Homeಮುಖಪುಟಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ : ಇನ್ಸಲ್ಟ್ ಉತ್ತರ ಕರ್ನಾಟಕ - ರಿಯಲ್ ಎಸ್ಟೇಟ್ ಧಮಾಕ..

ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ : ಇನ್ಸಲ್ಟ್ ಉತ್ತರ ಕರ್ನಾಟಕ – ರಿಯಲ್ ಎಸ್ಟೇಟ್ ಧಮಾಕ..

2010 ಜೂನ್ 4, 5ರಂದು ಬೆಂಗಳೂರಲ್ಲಿ ಒಂದು ಗ್ಲೋಬಲ್ ಇನ್ವೆಸ್ಟ್‌ ಮೀಟ್ ನಡೆದಿತ್ತು. ಆದರೆ ಅಭಿವೃದ್ದಿಯ ಬದಲು ರಾಜ್ಯದ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆಯಲಾಗಿತ್ತು.. ಅದರ ಮುಂದಿನ ಭಾಗ ಇದು..

- Advertisement -
- Advertisement -

‘ಇನ್ವೆಸ್ಟ್ ಕರ್ನಾಟಕ’ ಎಂಬ 8 ತಾಸುಗಳ ಡ್ರಾಮಾ ಆಡುವ ಮೂಲಕ ‘ಇನ್ಸಲ್ಟ್ ಉತ್ತರ ಕರ್ನಾಟಕ’ ಎಂಬ ಅಪಹಾಸ್ಯವನ್ನು ಫೆ.14ರಂದು ಯಡಿಯೂರಪ್ಪ ಮತ್ತವರ ಬಳಗ ಹುಬ್ಬಳ್ಳಿಯಲ್ಲಿ ಮಾಡಿ ಹೋಗಿದೆ. ನೆರೆ ಸಂತ್ರಸ್ರರಿಗೆ ತಲೆ ಮೇಲೆ ನೆರಳು ಕೊಡಲಾಗದ ಯಡಿಯೂರಪ್ಪ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಉದ್ಯಮಿಗಳಿಗೆ ಮೂಲಭೂತ ಸೌಕರ್ಯ ಒದಗಿಸುತ್ತಾರಂತೆ…!

ಇವರು ಹೀಗೆ ಹೇಳುವ ಹೊತ್ತಿನಲ್ಲಿ ವೇದಿಕೆ ಮೇಲಿದ್ದ ಗಣಿ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರು, ತಿಂಗಳ ಹಿಂದಷ್ಟೇ ತಮ್ಮ ನರಗುಂದ ಕ್ಷೇತ್ರದ ನೆರೆಪೀಡಿತ ಗ್ರಾಮಗಳಲ್ಲಿ ಸಂಚರಿಸುವಾಗ, ಗ್ರಾಮಸ್ಥರು ಎಕ್ಕುಟ್ಟಿ ಹೋದ ರಸ್ತೆ ರಿಪೇರಿ ಮಾಡಿಸಿ ಎಂದಾಗ, ಎಲ್ಲಿಂದ ರೊಕ್ಕ ತರಲಿ? ಬೊಕ್ಕಸದಲ್ಲಿ ಪುಟ್ಟಿ ಮಣ್ಣಿಗೂ ದುಡ್ಡಿಲ್ಲ ಎನ್ನುವ ಮೂಲಕ ರಾಜ್ಯ ಸರ್ಕಾರದ ಹಣಕಾಸು ಸ್ಥಿತಿಯ ಅಧೋಗತಿಯನ್ನು ಸಾಂಕೇತಿಕವಾಗಿ ಹೇಳಿದ್ದರು.

