Homeಮುಖಪುಟಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ...

ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಹಿಂದುತ್ವ ಸಂಘಟನೆಯ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ – ಪೊಲೀಸರ ವಿರುದ್ದವೇ ತನಿಖೆ!

ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮುದ್ವೇಷಪೂರಿತ ಪೋಸ್ಟ್‌ ಹಾಕಿದ ಆರೋಪದ ಮೇಲೆ ಏಪ್ರಿಲ್‌ 10ರಂದು ಹಾಸನ ಜಿಲ್ಲೆಯ ಬಿಕ್ಕೋಡಿನ ತೇಜಕುಮಾರ್ ಶೆಟ್ಟಿ ಎಂಬುವವರನ್ನು ಬಂಧಿಸಿದ್ದ ಪೊಲೀಸರ ವಿರುದ್ಧವೇ ತನಿಖೆ ನಡೆಯುವಂತ ಪರಿಸ್ಥಿತಿ ಎದುರಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮ ಹಾಗೂ ವ್ಯಕ್ತಿಯ ನಿಂದನೆಯಾಗಲಿ ಮಾಡಬಾರದು ಎಂದು ಈಗಾಗಲೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಆದೇಶ ಇದ್ದರೂ ಸಹ ಅದನ್ನು ಲೆಕ್ಕಿಸದೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರಿಂದ, ಕಲಂ 152ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಲಾಗಿದೆ ಎಂದು ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ತಿಳಿಸಿದ್ದರು. ಬಂಧಿತ ವ್ಯಕ್ತಿಯೊಂದಿಗಿನ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದೇ ಸಮುಯದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಸಹ ಎರಡು ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿಯೂ ಅಲ್ಪಸಂಖ್ಯಾತ ಮುಸ್ಲಿಂ ಬಾಂಧವರ ವಿರುದ್ಧ ಸುಳ್ಳು ಸುದ್ದಿ ಹರಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್‌ ಎಚ್ಚರಿಕೆ ಸಹ ನೀಡಿದ್ದರು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ಘಟನೆ ನಡೆದ ಎರಡು ದಿನಗಳ ನಂತರ ಪ್ರವಾಸೋಧ್ಯಮ ಸಚಿವ ಸಿ.ಟಿ ರವಿರವರು ಆರೋಪಿಯ ರಕ್ಷಣೆಗೆ ಮುಂದಾಗಿದ್ದರು. ಅವರು ಟ್ವಿಟ್ಟರ್‌ನಲ್ಲಿ “ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನನ್ನ ಸಹೋದ್ಯೋಗಿಗಳಾದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ”. ಎಂದು ಬರೆದುಕೊಂಡಿದ್ದರು.

