Homeಮುಖಪುಟಅಜೇಯ ಎನ್ನುವ ಇಮೇಜ್ ಶಿಥಿಲವಾಗುತ್ತಿದೆ; ಸೇಡಿನ ಬದಲು ಬೆಂಕಿ ಆರಿಸುವ ಕೆಲಸ ಆಗಬೇಕಿದೆ ಈಗ..

ಅಜೇಯ ಎನ್ನುವ ಇಮೇಜ್ ಶಿಥಿಲವಾಗುತ್ತಿದೆ; ಸೇಡಿನ ಬದಲು ಬೆಂಕಿ ಆರಿಸುವ ಕೆಲಸ ಆಗಬೇಕಿದೆ ಈಗ..

- Advertisement -
- Advertisement -

ನರೇಂದ್ರ ಮೋದಿಯವರ ಆಡಳಿತವನ್ನು ಎರಡು ವರ್ಷ national public broadcasterನ ಮುಖ್ಯಸ್ಥನಾಗಿ ಹತ್ತಿರದಿಂದ ನೋಡುವ ಅವಕಾಶ ನನಗೆ ಬಂದಿತ್ತು.  ಇನ್ನು ಸಾಧ್ಯವೇ ಇಲ್ಲ ಅನ್ನಿಸಿ ರಾಜೀನಾಮೆ ಕೊಟ್ಟೆ. ಇಡೀ ಆಡಳಿತ ಯಂತ್ರವೇ ಶಿಥಿಲವಾಗಿ ಕುಸಿದು ಈಗ ಕಾಣುತ್ತಿರುವಂಥಾ ವಿಪತ್ತಿಗೆ ಆಹ್ವಾನ ನೀಡುವ ಪರಿಯನ್ನು ನಾನು ಹತ್ತಿರದಿಂದ ನೋಡಿದ್ದೇನೆ.

ಪರಿಕಲ್ಪನೆಯ ಮಟ್ಟದಲ್ಲಿ ವ್ಯಕ್ತಿಗತ ನಿರ್ವಹಣೆಯ ಮೊಹರುಳ್ಳ ಅಮೆರಿಕ ಅಧ್ಯಕ್ಷೀಯ ಮಾದರಿಯನ್ನು ಬ್ರಿಟಿಶ್‌ ಮಾದರಿ ಇರುವ ನಮ್ಮಲ್ಲಿ  ಹೇರಲಾಯಿತು. ಅಗಾಧ ವೈವಿಧ್ಯತೆಯುಳ್ಳ ಈ ದೇಶವನ್ನು ಫೆಡರಲ್‌ ಸಮತೋಲನದ ಮೂಲಕವಷ್ಟೇ ನಿರ್ವಹಿಸಬಹುದು ಎಂಬುದನ್ನು ಅರಿಯಲು ಬಹಳ ಐಕ್ಯೂ ಬೇಡ. ಅದು ಬಿಟ್ಟು ಏಕವ್ಯಕ್ತಿ ಶೈಲಿಯನ್ನು ಹೇರಿದರೆ ಅಧಿಕಾರ-ಜವಾಬ್ದಾರಿಯ ಉತ್ತರದಾಯಿತ್ವದ ಮಾದರಿ ಕುಸಿದು ಬೀಳುತ್ತದೆ.

