Homeಮುಖಪುಟನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

- Advertisement -
- Advertisement -

ನೂತನ ಶಾಸಕರಿಗೆ ಏರ್ಪಡಿಸಿರುವ ಕಾರ್ಯಾಗಾರದಲ್ಲಿ ಪ್ರೇರಣಾ ಉಪನ್ಯಾಸ ನೀಡಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಜಮಾತೆ ಇಸ್ಲಾಮಿ ಹಿಂದ್ ನ ಮುಹಮ್ಮದ್ ಕುಂಞ, ಬ್ರಹ್ಮಕುಮಾರಿಯ ಆಶಾ ದೀದಿ ಮತ್ತು ಬಲಪಂಥೀಯ ಬರಹಗಾರ ಗುರುರಾಜ ಕರ್ಜಗಿಯವರನ್ನು ಆಹ್ವಾನಿಸಿರುವ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹೊಸದಾಗಿ ಆಯ್ಕೆಯಾದ ಸುಮಾರು 58 ಶಾಸಕರಿಗೆ ಜೂನ್ 26 ರಿಂದ 28ರ ವರೆಗೆ ನೆಲಮಂಗಲದಲ್ಲಿರುವ ವೀರೇಂದ್ರ ಹೆಗ್ಗಡೆಯವರ ‘ಕ್ಷೇಮವನ’ದಲ್ಲಿ ಮೂರುದಿನಗಳ ಶಿಬಿರ ಏರ್ಪಡಿಸಲಾಗಿದೆ. ಆದರೆ ಅಲ್ಲಿ ಮಾತನಾಡಲು ಆಹ್ವಾನಿಸಿರುವ ವ್ಯಕ್ತಿಗಳು ಒಂದಲ್ಲ ಹಲವು ರೀತಿಯಲ್ಲಿ ವಿವಾದಾತ್ಮಕವೆನಿಸಿದ್ದಾರೆ. ವಿವಾದಾತ್ಮಕ ಗುರು ರವಿಶಂಕರ್ ಗುರೂಜಿ ಮೇಲೆ ಅಕ್ರಮ ಭೂಪರಭಾರೆ ಪ್ರಕರಣವಿದೆ. ಅಲ್ಲದೇ ಅವರು ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ನಕ್ಸಲರಾಗುತ್ತಾರೆ ಎಂಬ ದ್ವೇ‍ಷದ ಹೇಳಿಕೆ ನೀಡಿದ್ದರು. ಇನ್ನು ಡಾ. ವಿರೇಂದ್ರ ಹೆಗಡೆಯವರು ಬಿಜೆಪಿ ನಾಮನಿರ್ದೇಶಿತ ರಾಜ್ಯಸಭಾ ಸಂಸದರಾಗಿದ್ದಾರೆ. ಡಾ. ಗುರುರಾಜ್ ಕರ್ಜಗಿ ಬಲಪಂಥೀಯ ಭಾಷಣಕಾರರಾಗಿದ್ದು, ಇತಿಹಾಸ ತಿರುಚುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಮೊಹಮ್ಮದ್ ಕುಂಞ ಸಹ ನೂತನ ಶಾಸಕರಿಗೆ ಪ್ರೇರಣೆ ಹೇಗೆ ನೀಡಬಲ್ಲರು ಎಂಬ ಪ್ರಶ್ನೆಗಳೆದ್ದಿವೆ.

