Homeಮುಖಪುಟವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

- Advertisement -
- Advertisement -

ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಹ್ವಾನಿಸಿರುವುದಕ್ಕೆ ಪ್ರಗತಿಪರ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಜುಲೈ 22ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವವಾಣಿ ಪ್ರಕಟಿಸಿರುವ ಆರು ಪುಸ್ತಕಗಳು ಬಿಡುಗಡೆಯಾಗುತ್ತಿವೆ. ಈ ಪುಸ್ತಕಗಳ ಲೋಕಾರ್ಪಣೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದು, ಆಹ್ವಾನ ಪತ್ರಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಶ್ವೇಶ್ವರ ಭಟ್ ಪತ್ರಕರ್ತರಾಗಿ ಕೆಲಸ ಮಾಡುವುದಕ್ಕಿಂತಲೂ ಮಹಿಳೆಯರನ್ನು ಹೀಗಳೆಯುತ್ತಾ, ಸಾವುಗಳನ್ನು ಸಂಭ್ರಮಿಸುತ್ತಾ ವಿಕೃತತೆ ಮೆರೆದಿದ್ದಾರೆ. ತಮ್ಮ ಲೇಖನದಲ್ಲಿ ರಾಷ್ಟ್ರಪತಿ ಮುರ್ಮುರವರ ಬಣ್ಣವನ್ನು ಹೀಯಾಳಿಸಿ ಜನಾಂಗೀಯತೆ ಮೆರೆದಿದ್ದಾರೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯನ್ನು ಸಮರ್ಥಿಸಿದ್ದಾರೆ. ಅಂತಹ ವ್ಯಕ್ತಿಯ ಪುಸ್ತಕಗಳನ್ನು ಜಾತ್ಯಾತೀತರೆನಿಸಿಕೊಂಡ ಸಿದ್ದರಾಮಯ್ಯನವರು ಬಿಡುಗಡೆ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆ ಜೋರಾಗಿ ಕೇಳಿಬಂದಿದೆ.

ವಿಶ್ವೇಶ್ವರ್ ಭಟ್ ಕೋಮುವಾದಿ, ಜಾತೀವಾದಿ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಪತ್ರಕರ್ತರಾಗಿದ್ದಾರೆ. ಜೀವಪರ ವ್ಯಕ್ತಿಗಳ ವಿರುದ್ಧ ಸದಾ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಟ್ಟ ಪದಗಳಿಂದ ಅವಹೇಳನ ಮಾಡಿದ್ದರೆ. ಇದೀಗ ಸಮಾಜವಾದಿ ಚಿಂತನೆಗಳಿಂದಲೇ ನಾಡಿನಾದ್ಯಂತ ಹೆಸರು ಗಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದಿ ಪತ್ರಕರ್ತರ ಕಾರ್ಯಕ್ರಮಕ್ಕೆ ಹೋಗುತ್ತಾರೆ ಎನ್ನುವ ವಿಚಾರಕ್ಕೆ ನಾಡಿನಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ.

ಲೇಖಕ ರಂಜಾನ್ ದರ್ಗಾ ಅವರು ‘ಸಿದ್ದರಾಮಯ್ಯನವರ ಗಮನಕ್ಕೆ’ ಎಂದು ಬರೆದ ಬರಹವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾಗಿದೆ. ”ನೆಹರೂ ಅವರು ಸ್ವಿಜರ್‌ಲ್ಯಾಂಡ್‌ನಿಂದ ಭಾರತಕ್ಕೆ ಬರುವಾಗ ರೊಮ್ ಏರ್‌ಪೋರ್ಟ್‌ನಲ್ಲಿ ಇಳಿದು ಪ್ರಯಾಣ ಮುಂದುವರಿಸಬೇಕಿತ್ತು. ಆ ಸಂದರ್ಭದಲ್ಲಿ ಇಟಲಿಯ ಫ್ಯಾಸಿಸ್ಟ್ ಮುಸೋಲಿನಿ ಭೇಟಿಯಾಗ ಬಯಸಿದ. ನೆಹರೂ ಅವರು ಒಪ್ಪಲಿಲ್ಲ. ಬರಿ ಕೈ ಕುಲುಕಲು ಬರುವುದಾಗಿ ಮತ್ತೆ ಹೇಳಿಕಳಿಸಿದ. ನೆಹರೂ ಅದಕ್ಕೂ ಒಪ್ಪಲಿಲ್ಲ. ಒಬ್ಬ ಫ್ಯಾಸಿಸ್ಟನ ಕೈಕುಲುಕಿದರೆ ಅದು ಜಗತ್ತಿನ ಮೇಲೆ ಯಾವ ದುಷ್ಪರಿಣಾಮ ಬೀರಬಹುದು ಎಂಬ ಪರಿಜ್ಞಾನ ನೆಹರೂ ಅವರಿಗೆ ಇತ್ತು” ಎಂದು ಬರೆಯುವ ಮೂಲಕ ಸಿದ್ದರಾಮಯ್ಯನವರ ಯಾರ ಜೊತೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ ಎಂದು ಸೂಕ್ಷ್ಮವಾಗಿ ತಿಳಿಸಿದ್ದಾರೆ.

