Homeಮುಖಪುಟಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ : ಇನ್ಸಲ್ಟ್ ಉತ್ತರ ಕರ್ನಾಟಕ - ರಿಯಲ್ ಎಸ್ಟೇಟ್ ಧಮಾಕ..

ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ : ಇನ್ಸಲ್ಟ್ ಉತ್ತರ ಕರ್ನಾಟಕ – ರಿಯಲ್ ಎಸ್ಟೇಟ್ ಧಮಾಕ..

2010 ಜೂನ್ 4, 5ರಂದು ಬೆಂಗಳೂರಲ್ಲಿ ಒಂದು ಗ್ಲೋಬಲ್ ಇನ್ವೆಸ್ಟ್‌ ಮೀಟ್ ನಡೆದಿತ್ತು. ಆದರೆ ಅಭಿವೃದ್ದಿಯ ಬದಲು ರಾಜ್ಯದ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯಲಾಗಿತ್ತು.. ಅದರ ಮುಂದಿನ ಭಾಗ ಇದು..

- Advertisement -
- Advertisement -

‘ಇನ್ವೆಸ್ಟ್ ಕರ್ನಾಟಕ’ ಎಂಬ 8 ತಾಸುಗಳ ಡ್ರಾಮಾ ಆಡುವ ಮೂಲಕ ‘ಇನ್ಸಲ್ಟ್ ಉತ್ತರ ಕರ್ನಾಟಕ’ ಎಂಬ ಅಪಹಾಸ್ಯವನ್ನು ಫೆ.14ರಂದು ಯಡಿಯೂರಪ್ಪ ಮತ್ತವರ ಬಳಗ ಹುಬ್ಬಳ್ಳಿಯಲ್ಲಿ ಮಾಡಿ ಹೋಗಿದೆ. ನೆರೆ ಸಂತ್ರಸ್ರರಿಗೆ ತಲೆ ಮೇಲೆ ನೆರಳು ಕೊಡಲಾಗದ ಯಡಿಯೂರಪ್ಪ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಉದ್ಯಮಿಗಳಿಗೆ ಮೂಲಭೂತ ಸೌಕರ್ಯ ಒದಗಿಸುತ್ತಾರಂತೆ…!

ಇವರು ಹೀಗೆ ಹೇಳುವ ಹೊತ್ತಿನಲ್ಲಿ ವೇದಿಕೆ ಮೇಲಿದ್ದ ಗಣಿ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು, ತಿಂಗಳ ಹಿಂದಷ್ಟೇ ತಮ್ಮ ನರಗುಂದ ಕ್ಷೇತ್ರದ ನೆರೆಪೀಡಿತ ಗ್ರಾಮಗಳಲ್ಲಿ ಸಂಚರಿಸುವಾಗ, ಗ್ರಾಮಸ್ಥರು ಎಕ್ಕುಟ್ಟಿ ಹೋದ ರಸ್ತೆ ರಿಪೇರಿ ಮಾಡಿಸಿ ಎಂದಾಗ, ಎಲ್ಲಿಂದ ರೊಕ್ಕ ತರಲಿ? ಬೊಕ್ಕಸದಲ್ಲಿ ಪುಟ್ಟಿ ಮಣ್ಣಿಗೂ ದುಡ್ಡಿಲ್ಲ ಎನ್ನುವ ಮೂಲಕ ರಾಜ್ಯ ಸರ್ಕಾರದ ಹಣಕಾಸು ಸ್ಥಿತಿಯ ಅಧೋಗತಿಯನ್ನು ಸಾಂಕೇತಿಕವಾಗಿ ಹೇಳಿದ್ದರು.

