Homeಮುಖಪುಟನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

- Advertisement -
- Advertisement -

ನೂತನ ಶಾಸಕರಿಗೆ ಏರ್ಪಡಿಸಿರುವ ಕಾರ್ಯಾಗಾರದಲ್ಲಿ ಪ್ರೇರಣಾ ಉಪನ್ಯಾಸ ನೀಡಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಜಮಾತೆ ಇಸ್ಲಾಮಿ ಹಿಂದ್ ನ ಮುಹಮ್ಮದ್ ಕುಂಞ, ಬ್ರಹ್ಮಕುಮಾರಿಯ ಆಶಾ ದೀದಿ ಮತ್ತು ಬಲಪಂಥೀಯ ಬರಹಗಾರ ಗುರುರಾಜ ಕರ್ಜಗಿಯವರನ್ನು ಆಹ್ವಾನಿಸಿರುವ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹೊಸದಾಗಿ ಆಯ್ಕೆಯಾದ ಸುಮಾರು 58 ಶಾಸಕರಿಗೆ ಜೂನ್ 26 ರಿಂದ 28ರ ವರೆಗೆ ನೆಲಮಂಗಲದಲ್ಲಿರುವ ವೀರೇಂದ್ರ ಹೆಗ್ಗಡೆಯವರ ‘ಕ್ಷೇಮವನ’ದಲ್ಲಿ ಮೂರುದಿನಗಳ ಶಿಬಿರ ಏರ್ಪಡಿಸಲಾಗಿದೆ. ಆದರೆ ಅಲ್ಲಿ ಮಾತನಾಡಲು ಆಹ್ವಾನಿಸಿರುವ ವ್ಯಕ್ತಿಗಳು ಒಂದಲ್ಲ ಹಲವು ರೀತಿಯಲ್ಲಿ ವಿವಾದಾತ್ಮಕವೆನಿಸಿದ್ದಾರೆ. ವಿವಾದಾತ್ಮಕ ಗುರು ರವಿಶಂಕರ್ ಗುರೂಜಿ ಮೇಲೆ ಅಕ್ರಮ ಭೂಪರಭಾರೆ ಪ್ರಕರಣವಿದೆ. ಅಲ್ಲದೇ ಅವರು ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ನಕ್ಸಲರಾಗುತ್ತಾರೆ ಎಂಬ ದ್ವೇ‍ಷದ ಹೇಳಿಕೆ ನೀಡಿದ್ದರು. ಇನ್ನು ಡಾ. ವಿರೇಂದ್ರ ಹೆಗಡೆಯವರು ಬಿಜೆಪಿ ನಾಮನಿರ್ದೇಶಿತ ರಾಜ್ಯಸಭಾ ಸಂಸದರಾಗಿದ್ದಾರೆ. ಡಾ. ಗುರುರಾಜ್ ಕರ್ಜಗಿ ಬಲಪಂಥೀಯ ಭಾಷಣಕಾರರಾಗಿದ್ದು, ಇತಿಹಾಸ ತಿರುಚುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಮೊಹಮ್ಮದ್ ಕುಂಞ ಸಹ ನೂತನ ಶಾಸಕರಿಗೆ ಪ್ರೇರಣೆ ಹೇಗೆ ನೀಡಬಲ್ಲರು ಎಂಬ ಪ್ರಶ್ನೆಗಳೆದ್ದಿವೆ.

