Homeಮುಖಪುಟಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ : ಇನ್ಸಲ್ಟ್ ಉತ್ತರ ಕರ್ನಾಟಕ - ರಿಯಲ್ ಎಸ್ಟೇಟ್ ಧಮಾಕ..

ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ : ಇನ್ಸಲ್ಟ್ ಉತ್ತರ ಕರ್ನಾಟಕ – ರಿಯಲ್ ಎಸ್ಟೇಟ್ ಧಮಾಕ..

2010 ಜೂನ್ 4, 5ರಂದು ಬೆಂಗಳೂರಲ್ಲಿ ಒಂದು ಗ್ಲೋಬಲ್ ಇನ್ವೆಸ್ಟ್‌ ಮೀಟ್ ನಡೆದಿತ್ತು. ಆದರೆ ಅಭಿವೃದ್ದಿಯ ಬದಲು ರಾಜ್ಯದ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯಲಾಗಿತ್ತು.. ಅದರ ಮುಂದಿನ ಭಾಗ ಇದು..

- Advertisement -
- Advertisement -

‘ಇನ್ವೆಸ್ಟ್ ಕರ್ನಾಟಕ’ ಎಂಬ 8 ತಾಸುಗಳ ಡ್ರಾಮಾ ಆಡುವ ಮೂಲಕ ‘ಇನ್ಸಲ್ಟ್ ಉತ್ತರ ಕರ್ನಾಟಕ’ ಎಂಬ ಅಪಹಾಸ್ಯವನ್ನು ಫೆ.14ರಂದು ಯಡಿಯೂರಪ್ಪ ಮತ್ತವರ ಬಳಗ ಹುಬ್ಬಳ್ಳಿಯಲ್ಲಿ ಮಾಡಿ ಹೋಗಿದೆ. ನೆರೆ ಸಂತ್ರಸ್ರರಿಗೆ ತಲೆ ಮೇಲೆ ನೆರಳು ಕೊಡಲಾಗದ ಯಡಿಯೂರಪ್ಪ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಉದ್ಯಮಿಗಳಿಗೆ ಮೂಲಭೂತ ಸೌಕರ್ಯ ಒದಗಿಸುತ್ತಾರಂತೆ…!

ಇವರು ಹೀಗೆ ಹೇಳುವ ಹೊತ್ತಿನಲ್ಲಿ ವೇದಿಕೆ ಮೇಲಿದ್ದ ಗಣಿ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು, ತಿಂಗಳ ಹಿಂದಷ್ಟೇ ತಮ್ಮ ನರಗುಂದ ಕ್ಷೇತ್ರದ ನೆರೆಪೀಡಿತ ಗ್ರಾಮಗಳಲ್ಲಿ ಸಂಚರಿಸುವಾಗ, ಗ್ರಾಮಸ್ಥರು ಎಕ್ಕುಟ್ಟಿ ಹೋದ ರಸ್ತೆ ರಿಪೇರಿ ಮಾಡಿಸಿ ಎಂದಾಗ, ಎಲ್ಲಿಂದ ರೊಕ್ಕ ತರಲಿ? ಬೊಕ್ಕಸದಲ್ಲಿ ಪುಟ್ಟಿ ಮಣ್ಣಿಗೂ ದುಡ್ಡಿಲ್ಲ ಎನ್ನುವ ಮೂಲಕ ರಾಜ್ಯ ಸರ್ಕಾರದ ಹಣಕಾಸು ಸ್ಥಿತಿಯ ಅಧೋಗತಿಯನ್ನು ಸಾಂಕೇತಿಕವಾಗಿ ಹೇಳಿದ್ದರು.