ಪೇಲವ ಸರಕಾರ ಕಂಡು ಬೇಜಾರಾಗಿದ್ದ ಜನರು  ನಿರ್ಧಾರ ತೆಗೆದುಕೊಳ್ಳುವ ನಾಯಕತ್ವ ಕಂಡು ಉತ್ಸಾಹ ಪಟ್ಟಿದ್ದಾದ ಬಳಿಕ ಇನ್ನೊಂದು ವಾಸ್ತವ ತಲೆ ಎತ್ತಿತು. ಮೋದಿ ತಾವು ಸಂಶಯಿಸುವ ಎಲ್ಲಾ ಅಧಿಕಾರವನ್ನೂ ಕೇಂದ್ರೀಕರಿಸುವ ಮತ್ತು ಬೇಷರತ್ತು ವಿಧೇಯತೆಯನ್ನು ಬೇಡುವ ಪ್ರವೃತ್ತಿಯನ್ನು  ತ್ಯಜಿಸಿಯಾರು ಎಂಬ ಆಶಾ ಭಾವನೆಯಲ್ಲಿ ಹಿರಿಯ ಅಧಿಕಾರಿಗಳಿದ್ದರು. ಅಂತರ್‌ ಸಚಿವಾಲಯಗಳ ಕ್ಯಾತೆ ಜಗಳಕ್ಕೆ ಅವರು ಅಂತ್ಯ ಹಾಡಿದರೂ ಮೂಲ ಪ್ರವೃತ್ತಿಗಳೇನೂ ಬದಲಾಗಲಿಲ್ಲ. ಯಾವುದೇ ಮಾಹಿತಿಯನ್ನು ಸಾದರಪಡಿಸಲು ಅವರು ಕಾರ್ಯದರ್ಶಿಗಳನ್ನು ಕರೆಸುವ ತೀವ್ರತೆ ತೀರಾ ವಿಚಿತ್ರವಾಗಿತ್ತು. ಯಾವ ಪ್ರಧಾನಿಯೂ ಈ ರೀತಿಯ ಮೈಕ್ರೋ ಮ್ಯಾನೇಜ್‌ ಮೆಂಟ್‌ ಮಾಡಿರಲಿಲ್ಲ.

ತನ್ನ ಸಚಿವರನ್ನು ನಿರ್ಲಕ್ಷಿಸಿ ಎಲ್ಲವನ್ನೂ ನಿಯಂತ್ರಿಸುವ ಅವರ ಚಟ ಜಾಹೀರಾಗಿತ್ತು. ಸದಾ ಕೆಕ್ಕರಗಣ್ಣಿಂದ ತನ್ನ ಕಾರ್ಯದರ್ಶಿಗಳನ್ನು ನೋಡುವ ಪರಿಪಾಠದಿಂದಾಗಿ ಅಧಿಕಾರಿಗಳು ಭೀತರಾಗತೊಡಗಿದರು. ಇದರೊಂದಿಗೇ ತನ್ನ ಪ್ರಿಯ ಅಧಿಕಾರಿಗಳ ಮೂಲಕ ಆಡಳಿತ ನಿರ್ವಹಿಸತೊಡಗಿದರು. ಇದು ಇತರ ದಕ್ಷ ಪ್ರತಿಭಾವಂತ  ಅಧಿಕಾರಿಗಳ ಮನೋಬಲವನ್ನೇ ಕುಗ್ಗಿಸಿತು. ಇಂಥಾ ಅಧಿಕಾರಿಗಳು ತೆವಳಿ ಹತ್ತಿರವಾಗುವ ಕೆಲಸ ಮಾಡಲಿಲ್ಲ. ಮಿಂಚಿನ ವರ್ಗಾವಣೆಗಳು ನಿತ್ಯದ ಸಂಗತಿಗಳಾದವು. ಪ್ರಧಾನ ಮಂತ್ರಿಗಳ ಕಾರ್ಯಾಲಯವು ಎಲ್ಲಾ ನೇಮಕಾತಿಗಳ ನಿಯಂತ್ರಣ ಹೊಂದಿತ್ತು. ಆರೆಸ್ಸೆಸ್ಸಿನಿಂದ ಮಾಹಿತಿ ಪಡೆದರೂ ರಾಷ್ಟ್ರೀಯ ಭದ್ರತಾ ಸಂಸ್ಥೆಯ  ಮುಖ್ಯಸ್ಥರೇ ಹೆಚ್ಚು ಪ್ರಭಾವಿಯಾದರು. ಎಷ್ಟೋ ಸಂಸ್ಥೆಗಳು  ವರ್ಷಗಟ್ಟಲೆ ನೇಮಕಾತಿ ಇಲ್ಲದೇ  ಒದ್ದಾಡಿದವು. ಅಧಿಕಾರಿಗಳು, ಉದ್ಯಮಪತಿಗಳು ನಕಲಿ ವಿಧೇಯತೆ ಕಲಿತರು. ಸಂಘಿಗಳಿಗೆ ಹತ್ತಿರವಾಗುವುದನ್ನೂ ಕಲಿತರು.

