Homeಮುಖಪುಟಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ...

ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ!

ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮುದ್ವೇಷಪೂರಿತ ಪೋಸ್ಟ್‌ ಹಾಕಿದ ಆರೋಪದ ಮೇಲೆ ಏಪ್ರಿಲ್‌ 10ರಂದು ಹಾಸನ ಜಿಲ್ಲೆಯ ಬಿಕ್ಕೋಡಿನ ತೇಜಕುಮಾರ್ ಶೆಟ್ಟಿ ಎಂಬುವವರನ್ನು ಬಂಧಿಸಿದ್ದ ಪೊಲೀಸರ ವಿರುದ್ಧವೇ ತನಿಖೆ ನಡೆಯುವಂತ ಪರಿಸ್ಥಿತಿ ಎದುರಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮ ಹಾಗೂ ವ್ಯಕ್ತಿಯ ನಿಂದನೆಯಾಗಲಿ ಮಾಡಬಾರದು ಎಂದು ಈಗಾಗಲೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಆದೇಶ ಇದ್ದರೂ ಸಹ ಅದನ್ನು ಲೆಕ್ಕಿಸದೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರಿಂದ, ಕಲಂ 152ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ತಿಳಿಸಿದ್ದರು. ಬಂಧಿತ ವ್ಯಕ್ತಿಯೊಂದಿಗಿನ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದೇ ಸಮುಯದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಸಹ ಎರಡು ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿಯೂ ಅಲ್ಪಸಂಖ್ಯಾತ ಮುಸ್ಲಿಂ ಬಾಂಧವರ ವಿರುದ್ಧ ಸುಳ್ಳು ಸುದ್ದಿ ಹರಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್‌ ಎಚ್ಚರಿಕೆ ಸಹ ನೀಡಿದ್ದರು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಘಟನೆ ನಡೆದ ಎರಡು ದಿನಗಳ ನಂತರ ಪ್ರವಾಸೋಧ್ಯಮ ಸಚಿವ ಸಿ.ಟಿ ರವಿರವರು ಆರೋಪಿಯ ರಕ್ಷಣೆಗೆ ಮುಂದಾಗಿದ್ದರು. ಅವರು ಟ್ವಿಟ್ಟರ್‌ನಲ್ಲಿ “ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನನ್ನ ಸಹೋದ್ಯೋಗಿಗಳಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ”. ಎಂದು ಬರೆದುಕೊಂಡಿದ್ದರು.