ನಿಮ್ಮನ್ನು ಯಾರೆಷ್ಟೇ ಬೈದರೂ ನಿಮ್ಮ ಸೆಕ್ಯುಲರ್ ಕಮಿಟ್‌ಮೆಂಟ್ ಬಗ್ಗೆ ನಿಮ್ಮ ವಿರೋಧಿಗಳಿಗೂ ಒಳಗೊಳಗೇ ಮೆಚ್ಚುಗೆಯಿತ್ತು. ಇಂದು ಭಟ್ಟನ ಸೈದ್ಧಾಂತಿಕ ಮಿತ್ರರೂ ಸಿದ್ದರಾಮಯ್ಯನವರೂ ಇಷ್ಟೇನಾ ಎಂದು ಆಡಿಕೊಳ್ಳುವಂತಾಗಿದೆ ಸರ್. ನಿಮ್ಮ ಘನತೆಗಿಂತ ಕೆಳಮಟ್ಟಕ್ಕಿಳಿಯದಿರಿ ಪ್ಲೀಸ್ ಎಂದು ಲೇಖಕ ಇಸ್ಮತ್ ಪಜೀರ್ ಮನವಿ ಮಾಡಿದ್ದಾರೆ.

ಸಿದ್ಧರಾಮಯ್ಯನವರೇ, ಗೆದ್ದ ಮೇಲೆ ಊರಾಳುಗಳ ಹಂಗ್ಯಾಕೆ ಅನ್ನುವ ಅಟಿಟ್ಯೂಡ್ ಬಿಟ್ಟುಬಿಡಿ. ಇಂಥ ಅಪವಿತ್ರ ಒಳವ್ಯವಹಾರಗಳು ನಿಮ್ಮನ್ನು ಗೆಲ್ಲಿಸಿಲ್ಲ. ತೀರಾ ತೀರಾ ನಗಣ್ಯವೆನಿಸುವ ಪುಟ್ಟ ಪುಟ್ಟ ಫೇಸ್‌ಬುಕ್‌ ಅಳಿಲುಗಳ ಪ್ರಯತ್ನಗಳು ಕೂಡಾ ನಿಮ್ಮ ಗೆಲುವಿನ ಹಿಂದಿದೆ ಅನ್ನುವುದನ್ನು ಮರೆಯಬಾರದು. ನಿಮ್ಮ ಗೆಲುವಿನ ಕನಸು ಹೊತ್ತಿದ್ದ ಇದೇ ‘ಫೇಸ್‌ಬುಕ್‌ ಜಾಣ’ರೆಲ್ಲ ಈಗ ಕಾಲದ ಕಸದಬುಟ್ಟಿಯ ನಿಷ್ಪ್ರಯೋಜಕ ಸೊತ್ತುಗಳನ್ನಿಸಿಕೊಳ್ಳುವುದು ನಿಮಗೆ ಮುಂದೆ ದುಬಾರಿಯಾದೀತು. ನಿಮ್ಮ ಸುತ್ತಮುತ್ತಲಿನ ಕೊಂಬು ಕೋಡುಗಳ ಬುದ್ಧಿವಂತರ, ಬು.ಜೀ.ವೇಷದ ಪುಢಾರಿಗಳ ನೆತ್ತಿಗಣ್ಣುಗಳು ನಿಮ್ಮ ಪಾದದಡಿಯ ಹಸುರು ಹೂವುಗಳನ್ನು ಗಮನಿಸದಂತೆ ದಾರಿತಪ್ಪಿಸುತ್ತವೆ. ನಮಗೆ ನಿಮ್ಮ ಸರಕಾರದ ಯಾವ ಪ್ರಯೋಜನಗಳೂ ಬೇಡ. ವಿಚಾರಬದ್ಧತೆಯ ಸಾತ್ವಿಕ ಸಿಟ್ಟಿನ ಜೆಂಟಲ್ ಮ್ಯಾನ್ ನಡಿಗೆ ಬೇಕಷ್ಟೆ. ಅಷ್ಟೇ ಅಷ್ಟೇ! ಎಂದು ಕಾರ್ಟೂನಿಷ್ಟ್ ದಿನೇಶ್ ಕುಕ್ಕಜಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಯರ್ ಸಿದ್ದು…
ನೀವು ಬಿಡುಗಡೆ ಮಾಡುತ್ತಿರುವುದು ಇಂತಹ
ವರ್ಣಶ್ರೇಷ್ಠತೆಯ ವ್ಯಸನಿ..ಜನಾಂಗೀಯವಾದಿ ಬರೆದಿರುವ ಪುಸ್ತಕಗಳನ್ನ…
ಒಮ್ಮೆ ಯೋಚಿಸಿ..ನಮ್ಮನ್ನ ಅವಮಾನಿಸಬೇಡಿ ಎಂದು ತೇಜ ಯಾಲಕ್ಕಯ್ಯನವರು ಅಭಿಪ್ರಾಯಪಟ್ಟಿದ್ದಾರೆ.