 

ಅದಿರಲಿ, ಇಡೀ ಕಾರ್ಯಕ್ರಮ ಒಂದು ಪ್ರಹಸನದಂತೆ ಭಾಸವಾಗುತ್ತಿತ್ತು. ಭಾಷಣಕಾರರೆಲ್ಲ ಉತ್ತರ ಕರ್ನಾಟಕದ ಸಮಸ್ಯೆಗಳೇ ಬಗೆಹರಿದವು ಎಂಬಂತೆ ಮಾತಾಡುತ್ತಿದ್ದರು. ವೇದಿಕೆ ಹತ್ತಿದ ಉದ್ಯಮಿಗಳಂತೂ ಬಾಯಿ ತೆರೆದರೆ ಸಾವಿರ ಕೋಟಿ ರೂ. ಬಂಡವಾಳ ಹೂಡುತ್ತೇವೆ ಎನ್ನುತ್ತಿದ್ದುದು ಬಾಯಿಪಾಠದ ಸಾಲಿನಂತಿರುತ್ತಿತ್ತು.
ಎಲ್ಲಕ್ಕಿಂತ ಅಪಾಯಕಾರಿ ಸಂಗತಿ ಎಂದರೆ, ಬೆಂಗಳೂರು ಸುತ್ತಮುತ್ತ ಕೈಗಾರಿಕೆ ಹೆಸರಲ್ಲಿ ಭೂಮಿ ಹೊಡೆದವರು ಈಗ ಇಲ್ಲಿಗೂ ದಾಳಿ ಇಟ್ಟಿರುವುದು. ಮೂಲಭೂತ ಸೌಕರ್ಯಗಳಿಲ್ಲದೇ ಹೂಡಿಕೆ ಮಾಡಲು ಯಾವ ಉದ್ಯಮಿಯೂ ಮೂರ್ಖನಲ್ಲ. ಮೂಲಭೂತ ಸೌಕರ್ಯ ಕಲ್ಪಿಸಲು ಬಿಡಿ, ನೆರೆ ಸಂತ್ರಸ್ತರಿಗೆ ಕನಿಷ್ಠ ಸೌಲಭ್ಯ ಕೊಡಲೂ ಆಗದ ದುಸ್ಥಿತಿಯಲ್ಲಿ ಸರ್ಕಾರವಿದೆ.

ರಿಯಲ್‌ ಎಸ್ಟೇಟ್‌ ದಂಧೆ..

ಹಾಗಿದ್ದರೆ ಈ ಉದ್ಯಮಿಗಳು ಹೂಡಿಕೆ ಭರವಸೆ ನೀಡಿದ್ದು ಯಾವ ಆಧಾರದ ಮೇಲೆ? ಇಲ್ಲೇ ಶುರುವಾಗುತ್ತದೆ ರಿಯಲ್ ಎಸ್ಟೇಟ್ ದಂಧೆಯ ಕತೆ. ಈಗ ಸ್ವಲ್ಪ ಫ್ಲಾಶಬ್ಯಾಕ್‌ಗೆ ಹೋಗೋಣ. 2010 ಜೂನ್ 4, 5ರಂದು ಬೆಂಗಳೂರಲ್ಲಿ ಒಂದು ಗ್ಲೋಬಲ್ ಇನ್ವೆಸ್ಟರ್‍ಸ್‌ ಮೀಟ್ ನಡೆಯಿತು. ಹುಬ್ಬಳ್ಳಿಯಲ್ಲಿ ವೇದಿಕೆ ಮೇಲಿದ್ದ ಬಹುಪಾಲು ಮುಖಗಳೇ ಅವತ್ತು ಬೆಂಗಳೂರಿನ ವೇದಿಕೆ ಮೇಲಿದ್ದವು. ಆಗಲೂ ಯಡಿಯೂರಪ್ಪ ಮುಖ್ಯಮಂತ್ರಿ. ಆ ‘ಜಾತ್ರೆ’ಯಲ್ಲಿ ಸ್ಟೀಲ್ ಸೆಕ್ಟರ್ ಒಂದರಲ್ಲೇ 2 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದಗಳಾದವು. ಆಗ ಪ್ರವಾಸೋದ್ಯಮ ಸಚಿವರಾಗಿದ್ದ ಗಾಲಿ ಜನಾರ್ದನ ರೆಡ್ಡಿಯ ಬ್ರಹ್ಮಣಿ ಸ್ಟೀಲ್ಸ್ ಕಂಪನಿ ಬಳ್ಳಾರಿ ಸಮೀಪ 36 ಸಾವಿರ ಕೋಟಿ ರೂ. ಬಂಡವಾಳ ಹೂಡಿ, 6 ಮಿಲಿಯನ್ ಟನ್ ಸ್ಟೀಲ್ ಉತ್ಪಾದನೆಯ ಫ್ಯಾಕ್ಟರಿ ಸ್ಥಾಪಿಸುವುದಾಗಿ ಒಡಂಬಡಿಕೆ ಮಾಡಿಕೊಂಡಿತು.