ಹೊಸದಾಗಿ ಚುನಾಯಿತರಾಗಿ ಬಂದ ಶಾಸಕರಿಗೆ ಪಾಠ ಮಾಡಲು ನ್ಯಾಯಮೂರ್ತಿ ನಾಗಮೋಹನ ದಾಸ, ಗೋಪಾಲಗೌಡ, ರವಿವರ್ಮಕುಮಾರ, ಸಿ.ಎಸ್ ದ್ವಾರಕಾನಾಥ, ರಮೇಶ ಕುಮಾರ್ ಮುಂತಾದ ನುರಿತ ಸಂವಿಧಾನ ತಜ್ಞರು, ಕಾನೂನು ಪರಿಣಿತರು, ಹಿರಿಯ ಹಾಲಿ ಮತ್ತು ಮಾಜಿ, ಸ್ಪೀಕರ್ ಗಳು, ಶಾಸಕರು, ಅನುಭವಿ ಪತ್ರಕರ್ತರನ್ನು ಆಹ್ವಾನಿಸಿ ಉಪನ್ಯಾಸ ನೀಡಿಸಬೇಕು. ಆದರೆ ಸ್ಪೀಕರ್ ಖಾದರ್ ಸಾಹೇಬರು ಅದನ್ನು ಬಿಟ್ಟು ಆಧ್ಯಾತ್ಮವನ್ನು ದುಡ್ಡು ಮಾಡಿಕೊಳ್ಳುವ ದಂಧೆಯನ್ನಾಗಿ ಮಾಡಿಕೊಂಡವರಿಂದ, ಕೋಮುವಾದಿ ಸಂಘಟನೆಗಳ ಜೊತೆ ಗುರುತಿಸಿಕೊಂಡವರಿಂದ ನೂತನ ಶಾಸಕರಿಗೆ ಪ್ರವಚನ ಮಾಡಿಸಲು ಹೊರಟಿದ್ದಾರೆ‌. ಇದರ ಅಗತ್ಯವಿಲ್ಲ‌‌. ಸ್ಪೀಕರ್ ಖಾದರ್ ಸಾಹೇಬರು ಮೈ ಮರೆಯದಿರಲಿ. ಎಲ್ಲರಿಗೂ ಒಳ್ಳೆಯವರಾಗಲು ಹೋಗಿ ನಿಮ್ಮ ಕಾಲ ಮೇಲೆ ನೀವೇ ಕಲ್ಲು ಹಾಕಿಕೊಳ್ಳಬೇಡಿ.. ಯಾರದೋ ಮಾತನ್ನು ಕೇಳಿ ಜನ ಆಡಿಕೊಳ್ಳುವಂತೆ ಮಾಡಬೇಡಿ. ಶಾಸಕರಿಗೆ ಧಾರ್ಮಿಕ ಗುರುಗಳ ಪಾಠ ಸಂವಿಧಾನಕ್ಕೆ ಅಪಚಾರ ಎಂದು ಹಿರಿಯ ಪತ್ರಕರ್ತರಾದ ಸನತ್ ಕುಮಾರ ಬೆಳಗಲಿ ಅಭಿಪ್ರಾಯಪಟ್ಟಿದ್ದಾರೆ.

ಬಿ.ಎಲ್ ಶಂಕರ್ ರವರು ತಮ್ಮ 45 ನೇ ವಯಸ್ಸಿಗೆಲ್ಲ ಜನತಾ ಪಕ್ಶದಲ್ಲಿ ಹಲವಾರು ಅವಕಾಶಗಳನ್ನು ಪಡೆದಿದ್ದರು. ಆಮೇಲೆ ಕಾಂಗ್ರೆಸ್ ಸೇರಿ ಪಕ್ಶದ ವಕ್ತಾರರು ಪೋಸ್ಟ್ ನಿಂದ ಮೇಲಕ್ಕೆ ಏರಲಿಲ್ಲ. ಶಾಸಕರಿಗೆ ಟ್ರೈನಿಂಗ್ ಕೊಡಲು ಶಂಕರ್ ರವರಿಗಿಂತ ಸೂಪರ್ ಸಂಪನ್ಮೂಲ ವ್ಯಕ್ತಿ ಬೇಕಿಲ್ಲ. ಆದರೂ ಶಂಕರ್ ರವರಿಗೆ ಒಂದು ಬಾಶಣಕ್ಕೂ ಅವಕಾಶ ಇಲ್ಲ ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಕಿಡಿಕಾರಿದ್ದಾರೆ.