“ಸಿದ್ದರಾಮಯ್ಯನವರು ತಮ್ಮ ಸಿದ್ದಾಂತ ನಂಬಿಕೆಗಳನ್ನು ಬದಲಾಯಿಸಿಕೊಂಡುಬಿಡಬಹುದು ಎಂಬ ಹೆದರಿಕೆ ಯಾರಿಗೂ ಇಲ್ಲ. ವಿಷಜಂತುಗಳಿಗೆ ಮಾನ್ಯತೆ ದೊರೆತು ಮತ್ತಷ್ಟು ವಿಷ ಹಂಚುತ್ತವೆ ಸಮಾಜದಲ್ಲಿ ಎಂಬ ಕಾಳಜಿ. ಸಿದ್ದರಾಮಯ್ಯನವರನ್ನು ಯಾರೂ ವಿರೋಧಿಸುತ್ತಿಲ್ಲ. ಸಿದ್ದರಾಮಯ್ಯನವರಿಗೆ ಬುದ್ದಿ ಹೇಳೋದು ಅನ್ನೋಕಿಂತ, ಸಿದ್ದರಾಮಯ್ಯನವರು ಮತ್ತು ಆ ವ್ಯಕ್ತಿಯ ಒಡನಾಟ ಎಲ್ಲರಿಗೂ ತಿಳಿದಿರುವುದರಿಂದ ಈಗ ಮುಖ್ಯಮಂತ್ರಿಗಳು ಆ ಸಮಾರಂಭಕ್ಕೆ ಹೋಗಬಾರದು ಎಂಬ ಕಾಳಜಿ” ಎಂದು ಪರಮೇಶ್ವರ ಗುರುಸ್ವಾಮಿಯವರು ಅಭಿಪ್ರಾಯಪಟ್ಟಿದ್ದಾರೆ.

ಸಮರಸೇನಾನಿ, ಸಮಾಜವಾದಿ ಸಿದ್ದರಾಮಯ್ಯನವರು ತಮ್ಮ ಕನ್ನಡಕ ಹಾಕಿಕೊಂಡು ಮತ್ತೊಮ್ಮೆ ಮಗದೊಮ್ಮೆ ಇಂತಹ ಸುಳ್ಳು ಸುದ್ದಿ ಹಬ್ಬಿಸಿದ್ದವರು ಯಾರು ಅಂತ ನೋಡಲಿ….
ಇಂತಹವರ ಜೊತೆಗೆ ಬುಲ್ಲಿ ಬುಲ್ಲಿ ಆಡಲು ನಿಂತಿದ್ದಾರೆ ಅಂದರೆ ಏನು ಹೇಳೋದು ಪ್ರೆಂಡ್ಸ…. ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸರ್ವಜನಾಂಗದ ಶಾಂತಿಯ ತೋಟ’ದ ಮರಗಳ ಬೇರುಗಳಿಗೆ ನಿಧಾನವಿಷ ಇಕ್ಕುವ ಮೂಲಕ ರಾಜ್ಯದ ಸಾಮರಸ್ಯಕ್ಕೆ ಕೊಳ್ಳಿ ಹಚ್ಚುವುದನ್ನೇ ಹೊಸ ಶೈಲಿಯ ಪತ್ರಿಕೋದ್ಯಮ ಎಂದು ಬಿಂಬಿಸಿದವರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೋದರೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿದ್ದ ಎಲ್ಲಕ್ಕಿಂತ ಮುಖ್ಯ ‘ಗ್ಯಾರಂಟಿ’ಯ ಭರವಸೆಗೆ ಅವರೇ ಬೆಲೆ ಕೊಡುವುದಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಕಾರ್ಟೂನಿಸ್ಟ್ ಪಿ.ಮಹಮ್ಮದ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯನವರೆ ನೀವು ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋದರೆ ನೀವು ಕೂಡ ಇಸ್ಲಾಮೋಫೋಬಿಯಾ, ಜಾತಿವಾದಿ ಮತ್ತು ಸ್ತ್ರೀದ್ವೇಷದ ನಡವಳಿಕೆಯನ್ನು ಅನುಮೋದಿಸುತ್ತಿದ್ದೀರಿ ಎಂದರ್ಥ. ಹಾಗಾಗಿ ಕೂಡಲೇ ಹೋಗುವುದಿಲ್ಲ ಎಂದು ಘೋಷಿಸಿ ಎಂದು ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಎನ್​ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...