Homeಚಳವಳಿದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

ದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

ಪಂಜಾಬ್‌ನ 31 ರೈತ ಗುಂಪುಗಳನ್ನು ಕಿಸಾನ್‌ ಸಮಿತಿಯಡಿ ತಂದು ಸೆಪ್ಟೆಂಬರ್‌ ಹೊತ್ತಿಗೆ ಹೋರಾಟ ಆರಂಭಿಸಿದ ರೈತ ಮುಖಂಡರ ಪರಿಚಯ ಇಲ್ಲಿದೆ.

- Advertisement -
- Advertisement -

ಪಟಿಯಾಲದ ಮೂಲದ ಇವರಿಗೆ 64 ವರ್ಷ. ಕೆಲ ಕಾಲ ಸರ್ಕಾರಿ ಸೇವೆಯಲ್ಲಿದ್ದು, ಕೃಷಿಯತ್ತ ಹೊರಳಿದರು. ದೀರ್ಘ ಕಾಲ ರೈತ ಸಮಸ್ಯೆಗಳ ಪರ ದನಿಯಾಗಿ ದುಡಿದ ಈ ವ್ಯಕ್ತಿ ಇಂದು ವಿಶ್ವದೆಲ್ಲೆಡೆಯಿಂದ ಬೆಂಬಲ ಪಡೆಯುತ್ತಿರುವ ದೆಹಲಿ ರೈತ ಹೋರಾಟಕ್ಕೆ ಚಾಲನೆ ನೀಡಿದವರಾಗಿದ್ದಾರೆ.

ಇವರ ಹೆಸರು ಜಗಮೋಹನ್‌ ಸಿಂಗ್‌ ಪಟಿಯಾಲ. 64 ವರ್ಷದ ಇವರು ಒಂದು ಕಾಲದಲ್ಲಿ ಅಕ್ಯುಪಂಕ್ಚರಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದರು. ನಂತರ ಪಂಜಾಬ್‌ ಸಹಕಾರ ಇಲಾಖೆಯಲ್ಲಿಯೂ ಸೇವೆ ಸಲ್ಲಿಸಿದ್ದರು.

ಆದರೆ ಅವರ ಮೂಲಸೆಳೆತವಿದ್ದು ಕೃಷಿಯೆಡೆಗೆ. ಭಾರತೀಯ ಕಿಸಾನ್‌ ಯೂನಿಯನ್‌ ಏಕ್ತಾದ ಸಕ್ರಿಯ ಕಾರ್ಯಕರ್ತರಾಗಿ ಹದಿನೈದು ವರ್ಷಗಳ ಕಾಲ ಶ್ರಮಿಸಿದ ಅವರು ನಂತರ ಭಾರತಿ ಕಿಸಾನ್‌ ಯೂನಿಯನ್‌ (ದಕೌಂಡ) ರಚಿಸಿ ಅದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಪಂಜಾಬಿ ರೈತರ ಪರ ಹೋರಾಟಗಳನ್ನು ಸಂಘಟಿಸುತ್ತಾ, ಕೃಷಿ ಸಮಸ್ಯೆಗಳಿ ರಾಜಕೀಯ ಪರಿಹಾರಗಳನ್ನು ಒದಗಿಸುವುದಕ್ಕೆ ಶ್ರಮಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದವರು ಮತ್ತು ಪ್ರತಿಭಟಿಸಿದವರು ಜಗಮೋಹನ್‌ ಅವರು. ಆಲ್‌ ಇಂಡಿಯಾ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ಹೆಸರಿನಲ್ಲಿ ಹತ್ತು ಕೃಷಿ ಸಂಘಟನೆಗಳು ಒಟ್ಟಾಗಿ ಈ ಮೂರು ಕಾನೂನುಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಿದರು.

ಈ ಪ್ರಕ್ರಿಯೆಯಲ್ಲಿ 31 ರೈತ ಗುಂಪುಗಳನ್ನು ಕಿಸಾನ್‌ ಸಮಿತಿಯಡಿ ತಂದು ಸೆಪ್ಟೆಂಬರ್‌ ಹೊತ್ತಿಗೆ ಹೋರಾಟವನ್ನು ಮತ್ತಷ್ಟು ತೀವ್ರವಾಗಿಸಿದರು. ರೈತ ಸಂಘಟನೆಗಳ ನಡುವೆ ಇರುವ ಸಣ್ಣ ಭಿನ್ನಾಭಿಪ್ರಾಯಗಳಿಂದಾಗಿ ಒಡೆದು ಹೋಗಿರಬಹುದಾಗಿದ್ದ ಸಂಘಟನೆಗಳನ್ನು ಒಂದುಗೂಡಿಸಿದ್ದು ಜಗ್‌ಮೋಹನ್‌ ಅವರ ಸಂಘಟನಾ ಚಾತುರ್ಯ.

ರೈತ ಸಮಸ್ಯೆಗಳಿಗೆ ಇರಬಹುದಾದ ಏಕೈಕ ಸಮಸ್ಯೆ ರೈತ ವಿರೋಧಿ ಸರ್ಕಾರ ಎಂಬುದನ್ನು ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಜಗಮೋಹನ್‌ ಸಿಂಗ್ ಪಟಿಯಾಲ ಅವರು ದೆಹಲಿಯ ಗಡಿಯಲ್ಲಿ ದಿನದಿನಕ್ಕೂ ರೈತ ಹೋರಾಟವನ್ನು ತೀವ್ರಗೊಳಿಸುತ್ತಿದ್ದಾರೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...