Homeಮುಖಪುಟಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ : ಇನ್ಸಲ್ಟ್ ಉತ್ತರ ಕರ್ನಾಟಕ - ರಿಯಲ್ ಎಸ್ಟೇಟ್ ಧಮಾಕ..

ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ : ಇನ್ಸಲ್ಟ್ ಉತ್ತರ ಕರ್ನಾಟಕ – ರಿಯಲ್ ಎಸ್ಟೇಟ್ ಧಮಾಕ..

2010 ಜೂನ್ 4, 5ರಂದು ಬೆಂಗಳೂರಲ್ಲಿ ಒಂದು ಗ್ಲೋಬಲ್ ಇನ್ವೆಸ್ಟ್‌ ಮೀಟ್ ನಡೆದಿತ್ತು. ಆದರೆ ಅಭಿವೃದ್ದಿಯ ಬದಲು ರಾಜ್ಯದ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯಲಾಗಿತ್ತು.. ಅದರ ಮುಂದಿನ ಭಾಗ ಇದು..

- Advertisement -
- Advertisement -

‘ಇನ್ವೆಸ್ಟ್ ಕರ್ನಾಟಕ’ ಎಂಬ 8 ತಾಸುಗಳ ಡ್ರಾಮಾ ಆಡುವ ಮೂಲಕ ‘ಇನ್ಸಲ್ಟ್ ಉತ್ತರ ಕರ್ನಾಟಕ’ ಎಂಬ ಅಪಹಾಸ್ಯವನ್ನು ಫೆ.14ರಂದು ಯಡಿಯೂರಪ್ಪ ಮತ್ತವರ ಬಳಗ ಹುಬ್ಬಳ್ಳಿಯಲ್ಲಿ ಮಾಡಿ ಹೋಗಿದೆ. ನೆರೆ ಸಂತ್ರಸ್ರರಿಗೆ ತಲೆ ಮೇಲೆ ನೆರಳು ಕೊಡಲಾಗದ ಯಡಿಯೂರಪ್ಪ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಉದ್ಯಮಿಗಳಿಗೆ ಮೂಲಭೂತ ಸೌಕರ್ಯ ಒದಗಿಸುತ್ತಾರಂತೆ…!

ಇವರು ಹೀಗೆ ಹೇಳುವ ಹೊತ್ತಿನಲ್ಲಿ ವೇದಿಕೆ ಮೇಲಿದ್ದ ಗಣಿ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು, ತಿಂಗಳ ಹಿಂದಷ್ಟೇ ತಮ್ಮ ನರಗುಂದ ಕ್ಷೇತ್ರದ ನೆರೆಪೀಡಿತ ಗ್ರಾಮಗಳಲ್ಲಿ ಸಂಚರಿಸುವಾಗ, ಗ್ರಾಮಸ್ಥರು ಎಕ್ಕುಟ್ಟಿ ಹೋದ ರಸ್ತೆ ರಿಪೇರಿ ಮಾಡಿಸಿ ಎಂದಾಗ, ಎಲ್ಲಿಂದ ರೊಕ್ಕ ತರಲಿ? ಬೊಕ್ಕಸದಲ್ಲಿ ಪುಟ್ಟಿ ಮಣ್ಣಿಗೂ ದುಡ್ಡಿಲ್ಲ ಎನ್ನುವ ಮೂಲಕ ರಾಜ್ಯ ಸರ್ಕಾರದ ಹಣಕಾಸು ಸ್ಥಿತಿಯ ಅಧೋಗತಿಯನ್ನು ಸಾಂಕೇತಿಕವಾಗಿ ಹೇಳಿದ್ದರು.

