Homeಮುಖಪುಟ'ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ..'; ಪ್ರಧಾನಿ ಮೋದಿ ವಿರುದ್ಧ ಸಿಎಂ ಟೀಕಾಪ್ರಹಾರ

‘ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ..’; ಪ್ರಧಾನಿ ಮೋದಿ ವಿರುದ್ಧ ಸಿಎಂ ಟೀಕಾಪ್ರಹಾರ

ನಿಮ್ಮ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಹಣ ಕಾರ್ಪೋರೇಟ್ ದೊರೆಗಳ ಜೇಬು ಸೇರಿದೆ

- Advertisement -
- Advertisement -

ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದು, ‘ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಸ್ವಾಗತ’ ಎಂದು ಲೇವಡಿ ಮಾಡಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಸ್ವಾಗತ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ‍್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೋರುತ್ತೇನೆ. ನಿಮ್ಮ ಇತ್ತೀಚಿನ ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ, ನಿಮ್ಮ ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರೆಂದು ನಂಬಿದ್ದೇನೆ’ ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿ” ಎಂದು ಆಗ್ರಹಿಸಿದ್ದಾರೆ.

“ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019ರ ಬಜೆಟ್ ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆ ಎನ್ನವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಹೆಚ್.ಡಿ.ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ” ಎಂದು ಅವರು ಗಮನ ಸೆಳೆದಿದ್ದಾರೆ.

“ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಾದುದೇನಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎನ್ನುವುದು ನಿಮಗೆ ತಿಳಿದಿರಲಿ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ” ಎಂದು ಪ್ರಶ್ನಿಸಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ” ಎಂದು ಸಿಎಂ ಸವಾಲು ಹಾಕಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರೇ, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ? ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ನಿಮ್ಮ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದೀರಿ. ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದರೆ ಇದೇನಾ” ಎಂದು ಟೀಕಿಸಿದ್ದಾರೆ.

“ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿ, ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಆನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು. ನಿಮ್ಮ ಹತ್ತು ವರ್ಷಗಳಲ್ಲಿ ನೀವು ಆಸ್ತಿಮಾಡಿಕೊಟ್ಟಿದ್ದು ಅದಾನಿ-ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ” ಎಂದು ಅವರು ಪ್ರಧಾನಿ ಮೋದಿ ಮುಂದೆ ಸಾಲುಸಾಲು ಪ್ರಶ್ನೆಗಳನ್ನಿಟ್ಟಿದ್ದಾರೆ.

ಇದನ್ನೂ ಓದಿ; ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...