ಸಿ.ಟಿ ರವಿರವರು ಟ್ವೀಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಆರ್‌ ಶ್ರೀನಿವಾಸಗೌಡರವರು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಬೇಲೂರು ಸಿಪಿಐ ಸಿದ್ಧರಾಮೇಶ್ವರ್, ಅರೇಹಳ್ಳಿ ಪಿಎಸ್ಐ ಬಾಲು ಎಂಬ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅನ್ಯಧರ್ಮದ ವಿರುದ್ಧ ಪೋಸ್ಟ್‌ ಹಾಕಿದ್ದಕ್ಕೆ ಬಂಧಿಸಿರುವ ಪ್ರಕರಣದಲ್ಲಿ ಆರೋಪಿಯೊಂದಿಗಿನ ಫೋಟೊವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕಿರುವ ಅಗತ್ಯವಿರಲಿಲ್ಲ. ಈ ಕುರಿತು ಆ ಇಬ್ಬರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆ ನಡಸುತ್ತೇವೆ ಎಂದು ಶ್ರೀನಿವಾಸಗೌಡರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ತನಿಖೆ ಮತ್ತು ಸಚಿವ ಸಿ.ಟಿ ರವಿಯವರ ನಡೆಯ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಸಾಮಾಜಿಕ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ” ಗೌರವಾನ್ವಿತ ಸಚಿವರಾದ ಸಿ ಟಿ ರವಿಯವರೇ, ನೀವು ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಮಂತ್ರಿಯಲ್ಲ. ಇಡೀ ರಾಜ್ಯಕ್ಕೆ ಮಂತ್ರಿ. ಮಂತ್ರಿಯಾಗಿ ಸಂವಿಧಾನಕ್ಕೆ ಬದ್ಧರಾಗಿರಬೇಕಾದುದು, ಕಾನೂನು ಆಧರಿಸಿದ ಆಡಳಿತವನ್ನು ಬೆಂಬಲಿಸಬೇಕಾದುದು ತಮ್ಮ ಆದ್ಯ ಕರ್ತವ್ಯ. ಜವಾಬ್ದಾರಿಯುತ ಸ್ಥಾನದಲ್ಲಿರುವ ತಾವು ಹೀಗೆ ಪೊಲೀಸರ ಕರ್ತವ್ಯದಲ್ಲಿ ಹಸ್ತಕ್ಷೇಪ ನಡೆಸುವುದು ತಪ್ಪಲ್ಲವೇ? ಇದು ತಪ್ಪು ಸಂದೇಶ ರವಾನಿಸುವುದಿಲ್ಲವೇ? ಇದು ಪೊಲೀಸರ ನೈತಿಕ ಬಲ ಕುಂದಿಸುವುದಿಲ್ಲವೇ? “ನಮ್ಮ ಕಾರ್ಯಕರ್ತರು” ಎಂಬ ನೆಲೆಯಲ್ಲಿ ನೀವು ಅಪರಾಧಿಗಳನ್ನು ರಕ್ಷಿಸಹೊರಟರೆ ಇನ್ನಷ್ಟು ಅಪರಾಧ ಎಸಗಲು ಅದು ನಿಮ್ಮ ಕಾರ್ಯಕರ್ತರಿಗೆ ಕುಮ್ಮಕ್ಕು ನೀಡುವುದಿಲ್ಲವೇ? ನಿಮ್ಮ ಕಾರ್ಯಕರ್ತರಿಗೂ ಇತರ ಕಾರ್ಯಕರ್ತರಿಗೂ ರಾಜ್ಯದಲ್ಲಿ ಬೇರೆ ಬೇರೆ ಕಾನೂನುಗಳಿವೆಯೇ? ಇಂತಹ ಕೆಲಸ ಮಾಡುವ ಮೊದಲು ರಾಜ್ಯದ ಒಟ್ಟು ಹಿತಾಸಕ್ತಿ ಮತ್ತು ದೂರಗಾಮಿ ಪರಿಣಾಮಗಳ ಹಿನ್ನೆಲೆಯಲ್ಲಿ ತಾವು ಎರಡೆರಡು ಬಾರಿ ಯೋಚಿಸಬೇಕಾಗಿ ವಿನಂತಿ” ಎಂದು ಫೇಸ್‌ಬುಕ್‌ನಲ್ಲಿ ಮನವಿ ಮಾಡಿದ್ದಾರೆ.

ಇಂತಹ ಕಷ್ಟಕಾಲದಲ್ಲಿ ವೈಯಕ್ತಿಕ ಸುರಕ್ಷತೆಗೆ ಸೂಕ್ತ ವ್ಯವಸ್ಥೆ ಇಲ್ಲದೆ ದುಡಿಯುತ್ತಿರುವವರು ಪೊಲೀಸರು. ಅವರ ಸ್ಥೈರ್ಯ ಕುಂದಿಸುವಂತಹ ಕೆಲಸವನ್ನು ಸರಕಾರದ ಮಂತ್ರಿಗಳೇ ಮಾಡುತ್ತಿದ್ದಾರೆ. ಈ ಟ್ವೀಟ್ ಮಾಡಿದ ಎರಡು ತಾಸಿನಲ್ಲೇ ಅಧಿಕಾರಿಗಳ ಮೇಲೆ ಕ್ರಮ ಆಗಿದೆ. ಒಂದು ಕೋಮಿನ ವಿರುದ್ಧ ಸುಳ್ಳು ಬರೆದು ಶಾಂತಿ ಕದಡುವವರಿಗೆ ಧೈರ್ಯ ತುಂಬುತ್ತಿದ್ದಾರೆ ಎಂದು ಪತ್ರಕರ್ತರಾದ ಜಿ.ಟಿ ಸತೀಶ್‌ರವರು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...