 

ಅದಿರಲಿ, ಇಡೀ ಕಾರ್ಯಕ್ರಮ ಒಂದು ಪ್ರಹಸನದಂತೆ ಭಾಸವಾಗುತ್ತಿತ್ತು. ಭಾಷಣಕಾರರೆಲ್ಲ ಉತ್ತರ ಕರ್ನಾಟಕದ ಸಮಸ್ಯೆಗಳೇ ಬಗೆಹರಿದವು ಎಂಬಂತೆ ಮಾತಾಡುತ್ತಿದ್ದರು. ವೇದಿಕೆ ಹತ್ತಿದ ಉದ್ಯಮಿಗಳಂತೂ ಬಾಯಿ ತೆರೆದರೆ ಸಾವಿರ ಕೋಟಿ ರೂ. ಬಂಡವಾಳ ಹೂಡುತ್ತೇವೆ ಎನ್ನುತ್ತಿದ್ದುದು ಬಾಯಿಪಾಠದ ಸಾಲಿನಂತಿರುತ್ತಿತ್ತು.
ಎಲ್ಲಕ್ಕಿಂತ ಅಪಾಯಕಾರಿ ಸಂಗತಿ ಎಂದರೆ, ಬೆಂಗಳೂರು ಸುತ್ತಮುತ್ತ ಕೈಗಾರಿಕೆ ಹೆಸರಲ್ಲಿ ಭೂಮಿ ಹೊಡೆದವರು ಈಗ ಇಲ್ಲಿಗೂ ದಾಳಿ ಇಟ್ಟಿರುವುದು. ಮೂಲಭೂತ ಸೌಕರ್ಯಗಳಿಲ್ಲದೇ ಹೂಡಿಕೆ ಮಾಡಲು ಯಾವ ಉದ್ಯಮಿಯೂ ಮೂರ್ಖನಲ್ಲ. ಮೂಲಭೂತ ಸೌಕರ್ಯ ಕಲ್ಪಿಸಲು ಬಿಡಿ, ನೆರೆ ಸಂತ್ರಸ್ತರಿಗೆ ಕನಿಷ್ಠ ಸೌಲಭ್ಯ ಕೊಡಲೂ ಆಗದ ದುಸ್ಥಿತಿಯಲ್ಲಿ ಸರ್ಕಾರವಿದೆ.

ರಿಯಲ್‌ ಎಸ್ಟೇಟ್‌ ದಂಧೆ..

ಹಾಗಿದ್ದರೆ ಈ ಉದ್ಯಮಿಗಳು ಹೂಡಿಕೆ ಭರವಸೆ ನೀಡಿದ್ದು ಯಾವ ಆಧಾರದ ಮೇಲೆ? ಇಲ್ಲೇ ಶುರುವಾಗುತ್ತದೆ ರಿಯಲ್ ಎಸ್ಟೇಟ್ ದಂಧೆಯ ಕತೆ. ಈಗ ಸ್ವಲ್ಪ ಫ್ಲಾಶಬ್ಯಾಕ್‌ಗೆ ಹೋಗೋಣ. 2010 ಜೂನ್ 4, 5ರಂದು ಬೆಂಗಳೂರಲ್ಲಿ ಒಂದು ಗ್ಲೋಬಲ್ ಇನ್ವೆಸ್ಟರ್‍ಸ್‌ ಮೀಟ್ ನಡೆಯಿತು. ಹುಬ್ಬಳ್ಳಿಯಲ್ಲಿ ವೇದಿಕೆ ಮೇಲಿದ್ದ ಬಹುಪಾಲು ಮುಖಗಳೇ ಅವತ್ತು ಬೆಂಗಳೂರಿನ ವೇದಿಕೆ ಮೇಲಿದ್ದವು. ಆಗಲೂ ಯಡಿಯೂರಪ್ಪ ಮುಖ್ಯಮಂತ್ರಿ. ಆ ‘ಜಾತ್ರೆ’ಯಲ್ಲಿ ಸ್ಟೀಲ್ ಸೆಕ್ಟರ್ ಒಂದರಲ್ಲೇ 2 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದಗಳಾದವು. ಆಗ ಪ್ರವಾಸೋದ್ಯಮ ಸಚಿವರಾಗಿದ್ದ ಗಾಲಿ ಜನಾರ್ದನ ರೆಡ್ಡಿಯ ಬ್ರಹ್ಮಣಿ ಸ್ಟೀಲ್ಸ್ ಕಂಪನಿ ಬಳ್ಳಾರಿ ಸಮೀಪ 36 ಸಾವಿರ ಕೋಟಿ ರೂ. ಬಂಡವಾಳ ಹೂಡಿ, 6 ಮಿಲಿಯನ್ ಟನ್ ಸ್ಟೀಲ್ ಉತ್ಪಾದನೆಯ ಫ್ಯಾಕ್ಟರಿ ಸ್ಥಾಪಿಸುವುದಾಗಿ ಒಡಂಬಡಿಕೆ ಮಾಡಿಕೊಂಡಿತು.