ಅದಕ್ಕಾಗಿ ರಿಯಾಯತಿ ದರದಲ್ಲಿ ಸುಮಾರು 1,500 ಎಕರೆ ಭೂಮಿಯನ್ನು ಸರ್ಕಾರದಿಂದ ಪಡೆಯಿತು. ಕೇವಲ ಎಂಟೇ ತಿಂಗಳಲ್ಲಿ, ಮುಂಬೈ ಮೂಲದ ಮಿಗ್ಲಾನಿ ಕುಟುಂಬದ ಉತ್ತಮ್ ಗಲ್ವಾ ಸ್ಟೀಲ್ಸ್ ಕಂಪನೆಗೆ ಮಾರಿಬಿಟ್ಟರು. ವಿಚಿತ್ರ ಎಂದರೆ, ಬ್ರಹ್ಮಣಿ ಎನ್ನುವ ಕಂಪನಿ ಅಸ್ತಿತ್ವದಲ್ಲೇ ಇರಲಿಲ್ಲ. ರೆಡ್ಡಿಗೆ ಸ್ಟೀಲ್ ಫ್ಯಾಕ್ಟರಿ ಮಾಡುವ ಉದ್ದೇಶವೂ ಇರಲಿಲ್ಲ. ಹಾಗಾದರೆ ಉತ್ತಮ್ ಗಲ್ವಾ ಕಂಪನಿಗೆ ಮಾರಿದ್ದೇನು? ಬಳ್ಳಾರಿ ಜಿಲ್ಲೆಯ ಫಲವತ್ತಾದ ಭೂಮಿಯನ್ನು, ನೆನಪಿರಲಿ ಸಾವಿರಾರು ಕೋಟಿಯ ಮಾರುಕಟ್ಟೆ ಬೆಲೆಗೆ!

2007ರಲ್ಲಿ ಆಂಧ್ರದಲ್ಲಿ ವೈಎಸ್‌ಆರ್ ಸರ್ಕಾರವಿದ್ದಾಗ ಅಲ್ಲೂ ಬ್ರಹ್ಮಣಿ ಹೆಸರಲ್ಲಿ ವೈಎಸ್‌ಆರ್ ಮತ್ತು ಜನಾರೆಡ್ಡಿ ರಿಯಲ್ ಎಸ್ಟೇಟ್ ದಂಧೆ ಮಾಡಿದ್ದರು. ಅಲ್ಲಿ ಬ್ರಹ್ಮಣಿ ಸ್ಟೀಲ್ಸ್ ಹೆಸರಲ್ಲಿ 2 ಮಿಲಿಯನ್ ಟನ್ ಸ್ಟೀಲ್ ಫ್ಯಾಕ್ಟರಿಗೆ ಬಂಡವಾಳ ಹೂಡುವುದಾಗಿ, ಕಡಪಾ ಜಿಲ್ಲೆಯಲ್ಲಿ ಎಕರೆಗೆ ಕೇವಲ 18 ಸಾವಿರದಂತೆ, 10,760 ಎಕರೆ (ಒಟ್ಟು ಮೊತ್ತ ಕೇವಲ 19 ಕೋಟಿ ರೂ) ಮತ್ತು ಏರ್‌ಪೋರ್ಟ್ ಮಾಡುವುದಾಗಿ 78 ಕೋಟಿಗೆ 3,115 ಎಕರೆ ಭೂಮಿಯನ್ನು ಪಡೆದಿದ್ದರು.