 

ಅದಿರಲಿ, ಇಡೀ ಕಾರ್ಯಕ್ರಮ ಒಂದು ಪ್ರಹಸನದಂತೆ ಭಾಸವಾಗುತ್ತಿತ್ತು. ಭಾಷಣಕಾರರೆಲ್ಲ ಉತ್ತರ ಕರ್ನಾಟಕದ ಸಮಸ್ಯೆಗಳೇ ಬಗೆಹರಿದವು ಎಂಬಂತೆ ಮಾತಾಡುತ್ತಿದ್ದರು. ವೇದಿಕೆ ಹತ್ತಿದ ಉದ್ಯಮಿಗಳಂತೂ ಬಾಯಿ ತೆರೆದರೆ ಸಾವಿರ ಕೋಟಿ ರೂ. ಬಂಡವಾಳ ಹೂಡುತ್ತೇವೆ ಎನ್ನುತ್ತಿದ್ದುದು ಬಾಯಿಪಾಠದ ಸಾಲಿನಂತಿರುತ್ತಿತ್ತು.
ಎಲ್ಲಕ್ಕಿಂತ ಅಪಾಯಕಾರಿ ಸಂಗತಿ ಎಂದರೆ, ಬೆಂಗಳೂರು ಸುತ್ತಮುತ್ತ ಕೈಗಾರಿಕೆ ಹೆಸರಲ್ಲಿ ಭೂಮಿ ಹೊಡೆದವರು ಈಗ ಇಲ್ಲಿಗೂ ದಾಳಿ ಇಟ್ಟಿರುವುದು. ಮೂಲಭೂತ ಸೌಕರ್ಯಗಳಿಲ್ಲದೇ ಹೂಡಿಕೆ ಮಾಡಲು ಯಾವ ಉದ್ಯಮಿಯೂ ಮೂರ್ಖನಲ್ಲ. ಮೂಲಭೂತ ಸೌಕರ್ಯ ಕಲ್ಪಿಸಲು ಬಿಡಿ, ನೆರೆ ಸಂತ್ರಸ್ತರಿಗೆ ಕನಿಷ್ಠ ಸೌಲಭ್ಯ ಕೊಡಲೂ ಆಗದ ದುಸ್ಥಿತಿಯಲ್ಲಿ ಸರ್ಕಾರವಿದೆ.

ರಿಯಲ್‌ ಎಸ್ಟೇಟ್‌ ದಂಧೆ..

ಹಾಗಿದ್ದರೆ ಈ ಉದ್ಯಮಿಗಳು ಹೂಡಿಕೆ ಭರವಸೆ ನೀಡಿದ್ದು ಯಾವ ಆಧಾರದ ಮೇಲೆ? ಇಲ್ಲೇ ಶುರುವಾಗುತ್ತದೆ ರಿಯಲ್ ಎಸ್ಟೇಟ್ ದಂಧೆಯ ಕತೆ. ಈಗ ಸ್ವಲ್ಪ ಫ್ಲಾಶಬ್ಯಾಕ್‌ಗೆ ಹೋಗೋಣ. 2010 ಜೂನ್ 4, 5ರಂದು ಬೆಂಗಳೂರಲ್ಲಿ ಒಂದು ಗ್ಲೋಬಲ್ ಇನ್ವೆಸ್ಟರ್‍ಸ್‌ ಮೀಟ್ ನಡೆಯಿತು. ಹುಬ್ಬಳ್ಳಿಯಲ್ಲಿ ವೇದಿಕೆ ಮೇಲಿದ್ದ ಬಹುಪಾಲು ಮುಖಗಳೇ ಅವತ್ತು ಬೆಂಗಳೂರಿನ ವೇದಿಕೆ ಮೇಲಿದ್ದವು. ಆಗಲೂ ಯಡಿಯೂರಪ್ಪ ಮುಖ್ಯಮಂತ್ರಿ. ಆ ‘ಜಾತ್ರೆ’ಯಲ್ಲಿ ಸ್ಟೀಲ್ ಸೆಕ್ಟರ್ ಒಂದರಲ್ಲೇ 2 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದಗಳಾದವು. ಆಗ ಪ್ರವಾಸೋದ್ಯಮ ಸಚಿವರಾಗಿದ್ದ ಗಾಲಿ ಜನಾರ್ದನ ರೆಡ್ಡಿಯ ಬ್ರಹ್ಮಣಿ ಸ್ಟೀಲ್ಸ್ ಕಂಪನಿ ಬಳ್ಳಾರಿ ಸಮೀಪ 36 ಸಾವಿರ ಕೋಟಿ ರೂ. ಬಂಡವಾಳ ಹೂಡಿ, 6 ಮಿಲಿಯನ್ ಟನ್ ಸ್ಟೀಲ್ ಉತ್ಪಾದನೆಯ ಫ್ಯಾಕ್ಟರಿ ಸ್ಥಾಪಿಸುವುದಾಗಿ ಒಡಂಬಡಿಕೆ ಮಾಡಿಕೊಂಡಿತು.

