Homeಪುಸ್ತಕ ವಿಮರ್ಶೆಪುಸ್ತಕ ಪರಿಚಯ; ಬೇಟೆಯಲ್ಲ ಆಟವೆಲ್ಲ: ಗೊಂದಲ ಗೋಜಲುಗಳನ್ನು ಕಾಣಿಸುವ ಕಾದಂಬರಿ

ಪುಸ್ತಕ ಪರಿಚಯ; ಬೇಟೆಯಲ್ಲ ಆಟವೆಲ್ಲ: ಗೊಂದಲ ಗೋಜಲುಗಳನ್ನು ಕಾಣಿಸುವ ಕಾದಂಬರಿ

- Advertisement -
- Advertisement -

ಜಯಂತ್ ಕಾಯ್ಕಿಣಿ, ವಿವೇಕ್ ಶಾನಬಾಗ್ ಮತ್ತು ಎಂ.ಎಸ್. ಶ್ರೀರಾಮ್ ಈ ಮೂವರೂ ಬರಹಗಾರರ ಬಗ್ಗೆ ನನಗೆ ಯಾವಾಗಲೂ ಹೆಚ್ಚಿನ ಕುತೂಹಲ. ಈ ಮೂವರೂ ಹಲವು ಘಟ್ಟಗಳಲ್ಲಿ, ಕರ್ನಾಟಕದಿಂದ ದೂರದಲ್ಲಿ-ದೇಶದ ಹಲವೆಡೆಯಲ್ಲಿ, ದೇಶದಿಂದಾಚೆಗೆ ನೆಲೆಸಿದ್ದು, ಬದಲಾಗುತ್ತಿರುವ ಜಗತ್ತನ್ನು ಕರ್ನಾಟಕದ ಸೊಗಡಿನೊಂದಿಗೆ ಖುದ್ದಾಗಿ ನೋಡಿದವರು. ನನ್ನ ಪ್ರೀತಿಯ ಊರಾದ ಮುಂಬಯಿಯಲ್ಲಿ ಇದ್ದವರು(ಹೀಗೆ ನಾನು ಅಂದುಕೊಂಡಿದ್ದು). ನನ್ನ ಸೀಮಿತ ತಿಳಿವಳಿಕೆಯಲ್ಲಿ ವ್ಯಾಸರಾಯ ಬಲ್ಲಾಳರು ಮತ್ತು ಯಶವಂತ ಚಿತ್ತಾಲರ ನಂತರ ಕಾರ್ಪೋರೆಟ್ ಜಗತ್ತನ್ನು ಖುದ್ದಾಗಿ ನೋಡಿ ಬರೆದವರು ಇವರುಗಳೇ. ಕಾಯ್ಕಿಣಿ ಕಟ್ಟಿಕೊಡುವ ಮುಂಬಯಿಯ ವಿವರ ನನ್ನ ಕಣ್ಣನ್ನು ಅರಳಿಸುತ್ತಿದ್ದವು. ಆದರೆ ನನ್ನ ಮುಂಬಯಿ ಮತ್ತು ಕಾಯ್ಕಿಣಿಯವರ ಮುಂಬಯಿಯಲ್ಲಿ ದೊಡ್ಡ ಅಂತರವಿದೆ. ನಾನು ಮುಂಬಯಿ ಸೇರಿದ ವರ್ಷವೇ ಅವರು ಮುಂಬಯಿ ತೊರೆದಿದ್ದೂ ಅದಕ್ಕೆ ಕಾರಣವಿರಬಹುದು.