ಹೊಸದಾಗಿ ಚುನಾಯಿತರಾಗಿ ಬಂದ ಶಾಸಕರಿಗೆ ಪಾಠ ಮಾಡಲು ನ್ಯಾಯಮೂರ್ತಿ ನಾಗಮೋಹನ ದಾಸ, ಗೋಪಾಲಗೌಡ, ರವಿವರ್ಮಕುಮಾರ, ಸಿ.ಎಸ್ ದ್ವಾರಕಾನಾಥ, ರಮೇಶ ಕುಮಾರ್ ಮುಂತಾದ ನುರಿತ ಸಂವಿಧಾನ ತಜ್ಞರು, ಕಾನೂನು ಪರಿಣಿತರು, ಹಿರಿಯ ಹಾಲಿ ಮತ್ತು ಮಾಜಿ, ಸ್ಪೀಕರ್ ಗಳು, ಶಾಸಕರು, ಅನುಭವಿ ಪತ್ರಕರ್ತರನ್ನು ಆಹ್ವಾನಿಸಿ ಉಪನ್ಯಾಸ ನೀಡಿಸಬೇಕು. ಆದರೆ ಸ್ಪೀಕರ್ ಖಾದರ್ ಸಾಹೇಬರು ಅದನ್ನು ಬಿಟ್ಟು ಆಧ್ಯಾತ್ಮವನ್ನು ದುಡ್ಡು ಮಾಡಿಕೊಳ್ಳುವ ದಂಧೆಯನ್ನಾಗಿ ಮಾಡಿಕೊಂಡವರಿಂದ, ಕೋಮುವಾದಿ ಸಂಘಟನೆಗಳ ಜೊತೆ ಗುರುತಿಸಿಕೊಂಡವರಿಂದ ನೂತನ ಶಾಸಕರಿಗೆ ಪ್ರವಚನ ಮಾಡಿಸಲು ಹೊರಟಿದ್ದಾರೆ‌. ಇದರ ಅಗತ್ಯವಿಲ್ಲ‌‌. ಸ್ಪೀಕರ್ ಖಾದರ್ ಸಾಹೇಬರು ಮೈ ಮರೆಯದಿರಲಿ. ಎಲ್ಲರಿಗೂ ಒಳ್ಳೆಯವರಾಗಲು ಹೋಗಿ ನಿಮ್ಮ ಕಾಲ ಮೇಲೆ ನೀವೇ ಕಲ್ಲು ಹಾಕಿಕೊಳ್ಳಬೇಡಿ.. ಯಾರದೋ ಮಾತನ್ನು ಕೇಳಿ ಜನ ಆಡಿಕೊಳ್ಳುವಂತೆ ಮಾಡಬೇಡಿ. ಶಾಸಕರಿಗೆ ಧಾರ್ಮಿಕ ಗುರುಗಳ ಪಾಠ ಸಂವಿಧಾನಕ್ಕೆ ಅಪಚಾರ ಎಂದು ಹಿರಿಯ ಪತ್ರಕರ್ತರಾದ ಸನತ್ ಕುಮಾರ ಬೆಳಗಲಿ ಅಭಿಪ್ರಾಯಪಟ್ಟಿದ್ದಾರೆ.

ಬಿ.ಎಲ್ ಶಂಕರ್ ರವರು ತಮ್ಮ 45 ನೇ ವಯಸ್ಸಿಗೆಲ್ಲ ಜನತಾ ಪಕ್ಶದಲ್ಲಿ ಹಲವಾರು ಅವಕಾಶಗಳನ್ನು ಪಡೆದಿದ್ದರು. ಆಮೇಲೆ ಕಾಂಗ್ರೆಸ್ ಸೇರಿ ಪಕ್ಶದ ವಕ್ತಾರರು ಪೋಸ್ಟ್ ನಿಂದ ಮೇಲಕ್ಕೆ ಏರಲಿಲ್ಲ. ಶಾಸಕರಿಗೆ ಟ್ರೈನಿಂಗ್ ಕೊಡಲು ಶಂಕರ್ ರವರಿಗಿಂತ ಸೂಪರ್ ಸಂಪನ್ಮೂಲ ವ್ಯಕ್ತಿ ಬೇಕಿಲ್ಲ. ಆದರೂ ಶಂಕರ್ ರವರಿಗೆ ಒಂದು ಬಾಶಣಕ್ಕೂ ಅವಕಾಶ ಇಲ್ಲ ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಕಿಡಿಕಾರಿದ್ದಾರೆ.