ಅದಕ್ಕಾಗಿ ರಿಯಾಯತಿ ದರದಲ್ಲಿ ಸುಮಾರು 1,500 ಎಕರೆ ಭೂಮಿಯನ್ನು ಸರ್ಕಾರದಿಂದ ಪಡೆಯಿತು. ಕೇವಲ ಎಂಟೇ ತಿಂಗಳಲ್ಲಿ, ಮುಂಬೈ ಮೂಲದ ಮಿಗ್ಲಾನಿ ಕುಟುಂಬದ ಉತ್ತಮ್ ಗಲ್ವಾ ಸ್ಟೀಲ್ಸ್ ಕಂಪನೆಗೆ ಮಾರಿಬಿಟ್ಟರು. ವಿಚಿತ್ರ ಎಂದರೆ, ಬ್ರಹ್ಮಣಿ ಎನ್ನುವ ಕಂಪನಿ ಅಸ್ತಿತ್ವದಲ್ಲೇ ಇರಲಿಲ್ಲ. ರೆಡ್ಡಿಗೆ ಸ್ಟೀಲ್ ಫ್ಯಾಕ್ಟರಿ ಮಾಡುವ ಉದ್ದೇಶವೂ ಇರಲಿಲ್ಲ. ಹಾಗಾದರೆ ಉತ್ತಮ್ ಗಲ್ವಾ ಕಂಪನಿಗೆ ಮಾರಿದ್ದೇನು? ಬಳ್ಳಾರಿ ಜಿಲ್ಲೆಯ ಫಲವತ್ತಾದ ಭೂಮಿಯನ್ನು, ನೆನಪಿರಲಿ ಸಾವಿರಾರು ಕೋಟಿಯ ಮಾರುಕಟ್ಟೆ ಬೆಲೆಗೆ!

2007ರಲ್ಲಿ ಆಂಧ್ರದಲ್ಲಿ ವೈಎಸ್‌ಆರ್ ಸರ್ಕಾರವಿದ್ದಾಗ ಅಲ್ಲೂ ಬ್ರಹ್ಮಣಿ ಹೆಸರಲ್ಲಿ ವೈಎಸ್‌ಆರ್ ಮತ್ತು ಜನಾರೆಡ್ಡಿ ರಿಯಲ್ ಎಸ್ಟೇಟ್ ದಂಧೆ ಮಾಡಿದ್ದರು. ಅಲ್ಲಿ ಬ್ರಹ್ಮಣಿ ಸ್ಟೀಲ್ಸ್ ಹೆಸರಲ್ಲಿ 2 ಮಿಲಿಯನ್ ಟನ್ ಸ್ಟೀಲ್ ಫ್ಯಾಕ್ಟರಿಗೆ ಬಂಡವಾಳ ಹೂಡುವುದಾಗಿ, ಕಡಪಾ ಜಿಲ್ಲೆಯಲ್ಲಿ ಎಕರೆಗೆ ಕೇವಲ 18 ಸಾವಿರದಂತೆ, 10,760 ಎಕರೆ (ಒಟ್ಟು ಮೊತ್ತ ಕೇವಲ 19 ಕೋಟಿ ರೂ) ಮತ್ತು ಏರ್‌ಪೋರ್ಟ್ ಮಾಡುವುದಾಗಿ 78 ಕೋಟಿಗೆ 3,115 ಎಕರೆ ಭೂಮಿಯನ್ನು ಪಡೆದಿದ್ದರು.

