Homeಮುಖಪುಟಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ...

ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ!

ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮುದ್ವೇಷಪೂರಿತ ಪೋಸ್ಟ್‌ ಹಾಕಿದ ಆರೋಪದ ಮೇಲೆ ಏಪ್ರಿಲ್‌ 10ರಂದು ಹಾಸನ ಜಿಲ್ಲೆಯ ಬಿಕ್ಕೋಡಿನ ತೇಜಕುಮಾರ್ ಶೆಟ್ಟಿ ಎಂಬುವವರನ್ನು ಬಂಧಿಸಿದ್ದ ಪೊಲೀಸರ ವಿರುದ್ಧವೇ ತನಿಖೆ ನಡೆಯುವಂತ ಪರಿಸ್ಥಿತಿ ಎದುರಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮ ಹಾಗೂ ವ್ಯಕ್ತಿಯ ನಿಂದನೆಯಾಗಲಿ ಮಾಡಬಾರದು ಎಂದು ಈಗಾಗಲೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಆದೇಶ ಇದ್ದರೂ ಸಹ ಅದನ್ನು ಲೆಕ್ಕಿಸದೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರಿಂದ, ಕಲಂ 152ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ತಿಳಿಸಿದ್ದರು. ಬಂಧಿತ ವ್ಯಕ್ತಿಯೊಂದಿಗಿನ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದೇ ಸಮುಯದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಸಹ ಎರಡು ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿಯೂ ಅಲ್ಪಸಂಖ್ಯಾತ ಮುಸ್ಲಿಂ ಬಾಂಧವರ ವಿರುದ್ಧ ಸುಳ್ಳು ಸುದ್ದಿ ಹರಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್‌ ಎಚ್ಚರಿಕೆ ಸಹ ನೀಡಿದ್ದರು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಘಟನೆ ನಡೆದ ಎರಡು ದಿನಗಳ ನಂತರ ಪ್ರವಾಸೋಧ್ಯಮ ಸಚಿವ ಸಿ.ಟಿ ರವಿರವರು ಆರೋಪಿಯ ರಕ್ಷಣೆಗೆ ಮುಂದಾಗಿದ್ದರು. ಅವರು ಟ್ವಿಟ್ಟರ್‌ನಲ್ಲಿ “ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನನ್ನ ಸಹೋದ್ಯೋಗಿಗಳಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ”. ಎಂದು ಬರೆದುಕೊಂಡಿದ್ದರು.

