Homeಮುಖಪುಟ'ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ..'; ಪ್ರಧಾನಿ ಮೋದಿ ವಿರುದ್ಧ ಸಿಎಂ ಟೀಕಾಪ್ರಹಾರ

‘ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ..’; ಪ್ರಧಾನಿ ಮೋದಿ ವಿರುದ್ಧ ಸಿಎಂ ಟೀಕಾಪ್ರಹಾರ

ನಿಮ್ಮ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಹಣ ಕಾರ್ಪೋರೇಟ್ ದೊರೆಗಳ ಜೇಬು ಸೇರಿದೆ

- Advertisement -
- Advertisement -

ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದು, ‘ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಸ್ವಾಗತ’ ಎಂದು ಲೇವಡಿ ಮಾಡಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಸ್ವಾಗತ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ‍್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೋರುತ್ತೇನೆ. ನಿಮ್ಮ ಇತ್ತೀಚಿನ ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ, ನಿಮ್ಮ ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರೆಂದು ನಂಬಿದ್ದೇನೆ’ ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿ” ಎಂದು ಆಗ್ರಹಿಸಿದ್ದಾರೆ.

“ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019ರ ಬಜೆಟ್ ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆ ಎನ್ನವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಹೆಚ್.ಡಿ.ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ” ಎಂದು ಅವರು ಗಮನ ಸೆಳೆದಿದ್ದಾರೆ.

“ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಾದುದೇನಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎನ್ನುವುದು ನಿಮಗೆ ತಿಳಿದಿರಲಿ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ” ಎಂದು ಪ್ರಶ್ನಿಸಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ” ಎಂದು ಸಿಎಂ ಸವಾಲು ಹಾಕಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರೇ, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ? ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ನಿಮ್ಮ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದೀರಿ. ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದರೆ ಇದೇನಾ” ಎಂದು ಟೀಕಿಸಿದ್ದಾರೆ.

“ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿ, ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಆನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು. ನಿಮ್ಮ ಹತ್ತು ವರ್ಷಗಳಲ್ಲಿ ನೀವು ಆಸ್ತಿಮಾಡಿಕೊಟ್ಟಿದ್ದು ಅದಾನಿ-ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ” ಎಂದು ಅವರು ಪ್ರಧಾನಿ ಮೋದಿ ಮುಂದೆ ಸಾಲುಸಾಲು ಪ್ರಶ್ನೆಗಳನ್ನಿಟ್ಟಿದ್ದಾರೆ.

ಇದನ್ನೂ ಓದಿ; ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...