ಈ ಭೂಮಿಯನ್ನೆಲ್ಲ ಆಕ್ಸಿಸ್ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಜನಾರ್ಧನ ರೆಡ್ಡಿ, 350 ಕೋಟಿ ರೂ ಸಾಲ ಎತ್ತಿದ್ದರು! ಮುಂದಿನ ಸರ್ಕಾರ ಈ ಒಪ್ಪಂದವನ್ನೇ ರದ್ದು ಮಾಡಿತು. ರೆಡ್ಡಿಯ ಈ ದಂಧೆ ಕುರಿತು 2012ರಲ್ಲಿ ಇಂಗ್ಲಿಷ್ ಪತ್ರಿಕೆಯೊಂದಿಗೆ ಮಾತಾಡಿದ್ದ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ, ಆತನಿಗೆ ಸ್ಟೀಲ್ ಫ್ಯಾಕ್ಟರಿ ಮಾಡುವ ಯಾವ ಉದೇಶವೂ ಇಲ್ಲ. ಸರ್ಕಾರದಿಂದ ತುಂಬ ಕಡಿಮೆ ಬೆಲೆಗೆ ಭೂಮಿ ಪಡೆಯುವುದು, ಅದನ್ನು 50-60 ಪಟ್ಟಿಗೆ ಮಾರಿಬಿಡುವುದೇ ಆತನ ‘ಮೊಡಸ್ ಅಪರೆಂಡಿ’ ಎಂದಿದ್ದರು.

ಹುಬ್ಬಳ್ಳಿಯಲ್ಲೂ ರಿಯಲ್ ಎಸ್ಟೇಟ್ ಧಮಾಕ?
ಸಚಿವ ಜಗದೀಶ ಶೆಟ್ಟರ್ ಸಹೋದರ ಎಂಎಲ್‌ಸಿ ಪ್ರದೀಪ ಶೆಟ್ಟರ್ ಹೇಳಿಕೇಳಿ ರಿಯಲ್‌ಎಸ್ಟೇಟ್ ವ್ಯವಹಾರದವರು. ಹಿಂದೆ ಹುಬ್ಬಳ್ಳಿಯ ಸುಪ್ರಸಿದ್ಧ ಜಿಮಖಾನಾ ಕ್ಲಬ್ ಮತ್ತು ಅದರ ಭೂಮಿಯನ್ನು ಎಗರಿಸಲು ಶೆಟ್ಟರ್, ಜೋಶಿ ಯತ್ನಿಸಿದ್ದರು. ಇದರ ವಿರುದ್ಧ ಎಸ್‌.ಆರ್ ಹಿರೇಮಠ ಕಾನೂನು ಹೋರಾಟ ಮಾಡಿದ್ದರು. ಪಾಟೀಲ ಪುಟ್ಟಪ್ಪ ಉಪವಾಸ ಕುಳಿತಿದ್ದರು ಎಂಬುದನ್ನು ಇಲ್ಲಿ ಗಮನಿಸಬೇಕು.

ಹೀಗಾಗಿ ಕಳೆದ ಶುಕ್ರವಾರ ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕದಲ್ಲೂ ಭೂ ದರೋಡೆಯ ವಾಸನೆ ಹೊಡೆಯುತ್ತಿತ್ತು. ಹಾಗೆಯೇ ಸಮಸ್ಯೆಯಲ್ಲಿರುವ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶವಿತ್ತು. ಸಾರ್ವಜನಿಕವಾಗಿ ನಡೆಯಬೇಕಿದ್ದ ಈ ಕಾರ್ಯಕ್ರಮ ಡೆನಿಸನ್ಸ್ ಎಂಬ ಐಷಾರಾಮಿ ಹೊಟೆಲ್ ಒಳಗಡೆ ಕೇವಲ ವಿಐಪಿಗಳ ನಡುವೆ ಜರುಗಿತು.

ಎಲ್ಲಕ್ಕಿಂತ ಮುಖ್ಯವಾಗಿ ಪುಟ್ಟಿ ಮಣ್ಣಿಗೂ ರೊಕ್ಕ ಇಲ್ಲ ಎಂದು ನೆರೆಪೀಡಿತರನ್ನು ಅವಮಾನಿಸಿದ ಸರ್ಕಾರ ಎ.ಸಿ. ಹಾಲ್‌ನಲ್ಲಿ ಕುಳಿತು, ಉದ್ಯಮಿಗಳ ಬಾಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಎಂದು ಹೇಳಿಸುವ ಮೂಲಕ ಉತ್ತರ ಕರ್ನಾಟದ ಜನರನ್ನೇ ಅವಮಾನಿಸಿದೆ ಅಷ್ಟೇ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...