ಸಿ.ಟಿ ರವಿರವರು ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅನ್ಯಧರ್ಮದ ವಿರುದ್ಧ ಪೋಸ್ಟ್‌ ಹಾಕಿದ್ದಕ್ಕೆ ಬಂಧಿಸಿರುವ ಪ್ರಕರಣದಲ್ಲಿ ಆರೋಪಿಯೊಂದಿಗಿನ ಫೋಟೊವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕಿರುವ ಅಗತ್ಯವಿರಲಿಲ್ಲ. ಈ ಕುರಿತು ಆ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆ ನಡಸುತ್ತೇವೆ ಎಂದು ಶ್ರೀನಿವಾಸಗೌಡರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ತನಿಖೆ ಮತ್ತು ಸಚಿವ ಸಿ.ಟಿ ರವಿಯವರ ನಡೆಯ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ” ಗೌರವಾನ್ವಿತ ಸಚಿವರಾದ ಸಿ ಟಿ ರವಿಯವರೇ, ನೀವು ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಮಂತ್ರಿಯಲ್ಲ. ಇಡೀ ರಾಜ್ಯಕ್ಕೆ ಮಂತ್ರಿ. ಮಂತ್ರಿಯಾಗಿ ಸಂವಿಧಾನಕ್ಕೆ ಬದ್ಧರಾಗಿರಬೇಕಾದುದು, ಕಾನೂನು ಆಧರಿಸಿದ ಆಡಳಿತವನ್ನು ಬೆಂಬಲಿಸಬೇಕಾದುದು ತಮ್ಮ ಆದ್ಯ ಕರ್ತವ್ಯ. ಜವಾಬ್ದಾರಿಯುತ ಸ್ಥಾನದಲ್ಲಿರುವ ತಾವು ಹೀಗೆ ಪೊಲೀಸರ ಕರ್ತವ್ಯದಲ್ಲಿ ಹಸ್ತಕ್ಷೇಪ ನಡೆಸುವುದು ತಪ್ಪಲ್ಲವೇ? ಇದು ತಪ್ಪು ಸಂದೇಶ ರವಾನಿಸುವುದಿಲ್ಲವೇ? ಇದು ಪೊಲೀಸರ ನೈತಿಕ ಬಲ ಕುಂದಿಸುವುದಿಲ್ಲವೇ? “ನಮ್ಮ ಕಾರ್ಯಕರ್ತರು” ಎಂಬ ನೆಲೆಯಲ್ಲಿ ನೀವು ಅಪರಾಧಿಗಳನ್ನು ರಕ್ಷಿಸಹೊರಟರೆ ಇನ್ನಷ್ಟು ಅಪರಾಧ ಎಸಗಲು ಅದು ನಿಮ್ಮ ಕಾರ್ಯಕರ್ತರಿಗೆ ಕುಮ್ಮಕ್ಕು ನೀಡುವುದಿಲ್ಲವೇ? ನಿಮ್ಮ ಕಾರ್ಯಕರ್ತರಿಗೂ ಇತರ ಕಾರ್ಯಕರ್ತರಿಗೂ ರಾಜ್ಯದಲ್ಲಿ ಬೇರೆ ಬೇರೆ ಕಾನೂನುಗಳಿವೆಯೇ? ಇಂತಹ ಕೆಲಸ ಮಾಡುವ ಮೊದಲು ರಾಜ್ಯದ ಒಟ್ಟು ಹಿತಾಸಕ್ತಿ ಮತ್ತು ದೂರಗಾಮಿ ಪರಿಣಾಮಗಳ ಹಿನ್ನೆಲೆಯಲ್ಲಿ ತಾವು ಎರಡೆರಡು ಬಾರಿ ಯೋಚಿಸಬೇಕಾಗಿ ವಿನಂತಿ” ಎಂದು ಫೇಸ್‌ಬುಕ್‌ನಲ್ಲಿ ಮನವಿ ಮಾಡಿದ್ದಾರೆ.

ಇಂತಹ ಕಷ್ಟಕಾಲದಲ್ಲಿ ವೈಯಕ್ತಿಕ ಸುರಕ್ಷತೆಗೆ ಸೂಕ್ತ ವ್ಯವಸ್ಥೆ ಇಲ್ಲದೆ ದುಡಿಯುತ್ತಿರುವವರು ಪೊಲೀಸರು. ಅವರ ಸ್ಥೈರ್ಯ ಕುಂದಿಸುವಂತಹ ಕೆಲಸವನ್ನು ಸರಕಾರದ ಮಂತ್ರಿಗಳೇ ಮಾಡುತ್ತಿದ್ದಾರೆ. ಈ ಟ್ವೀಟ್ ಮಾಡಿದ ಎರಡು ತಾಸಿನಲ್ಲೇ ಅಧಿಕಾರಿಗಳ ಮೇಲೆ ಕ್ರಮ ಆಗಿದೆ. ಒಂದು ಕೋಮಿನ ವಿರುದ್ಧ ಸುಳ್ಳು ಬರೆದು ಶಾಂತಿ ಕದಡುವವರಿಗೆ ಧೈರ್ಯ ತುಂಬುತ್ತಿದ್ದಾರೆ ಎಂದು ಪತ್ರಕರ್ತರಾದ ಜಿ.ಟಿ ಸತೀಶ್‌ರವರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...