 

ಅದಿರಲಿ, ಇಡೀ ಕಾರ್ಯಕ್ರಮ ಒಂದು ಪ್ರಹಸನದಂತೆ ಭಾಸವಾಗುತ್ತಿತ್ತು. ಭಾಷಣಕಾರರೆಲ್ಲ ಉತ್ತರ ಕರ್ನಾಟಕದ ಸಮಸ್ಯೆಗಳೇ ಬಗೆಹರಿದವು ಎಂಬಂತೆ ಮಾತಾಡುತ್ತಿದ್ದರು. ವೇದಿಕೆ ಹತ್ತಿದ ಉದ್ಯಮಿಗಳಂತೂ ಬಾಯಿ ತೆರೆದರೆ ಸಾವಿರ ಕೋಟಿ ರೂ. ಬಂಡವಾಳ ಹೂಡುತ್ತೇವೆ ಎನ್ನುತ್ತಿದ್ದುದು ಬಾಯಿಪಾಠದ ಸಾಲಿನಂತಿರುತ್ತಿತ್ತು.
ಎಲ್ಲಕ್ಕಿಂತ ಅಪಾಯಕಾರಿ ಸಂಗತಿ ಎಂದರೆ, ಬೆಂಗಳೂರು ಸುತ್ತಮುತ್ತ ಕೈಗಾರಿಕೆ ಹೆಸರಲ್ಲಿ ಭೂಮಿ ಹೊಡೆದವರು ಈಗ ಇಲ್ಲಿಗೂ ದಾಳಿ ಇಟ್ಟಿರುವುದು. ಮೂಲಭೂತ ಸೌಕರ್ಯಗಳಿಲ್ಲದೇ ಹೂಡಿಕೆ ಮಾಡಲು ಯಾವ ಉದ್ಯಮಿಯೂ ಮೂರ್ಖನಲ್ಲ. ಮೂಲಭೂತ ಸೌಕರ್ಯ ಕಲ್ಪಿಸಲು ಬಿಡಿ, ನೆರೆ ಸಂತ್ರಸ್ತರಿಗೆ ಕನಿಷ್ಠ ಸೌಲಭ್ಯ ಕೊಡಲೂ ಆಗದ ದುಸ್ಥಿತಿಯಲ್ಲಿ ಸರ್ಕಾರವಿದೆ.

ರಿಯಲ್‌ ಎಸ್ಟೇಟ್‌ ದಂಧೆ..

ಹಾಗಿದ್ದರೆ ಈ ಉದ್ಯಮಿಗಳು ಹೂಡಿಕೆ ಭರವಸೆ ನೀಡಿದ್ದು ಯಾವ ಆಧಾರದ ಮೇಲೆ? ಇಲ್ಲೇ ಶುರುವಾಗುತ್ತದೆ ರಿಯಲ್ ಎಸ್ಟೇಟ್ ದಂಧೆಯ ಕತೆ. ಈಗ ಸ್ವಲ್ಪ ಫ್ಲಾಶಬ್ಯಾಕ್‌ಗೆ ಹೋಗೋಣ. 2010 ಜೂನ್ 4, 5ರಂದು ಬೆಂಗಳೂರಲ್ಲಿ ಒಂದು ಗ್ಲೋಬಲ್ ಇನ್ವೆಸ್ಟರ್‍ಸ್‌ ಮೀಟ್ ನಡೆಯಿತು. ಹುಬ್ಬಳ್ಳಿಯಲ್ಲಿ ವೇದಿಕೆ ಮೇಲಿದ್ದ ಬಹುಪಾಲು ಮುಖಗಳೇ ಅವತ್ತು ಬೆಂಗಳೂರಿನ ವೇದಿಕೆ ಮೇಲಿದ್ದವು. ಆಗಲೂ ಯಡಿಯೂರಪ್ಪ ಮುಖ್ಯಮಂತ್ರಿ. ಆ ‘ಜಾತ್ರೆ’ಯಲ್ಲಿ ಸ್ಟೀಲ್ ಸೆಕ್ಟರ್ ಒಂದರಲ್ಲೇ 2 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದಗಳಾದವು. ಆಗ ಪ್ರವಾಸೋದ್ಯಮ ಸಚಿವರಾಗಿದ್ದ ಗಾಲಿ ಜನಾರ್ದನ ರೆಡ್ಡಿಯ ಬ್ರಹ್ಮಣಿ ಸ್ಟೀಲ್ಸ್ ಕಂಪನಿ ಬಳ್ಳಾರಿ ಸಮೀಪ 36 ಸಾವಿರ ಕೋಟಿ ರೂ. ಬಂಡವಾಳ ಹೂಡಿ, 6 ಮಿಲಿಯನ್ ಟನ್ ಸ್ಟೀಲ್ ಉತ್ಪಾದನೆಯ ಫ್ಯಾಕ್ಟರಿ ಸ್ಥಾಪಿಸುವುದಾಗಿ ಒಡಂಬಡಿಕೆ ಮಾಡಿಕೊಂಡಿತು.