ಆದರೆ ಯಾವ ಸರಕಾರಕ್ಕೂ ತನ್ನ ಆಯ್ಕೆಯ ಬೆರಳೆಣಿಕೆಯ ಮಂದಿಯ ಮೂಲಕ ಆಡಳಿತ ನಡೆಸುವುದು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳು  ಭಯಭೀತರಾಗಿ ತಮ್ಮ ಜೀವಮಾನದ ಅನುಭವಗಳನ್ನು ಹಂಚಿಕೊಳ್ಳುವುದನ್ನು ನಿಲ್ಲಿಸಿದರು. ದಕ್ಷ ಸಚಿವರನ್ನು ತಿರಸ್ಕಾರದಿಂದ ನೋಡುವ ಪರಿಪಾಠ ಆರಂಭವಾಯಿತು. ಪರಿಣಾಮವಾಗಿ  ಭಾರತದ ಮಟ್ಟ ಅಂತಾರಾಷ್ಟ್ರೀಯವಾಗಿ ಎಲ್ಲಾ ಮಾನದಂಡಗಳಲ್ಲೂ ಕುಸಿಯಲಾರಂಭಿಸಿತು. ಅಂಕಿ-ಸಂಖ್ಯೆಗಳನ್ನು ತಿರುಚುವುದು ಶುರುವಾಯಿತು. ಅಧಿಕಾರಿಗಳಿಗೆ ತಿರುಳಿನ ಬದಲು ಪ್ರದರ್ಶನವೇ ಮುಖ್ಯ ಎಂದು ಗೊತ್ತಾಯಿತು!

ಅಸ್ತಿತ್ವದಲ್ಲಿದ್ದ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳನ್ನು  ಪ್ರಧಾನ ಮಂತ್ರಿ ಯೋಜನೆ ಎಂದು ಪುನರ್‍ನಾಮಕರಣಗೊಳಿಸಲಾಯಿತು. ದುಬಾರಿ ಜಾಹೀರಾತು ಮಂದಿ ಗಮನ ಸೆಳೆಯುವ ಸಂಕ್ಷಿಪ್ತಾಕ್ಷರಗಳ ಹೆಸರು ನೀಡಿದರು. ಪ್ರಧಾನಿಯೂ ಈ ರೀತಿಯ ಅಕ್ಷರಗಳ ಜೊತೆ ಆಟವಾಡುವುದನ್ನು ಇಷ್ಟಪಟ್ಟರು. ಕೆಲಸವಾಗಲಿಲ್ಲವೆಂದಲ್ಲ. ಆದರೆ ಕಹಿಸತ್ಯವನ್ನು ವರದಿಮಾಡುವುದು ಆತ್ಮಹತ್ಯಾಕಾರಿಯಾಗಿತ್ತು. ನೋಟು ಅಮಾನ್ಯದಂಥಾ ನಿರ್ಧಾರಗಳನ್ನು ಗುಪ್ತವಾಗಿ ನಿರ್ಧರಿಸಿದ್ದಾಯಿತು. ಇದಕ್ಕೆ ಯಾರೂ ತಯಾರಿರಲಿಲ್ಲ. ಯಾವ ಚರ್ಚೆಯೂ ನಡೆದಿರಲಿಲ್ಲ. ನಾಯಕನೋ ನಾಟಕೀಯ ಘೋಷಣೆಗಳ ಮೂಲಕ ದೇಶವನ್ನು ಸ್ತಂಭೀಭೂತಗೊಳಿಸುವ ಖಯಾಲಿಗೆ ಬಿದ್ದಿದ್ದು ಸ್ಪಷ್ಟವಿತ್ತು.