ಯು.ಟಿ.ಖಾದರ್ ಸಾಹೇಬರೇ.. ಈವರೆಗೆ ಈ ರಾಜ್ಯದಲ್ಲಿ ಅದೆಷ್ಟೋ ಸ್ಪೀಕರ್‌ಗಳು ಆಗಿ ಹೋಗಿದ್ದಾರೆ. ಅವರ್ಯಾರೂ ಮಾಡಿಸಿರದಂತಹ ಈ ಮೋಟಿವೇಶನಲ್ ಟಾಕ್‌ಗಳ ಅಗತ್ಯ ಈ ರಾಜ್ಯದ ಜನಪ್ರತಿನಿಧಿಗಳಿಗೆ ಯಾಕೆ ಬೇಕಿತ್ತು? ಇದನ್ನು ಮಾಡಿಸುವ ಮೂಲಕ ಖಂಡಿತಾ ನೀವು ಒಳ್ಳೆಯ ಹೆಸರನ್ನು ಗಳಿಸಲಾರಿರಿ ಎಂದು ಇಸ್ಮತ್ ಪಜೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಡಿಯಲಾಜಿಕಲ್ ಪಾಲಿಟಿಕ್ಸ್ ನಿಮಗೆ ಗೊತ್ತಿಲ್ಲದಿರಬಹುದು. ಆದರೆ ನಿಮ್ಮನ್ನು ರಾಜಕೀಯವಾಗಿ ಈ ಹಂತದವರೆಗೆ ತಂದ ಪಕ್ಷವನ್ನು ಅದರ ಜಾತ್ಯಾತೀತ ಸಿದ್ಧಾಂತವನ್ನು ಒಪ್ಪುವವರು ಯಾರು ಎಂಬ ಕನಿಷ್ಠ ಪ್ರಜ್ಞೆ ನಿಮಗಿಲ್ಲದಾಯಿತೇ..? ಈ ಜಾತ್ಯಾತೀತತೆ ಎಂದರೆ ಯಾರದೇ ಔದಾರ್ಯವಲ್ಲ.ಅದು ಈ ನೆಲದ ಮೂಲಗುಣ, ಈ ದೇಶದ ಸಂವಿಧಾನದ ಅಂತಃ ಸತ್ವ ಅಡಗಿರುವುದೇ ಅದರ ಪರಮ ಜಾತ್ಯಾತೀತ ಗುಣದಲ್ಲಿ.
ಅದನ್ನು ಬಿಲ್ಕುಲ್ ಒಪ್ಪದ ರವಿಶಂಕರ್ , ಸ್ಪಷ್ಟವಾಗಿ ಬಿಜೆಪಿಯೊಂದಿಗೆ ಗುರುತಿಸಿರುವ ವೀರೇಂದ್ರ ಹೆಗ್ಗಡೆ, ಮೊನ್ನೆ ಮೊನ್ನೆ ನಿಮ್ಮದೇ ಸರಕಾರ ಪಠ್ಯಪುಸ್ತಕಗಳ ವಿಚಾರದಲ್ಲಿ ತೆಗೆದುಕೊಂಡ ನಿಲುವನ್ನು ಯಾವ ಮುಚ್ಚುಮರೆಯೂ ಇಲ್ಲದೇ ವಿರೋಧಿಸಿ ಹಿಂದಿನ ಜನವಿರೋಧೀ ಬಿಜೆಪಿ ಸರಕಾರ ವಿಷಯುಕ್ತಗೊಳಿಸಿದ ಪಠ್ಯ ಪುಸ್ತಕಗಳ ಪರ ವಕಾಲತ್ತು ವಹಿಸಿದ ಗುರುರಾಜ ಕರ್ಜಗಿ ಮುಂತಾದವರಿಂದ ಎಂತಹ ಮೋಟಿವೇಶನಲ್ ಕ್ಲಾಸ್‌ಗಳು ಸಿಗಬಹುದು..? ಮೊನ್ನೆ ಮೊನ್ನೆಯವರೆಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೆಂದು ಶ್ರಮಿಸಿದ ದೇವನೂರು ಮಹಾದೇವ, ಪುರುಷೋತ್ತಮ ಬಿಳಿಮಲೆ ಮುಂತಾದ ಹಿರಿಯರನ್ನು ತಾವು ಇಷ್ಟು ಬೇಗ ಮರೆತಿರಾ..?

ನಾವು ಈಗಲೂ ಹೇಳುತ್ತೇವೆ. ನೀವು ನಮ್ಮ ಸೆಕ್ಯುಲರ್ ಸಾಹಿತಿಗಳನ್ನೂ ಕರೆಯಬೇಡಿ.
ನಮ್ಮ ದೇಶದಲ್ಲಿ ನಮ್ಮ ಪವಿತ್ರ ಸಂವಿಧಾನಕ್ಕಿಂತ ಮಿಗಿಲಾದ ಮೋಟಿವೇಟರ್ ಬೇರೊಂದಿಲ್ಲ. ಅದನ್ನೇ ಒಪ್ಪದವರಿಂದ ನೀವೆಂತಹ ಮೋಟಿವೇಶನ್ ಮಾಡಿಸಬಲ್ಲಿರಿ..? ನಮ್ಮ ಜನಪ್ರತಿನಿಧಿಗಳಿಗೆ ಎಲ್ಲಕ್ಕಿಂತ ತುರ್ತಾಗಿ ಬೇಕಿರುವುದು ಸಂವಿಧಾನದ ಅರಿವು. ಅದನ್ನು ಮನವರಿಕೆ ಮಾಡಿಸಿ ಕೊಡುವ ಒಂದು ತರಗತಿಯನ್ನು ವ್ಯವಸ್ಥೆ ಮಾಡಿಸಿ ಪುಣ್ಯ ಕಟ್ಕೊಳ್ಳಿ.. ಸೆಕ್ಯುಲರಿಸಮ್ಮನ್ನು ಮತ್ತು ಸಂವಿಧಾನವನ್ನು ಒಪ್ಪದವರಿಂದ ಮಾಡಿಸ ಹೊರಟ ಮೋಟಿವೇಶನಲ್ ಸೆಶನ್ ಕೂಡಲೇ ನಿಲ್ಲಿಸಿ ಎಂದು ಇಸ್ಮತ್ ಪಜೀರ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....