ಅದಕ್ಕಾಗಿ ರಿಯಾಯತಿ ದರದಲ್ಲಿ ಸುಮಾರು 1,500 ಎಕರೆ ಭೂಮಿಯನ್ನು ಸರ್ಕಾರದಿಂದ ಪಡೆಯಿತು. ಕೇವಲ ಎಂಟೇ ತಿಂಗಳಲ್ಲಿ, ಮುಂಬೈ ಮೂಲದ ಮಿಗ್ಲಾನಿ ಕುಟುಂಬದ ಉತ್ತಮ್ ಗಲ್ವಾ ಸ್ಟೀಲ್ಸ್ ಕಂಪನೆಗೆ ಮಾರಿಬಿಟ್ಟರು. ವಿಚಿತ್ರ ಎಂದರೆ, ಬ್ರಹ್ಮಣಿ ಎನ್ನುವ ಕಂಪನಿ ಅಸ್ತಿತ್ವದಲ್ಲೇ ಇರಲಿಲ್ಲ. ರೆಡ್ಡಿಗೆ ಸ್ಟೀಲ್ ಫ್ಯಾಕ್ಟರಿ ಮಾಡುವ ಉದ್ದೇಶವೂ ಇರಲಿಲ್ಲ. ಹಾಗಾದರೆ ಉತ್ತಮ್ ಗಲ್ವಾ ಕಂಪನಿಗೆ ಮಾರಿದ್ದೇನು? ಬಳ್ಳಾರಿ ಜಿಲ್ಲೆಯ ಫಲವತ್ತಾದ ಭೂಮಿಯನ್ನು, ನೆನಪಿರಲಿ ಸಾವಿರಾರು ಕೋಟಿಯ ಮಾರುಕಟ್ಟೆ ಬೆಲೆಗೆ!

2007ರಲ್ಲಿ ಆಂಧ್ರದಲ್ಲಿ ವೈಎಸ್‌ಆರ್ ಸರ್ಕಾರವಿದ್ದಾಗ ಅಲ್ಲೂ ಬ್ರಹ್ಮಣಿ ಹೆಸರಲ್ಲಿ ವೈಎಸ್‌ಆರ್ ಮತ್ತು ಜನಾರೆಡ್ಡಿ ರಿಯಲ್ ಎಸ್ಟೇಟ್ ದಂಧೆ ಮಾಡಿದ್ದರು. ಅಲ್ಲಿ ಬ್ರಹ್ಮಣಿ ಸ್ಟೀಲ್ಸ್ ಹೆಸರಲ್ಲಿ 2 ಮಿಲಿಯನ್ ಟನ್ ಸ್ಟೀಲ್ ಫ್ಯಾಕ್ಟರಿಗೆ ಬಂಡವಾಳ ಹೂಡುವುದಾಗಿ, ಕಡಪಾ ಜಿಲ್ಲೆಯಲ್ಲಿ ಎಕರೆಗೆ ಕೇವಲ 18 ಸಾವಿರದಂತೆ, 10,760 ಎಕರೆ (ಒಟ್ಟು ಮೊತ್ತ ಕೇವಲ 19 ಕೋಟಿ ರೂ) ಮತ್ತು ಏರ್‌ಪೋರ್ಟ್ ಮಾಡುವುದಾಗಿ 78 ಕೋಟಿಗೆ 3,115 ಎಕರೆ ಭೂಮಿಯನ್ನು ಪಡೆದಿದ್ದರು.

