಾದ ಕಟ್ಟಡದ ದೃಶ್ಯಗಳನ್ನು ರೆಕಾರ್ಡ್ ಮಾಡುತ್ತಿದ್ದಾಗ ಮೂವರು ಪತ್ರಕರ್ತರ ಮೇಲೆ ಭದ್ರತಾ ಸಿಬ್ಬಂದಿ ಲಾಠಿಗಳಿಂದ ಹಲ್ಲೆ ನಡೆಸಿದ ಘಟನೆ ಇಂಫಾಲ್‌ನ ನ್ಯೂ ಚೆಕ್‌ಕಾನ್ ಪ್ರದೇಶದಲ್ಲಿ ನಡೆದಿದೆ” ಎಂದು ಆರೋಪಿಸಲಾಗಿದೆ.

”ಇರೋಪಿಯನ್ ಒಕ್ಕೂಟ-ಭಾರತದ ಮಾನವ ಹಕ್ಕುಗಳ ಸಂವಾದವನ್ನು ಬಲಪಡಿಸಬೇಕು. ಇರೋಪಿಯನ್ ಒಕ್ಕೂಟ ಮತ್ತು ಅದರ ಸದಸ್ಯ ರಾಷ್ಟ್ರಗಳಲ್ಲಿ ವ್ಯವಸ್ಥಿತವಾಗಿ ಮತ್ತು ಸಾರ್ವಜನಿಕವಾಗಿ ಮಾನವ ಹಕ್ಕುಗಳ ಕಾಳಜಿಯನ್ನು ಹೆಚ್ಚಿಸಲು ಪ್ರೋತ್ಸಾಹಿಸಲು ಸಹ ಸಲಹೆ ನೀಡುತ್ತವೆ. ವಿಶೇಷವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯ, ಧರ್ಮ ಮತ್ತು ನಾಗರಿಕ ಸಮಾಜಕ್ಕೆ ಕುಗ್ಗುತ್ತಿರುವ ಸ್ಥಳಗಳ ಬಗ್ಗೆ ಕಾಳಜಿ ವಹಿಸುತ್ತದೆ..” ಎಂದು ಯುರೋಪಿಯನ್ ಸಂಸತ್ತಿನ ಸದಸ್ಯರು ಹೇಳಿದ್ದಾರೆ.

ಜೂನ್ 11 ರಂದು ಯುರೋಪಿಯನ್ ಪಾರ್ಲಿಮೆಂಟ್‌ನಲ್ಲಿ ಮಣಿಪುರದ ನಿರ್ಣಯದ ಪ್ರಸ್ತಾಪವನ್ನು ಆರು ಸಂಸದೀಯ ಗುಂಪುಗಳು – ಎಡ ಗುಂಪು, ವರ್ಟ್ಸ್ / ಎಎಲ್ಇ ಗುಂಪು, ಎಸ್ & ಡಿ ಗ್ರೂಪ್, ರಿನ್ಯೂ ಗ್ರೂಪ್, ಇಸಿಆರ್ ಗ್ರೂ ಮತ್ತು ಪಿಪಿಇ ಗ್ರೂಪ್ ಮೂಲಕ ಮಂಡಿಸಲಾಯಿತು.

ಆರು ಸಂಸದೀಯ ಗುಂಪುಗಳು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ನಾಗರಿಕ ಸಮಾಜ ಮತ್ತು ಪತ್ರಕರ್ತರನ್ನು ದಮನ ಮಾಡಿದೆ ಎಂದು ಆರೋಪಿಸಿದೆ. ಈ ನಿರ್ಣಯವು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಜೀವಹಾನಿ ಮತ್ತು ಆಸ್ತಿ ನಾಶವನ್ನು ಖಂಡಿಸಿದೆ.

ಕೇಂದ್ರ ಮತ್ತು ಮಣಿಪುರದ ಬಿಜೆಪಿ ಸರ್ಕಾರಗಳು ರಾಜ್ಯಗಳಲ್ಲಿನ ಹಿಂಸಾಚಾರವನ್ನು ತಡೆಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಿಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿಲ್ಲ ಅಥವಾ ಅಲ್ಲಿನ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಇನ್ನೂ ಸುಡುತ್ತಿರುವ ಮಣಿಪುರ; ಸಣ್ಣಸಣ್ಣ ಸಮುದಾಯಗಳ ಬಗ್ಗೆ ಪ್ರಭುತ್ವದ ನಿರ್ಲಜ್ಜ ನಿರ್ಲಕ್ಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...