Homeಮುಖಪುಟಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ: ಸಿದ್ದರಾಮಯ್ಯ

ಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ: ಸಿದ್ದರಾಮಯ್ಯ

ಯೋಗೀಶ್ವರ್ ಕೋಟ್ಯಂತರ ರೂಪಾಯಿ ಸಾಲ ಮಾಡಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳುವ ಮೂಲಕ ಈವರೆಗಿನ ನಮ್ಮ ಆರೋಪಕ್ಕೆ ಪುರಾವೆ ಒದಗಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಆಪರೇಷನ್ ಕಮಲಕ್ಕೆ ಯೋಗೀಶ್ವರ್ ಕೋಟ್ಯಂತರ ರೂಪಾಯಿ ಸಾಲ ಮಾಡಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳುವ ಮೂಲಕ ಈವರೆಗಿನ ನಮ್ಮ ಆರೋಪಕ್ಕೆ ಪುರಾವೆ ಒದಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಪರೇಷನ್ ಕಮಲದ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಹಿರಂಗಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಪ್ರತಿಫಲಾಪೇಕ್ಷೆ ಇಲ್ಲದೆ ನಮ್ಮ ಶಾಸಕರು ಬಿಜೆಪಿ ಸೇರಿದ್ದರೆ ಯೋಗೀಶ್ವರ್ 9 ಕೋಟಿ ರೂಪಾಯಿ ಸಾಲ ಮಾಡುವ ಅಗತ್ಯವೇನಿತ್ತು? ಈ ಆರೋಪವನ್ನು ನಾವು ಮಾಡಿದ್ದರೆ ವಿರೋಧ ಪಕ್ಷಗಳು ಸುಳ್ಳು ಹೇಳುತ್ತಿವೆ ಎಂದು ನಿರಾಕರಿಸಬಹುದಿತ್ತು. ಅವರದ್ದೇ ಪಕ್ಷದ ಸಚಿವರು ಹೇಳಿದ್ದಾರಲ್ಲಾ, ಇದಕ್ಕೆ ಏನನ್ನುತ್ತಾರೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಸೇರಿದ ಕೆಲವರು ಬಾಯಿ ಬಡ್ಕೊತಿದ್ದಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ

“ರಾಜ್ಯದಲ್ಲಿ ಸರ್ಕಾರವೇ ಜೀವಂತವಾಗಿಲ್ಲ, ಇನ್ನು ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಮಾಡುವುದರಿಂದ ಜನರ ಮೇಲೆ ಯಾವ ಪರಿಣಾಮ ಬೀರಲು ಸಾಧ್ಯ? ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ, ಹೀಗಿರುವಾಗ ಅಭಿವೃದ್ಧಿ ಕೆಲಸಗಳು ದೂರದ ಮಾತು” ಎಂದು ಹೇಳಿದ್ದಾರೆ.

“ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಪಡೆಯುವುದು ಪ್ರತಿಯೊಬ್ಬ ಶಾಸಕನ ಹಕ್ಕಾಗಿರುವಾಗ ಬ್ಲಾಕ್‌ಮೇಲ್ ಮಾಡುವ ಅಗತ್ಯವೇನಿದೆ? ಜಮೀರ್ ಅಹ್ಮದ್ ಅವರು ಅನುದಾನ ನೀಡಿ ಮಾಡಿ ಅಂತ ಮನವಿ ಮಾಡಿದ್ದಾರೆ, ಅದಕ್ಕೆ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಆದೇಶಕ್ಕೂ, ಶಿಫಾರಸಿಗೂ ವ್ಯತ್ಯಾಸವಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ಚಾಮರಾಜಪೇಟೆ ಕ್ಷೇತ್ರಕ್ಕೆ ನಮ್ಮ ಪಕ್ಷದ ಶಾಸಕ ಜಮೀರ್ ಅಹ್ಮದ್ ಅವರು ಕೇಳಿದಷ್ಟು ಮುಖ್ಯಮಂತ್ರಿಗಳು ಅನುದಾನ ನೀಡಿದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಮಾತಿಗೆ ಅರ್ಥವಿರುತ್ತಿತ್ತು. ಮಂತ್ರಿಗಿರಿ ಕೈತಪ್ಪಿದ್ದರಿಂದ ಹತಾಶರಾಗಿ ಆಡಿರುವ ಮಾತುಗಳಿಗೆ ಹೆಚ್ಚು ಮಹತ್ವ ನೀಡುವ ಅಗತ್ಯವಿಲ್ಲ” ಎಂದಿದ್ದಾರೆ.

“ಕೃಷಿಗೆ ಮಾರಕವಾದ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಕಾಂಗ್ರೆಸ್ ಪಕ್ಷ ನಿನ್ನೆ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಸಂಕ್ರಾಂತಿ ಹಬ್ಬದ ಕಾರಣಕ್ಕೆ ನಾವು ನಿನ್ನೆ ಪ್ರತಿಭಟನೆ ಮಾಡಿಲ್ಲ, ಈ ತಿಂಗಳ 20 ನೇ ತಾರೀಖಿನಂದು ಪಕ್ಷದ ವತಿಯಿಂದ ’ರಾಜಭವನ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ” ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ರಾಜ್ಯದ ಬಫೂನ್‌ಗಳು: ಹೆಚ್‌. ವಿಶ್ವನಾಥ್‌‌ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...