Homeಮುಖಪುಟಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ...

ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ!

ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮುದ್ವೇಷಪೂರಿತ ಪೋಸ್ಟ್‌ ಹಾಕಿದ ಆರೋಪದ ಮೇಲೆ ಏಪ್ರಿಲ್‌ 10ರಂದು ಹಾಸನ ಜಿಲ್ಲೆಯ ಬಿಕ್ಕೋಡಿನ ತೇಜಕುಮಾರ್ ಶೆಟ್ಟಿ ಎಂಬುವವರನ್ನು ಬಂಧಿಸಿದ್ದ ಪೊಲೀಸರ ವಿರುದ್ಧವೇ ತನಿಖೆ ನಡೆಯುವಂತ ಪರಿಸ್ಥಿತಿ ಎದುರಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮ ಹಾಗೂ ವ್ಯಕ್ತಿಯ ನಿಂದನೆಯಾಗಲಿ ಮಾಡಬಾರದು ಎಂದು ಈಗಾಗಲೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಆದೇಶ ಇದ್ದರೂ ಸಹ ಅದನ್ನು ಲೆಕ್ಕಿಸದೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರಿಂದ, ಕಲಂ 152ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ತಿಳಿಸಿದ್ದರು. ಬಂಧಿತ ವ್ಯಕ್ತಿಯೊಂದಿಗಿನ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದೇ ಸಮುಯದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಸಹ ಎರಡು ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿಯೂ ಅಲ್ಪಸಂಖ್ಯಾತ ಮುಸ್ಲಿಂ ಬಾಂಧವರ ವಿರುದ್ಧ ಸುಳ್ಳು ಸುದ್ದಿ ಹರಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್‌ ಎಚ್ಚರಿಕೆ ಸಹ ನೀಡಿದ್ದರು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಘಟನೆ ನಡೆದ ಎರಡು ದಿನಗಳ ನಂತರ ಪ್ರವಾಸೋಧ್ಯಮ ಸಚಿವ ಸಿ.ಟಿ ರವಿರವರು ಆರೋಪಿಯ ರಕ್ಷಣೆಗೆ ಮುಂದಾಗಿದ್ದರು. ಅವರು ಟ್ವಿಟ್ಟರ್‌ನಲ್ಲಿ “ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನನ್ನ ಸಹೋದ್ಯೋಗಿಗಳಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ”. ಎಂದು ಬರೆದುಕೊಂಡಿದ್ದರು.