ನಮ್ಮ(ಭಾರತದ) ಜಗತ್ತು ಒಂದು ಟ್ರಾನ್ಸಿಷನಲ್ ಅವಧಿಯಲ್ಲಿ ಸಾಗುತ್ತಿದೆ, ಸಂಬಂಧಗಳು ಬದಲಾಗುತ್ತಿವೆ. ಹಿಂದೆ ನೋಡಿದ ಭಾರತವೇನೂ ಕಾಣೆಯಾಗಿಲ್ಲ, (ನಮ್ಮಂಥ ’ಆಧುನಿಕ’ ಜಗತ್ತಿನಲ್ಲಿ ಪ್ರವೇಶಿಸುವವರಿಗೆ ಕಣ್ಮರೆಯಾಗಿದ್ದು ನಿಜ.) ಅದರೊಂದಿಗೆ ಹೊಸ ಜಗತ್ತೊಂದು ಸೃಷ್ಟಿಯಾಗಿದ್ದು, ಅದು ಹಲವರಿಗೆ ಮುಚ್ಚಿದ ಬಾಗಿಲ ಜಗತ್ತಿನಂತೆ ಇದೆ. ಪ್ರವೇಶಾವಕಾಶ ಎಲ್ಲರಿಗೂ ಇದೆ ಎಂದು ಮೇಲ್ನೋಟಕ್ಕೆ ಕಾಣಿಸಿದರೂ, ಹೆಚ್ಚಿನವರಿಗೆ ಅದರ ಬಾಗಿಲು ಮುಚ್ಚಿಯೇ ಇದೆ. ಆ ಜಗತ್ತಿನ ಭಾಷೆ ಇಂಗ್ಲಿಷು. ಭಾಷೆಯೊಂದಿಗೆ ಸಂಸ್ಕೃತಿ ಹೇಗೆ ತಗಲುಹಾಕಿಕೊಂಡಿದೆ ಎಂಬುದು ನಮಗೆಲ್ಲ ತಿಳಿದ ವಿಷಯ. ಈ ’ಸೌತ್ ಬಾಂಬೆ’(ಸೊಬೊ)ಯ ಜಗತ್ತನ್ನು ಭೇದಿಸುವುದು ಕಷ್ಟವಿದ್ದರೂ, ಭೇದಿಸಿದವರೂ ಅನೇಕರಿದ್ದಾರೆ. ಈ ಎರಡೂ ಜಗತ್ತುಗಳಲ್ಲಿ ವಿಹರಿಸಿದ ಇವರ ಸಾಹಿತ್ಯ ಓದಲು ಎಂದಿಗೂ ಕುತೂಹಲಕಾರಿಯಾದದ್ದೇ.

ಬೇಟೆಯಲ್ಲ ಆಟವೆಲ್ಲ ಎಂಬ ಎಂ ಎಸ್ ಶ್ರೀರಾಮ್ ಅವರ ಕಥೆಯೂ ಈ ಜಗತ್ತನ್ನು ಭೇದಿಸಿದವರ ಕಥೆ. ಕಾರ್ಪೋರೇಟ್ ಜಗತ್ತಿನ ಹೆಚ್ಚಿನ ಕಥೆಗಳಂತೆ ಈ ಕಥೆಯೂ ಹೊಸ ಜಗತ್ತಿನಲ್ಲಿ ’ಯಶಸ್ವಿ’ಯಾದವರ ಕಥೆ. ಹೊರಗಿನಿಂದ ಕಾಣುವ ನಮ್ಮಂತವರಿಗೆ, ಮೈಸೂರಿನ ಮೂಲದ ಪಾತ್ರಗಳಿಗೆ ತಮ್ಮ ಬೇರುಗಳನ್ನು ಸಂಪೂರ್ಣವಾಗಿ ಕಳಚಿ, ಪೂರ್ಣಪ್ರಮಾಣದಲ್ಲಿ ’ಸೊಬೊ’ ಆಗಬಹುದಲ್ಲ ಎಂದೆನಿಸುತ್ತಾದರೂ, ಇವರ್‍ಯಾರೂ ಬೇರುಗಳನ್ನು ಕಳಚಿಕೊಳ್ಳುವುದಿಲ್ಲ. ಬಹುಶಃ ಆ ಮಟ್ಟದ ಯಶಸ್ವಿಗಳಾಗಿಲ್ಲವೇನೋ, ಅಥವಾ ಎಷ್ಟೇ ಯಶಸ್ಸು ಕಂಡರೂ ಸಂಪೂರ್ಣವಾಗಿ ಬೇರುಗಳನ್ನು ಕಳಚಿಕೊಳ್ಳಲು ಸಾಧ್ಯವಿಲ್ಲವೇನೋ.

