Homeಚಳವಳಿದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

ದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

ಪಂಜಾಬ್‌ನ 31 ರೈತ ಗುಂಪುಗಳನ್ನು ಕಿಸಾನ್‌ ಸಮಿತಿಯಡಿ ತಂದು ಸೆಪ್ಟೆಂಬರ್‌ ಹೊತ್ತಿಗೆ ಹೋರಾಟ ಆರಂಭಿಸಿದ ರೈತ ಮುಖಂಡರ ಪರಿಚಯ ಇಲ್ಲಿದೆ.

- Advertisement -
- Advertisement -

ಪಟಿಯಾಲದ ಮೂಲದ ಇವರಿಗೆ 64 ವರ್ಷ. ಕೆಲ ಕಾಲ ಸರ್ಕಾರಿ ಸೇವೆಯಲ್ಲಿದ್ದು, ಕೃಷಿಯತ್ತ ಹೊರಳಿದರು. ದೀರ್ಘ ಕಾಲ ರೈತ ಸಮಸ್ಯೆಗಳ ಪರ ದನಿಯಾಗಿ ದುಡಿದ ಈ ವ್ಯಕ್ತಿ ಇಂದು ವಿಶ್ವದೆಲ್ಲೆಡೆಯಿಂದ ಬೆಂಬಲ ಪಡೆಯುತ್ತಿರುವ ದೆಹಲಿ ರೈತ ಹೋರಾಟಕ್ಕೆ ಚಾಲನೆ ನೀಡಿದವರಾಗಿದ್ದಾರೆ.

ಇವರ ಹೆಸರು ಜಗಮೋಹನ್‌ ಸಿಂಗ್‌ ಪಟಿಯಾಲ. 64 ವರ್ಷದ ಇವರು ಒಂದು ಕಾಲದಲ್ಲಿ ಅಕ್ಯುಪಂಕ್ಚರಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದರು. ನಂತರ ಪಂಜಾಬ್‌ ಸಹಕಾರ ಇಲಾಖೆಯಲ್ಲಿಯೂ ಸೇವೆ ಸಲ್ಲಿಸಿದ್ದರು.

ಆದರೆ ಅವರ ಮೂಲಸೆಳೆತವಿದ್ದು ಕೃಷಿಯೆಡೆಗೆ. ಭಾರತೀಯ ಕಿಸಾನ್‌ ಯೂನಿಯನ್‌ ಏಕ್ತಾದ ಸಕ್ರಿಯ ಕಾರ್ಯಕರ್ತರಾಗಿ ಹದಿನೈದು ವರ್ಷಗಳ ಕಾಲ ಶ್ರಮಿಸಿದ ಅವರು ನಂತರ ಭಾರತಿ ಕಿಸಾನ್‌ ಯೂನಿಯನ್‌ (ದಕೌಂಡ) ರಚಿಸಿ ಅದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಪಂಜಾಬಿ ರೈತರ ಪರ ಹೋರಾಟಗಳನ್ನು ಸಂಘಟಿಸುತ್ತಾ, ಕೃಷಿ ಸಮಸ್ಯೆಗಳಿ ರಾಜಕೀಯ ಪರಿಹಾರಗಳನ್ನು ಒದಗಿಸುವುದಕ್ಕೆ ಶ್ರಮಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದವರು ಮತ್ತು ಪ್ರತಿಭಟಿಸಿದವರು ಜಗಮೋಹನ್‌ ಅವರು. ಆಲ್‌ ಇಂಡಿಯಾ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ಹೆಸರಿನಲ್ಲಿ ಹತ್ತು ಕೃಷಿ ಸಂಘಟನೆಗಳು ಒಟ್ಟಾಗಿ ಈ ಮೂರು ಕಾನೂನುಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಿದರು.

ಈ ಪ್ರಕ್ರಿಯೆಯಲ್ಲಿ 31 ರೈತ ಗುಂಪುಗಳನ್ನು ಕಿಸಾನ್‌ ಸಮಿತಿಯಡಿ ತಂದು ಸೆಪ್ಟೆಂಬರ್‌ ಹೊತ್ತಿಗೆ ಹೋರಾಟವನ್ನು ಮತ್ತಷ್ಟು ತೀವ್ರವಾಗಿಸಿದರು. ರೈತ ಸಂಘಟನೆಗಳ ನಡುವೆ ಇರುವ ಸಣ್ಣ ಭಿನ್ನಾಭಿಪ್ರಾಯಗಳಿಂದಾಗಿ ಒಡೆದು ಹೋಗಿರಬಹುದಾಗಿದ್ದ ಸಂಘಟನೆಗಳನ್ನು ಒಂದುಗೂಡಿಸಿದ್ದು ಜಗ್‌ಮೋಹನ್‌ ಅವರ ಸಂಘಟನಾ ಚಾತುರ್ಯ.

ರೈತ ಸಮಸ್ಯೆಗಳಿಗೆ ಇರಬಹುದಾದ ಏಕೈಕ ಸಮಸ್ಯೆ ರೈತ ವಿರೋಧಿ ಸರ್ಕಾರ ಎಂಬುದನ್ನು ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಜಗಮೋಹನ್‌ ಸಿಂಗ್ ಪಟಿಯಾಲ ಅವರು ದೆಹಲಿಯ ಗಡಿಯಲ್ಲಿ ದಿನದಿನಕ್ಕೂ ರೈತ ಹೋರಾಟವನ್ನು ತೀವ್ರಗೊಳಿಸುತ್ತಿದ್ದಾರೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...