ಈ ಭೂಮಿಯನ್ನೆಲ್ಲ ಆಕ್ಸಿಸ್ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಜನಾರ್ಧನ ರೆಡ್ಡಿ, 350 ಕೋಟಿ ರೂ ಸಾಲ ಎತ್ತಿದ್ದರು! ಮುಂದಿನ ಸರ್ಕಾರ ಈ ಒಪ್ಪಂದವನ್ನೇ ರದ್ದು ಮಾಡಿತು. ರೆಡ್ಡಿಯ ಈ ದಂಧೆ ಕುರಿತು 2012ರಲ್ಲಿ ಇಂಗ್ಲಿಷ್ ಪತ್ರಿಕೆಯೊಂದಿಗೆ ಮಾತಾಡಿದ್ದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ, ಆತನಿಗೆ ಸ್ಟೀಲ್ ಫ್ಯಾಕ್ಟರಿ ಮಾಡುವ ಯಾವ ಉದೇಶವೂ ಇಲ್ಲ. ಸರ್ಕಾರದಿಂದ ತುಂಬ ಕಡಿಮೆ ಬೆಲೆಗೆ ಭೂಮಿ ಪಡೆಯುವುದು, ಅದನ್ನು 50-60 ಪಟ್ಟಿಗೆ ಮಾರಿಬಿಡುವುದೇ ಆತನ ‘ಮೊಡಸ್ ಅಪರೆಂಡಿ’ ಎಂದಿದ್ದರು.

ಹುಬ್ಬಳ್ಳಿಯಲ್ಲೂ ರಿಯಲ್ ಎಸ್ಟೇಟ್ ಧಮಾಕ?
ಸಚಿವ ಜಗದೀಶ ಶೆಟ್ಟರ್ ಸಹೋದರ ಎಂಎಲ್‌ಸಿ ಪ್ರದೀಪ ಶೆಟ್ಟರ್ ಹೇಳಿಕೇಳಿ ರಿಯಲ್‌ಎಸ್ಟೇಟ್ ವ್ಯವಹಾರದವರು. ಹಿಂದೆ ಹುಬ್ಬಳ್ಳಿಯ ಸುಪ್ರಸಿದ್ಧ ಜಿಮಖಾನಾ ಕ್ಲಬ್ ಮತ್ತು ಅದರ ಭೂಮಿಯನ್ನು ಎಗರಿಸಲು ಶೆಟ್ಟರ್, ಜೋಶಿ ಯತ್ನಿಸಿದ್ದರು. ಇದರ ವಿರುದ್ಧ ಎಸ್‌.ಆರ್ ಹಿರೇಮಠ ಕಾನೂನು ಹೋರಾಟ ಮಾಡಿದ್ದರು. ಪಾಟೀಲ ಪುಟ್ಟಪ್ಪ ಉಪವಾಸ ಕುಳಿತಿದ್ದರು ಎಂಬುದನ್ನು ಇಲ್ಲಿ ಗಮನಿಸಬೇಕು.

ಹೀಗಾಗಿ ಕಳೆದ ಶುಕ್ರವಾರ ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕದಲ್ಲೂ ಭೂ ದರೋಡೆಯ ವಾಸನೆ ಹೊಡೆಯುತ್ತಿತ್ತು. ಹಾಗೆಯೇ ಸಮಸ್ಯೆಯಲ್ಲಿರುವ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶವಿತ್ತು. ಸಾರ್ವಜನಿಕವಾಗಿ ನಡೆಯಬೇಕಿದ್ದ ಈ ಕಾರ್ಯಕ್ರಮ ಡೆನಿಸನ್ಸ್ ಎಂಬ ಐಷಾರಾಮಿ ಹೊಟೆಲ್ ಒಳಗಡೆ ಕೇವಲ ವಿಐಪಿಗಳ ನಡುವೆ ಜರುಗಿತು.

ಎಲ್ಲಕ್ಕಿಂತ ಮುಖ್ಯವಾಗಿ ಪುಟ್ಟಿ ಮಣ್ಣಿಗೂ ರೊಕ್ಕ ಇಲ್ಲ ಎಂದು ನೆರೆಪೀಡಿತರನ್ನು ಅವಮಾನಿಸಿದ ಸರ್ಕಾರ ಎ.ಸಿ. ಹಾಲ್‌ನಲ್ಲಿ ಕುಳಿತು, ಉದ್ಯಮಿಗಳ ಬಾಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಎಂದು ಹೇಳಿಸುವ ಮೂಲಕ ಉತ್ತರ ಕರ್ನಾಟದ ಜನರನ್ನೇ ಅವಮಾನಿಸಿದೆ ಅಷ್ಟೇ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...