ಸಹಜವಾಗಿಯೇ ಎಲ್ಲಾ ಪಾತ್ರಗಳು ಒಂದು ಟ್ರಾನ್ಸ್‌ಫಾರ್ಮೇಷನ್‌ಗೆ ಒಳಗಾಗಿದ್ದಾರೆ. ಅನಿರುದ್ಧ ಒಬ್ಬ ಆರ್ಥಾಡಾಕ್ಸ್ ವ್ಯಕ್ತಿಯಿಂದ ಅಷ್ಟೇನೂ ಆರ್ಥಾಡಾಕ್ಸ್ ಆಗಿರದ ವ್ಯಕ್ತಿಯಾಗಿ ಬದಲಾದರೆ, ಅವನು ಗೆಳೆಯ ಅಖ್ತರ್ ಹುಸೇನ್‌ನ ರೂಪಾಂತರ ಮೇಲ್ನೋಟಕ್ಕೆ ಅವನ ವಿರುದ್ಧದ ದಿಕ್ಕಿನಲ್ಲಿದೆ. ಸುಜಾತಳ ಟ್ರಾನ್ಸ್‌ಫಾರ್ಮೇಷನ್ ಅತ್ಯಂತ ಡ್ರಾಸ್ಟಿಕ್ ಆಗಿದೆ ಮತ್ತು ಆಕೆ ಎಲ್ಲರಿಗಿಂತ ಯಶಸ್ವಿಯಾಗಿದ್ದಾಗಿದೆ. ಅವರ ಆಳದ ಭಾವಗಳು, ದ್ವಂದ್ವಗಳು, ತೋರಿಕೆಗಳೆಲ್ಲವೂ ಸಹಜವಾಗಿ ಒಂದೊಂದಾಗಿ ತೆರೆದುಕೊಳ್ಳುತ್ತವೆ. ಸಹಜವಾಗಿ ತೆರೆದುಕೊಳ್ಳದೇ ಇರುವುದು ಈಗಾಗಲೇ ಆ ಸೊಬೊ ಜಗತ್ತಿನಲ್ಲಿರುವವರ ದ್ವಂದ್ವಗಳು. ಅವರನ್ನು ನೋಡಿದಾಗ ಅನಿಸುವುದು ಹಾಗೆಯೇ, ಎಷ್ಟು ಸಾರ್ಟೆಡ್ ಇದಾರಪ್ಪ, ದ್ವಂದ್ವಗಳೇ ಇಲ್ಲ ಎಂದು. ಶಿವಾನಿ ಆ ಲೋಕವನ್ನು ಪ್ರತಿನಿಧಿಸುತ್ತಾಳೆ. ಅವಳು ನನಗೆ ತಿಳಿಯಲಿಲ್ಲ. ಅವಳ ಬಾಯ್‌ಫ್ರೆಂಡ್ ಚಿನ್ಮಯನಿಗೆ ಅನಿಸಿದಂತೆ ಓದುಗನಿಗೂ ಅವಳು ಕ್ರೂರಿ ಎನಿಸುತ್ತಾಳೆ. ವ್ಯವಹಾರದಲ್ಲಿ ಅವಳು ಕ್ರುಎಲ್ ಆಗಿಯೇ ಮುಂದುವರೆಯಬೇಕಾದ ಅವಶ್ಯಕತೆ ಅವಳಿಗಿರಬಹುದು ಆದರೆ ವೈಯಕ್ತಿಕ ಜೀವನದಲ್ಲಿ? ಹೌದು, ಇರಬಹುದು. ಆದರೂ ಅವಳನ್ನು ಅರಿಯುವ, ಅವಳ ಒಳಜಗತ್ತಿನೊಳಗೆ ಇಣುಕುವ ತವಕವನ್ನು ತಣಿಸುವುದಿಲ್ಲ. ಚಿನ್ಮಯ ಮತ್ತು ಶಿವಾನಿ ನಡುವೆ ಇರಬಹುದಾಗಿದ್ದ ಪ್ಯಾಷನ್ ಓದುಗನಿಗೆ ಕಾಣಿಸುವುದಿಲ್ಲ. ಪ್ಯಾಷನ್ ಇಲ್ಲದೇ ಇರುವ ಸಂಬಂಧವಾಗಿದ್ದರೆ, ಪ್ಯಾಷನ್ ಇಲ್ಲದ, ತಣ್ಣನೆಯ ಸಂಬಂಧದ ಬಗ್ಗೆ ಇರುವ ಕುತೂಹಲವೂ ತಣಿಯುವುದಿಲ್ಲ.