ಆದ್ದರಿಂದಲೇ ಕಳೆದ ವರ್ಷ ಕೋವಿಡ್ ಸ್ಫೋಟವಾದಾಗ ಇವೆಂಟ್‌ ಮ್ಯಾನೆಜ್‌ ಮೆಂಟ್‌ ಮತ್ತು ಇಮೇಜ್‌ ವರ್ಧನೆ ಮೊದಲ ಆದ್ಯತೆಯಾಗಿತ್ತು. ತಜ್ಞರ ಸಲಹೆ, ಉಳಿದವರ ಅನುಭವ ಪಡೆಯುವುದು, ಪ್ಲಾನಿಂಗ್‌, ಅಗತ್ಯ ವಸ್ತುಗಳ ವ್ಯವಸ್ಥೆಗಳೆಲ್ಲಾ ಅಮುಖ್ಯವೆನಿಸಿತು. ವಿಪರೀತ ಅಧಿಕಾರ ಕೇಂದ್ರೀಕರಣದಿಂದಾಗಿ ಮಾಸ್ಕ್‌ , ಪಿಪಿಇ ಕಿಟ್‌ ಉತ್ಪಾದನೆಯೂ ಪ್ರಧಾನಿಯೇ ನಿರ್ಧರಿಸುವಂತಾಯಿತು. ಕೋವಿಡ್‌ ಪ್ರಕರಣಗಳು ತೀರಾ ಕಡಿಮೆ ಇದ್ದಾಗ  ನಾಟಕೀಯವಾಗಿ ದಿಢೀರನೆ ಲಾಕ್‌ ಡೌನ್ ಹೇರಿದ್ದು ಅನಗತ್ಯವಾಗಿತ್ತು. ಆದರೆ ಅದು ಅಧಿಕಾರದ  ಮಟ್ಟವನ್ನು ತೋರಿಸಿಕೊಟ್ಟಿತ್ತು.

ಆಗಲೇ ಬಾಗಿದ್ದ ದೇಶದ ಆರ್ಥಿಕತೆಯ ಬೆನ್ನೆಲುಬನ್ನೇ ಇದು ಮುರಿಯಿತು. ಗೃಹ ಮಂತ್ರಿ ಮೋದಿಯ ಅತ್ಯಂತ ನಂಬಿಕಸ್ಥ ಬಂಟ ಆಗಿದ್ದರೂ ಅವರ ಸಾಮರ್ಥ್ಯಕ್ಕೆ ಮೀರಿದ ನಿರ್ಧಾರಗಳನ್ನೂ ಗೃಹ ಸಚಿವಾಲಯವೇ ತೆಗೆದುಕೊಂಡಿತು. ಆರೋಗ್ಯ ಸಚಿವಾಲಯ ಅಲ್ಲ! ಯಾವುದೇ ಸಮಾಲೋಚನೆ ಇಲ್ಲದೇ ರೆಗ್ಯುಲರ್‌ ಆಗಿ ಫರ್ಮಾನುಗಳನ್ನು ಹೊರಡಿಸಲಾಯಿತು. ಪರಿಹಾರ ಕಾರ್ಯ ಎಂಬುದು ಭಾರತದ ಆಡಳಿತದ ಅವಿಭಾಜ್ಯ ಅಂಗ.  ಆದರೆ ಈ  ಇಬ್ಬರು ನಾಯಕರು ಸ್ಮಶಾನ ಮೌನ ವಹಿಸಿದ ಕಾರಣ ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಯಾವ ಪರಿಹಾರವೂ ಸರಿಯಾಗಿ ದೊರಕಲಿಲ್ಲ.

ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಕೊರೊನಾ ಔಷಧಿಯ ತುರ್ತು ಬಳಕೆಗೆ ಅನುಮೋದಿಸಿದ ಡಿಸಿಜಿಐ! | NaanuGauri

