Homeಮುಖಪುಟ'ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ..'; ಪ್ರಧಾನಿ ಮೋದಿ ವಿರುದ್ಧ ಸಿಎಂ ಟೀಕಾಪ್ರಹಾರ

‘ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ..’; ಪ್ರಧಾನಿ ಮೋದಿ ವಿರುದ್ಧ ಸಿಎಂ ಟೀಕಾಪ್ರಹಾರ

ನಿಮ್ಮ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಹಣ ಕಾರ್ಪೋರೇಟ್ ದೊರೆಗಳ ಜೇಬು ಸೇರಿದೆ

- Advertisement -
- Advertisement -

ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದು, ‘ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಸ್ವಾಗತ’ ಎಂದು ಲೇವಡಿ ಮಾಡಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಸ್ವಾಗತ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ, ಯಾವುದೇ ಕ್ರಮ ಕೈಗೊಳ್ಳುವ ಸ‍್ಥಿತಿಯಲ್ಲಿ ಇಲ್ಲ ಎನ್ನುವುದು ನಮಗೂ ಗೊತ್ತಾಗಿದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕೋರುತ್ತೇನೆ. ನಿಮ್ಮ ಇತ್ತೀಚಿನ ಅತಿದೊಡ್ಡ ಸುಳ್ಳಿನ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ, ನಿಮ್ಮ ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರೆಂದು ನಂಬಿದ್ದೇನೆ’ ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿ” ಎಂದು ಆಗ್ರಹಿಸಿದ್ದಾರೆ.

“ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು. ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019ರ ಬಜೆಟ್ ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆ ಎನ್ನವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಹೆಚ್.ಡಿ.ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ” ಎಂದು ಅವರು ಗಮನ ಸೆಳೆದಿದ್ದಾರೆ.

“ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಾದುದೇನಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎನ್ನುವುದು ನಿಮಗೆ ತಿಳಿದಿರಲಿ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ” ಎಂದು ಪ್ರಶ್ನಿಸಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಡೆಸಿದಂತೆ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ಪ್ರಧಾನಿ ಮೋದಿಯವರೇ ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದರೆ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ” ಎಂದು ಸಿಎಂ ಸವಾಲು ಹಾಕಿದ್ದಾರೆ.

“ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರೇ, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ? ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಹಿಂದಿನ ಪ್ರಧಾನಿಗಳಾದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ನಿಮ್ಮ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದೀರಿ. ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದರೆ ಇದೇನಾ” ಎಂದು ಟೀಕಿಸಿದ್ದಾರೆ.

“ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯರನ್ನಾಗಿ ಮಾಡಿ, ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಆನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಿತು. ನಿಮ್ಮ ಹತ್ತು ವರ್ಷಗಳಲ್ಲಿ ನೀವು ಆಸ್ತಿಮಾಡಿಕೊಟ್ಟಿದ್ದು ಅದಾನಿ-ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ” ಎಂದು ಅವರು ಪ್ರಧಾನಿ ಮೋದಿ ಮುಂದೆ ಸಾಲುಸಾಲು ಪ್ರಶ್ನೆಗಳನ್ನಿಟ್ಟಿದ್ದಾರೆ.

ಇದನ್ನೂ ಓದಿ; ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...