Homeಮುಖಪುಟವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

- Advertisement -
- Advertisement -

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಹ್ವಾನಿಸಿರುವುದಕ್ಕೆ ಪ್ರಗತಿಪರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಜುಲೈ 22ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವವಾಣಿ ಪ್ರಕಟಿಸಿರುವ ಆರು ಪುಸ್ತಕಗಳು ಬಿಡುಗಡೆಯಾಗುತ್ತಿವೆ. ಈ ಪುಸ್ತಕಗಳ ಲೋಕಾರ್ಪಣೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದು, ಆಹ್ವಾನ ಪತ್ರಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಶ್ವೇಶ್ವರ ಭಟ್ ಪತ್ರಕರ್ತರಾಗಿ ಕೆಲಸ ಮಾಡುವುದಕ್ಕಿಂತಲೂ ಮಹಿಳೆಯರನ್ನು ಹೀಗಳೆಯುತ್ತಾ, ಸಾವುಗಳನ್ನು ಸಂಭ್ರಮಿಸುತ್ತಾ ವಿಕೃತತೆ ಮೆರೆದಿದ್ದಾರೆ. ತಮ್ಮ ಲೇಖನದಲ್ಲಿ ರಾಷ್ಟ್ರಪತಿ ಮುರ್ಮುರವರ ಬಣ್ಣವನ್ನು ಹೀಯಾಳಿಸಿ ಜನಾಂಗೀಯತೆ ಮೆರೆದಿದ್ದಾರೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯನ್ನು ಸಮರ್ಥಿಸಿದ್ದಾರೆ. ಅಂತಹ ವ್ಯಕ್ತಿಯ ಪುಸ್ತಕಗಳನ್ನು ಜಾತ್ಯಾತೀತರೆನಿಸಿಕೊಂಡ ಸಿದ್ದರಾಮಯ್ಯನವರು ಬಿಡುಗಡೆ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆ ಜೋರಾಗಿ ಕೇಳಿಬಂದಿದೆ.

ವಿಶ್ವೇಶ್ವರ್ ಭಟ್ ಕೋಮುವಾದಿ, ಜಾತೀವಾದಿ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಪತ್ರಕರ್ತರಾಗಿದ್ದಾರೆ. ಜೀವಪರ ವ್ಯಕ್ತಿಗಳ ವಿರುದ್ಧ ಸದಾ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಟ್ಟ ಪದಗಳಿಂದ ಅವಹೇಳನ ಮಾಡಿದ್ದರೆ. ಇದೀಗ ಸಮಾಜವಾದಿ ಚಿಂತನೆಗಳಿಂದಲೇ ನಾಡಿನಾದ್ಯಂತ ಹೆಸರು ಗಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದಿ ಪತ್ರಕರ್ತರ ಕಾರ್ಯಕ್ರಮಕ್ಕೆ ಹೋಗುತ್ತಾರೆ ಎನ್ನುವ ವಿಚಾರಕ್ಕೆ ನಾಡಿನಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ.

ಲೇಖಕ ರಂಜಾನ್ ದರ್ಗಾ ಅವರು ‘ಸಿದ್ದರಾಮಯ್ಯನವರ ಗಮನಕ್ಕೆ’ ಎಂದು ಬರೆದ ಬರಹವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾಗಿದೆ. ”ನೆಹರೂ ಅವರು ಸ್ವಿಜರ್‌ಲ್ಯಾಂಡ್‌ನಿಂದ ಭಾರತಕ್ಕೆ ಬರುವಾಗ ರೊಮ್ ಏರ್‌ಪೋರ್ಟ್‌ನಲ್ಲಿ ಇಳಿದು ಪ್ರಯಾಣ ಮುಂದುವರಿಸಬೇಕಿತ್ತು. ಆ ಸಂದರ್ಭದಲ್ಲಿ ಇಟಲಿಯ ಫ್ಯಾಸಿಸ್ಟ್ ಮುಸೋಲಿನಿ ಭೇಟಿಯಾಗ ಬಯಸಿದ. ನೆಹರೂ ಅವರು ಒಪ್ಪಲಿಲ್ಲ. ಬರಿ ಕೈ ಕುಲುಕಲು ಬರುವುದಾಗಿ ಮತ್ತೆ ಹೇಳಿಕಳಿಸಿದ. ನೆಹರೂ ಅದಕ್ಕೂ ಒಪ್ಪಲಿಲ್ಲ. ಒಬ್ಬ ಫ್ಯಾಸಿಸ್ಟನ ಕೈಕುಲುಕಿದರೆ ಅದು ಜಗತ್ತಿನ ಮೇಲೆ ಯಾವ ದುಷ್ಪರಿಣಾಮ ಬೀರಬಹುದು ಎಂಬ ಪರಿಜ್ಞಾನ ನೆಹರೂ ಅವರಿಗೆ ಇತ್ತು” ಎಂದು ಬರೆಯುವ ಮೂಲಕ ಸಿದ್ದರಾಮಯ್ಯನವರ ಯಾರ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ ಎಂದು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ನಿಮ್ಮನ್ನು ಯಾರೆಷ್ಟೇ ಬೈದರೂ ನಿಮ್ಮ ಸೆಕ್ಯುಲರ್ ಕಮಿಟ್‌ಮೆಂಟ್ ಬಗ್ಗೆ ನಿಮ್ಮ ವಿರೋಧಿಗಳಿಗೂ ಒಳಗೊಳಗೇ ಮೆಚ್ಚುಗೆಯಿತ್ತು. ಇಂದು ಭಟ್ಟನ ಸೈದ್ಧಾಂತಿಕ ಮಿತ್ರರೂ ಸಿದ್ದರಾಮಯ್ಯನವರೂ ಇಷ್ಟೇನಾ ಎಂದು ಆಡಿಕೊಳ್ಳುವಂತಾಗಿದೆ ಸರ್. ನಿಮ್ಮ ಘನತೆಗಿಂತ ಕೆಳಮಟ್ಟಕ್ಕಿಳಿಯದಿರಿ ಪ್ಲೀಸ್ ಎಂದು ಲೇಖಕ ಇಸ್ಮತ್ ಪಜೀರ್ ಮನವಿ ಮಾಡಿದ್ದಾರೆ.

