Homeಚಳವಳಿದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

ದೆಹಲಿ ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ ಪರಿಚಯ

ಪಂಜಾಬ್‌ನ 31 ರೈತ ಗುಂಪುಗಳನ್ನು ಕಿಸಾನ್‌ ಸಮಿತಿಯಡಿ ತಂದು ಸೆಪ್ಟೆಂಬರ್‌ ಹೊತ್ತಿಗೆ ಹೋರಾಟ ಆರಂಭಿಸಿದ ರೈತ ಮುಖಂಡರ ಪರಿಚಯ ಇಲ್ಲಿದೆ.

- Advertisement -
- Advertisement -

ಪಟಿಯಾಲದ ಮೂಲದ ಇವರಿಗೆ 64 ವರ್ಷ. ಕೆಲ ಕಾಲ ಸರ್ಕಾರಿ ಸೇವೆಯಲ್ಲಿದ್ದು, ಕೃಷಿಯತ್ತ ಹೊರಳಿದರು. ದೀರ್ಘ ಕಾಲ ರೈತ ಸಮಸ್ಯೆಗಳ ಪರ ದನಿಯಾಗಿ ದುಡಿದ ಈ ವ್ಯಕ್ತಿ ಇಂದು ವಿಶ್ವದೆಲ್ಲೆಡೆಯಿಂದ ಬೆಂಬಲ ಪಡೆಯುತ್ತಿರುವ ದೆಹಲಿ ರೈತ ಹೋರಾಟಕ್ಕೆ ಚಾಲನೆ ನೀಡಿದವರಾಗಿದ್ದಾರೆ.

ಇವರ ಹೆಸರು ಜಗಮೋಹನ್‌ ಸಿಂಗ್‌ ಪಟಿಯಾಲ. 64 ವರ್ಷದ ಇವರು ಒಂದು ಕಾಲದಲ್ಲಿ ಅಕ್ಯುಪಂಕ್ಚರಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದರು. ನಂತರ ಪಂಜಾಬ್‌ ಸಹಕಾರ ಇಲಾಖೆಯಲ್ಲಿಯೂ ಸೇವೆ ಸಲ್ಲಿಸಿದ್ದರು.

ಆದರೆ ಅವರ ಮೂಲಸೆಳೆತವಿದ್ದು ಕೃಷಿಯೆಡೆಗೆ. ಭಾರತೀಯ ಕಿಸಾನ್‌ ಯೂನಿಯನ್‌ ಏಕ್ತಾದ ಸಕ್ರಿಯ ಕಾರ್ಯಕರ್ತರಾಗಿ ಹದಿನೈದು ವರ್ಷಗಳ ಕಾಲ ಶ್ರಮಿಸಿದ ಅವರು ನಂತರ ಭಾರತಿ ಕಿಸಾನ್‌ ಯೂನಿಯನ್‌ (ದಕೌಂಡ) ರಚಿಸಿ ಅದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಪಂಜಾಬಿ ರೈತರ ಪರ ಹೋರಾಟಗಳನ್ನು ಸಂಘಟಿಸುತ್ತಾ, ಕೃಷಿ ಸಮಸ್ಯೆಗಳಿ ರಾಜಕೀಯ ಪರಿಹಾರಗಳನ್ನು ಒದಗಿಸುವುದಕ್ಕೆ ಶ್ರಮಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದವರು ಮತ್ತು ಪ್ರತಿಭಟಿಸಿದವರು ಜಗಮೋಹನ್‌ ಅವರು. ಆಲ್‌ ಇಂಡಿಯಾ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ಹೆಸರಿನಲ್ಲಿ ಹತ್ತು ಕೃಷಿ ಸಂಘಟನೆಗಳು ಒಟ್ಟಾಗಿ ಈ ಮೂರು ಕಾನೂನುಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಿದರು.

ಈ ಪ್ರಕ್ರಿಯೆಯಲ್ಲಿ 31 ರೈತ ಗುಂಪುಗಳನ್ನು ಕಿಸಾನ್‌ ಸಮಿತಿಯಡಿ ತಂದು ಸೆಪ್ಟೆಂಬರ್‌ ಹೊತ್ತಿಗೆ ಹೋರಾಟವನ್ನು ಮತ್ತಷ್ಟು ತೀವ್ರವಾಗಿಸಿದರು. ರೈತ ಸಂಘಟನೆಗಳ ನಡುವೆ ಇರುವ ಸಣ್ಣ ಭಿನ್ನಾಭಿಪ್ರಾಯಗಳಿಂದಾಗಿ ಒಡೆದು ಹೋಗಿರಬಹುದಾಗಿದ್ದ ಸಂಘಟನೆಗಳನ್ನು ಒಂದುಗೂಡಿಸಿದ್ದು ಜಗ್‌ಮೋಹನ್‌ ಅವರ ಸಂಘಟನಾ ಚಾತುರ್ಯ.

ರೈತ ಸಮಸ್ಯೆಗಳಿಗೆ ಇರಬಹುದಾದ ಏಕೈಕ ಸಮಸ್ಯೆ ರೈತ ವಿರೋಧಿ ಸರ್ಕಾರ ಎಂಬುದನ್ನು ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಜಗಮೋಹನ್‌ ಸಿಂಗ್ ಪಟಿಯಾಲ ಅವರು ದೆಹಲಿಯ ಗಡಿಯಲ್ಲಿ ದಿನದಿನಕ್ಕೂ ರೈತ ಹೋರಾಟವನ್ನು ತೀವ್ರಗೊಳಿಸುತ್ತಿದ್ದಾರೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...