ಸಿ.ಟಿ ರವಿರವರು ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅನ್ಯಧರ್ಮದ ವಿರುದ್ಧ ಪೋಸ್ಟ್‌ ಹಾಕಿದ್ದಕ್ಕೆ ಬಂಧಿಸಿರುವ ಪ್ರಕರಣದಲ್ಲಿ ಆರೋಪಿಯೊಂದಿಗಿನ ಫೋಟೊವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕಿರುವ ಅಗತ್ಯವಿರಲಿಲ್ಲ. ಈ ಕುರಿತು ಆ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆ ನಡಸುತ್ತೇವೆ ಎಂದು ಶ್ರೀನಿವಾಸಗೌಡರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ತನಿಖೆ ಮತ್ತು ಸಚಿವ ಸಿ.ಟಿ ರವಿಯವರ ನಡೆಯ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ” ಗೌರವಾನ್ವಿತ ಸಚಿವರಾದ ಸಿ ಟಿ ರವಿಯವರೇ, ನೀವು ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಮಂತ್ರಿಯಲ್ಲ. ಇಡೀ ರಾಜ್ಯಕ್ಕೆ ಮಂತ್ರಿ. ಮಂತ್ರಿಯಾಗಿ ಸಂವಿಧಾನಕ್ಕೆ ಬದ್ಧರಾಗಿರಬೇಕಾದುದು, ಕಾನೂನು ಆಧರಿಸಿದ ಆಡಳಿತವನ್ನು ಬೆಂಬಲಿಸಬೇಕಾದುದು ತಮ್ಮ ಆದ್ಯ ಕರ್ತವ್ಯ. ಜವಾಬ್ದಾರಿಯುತ ಸ್ಥಾನದಲ್ಲಿರುವ ತಾವು ಹೀಗೆ ಪೊಲೀಸರ ಕರ್ತವ್ಯದಲ್ಲಿ ಹಸ್ತಕ್ಷೇಪ ನಡೆಸುವುದು ತಪ್ಪಲ್ಲವೇ? ಇದು ತಪ್ಪು ಸಂದೇಶ ರವಾನಿಸುವುದಿಲ್ಲವೇ? ಇದು ಪೊಲೀಸರ ನೈತಿಕ ಬಲ ಕುಂದಿಸುವುದಿಲ್ಲವೇ? “ನಮ್ಮ ಕಾರ್ಯಕರ್ತರು” ಎಂಬ ನೆಲೆಯಲ್ಲಿ ನೀವು ಅಪರಾಧಿಗಳನ್ನು ರಕ್ಷಿಸಹೊರಟರೆ ಇನ್ನಷ್ಟು ಅಪರಾಧ ಎಸಗಲು ಅದು ನಿಮ್ಮ ಕಾರ್ಯಕರ್ತರಿಗೆ ಕುಮ್ಮಕ್ಕು ನೀಡುವುದಿಲ್ಲವೇ? ನಿಮ್ಮ ಕಾರ್ಯಕರ್ತರಿಗೂ ಇತರ ಕಾರ್ಯಕರ್ತರಿಗೂ ರಾಜ್ಯದಲ್ಲಿ ಬೇರೆ ಬೇರೆ ಕಾನೂನುಗಳಿವೆಯೇ? ಇಂತಹ ಕೆಲಸ ಮಾಡುವ ಮೊದಲು ರಾಜ್ಯದ ಒಟ್ಟು ಹಿತಾಸಕ್ತಿ ಮತ್ತು ದೂರಗಾಮಿ ಪರಿಣಾಮಗಳ ಹಿನ್ನೆಲೆಯಲ್ಲಿ ತಾವು ಎರಡೆರಡು ಬಾರಿ ಯೋಚಿಸಬೇಕಾಗಿ ವಿನಂತಿ” ಎಂದು ಫೇಸ್‌ಬುಕ್‌ನಲ್ಲಿ ಮನವಿ ಮಾಡಿದ್ದಾರೆ.

ಇಂತಹ ಕಷ್ಟಕಾಲದಲ್ಲಿ ವೈಯಕ್ತಿಕ ಸುರಕ್ಷತೆಗೆ ಸೂಕ್ತ ವ್ಯವಸ್ಥೆ ಇಲ್ಲದೆ ದುಡಿಯುತ್ತಿರುವವರು ಪೊಲೀಸರು. ಅವರ ಸ್ಥೈರ್ಯ ಕುಂದಿಸುವಂತಹ ಕೆಲಸವನ್ನು ಸರಕಾರದ ಮಂತ್ರಿಗಳೇ ಮಾಡುತ್ತಿದ್ದಾರೆ. ಈ ಟ್ವೀಟ್ ಮಾಡಿದ ಎರಡು ತಾಸಿನಲ್ಲೇ ಅಧಿಕಾರಿಗಳ ಮೇಲೆ ಕ್ರಮ ಆಗಿದೆ. ಒಂದು ಕೋಮಿನ ವಿರುದ್ಧ ಸುಳ್ಳು ಬರೆದು ಶಾಂತಿ ಕದಡುವವರಿಗೆ ಧೈರ್ಯ ತುಂಬುತ್ತಿದ್ದಾರೆ ಎಂದು ಪತ್ರಕರ್ತರಾದ ಜಿ.ಟಿ ಸತೀಶ್‌ರವರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...