ಈ ಭೂಮಿಯನ್ನೆಲ್ಲ ಆಕ್ಸಿಸ್ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಜನಾರ್ಧನ ರೆಡ್ಡಿ, 350 ಕೋಟಿ ರೂ ಸಾಲ ಎತ್ತಿದ್ದರು! ಮುಂದಿನ ಸರ್ಕಾರ ಈ ಒಪ್ಪಂದವನ್ನೇ ರದ್ದು ಮಾಡಿತು. ರೆಡ್ಡಿಯ ಈ ದಂಧೆ ಕುರಿತು 2012ರಲ್ಲಿ ಇಂಗ್ಲಿಷ್ ಪತ್ರಿಕೆಯೊಂದಿಗೆ ಮಾತಾಡಿದ್ದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ, ಆತನಿಗೆ ಸ್ಟೀಲ್ ಫ್ಯಾಕ್ಟರಿ ಮಾಡುವ ಯಾವ ಉದೇಶವೂ ಇಲ್ಲ. ಸರ್ಕಾರದಿಂದ ತುಂಬ ಕಡಿಮೆ ಬೆಲೆಗೆ ಭೂಮಿ ಪಡೆಯುವುದು, ಅದನ್ನು 50-60 ಪಟ್ಟಿಗೆ ಮಾರಿಬಿಡುವುದೇ ಆತನ ‘ಮೊಡಸ್ ಅಪರೆಂಡಿ’ ಎಂದಿದ್ದರು.

ಹುಬ್ಬಳ್ಳಿಯಲ್ಲೂ ರಿಯಲ್ ಎಸ್ಟೇಟ್ ಧಮಾಕ?
ಸಚಿವ ಜಗದೀಶ ಶೆಟ್ಟರ್ ಸಹೋದರ ಎಂಎಲ್‌ಸಿ ಪ್ರದೀಪ ಶೆಟ್ಟರ್ ಹೇಳಿಕೇಳಿ ರಿಯಲ್‌ಎಸ್ಟೇಟ್ ವ್ಯವಹಾರದವರು. ಹಿಂದೆ ಹುಬ್ಬಳ್ಳಿಯ ಸುಪ್ರಸಿದ್ಧ ಜಿಮಖಾನಾ ಕ್ಲಬ್ ಮತ್ತು ಅದರ ಭೂಮಿಯನ್ನು ಎಗರಿಸಲು ಶೆಟ್ಟರ್, ಜೋಶಿ ಯತ್ನಿಸಿದ್ದರು. ಇದರ ವಿರುದ್ಧ ಎಸ್‌.ಆರ್ ಹಿರೇಮಠ ಕಾನೂನು ಹೋರಾಟ ಮಾಡಿದ್ದರು. ಪಾಟೀಲ ಪುಟ್ಟಪ್ಪ ಉಪವಾಸ ಕುಳಿತಿದ್ದರು ಎಂಬುದನ್ನು ಇಲ್ಲಿ ಗಮನಿಸಬೇಕು.

ಹೀಗಾಗಿ ಕಳೆದ ಶುಕ್ರವಾರ ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕದಲ್ಲೂ ಭೂ ದರೋಡೆಯ ವಾಸನೆ ಹೊಡೆಯುತ್ತಿತ್ತು. ಹಾಗೆಯೇ ಸಮಸ್ಯೆಯಲ್ಲಿರುವ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶವಿತ್ತು. ಸಾರ್ವಜನಿಕವಾಗಿ ನಡೆಯಬೇಕಿದ್ದ ಈ ಕಾರ್ಯಕ್ರಮ ಡೆನಿಸನ್ಸ್ ಎಂಬ ಐಷಾರಾಮಿ ಹೊಟೆಲ್ ಒಳಗಡೆ ಕೇವಲ ವಿಐಪಿಗಳ ನಡುವೆ ಜರುಗಿತು.

ಎಲ್ಲಕ್ಕಿಂತ ಮುಖ್ಯವಾಗಿ ಪುಟ್ಟಿ ಮಣ್ಣಿಗೂ ರೊಕ್ಕ ಇಲ್ಲ ಎಂದು ನೆರೆಪೀಡಿತರನ್ನು ಅವಮಾನಿಸಿದ ಸರ್ಕಾರ ಎ.ಸಿ. ಹಾಲ್‌ನಲ್ಲಿ ಕುಳಿತು, ಉದ್ಯಮಿಗಳ ಬಾಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಎಂದು ಹೇಳಿಸುವ ಮೂಲಕ ಉತ್ತರ ಕರ್ನಾಟದ ಜನರನ್ನೇ ಅವಮಾನಿಸಿದೆ ಅಷ್ಟೇ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...