ಅದಕ್ಕಾಗಿ ರಿಯಾಯತಿ ದರದಲ್ಲಿ ಸುಮಾರು 1,500 ಎಕರೆ ಭೂಮಿಯನ್ನು ಸರ್ಕಾರದಿಂದ ಪಡೆಯಿತು. ಕೇವಲ ಎಂಟೇ ತಿಂಗಳಲ್ಲಿ, ಮುಂಬೈ ಮೂಲದ ಮಿಗ್ಲಾನಿ ಕುಟುಂಬದ ಉತ್ತಮ್ ಗಲ್ವಾ ಸ್ಟೀಲ್ಸ್ ಕಂಪನೆಗೆ ಮಾರಿಬಿಟ್ಟರು. ವಿಚಿತ್ರ ಎಂದರೆ, ಬ್ರಹ್ಮಣಿ ಎನ್ನುವ ಕಂಪನಿ ಅಸ್ತಿತ್ವದಲ್ಲೇ ಇರಲಿಲ್ಲ. ರೆಡ್ಡಿಗೆ ಸ್ಟೀಲ್ ಫ್ಯಾಕ್ಟರಿ ಮಾಡುವ ಉದ್ದೇಶವೂ ಇರಲಿಲ್ಲ. ಹಾಗಾದರೆ ಉತ್ತಮ್ ಗಲ್ವಾ ಕಂಪನಿಗೆ ಮಾರಿದ್ದೇನು? ಬಳ್ಳಾರಿ ಜಿಲ್ಲೆಯ ಫಲವತ್ತಾದ ಭೂಮಿಯನ್ನು, ನೆನಪಿರಲಿ ಸಾವಿರಾರು ಕೋಟಿಯ ಮಾರುಕಟ್ಟೆ ಬೆಲೆಗೆ!

2007ರಲ್ಲಿ ಆಂಧ್ರದಲ್ಲಿ ವೈಎಸ್‌ಆರ್ ಸರ್ಕಾರವಿದ್ದಾಗ ಅಲ್ಲೂ ಬ್ರಹ್ಮಣಿ ಹೆಸರಲ್ಲಿ ವೈಎಸ್‌ಆರ್ ಮತ್ತು ಜನಾರೆಡ್ಡಿ ರಿಯಲ್ ಎಸ್ಟೇಟ್ ದಂಧೆ ಮಾಡಿದ್ದರು. ಅಲ್ಲಿ ಬ್ರಹ್ಮಣಿ ಸ್ಟೀಲ್ಸ್ ಹೆಸರಲ್ಲಿ 2 ಮಿಲಿಯನ್ ಟನ್ ಸ್ಟೀಲ್ ಫ್ಯಾಕ್ಟರಿಗೆ ಬಂಡವಾಳ ಹೂಡುವುದಾಗಿ, ಕಡಪಾ ಜಿಲ್ಲೆಯಲ್ಲಿ ಎಕರೆಗೆ ಕೇವಲ 18 ಸಾವಿರದಂತೆ, 10,760 ಎಕರೆ (ಒಟ್ಟು ಮೊತ್ತ ಕೇವಲ 19 ಕೋಟಿ ರೂ) ಮತ್ತು ಏರ್‌ಪೋರ್ಟ್ ಮಾಡುವುದಾಗಿ 78 ಕೋಟಿಗೆ 3,115 ಎಕರೆ ಭೂಮಿಯನ್ನು ಪಡೆದಿದ್ದರು.