ವಿವೇಕವಿರುವ ಎಲ್ಲಾ ದೇಶಗಳೂ ಲಸಿಕೆ ಮತ್ತು ಆಮ್ಲಜನಕದ ಅಗತ್ಯವನ್ನು ಲೆಕ್ಕ ಹಾಕಿ ಅದರ ಉತ್ಪಾದನೆ, ಆಮದು, ಹಂಚಿಕೆ  ಕುರಿತ ಎಲ್ಲವನ್ನೂ ಹಲವಾರು ತಿಂಗಳ ಮೊದಲೇ ಯೋಜನೆ ಸಿದ್ಧಪಡಿಸಿಕೊಂಡಿದ್ದವು.  ಆದರೆ ನಮ್ಮ ಸರಕಾರ ಬೆಲೆ ನಿಗದಿ, ಪೂರೈಕೆ, ಅಂತಾರಾಷ್ಟ್ರೀಯ  ಜವಾಬ್ದಾರಿ ಇತ್ಯಾದಿ  ಬಗ್ಗೆ ಈಗ್ಗೆ ಒಂದೆರಡು ತಿಂಗಳ ಹಿಂದೆ ಎಚ್ಚರವಾಗಿದ್ದು. ಬೇಡಿಕೆ-ಪೂರೈಕೆಯಂಥಾ ಸರಳ ಲೆಕ್ಕಾಚಾರವೂ ಅರ್ಥವಾಗದ ಸ್ಥಿತಿಯಲ್ಲಿ ಆಡಳಿತವಿತ್ತು.  ತಜ್ಞರ ಸಲಹೆಗಳಿಗೆ ಕಡಿಮೆ ಆದ್ಯತೆ ನೀಡಲಾಯಿತು. ಭಾರತ ಕೋವಿಡ್‌ ಯುದ್ಧ ಗೆದ್ದಿದೆ, ಇದೀಗ ಭಾರತ  ಜಗತ್ತಿನ ಫಾರ್ಮಸಿಯಾಗಿದೆ ಎಂದು ಬೀಗಿದರು.

ಅಮೂಲ್ಯ ಲಸಿಕೆ ಮತ್ತು ಆಕ್ಸಿಜನ್‍ಅನ್ನು ರಫ್ತು ಮಾಡಲಾಯಿತು. ಕೊನೆಗೆ ಕೋಟಿಗಟ್ಟಲೆ ಮಂದಿ ಭಾಗವಹಿಸಲು ಬಿಟ್ಟ ಕುಂಭ ಮೇಳವೇ ದೇವರ ಆಗ್ರಹಕ್ಕೆ ಕಾರಣವಾಯಿತು. ಎರಡನೇ ಅಲೆ ನಮ್ಮನ್ನು ಅಪ್ಪಳಿಸಲು ಕಾಯುತ್ತಿದ್ದರೆ ಮೋದಿ ಮತ್ತು ಶಾ ಇದಕ್ಕೆ ಗಂಭೀರವಾಗಿ ಪ್ರತಿಕ್ರಿಯಿಸಲು ಸಾಧ್ಯವೇ ಇಲ್ಲದಂತೆ ಚುನಾವಣಾ ರ್ಯಾಲಿಗಳಲ್ಲಿ ಬಿಜಿಯಾಗಿದ್ದರು. ಕಪಿಮುಷ್ಠಿಯ ಕೇಂದ್ರೀಕೃತ ಸರಕಾರ ಕುಸಿಯಿತು. ಜವಾಬ್ದಾರಿ ಹೊರಬೇಕಾದವರು ತಲೆ ತಪ್ಪಿಸಿಕೊಂಡರು. ಅಭೂತಪೂರ್ವ ಅರಾಜಕತೆ ತಾಂಡವವಾಡುತ್ತಿದೆ.  ಸಾವು ಮತ್ತು ದುರಂತದ ಚಿತ್ರಗಳನ್ನು ಪ್ರಕಟಿಸಿ ಅಂತಾರಾಷ್ಟ್ರೀಯ ಮಾಧ್ಯಮಗಳು ಮೋದಿಯನ್ನು ಹುರಿದು ಮುಕ್ಕುತ್ತಿವೆ.

ಅಜೇಯ ಎನ್ನುವ ಇಮೇಜ್‌ ಶಿಥಿಲವಾಗುತ್ತಿದೆ. ಆದರೆ ಈಗ ಸೇಡಿನ ಬದಲು ಬೆಂಕಿ ಆರಿಸುವ ಕೆಲಸ ಆಗಬೇಕಿದೆ.

  • ಜವಹರ್‌ ಸರಕಾರ್

‌ ಸಂಸ್ಕೃತಿ ಇಲಾಖೆಯ ನಿವೃತ್ತ ಕಾರ್ಯದರ್ಶಿ ಮತ್ತು ಪ್ರಸಾರ ಭಾರತಿಯ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ

(ಕನ್ನಡಕ್ಕೆ): ಕೆ ಪಿ ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...