Homeಚಳವಳಿದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

ದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

ಪಂಜಾಬ್‌ನ 31 ರೈತ ಗುಂಪುಗಳನ್ನು ಕಿಸಾನ್‌ ಸಮಿತಿಯಡಿ ತಂದು ಸೆಪ್ಟೆಂಬರ್‌ ಹೊತ್ತಿಗೆ ಹೋರಾಟ ಆರಂಭಿಸಿದ ರೈತ ಮುಖಂಡರ ಪರಿಚಯ ಇಲ್ಲಿದೆ.

- Advertisement -
- Advertisement -

ಪಟಿಯಾಲದ ಮೂಲದ ಇವರಿಗೆ 64 ವರ್ಷ. ಕೆಲ ಕಾಲ ಸರ್ಕಾರಿ ಸೇವೆಯಲ್ಲಿದ್ದು, ಕೃಷಿಯತ್ತ ಹೊರಳಿದರು. ದೀರ್ಘ ಕಾಲ ರೈತ ಸಮಸ್ಯೆಗಳ ಪರ ದನಿಯಾಗಿ ದುಡಿದ ಈ ವ್ಯಕ್ತಿ ಇಂದು ವಿಶ್ವದೆಲ್ಲೆಡೆಯಿಂದ ಬೆಂಬಲ ಪಡೆಯುತ್ತಿರುವ ದೆಹಲಿ ರೈತ ಹೋರಾಟಕ್ಕೆ ಚಾಲನೆ ನೀಡಿದವರಾಗಿದ್ದಾರೆ.

ಇವರ ಹೆಸರು ಜಗಮೋಹನ್‌ ಸಿಂಗ್‌ ಪಟಿಯಾಲ. 64 ವರ್ಷದ ಇವರು ಒಂದು ಕಾಲದಲ್ಲಿ ಅಕ್ಯುಪಂಕ್ಚರಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದರು. ನಂತರ ಪಂಜಾಬ್‌ ಸಹಕಾರ ಇಲಾಖೆಯಲ್ಲಿಯೂ ಸೇವೆ ಸಲ್ಲಿಸಿದ್ದರು.

ಆದರೆ ಅವರ ಮೂಲಸೆಳೆತವಿದ್ದು ಕೃಷಿಯೆಡೆಗೆ. ಭಾರತೀಯ ಕಿಸಾನ್‌ ಯೂನಿಯನ್‌ ಏಕ್ತಾದ ಸಕ್ರಿಯ ಕಾರ್ಯಕರ್ತರಾಗಿ ಹದಿನೈದು ವರ್ಷಗಳ ಕಾಲ ಶ್ರಮಿಸಿದ ಅವರು ನಂತರ ಭಾರತಿ ಕಿಸಾನ್‌ ಯೂನಿಯನ್‌ (ದಕೌಂಡ) ರಚಿಸಿ ಅದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಪಂಜಾಬಿ ರೈತರ ಪರ ಹೋರಾಟಗಳನ್ನು ಸಂಘಟಿಸುತ್ತಾ, ಕೃಷಿ ಸಮಸ್ಯೆಗಳಿ ರಾಜಕೀಯ ಪರಿಹಾರಗಳನ್ನು ಒದಗಿಸುವುದಕ್ಕೆ ಶ್ರಮಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದವರು ಮತ್ತು ಪ್ರತಿಭಟಿಸಿದವರು ಜಗಮೋಹನ್‌ ಅವರು. ಆಲ್‌ ಇಂಡಿಯಾ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ಹೆಸರಿನಲ್ಲಿ ಹತ್ತು ಕೃಷಿ ಸಂಘಟನೆಗಳು ಒಟ್ಟಾಗಿ ಈ ಮೂರು ಕಾನೂನುಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಿದರು.

ಈ ಪ್ರಕ್ರಿಯೆಯಲ್ಲಿ 31 ರೈತ ಗುಂಪುಗಳನ್ನು ಕಿಸಾನ್‌ ಸಮಿತಿಯಡಿ ತಂದು ಸೆಪ್ಟೆಂಬರ್‌ ಹೊತ್ತಿಗೆ ಹೋರಾಟವನ್ನು ಮತ್ತಷ್ಟು ತೀವ್ರವಾಗಿಸಿದರು. ರೈತ ಸಂಘಟನೆಗಳ ನಡುವೆ ಇರುವ ಸಣ್ಣ ಭಿನ್ನಾಭಿಪ್ರಾಯಗಳಿಂದಾಗಿ ಒಡೆದು ಹೋಗಿರಬಹುದಾಗಿದ್ದ ಸಂಘಟನೆಗಳನ್ನು ಒಂದುಗೂಡಿಸಿದ್ದು ಜಗ್‌ಮೋಹನ್‌ ಅವರ ಸಂಘಟನಾ ಚಾತುರ್ಯ.

ರೈತ ಸಮಸ್ಯೆಗಳಿಗೆ ಇರಬಹುದಾದ ಏಕೈಕ ಸಮಸ್ಯೆ ರೈತ ವಿರೋಧಿ ಸರ್ಕಾರ ಎಂಬುದನ್ನು ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಜಗಮೋಹನ್‌ ಸಿಂಗ್ ಪಟಿಯಾಲ ಅವರು ದೆಹಲಿಯ ಗಡಿಯಲ್ಲಿ ದಿನದಿನಕ್ಕೂ ರೈತ ಹೋರಾಟವನ್ನು ತೀವ್ರಗೊಳಿಸುತ್ತಿದ್ದಾರೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...