ಸಿದ್ಧರಾಮಯ್ಯನವರೇ, ಗೆದ್ದ ಮೇಲೆ ಊರಾಳುಗಳ ಹಂಗ್ಯಾಕೆ ಅನ್ನುವ ಅಟಿಟ್ಯೂಡ್ ಬಿಟ್ಟುಬಿಡಿ. ಇಂಥ ಅಪವಿತ್ರ ಒಳವ್ಯವಹಾರಗಳು ನಿಮ್ಮನ್ನು ಗೆಲ್ಲಿಸಿಲ್ಲ. ತೀರಾ ತೀರಾ ನಗಣ್ಯವೆನಿಸುವ ಪುಟ್ಟ ಪುಟ್ಟ ಫೇಸ್‌ಬುಕ್‌ ಅಳಿಲುಗಳ ಪ್ರಯತ್ನಗಳು ಕೂಡಾ ನಿಮ್ಮ ಗೆಲುವಿನ ಹಿಂದಿದೆ ಅನ್ನುವುದನ್ನು ಮರೆಯಬಾರದು. ನಿಮ್ಮ ಗೆಲುವಿನ ಕನಸು ಹೊತ್ತಿದ್ದ ಇದೇ ‘ಫೇಸ್‌ಬುಕ್‌ ಜಾಣ’ರೆಲ್ಲ ಈಗ ಕಾಲದ ಕಸದಬುಟ್ಟಿಯ ನಿಷ್ಪ್ರಯೋಜಕ ಸೊತ್ತುಗಳನ್ನಿಸಿಕೊಳ್ಳುವುದು ನಿಮಗೆ ಮುಂದೆ ದುಬಾರಿಯಾದೀತು. ನಿಮ್ಮ ಸುತ್ತಮುತ್ತಲಿನ ಕೊಂಬು ಕೋಡುಗಳ ಬುದ್ಧಿವಂತರ, ಬು.ಜೀ.ವೇಷದ ಪುಢಾರಿಗಳ ನೆತ್ತಿಗಣ್ಣುಗಳು ನಿಮ್ಮ ಪಾದದಡಿಯ ಹಸುರು ಹೂವುಗಳನ್ನು ಗಮನಿಸದಂತೆ ದಾರಿತಪ್ಪಿಸುತ್ತವೆ. ನಮಗೆ ನಿಮ್ಮ ಸರಕಾರದ ಯಾವ ಪ್ರಯೋಜನಗಳೂ ಬೇಡ. ವಿಚಾರಬದ್ಧತೆಯ ಸಾತ್ವಿಕ ಸಿಟ್ಟಿನ ಜೆಂಟಲ್ ಮ್ಯಾನ್ ನಡಿಗೆ ಬೇಕಷ್ಟೆ. ಅಷ್ಟೇ ಅಷ್ಟೇ! ಎಂದು ಕಾರ್ಟೂನಿಷ್ಟ್ ದಿನೇಶ್ ಕುಕ್ಕಜಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಯರ್ ಸಿದ್ದು…
ನೀವು ಬಿಡುಗಡೆ ಮಾಡುತ್ತಿರುವುದು ಇಂತಹ
ವರ್ಣಶ್ರೇಷ್ಠತೆಯ ವ್ಯಸನಿ..ಜನಾಂಗೀಯವಾದಿ ಬರೆದಿರುವ ಪುಸ್ತಕಗಳನ್ನ…
ಒಮ್ಮೆ ಯೋಚಿಸಿ..ನಮ್ಮನ್ನ ಅವಮಾನಿಸಬೇಡಿ ಎಂದು ತೇಜ ಯಾಲಕ್ಕಯ್ಯನವರು ಅಭಿಪ್ರಾಯಪಟ್ಟಿದ್ದಾರೆ.