ಇಲ್ಲಿಯ ಗಂಡು ಹೆಣ್ಣಿನ ಸಂಬಂಧಗಳಲ್ಲಿ ಆ ಒಂದು ತೀವ್ರವಾದ ಪ್ಯಾಷನ್ ಕಾಣಿಸುವುದಿಲ್ಲ. ಅನಿರುದ್ಧ ಕವಿತಾಳ ಸಂಬಂಧದಲ್ಲೂ ಅದು ಉಳಿದಿಲ್ಲ. ಸುಜಾತಾ ಮುಕುಂದನ ಸಂಬಂಧದಲ್ಲಿ ಅದು ಕಾಣಿಸದಿದ್ದರೂ, ಮುಕುಂದ ಮತ್ತು ಶಿವಾನಿಯ ಸಂಬಂಧವನ್ನು ಕೆದಕದೇ ಹೋಗಿದ್ದು ಆಶ್ಚರ್ಯ.

ಸಂಬಂಧಗಳು ಬದಲಾಗುತ್ತಿರುವ ಸಮಯದಲ್ಲಿ ಬದಲಾಗುತ್ತಿರುವ ರಾಜಕೀಯವನ್ನು ಎಲ್ಲೂ ತುರುಕುವ ಪ್ರಯತ್ನ ಮಾಡದೇ, ಈ ಪಾತ್ರಗಳು ಸವೆಸುವ ಪಯಣದಲ್ಲಿಯೇ ರಾಜಕೀಯದಲ್ಲಾದ ಸೂಕ್ಷ್ಮ ಬದಲಾವಣೆಗಳನ್ನು, ಅವುಗಳು ಬೀರುತ್ತಿರುವ ಪರಿಣಾಮಗಳನ್ನೂ ಅಷ್ಟೇ ಆಳವಾಗಿ ಸೂಕ್ಷ್ಮವಾಗಿ ಕಂಡಿದ್ದಾರೆ. ಈ ಟ್ರಾನ್ಸಿಷನ್‌ನ ಪರ್ವ ಎಂದರೆ ಅದರ ಪ್ರಮುಖ ಅಂಶ ಗೊಂದಲ. ಈ ಗೊಂದಲಗೋಜಲುಗಳನ್ನು ಲೀಲಾಜಾಲವಾಗಿ ಹಿಡಿದಿಟ್ಟು, ಕಥೆಯೂ ಒಂದಿಷ್ಟು ಗೊಂದಲಗಳನ್ನು ಸೃಷ್ಟಿಸಿ ನಮ್ಮ ಕಾಲದ ಒಂದು ಅತ್ಯಂತ ಪ್ರಮುಖ ಕೃತಿಯನ್ನು ಶ್ರೀರಾಮ್ ರಚಿಸಿದ್ದಾರೆ. ನಮ್ಮೆಲ್ಲರನ್ನು ಆವರಿಸುವ ಈ ಸುಂದರ ಗೊಂದಲಗೋಜಲುಗಳನ್ನು ಅನಾವರಣಗೊಳಿಸುವ-ಬಿಡಿಸುವ ಸಾಹಿತ್ಯ ಕೃತಿಗಳು ಕನ್ನಡದಲ್ಲಿ ಹೆಚ್ಚೆಚ್ಚು ಮೂಡಲಿ.

ರಾಜಶೇಖರ ಅಕ್ಕಿ
ಸಾಮಾಜಿಕ ಕಾರ್ಯಕರ್ತರಾಗಿರುವ ಅಕ್ಕಿ ಅಭಿನಯ, ಚಿತ್ರಕಥೆ ಬರಹ ಕಲಿಸಿಕೊಡುತ್ತಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬಿಳಿಮಲೆಯವರ ’ಕಾಗೆ ಮುಟ್ಟಿದ ನೀರು’ ಮೌಢ್ಯ ಕಾನನಕೆ ಬೆಂಕಿ ಹಚ್ಚಿ …

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...