ಸಿ.ಟಿ ರವಿರವರು ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅನ್ಯಧರ್ಮದ ವಿರುದ್ಧ ಪೋಸ್ಟ್‌ ಹಾಕಿದ್ದಕ್ಕೆ ಬಂಧಿಸಿರುವ ಪ್ರಕರಣದಲ್ಲಿ ಆರೋಪಿಯೊಂದಿಗಿನ ಫೋಟೊವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕಿರುವ ಅಗತ್ಯವಿರಲಿಲ್ಲ. ಈ ಕುರಿತು ಆ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆ ನಡಸುತ್ತೇವೆ ಎಂದು ಶ್ರೀನಿವಾಸಗೌಡರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ತನಿಖೆ ಮತ್ತು ಸಚಿವ ಸಿ.ಟಿ ರವಿಯವರ ನಡೆಯ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ” ಗೌರವಾನ್ವಿತ ಸಚಿವರಾದ ಸಿ ಟಿ ರವಿಯವರೇ, ನೀವು ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಮಂತ್ರಿಯಲ್ಲ. ಇಡೀ ರಾಜ್ಯಕ್ಕೆ ಮಂತ್ರಿ. ಮಂತ್ರಿಯಾಗಿ ಸಂವಿಧಾನಕ್ಕೆ ಬದ್ಧರಾಗಿರಬೇಕಾದುದು, ಕಾನೂನು ಆಧರಿಸಿದ ಆಡಳಿತವನ್ನು ಬೆಂಬಲಿಸಬೇಕಾದುದು ತಮ್ಮ ಆದ್ಯ ಕರ್ತವ್ಯ. ಜವಾಬ್ದಾರಿಯುತ ಸ್ಥಾನದಲ್ಲಿರುವ ತಾವು ಹೀಗೆ ಪೊಲೀಸರ ಕರ್ತವ್ಯದಲ್ಲಿ ಹಸ್ತಕ್ಷೇಪ ನಡೆಸುವುದು ತಪ್ಪಲ್ಲವೇ? ಇದು ತಪ್ಪು ಸಂದೇಶ ರವಾನಿಸುವುದಿಲ್ಲವೇ? ಇದು ಪೊಲೀಸರ ನೈತಿಕ ಬಲ ಕುಂದಿಸುವುದಿಲ್ಲವೇ? “ನಮ್ಮ ಕಾರ್ಯಕರ್ತರು” ಎಂಬ ನೆಲೆಯಲ್ಲಿ ನೀವು ಅಪರಾಧಿಗಳನ್ನು ರಕ್ಷಿಸಹೊರಟರೆ ಇನ್ನಷ್ಟು ಅಪರಾಧ ಎಸಗಲು ಅದು ನಿಮ್ಮ ಕಾರ್ಯಕರ್ತರಿಗೆ ಕುಮ್ಮಕ್ಕು ನೀಡುವುದಿಲ್ಲವೇ? ನಿಮ್ಮ ಕಾರ್ಯಕರ್ತರಿಗೂ ಇತರ ಕಾರ್ಯಕರ್ತರಿಗೂ ರಾಜ್ಯದಲ್ಲಿ ಬೇರೆ ಬೇರೆ ಕಾನೂನುಗಳಿವೆಯೇ? ಇಂತಹ ಕೆಲಸ ಮಾಡುವ ಮೊದಲು ರಾಜ್ಯದ ಒಟ್ಟು ಹಿತಾಸಕ್ತಿ ಮತ್ತು ದೂರಗಾಮಿ ಪರಿಣಾಮಗಳ ಹಿನ್ನೆಲೆಯಲ್ಲಿ ತಾವು ಎರಡೆರಡು ಬಾರಿ ಯೋಚಿಸಬೇಕಾಗಿ ವಿನಂತಿ” ಎಂದು ಫೇಸ್‌ಬುಕ್‌ನಲ್ಲಿ ಮನವಿ ಮಾಡಿದ್ದಾರೆ.

ಇಂತಹ ಕಷ್ಟಕಾಲದಲ್ಲಿ ವೈಯಕ್ತಿಕ ಸುರಕ್ಷತೆಗೆ ಸೂಕ್ತ ವ್ಯವಸ್ಥೆ ಇಲ್ಲದೆ ದುಡಿಯುತ್ತಿರುವವರು ಪೊಲೀಸರು. ಅವರ ಸ್ಥೈರ್ಯ ಕುಂದಿಸುವಂತಹ ಕೆಲಸವನ್ನು ಸರಕಾರದ ಮಂತ್ರಿಗಳೇ ಮಾಡುತ್ತಿದ್ದಾರೆ. ಈ ಟ್ವೀಟ್ ಮಾಡಿದ ಎರಡು ತಾಸಿನಲ್ಲೇ ಅಧಿಕಾರಿಗಳ ಮೇಲೆ ಕ್ರಮ ಆಗಿದೆ. ಒಂದು ಕೋಮಿನ ವಿರುದ್ಧ ಸುಳ್ಳು ಬರೆದು ಶಾಂತಿ ಕದಡುವವರಿಗೆ ಧೈರ್ಯ ತುಂಬುತ್ತಿದ್ದಾರೆ ಎಂದು ಪತ್ರಕರ್ತರಾದ ಜಿ.ಟಿ ಸತೀಶ್‌ರವರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...