“ಸಿದ್ದರಾಮಯ್ಯನವರು ತಮ್ಮ ಸಿದ್ದಾಂತ ನಂಬಿಕೆಗಳನ್ನು ಬದಲಾಯಿಸಿಕೊಂಡುಬಿಡಬಹುದು ಎಂಬ ಹೆದರಿಕೆ ಯಾರಿಗೂ ಇಲ್ಲ. ವಿಷಜಂತುಗಳಿಗೆ ಮಾನ್ಯತೆ ದೊರೆತು ಮತ್ತಷ್ಟು ವಿಷ ಹಂಚುತ್ತವೆ ಸಮಾಜದಲ್ಲಿ ಎಂಬ ಕಾಳಜಿ. ಸಿದ್ದರಾಮಯ್ಯನವರನ್ನು ಯಾರೂ ವಿರೋಧಿಸುತ್ತಿಲ್ಲ. ಸಿದ್ದರಾಮಯ್ಯನವರಿಗೆ ಬುದ್ದಿ ಹೇಳೋದು ಅನ್ನೋಕಿಂತ, ಸಿದ್ದರಾಮಯ್ಯನವರು ಮತ್ತು ಆ ವ್ಯಕ್ತಿಯ ಒಡನಾಟ ಎಲ್ಲರಿಗೂ ತಿಳಿದಿರುವುದರಿಂದ ಈಗ ಮುಖ್ಯಮಂತ್ರಿಗಳು ಆ ಸಮಾರಂಭಕ್ಕೆ ಹೋಗಬಾರದು ಎಂಬ ಕಾಳಜಿ” ಎಂದು ಪರಮೇಶ್ವರ ಗುರುಸ್ವಾಮಿಯವರು ಅಭಿಪ್ರಾಯಪಟ್ಟಿದ್ದಾರೆ.

ಸಮರಸೇನಾನಿ, ಸಮಾಜವಾದಿ ಸಿದ್ದರಾಮಯ್ಯನವರು ತಮ್ಮ ಕನ್ನಡಕ ಹಾಕಿಕೊಂಡು ಮತ್ತೊಮ್ಮೆ ಮಗದೊಮ್ಮೆ ಇಂತಹ ಸುಳ್ಳು ಸುದ್ದಿ ಹಬ್ಬಿಸಿದ್ದವರು ಯಾರು ಅಂತ ನೋಡಲಿ….
ಇಂತಹವರ ಜೊತೆಗೆ ಬುಲ್ಲಿ ಬುಲ್ಲಿ ಆಡಲು ನಿಂತಿದ್ದಾರೆ ಅಂದರೆ ಏನು ಹೇಳೋದು ಪ್ರೆಂಡ್ಸ…. ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸರ್ವಜನಾಂಗದ ಶಾಂತಿಯ ತೋಟ’ದ ಮರಗಳ ಬೇರುಗಳಿಗೆ ನಿಧಾನವಿಷ ಇಕ್ಕುವ ಮೂಲಕ ರಾಜ್ಯದ ಸಾಮರಸ್ಯಕ್ಕೆ ಕೊಳ್ಳಿ ಹಚ್ಚುವುದನ್ನೇ ಹೊಸ ಶೈಲಿಯ ಪತ್ರಿಕೋದ್ಯಮ ಎಂದು ಬಿಂಬಿಸಿದವರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೋದರೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿದ್ದ ಎಲ್ಲಕ್ಕಿಂತ ಮುಖ್ಯ ‘ಗ್ಯಾರಂಟಿ’ಯ ಭರವಸೆಗೆ ಅವರೇ ಬೆಲೆ ಕೊಡುವುದಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಕಾರ್ಟೂನಿಸ್ಟ್ ಪಿ.ಮಹಮ್ಮದ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯನವರೆ ನೀವು ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋದರೆ ನೀವು ಕೂಡ ಇಸ್ಲಾಮೋಫೋಬಿಯಾ, ಜಾತಿವಾದಿ ಮತ್ತು ಸ್ತ್ರೀದ್ವೇಷದ ನಡವಳಿಕೆಯನ್ನು ಅನುಮೋದಿಸುತ್ತಿದ್ದೀರಿ ಎಂದರ್ಥ. ಹಾಗಾಗಿ ಕೂಡಲೇ ಹೋಗುವುದಿಲ್ಲ ಎಂದು ಘೋಷಿಸಿ ಎಂದು ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...