ಯು.ಟಿ.ಖಾದರ್ ಸಾಹೇಬರೇ.. ಈವರೆಗೆ ಈ ರಾಜ್ಯದಲ್ಲಿ ಅದೆಷ್ಟೋ ಸ್ಪೀಕರ್‌ಗಳು ಆಗಿ ಹೋಗಿದ್ದಾರೆ. ಅವರ್ಯಾರೂ ಮಾಡಿಸಿರದಂತಹ ಈ ಮೋಟಿವೇಶನಲ್ ಟಾಕ್‌ಗಳ ಅಗತ್ಯ ಈ ರಾಜ್ಯದ ಜನಪ್ರತಿನಿಧಿಗಳಿಗೆ ಯಾಕೆ ಬೇಕಿತ್ತು? ಇದನ್ನು ಮಾಡಿಸುವ ಮೂಲಕ ಖಂಡಿತಾ ನೀವು ಒಳ್ಳೆಯ ಹೆಸರನ್ನು ಗಳಿಸಲಾರಿರಿ ಎಂದು ಇಸ್ಮತ್ ಪಜೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಡಿಯಲಾಜಿಕಲ್ ಪಾಲಿಟಿಕ್ಸ್ ನಿಮಗೆ ಗೊತ್ತಿಲ್ಲದಿರಬಹುದು. ಆದರೆ ನಿಮ್ಮನ್ನು ರಾಜಕೀಯವಾಗಿ ಈ ಹಂತದವರೆಗೆ ತಂದ ಪಕ್ಷವನ್ನು ಅದರ ಜಾತ್ಯಾತೀತ ಸಿದ್ಧಾಂತವನ್ನು ಒಪ್ಪುವವರು ಯಾರು ಎಂಬ ಕನಿಷ್ಠ ಪ್ರಜ್ಞೆ ನಿಮಗಿಲ್ಲದಾಯಿತೇ..? ಈ ಜಾತ್ಯಾತೀತತೆ ಎಂದರೆ ಯಾರದೇ ಔದಾರ್ಯವಲ್ಲ.ಅದು ಈ ನೆಲದ ಮೂಲಗುಣ, ಈ ದೇಶದ ಸಂವಿಧಾನದ ಅಂತಃ ಸತ್ವ ಅಡಗಿರುವುದೇ ಅದರ ಪರಮ ಜಾತ್ಯಾತೀತ ಗುಣದಲ್ಲಿ.
ಅದನ್ನು ಬಿಲ್ಕುಲ್ ಒಪ್ಪದ ರವಿಶಂಕರ್ , ಸ್ಪಷ್ಟವಾಗಿ ಬಿಜೆಪಿಯೊಂದಿಗೆ ಗುರುತಿಸಿರುವ ವೀರೇಂದ್ರ ಹೆಗ್ಗಡೆ, ಮೊನ್ನೆ ಮೊನ್ನೆ ನಿಮ್ಮದೇ ಸರಕಾರ ಪಠ್ಯಪುಸ್ತಕಗಳ ವಿಚಾರದಲ್ಲಿ ತೆಗೆದುಕೊಂಡ ನಿಲುವನ್ನು ಯಾವ ಮುಚ್ಚುಮರೆಯೂ ಇಲ್ಲದೇ ವಿರೋಧಿಸಿ ಹಿಂದಿನ ಜನವಿರೋಧೀ ಬಿಜೆಪಿ ಸರಕಾರ ವಿಷಯುಕ್ತಗೊಳಿಸಿದ ಪಠ್ಯ ಪುಸ್ತಕಗಳ ಪರ ವಕಾಲತ್ತು ವಹಿಸಿದ ಗುರುರಾಜ ಕರ್ಜಗಿ ಮುಂತಾದವರಿಂದ ಎಂತಹ ಮೋಟಿವೇಶನಲ್ ಕ್ಲಾಸ್‌ಗಳು ಸಿಗಬಹುದು..? ಮೊನ್ನೆ ಮೊನ್ನೆಯವರೆಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೆಂದು ಶ್ರಮಿಸಿದ ದೇವನೂರು ಮಹಾದೇವ, ಪುರುಷೋತ್ತಮ ಬಿಳಿಮಲೆ ಮುಂತಾದ ಹಿರಿಯರನ್ನು ತಾವು ಇಷ್ಟು ಬೇಗ ಮರೆತಿರಾ..?

ನಾವು ಈಗಲೂ ಹೇಳುತ್ತೇವೆ. ನೀವು ನಮ್ಮ ಸೆಕ್ಯುಲರ್ ಸಾಹಿತಿಗಳನ್ನೂ ಕರೆಯಬೇಡಿ.
ನಮ್ಮ ದೇಶದಲ್ಲಿ ನಮ್ಮ ಪವಿತ್ರ ಸಂವಿಧಾನಕ್ಕಿಂತ ಮಿಗಿಲಾದ ಮೋಟಿವೇಟರ್ ಬೇರೊಂದಿಲ್ಲ. ಅದನ್ನೇ ಒಪ್ಪದವರಿಂದ ನೀವೆಂತಹ ಮೋಟಿವೇಶನ್ ಮಾಡಿಸಬಲ್ಲಿರಿ..? ನಮ್ಮ ಜನಪ್ರತಿನಿಧಿಗಳಿಗೆ ಎಲ್ಲಕ್ಕಿಂತ ತುರ್ತಾಗಿ ಬೇಕಿರುವುದು ಸಂವಿಧಾನದ ಅರಿವು. ಅದನ್ನು ಮನವರಿಕೆ ಮಾಡಿಸಿ ಕೊಡುವ ಒಂದು ತರಗತಿಯನ್ನು ವ್ಯವಸ್ಥೆ ಮಾಡಿಸಿ ಪುಣ್ಯ ಕಟ್ಕೊಳ್ಳಿ.. ಸೆಕ್ಯುಲರಿಸಮ್ಮನ್ನು ಮತ್ತು ಸಂವಿಧಾನವನ್ನು ಒಪ್ಪದವರಿಂದ ಮಾಡಿಸ ಹೊರಟ ಮೋಟಿವೇಶನಲ್ ಸೆಶನ್ ಕೂಡಲೇ ನಿಲ್ಲಿಸಿ ಎಂದು ಇಸ್ಮತ್ ಪಜೀರ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...