ಈ ಭೂಮಿಯನ್ನೆಲ್ಲ ಆಕ್ಸಿಸ್ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಜನಾರ್ಧನ ರೆಡ್ಡಿ, 350 ಕೋಟಿ ರೂ ಸಾಲ ಎತ್ತಿದ್ದರು! ಮುಂದಿನ ಸರ್ಕಾರ ಈ ಒಪ್ಪಂದವನ್ನೇ ರದ್ದು ಮಾಡಿತು. ರೆಡ್ಡಿಯ ಈ ದಂಧೆ ಕುರಿತು 2012ರಲ್ಲಿ ಇಂಗ್ಲಿಷ್ ಪತ್ರಿಕೆಯೊಂದಿಗೆ ಮಾತಾಡಿದ್ದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ, ಆತನಿಗೆ ಸ್ಟೀಲ್ ಫ್ಯಾಕ್ಟರಿ ಮಾಡುವ ಯಾವ ಉದೇಶವೂ ಇಲ್ಲ. ಸರ್ಕಾರದಿಂದ ತುಂಬ ಕಡಿಮೆ ಬೆಲೆಗೆ ಭೂಮಿ ಪಡೆಯುವುದು, ಅದನ್ನು 50-60 ಪಟ್ಟಿಗೆ ಮಾರಿಬಿಡುವುದೇ ಆತನ ‘ಮೊಡಸ್ ಅಪರೆಂಡಿ’ ಎಂದಿದ್ದರು.

ಹುಬ್ಬಳ್ಳಿಯಲ್ಲೂ ರಿಯಲ್ ಎಸ್ಟೇಟ್ ಧಮಾಕ?
ಸಚಿವ ಜಗದೀಶ ಶೆಟ್ಟರ್ ಸಹೋದರ ಎಂಎಲ್‌ಸಿ ಪ್ರದೀಪ ಶೆಟ್ಟರ್ ಹೇಳಿಕೇಳಿ ರಿಯಲ್‌ಎಸ್ಟೇಟ್ ವ್ಯವಹಾರದವರು. ಹಿಂದೆ ಹುಬ್ಬಳ್ಳಿಯ ಸುಪ್ರಸಿದ್ಧ ಜಿಮಖಾನಾ ಕ್ಲಬ್ ಮತ್ತು ಅದರ ಭೂಮಿಯನ್ನು ಎಗರಿಸಲು ಶೆಟ್ಟರ್, ಜೋಶಿ ಯತ್ನಿಸಿದ್ದರು. ಇದರ ವಿರುದ್ಧ ಎಸ್‌.ಆರ್ ಹಿರೇಮಠ ಕಾನೂನು ಹೋರಾಟ ಮಾಡಿದ್ದರು. ಪಾಟೀಲ ಪುಟ್ಟಪ್ಪ ಉಪವಾಸ ಕುಳಿತಿದ್ದರು ಎಂಬುದನ್ನು ಇಲ್ಲಿ ಗಮನಿಸಬೇಕು.

ಹೀಗಾಗಿ ಕಳೆದ ಶುಕ್ರವಾರ ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕದಲ್ಲೂ ಭೂ ದರೋಡೆಯ ವಾಸನೆ ಹೊಡೆಯುತ್ತಿತ್ತು. ಹಾಗೆಯೇ ಸಮಸ್ಯೆಯಲ್ಲಿರುವ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶವಿತ್ತು. ಸಾರ್ವಜನಿಕವಾಗಿ ನಡೆಯಬೇಕಿದ್ದ ಈ ಕಾರ್ಯಕ್ರಮ ಡೆನಿಸನ್ಸ್ ಎಂಬ ಐಷಾರಾಮಿ ಹೊಟೆಲ್ ಒಳಗಡೆ ಕೇವಲ ವಿಐಪಿಗಳ ನಡುವೆ ಜರುಗಿತು.

ಎಲ್ಲಕ್ಕಿಂತ ಮುಖ್ಯವಾಗಿ ಪುಟ್ಟಿ ಮಣ್ಣಿಗೂ ರೊಕ್ಕ ಇಲ್ಲ ಎಂದು ನೆರೆಪೀಡಿತರನ್ನು ಅವಮಾನಿಸಿದ ಸರ್ಕಾರ ಎ.ಸಿ. ಹಾಲ್‌ನಲ್ಲಿ ಕುಳಿತು, ಉದ್ಯಮಿಗಳ ಬಾಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಎಂದು ಹೇಳಿಸುವ ಮೂಲಕ ಉತ್ತರ ಕರ್ನಾಟದ ಜನರನ್ನೇ ಅವಮಾನಿಸಿದೆ ಅಷ್ಟೇ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...