Homeಮುಖಪುಟನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

ನೂತನ ಶಾಸಕರಿಗೆ ಪ್ರೇರಣಾ ಉಪನ್ಯಾಸ ನೀಡಲು ಗುರುರಾಜ ಕರ್ಜಗಿ, ರವಿಶಂಕರ್ ಗುರೂಜಿಗೆ ಆಹ್ವಾನ: ತೀವ್ರ ವಿರೋಧ

- Advertisement -
- Advertisement -

ನೂತನ ಶಾಸಕರಿಗೆ ಏರ್ಪಡಿಸಿರುವ ಕಾರ್ಯಾಗಾರದಲ್ಲಿ ಪ್ರೇರಣಾ ಉಪನ್ಯಾಸ ನೀಡಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಜಮಾತೆ ಇಸ್ಲಾಮಿ ಹಿಂದ್ ನ ಮುಹಮ್ಮದ್ ಕುಂಞ, ಬ್ರಹ್ಮಕುಮಾರಿಯ ಆಶಾ ದೀದಿ ಮತ್ತು ಬಲಪಂಥೀಯ ಬರಹಗಾರ ಗುರುರಾಜ ಕರ್ಜಗಿಯವರನ್ನು ಆಹ್ವಾನಿಸಿರುವ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹೊಸದಾಗಿ ಆಯ್ಕೆಯಾದ ಸುಮಾರು 58 ಶಾಸಕರಿಗೆ ಜೂನ್ 26 ರಿಂದ 28ರ ವರೆಗೆ ನೆಲಮಂಗಲದಲ್ಲಿರುವ ವೀರೇಂದ್ರ ಹೆಗ್ಗಡೆಯವರ ‘ಕ್ಷೇಮವನ’ದಲ್ಲಿ ಮೂರುದಿನಗಳ ಶಿಬಿರ ಏರ್ಪಡಿಸಲಾಗಿದೆ. ಆದರೆ ಅಲ್ಲಿ ಮಾತನಾಡಲು ಆಹ್ವಾನಿಸಿರುವ ವ್ಯಕ್ತಿಗಳು ಒಂದಲ್ಲ ಹಲವು ರೀತಿಯಲ್ಲಿ ವಿವಾದಾತ್ಮಕವೆನಿಸಿದ್ದಾರೆ. ವಿವಾದಾತ್ಮಕ ಗುರು ರವಿಶಂಕರ್ ಗುರೂಜಿ ಮೇಲೆ ಅಕ್ರಮ ಭೂಪರಭಾರೆ ಪ್ರಕರಣವಿದೆ. ಅಲ್ಲದೇ ಅವರು ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ನಕ್ಸಲರಾಗುತ್ತಾರೆ ಎಂಬ ದ್ವೇ‍ಷದ ಹೇಳಿಕೆ ನೀಡಿದ್ದರು. ಇನ್ನು ಡಾ. ವಿರೇಂದ್ರ ಹೆಗಡೆಯವರು ಬಿಜೆಪಿ ನಾಮನಿರ್ದೇಶಿತ ರಾಜ್ಯಸಭಾ ಸಂಸದರಾಗಿದ್ದಾರೆ. ಡಾ. ಗುರುರಾಜ್ ಕರ್ಜಗಿ ಬಲಪಂಥೀಯ ಭಾಷಣಕಾರರಾಗಿದ್ದು, ಇತಿಹಾಸ ತಿರುಚುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಬ್ರಹ್ಮಕುಮಾರಿಯ ಆಶಾ ದೀದಿ ಹಾಗೂ ಮೊಹಮ್ಮದ್ ಕುಂಞ ಸಹ ನೂತನ ಶಾಸಕರಿಗೆ ಪ್ರೇರಣೆ ಹೇಗೆ ನೀಡಬಲ್ಲರು ಎಂಬ ಪ್ರಶ್ನೆಗಳೆದ್ದಿವೆ.

ಹೊಸದಾಗಿ ಚುನಾಯಿತರಾಗಿ ಬಂದ ಶಾಸಕರಿಗೆ ಪಾಠ ಮಾಡಲು ನ್ಯಾಯಮೂರ್ತಿ ನಾಗಮೋಹನ ದಾಸ, ಗೋಪಾಲಗೌಡ, ರವಿವರ್ಮಕುಮಾರ, ಸಿ.ಎಸ್ ದ್ವಾರಕಾನಾಥ, ರಮೇಶ ಕುಮಾರ್ ಮುಂತಾದ ನುರಿತ ಸಂವಿಧಾನ ತಜ್ಞರು, ಕಾನೂನು ಪರಿಣಿತರು, ಹಿರಿಯ ಹಾಲಿ ಮತ್ತು ಮಾಜಿ, ಸ್ಪೀಕರ್ ಗಳು, ಶಾಸಕರು, ಅನುಭವಿ ಪತ್ರಕರ್ತರನ್ನು ಆಹ್ವಾನಿಸಿ ಉಪನ್ಯಾಸ ನೀಡಿಸಬೇಕು. ಆದರೆ ಸ್ಪೀಕರ್ ಖಾದರ್ ಸಾಹೇಬರು ಅದನ್ನು ಬಿಟ್ಟು ಆಧ್ಯಾತ್ಮವನ್ನು ದುಡ್ಡು ಮಾಡಿಕೊಳ್ಳುವ ದಂಧೆಯನ್ನಾಗಿ ಮಾಡಿಕೊಂಡವರಿಂದ, ಕೋಮುವಾದಿ ಸಂಘಟನೆಗಳ ಜೊತೆ ಗುರುತಿಸಿಕೊಂಡವರಿಂದ ನೂತನ ಶಾಸಕರಿಗೆ ಪ್ರವಚನ ಮಾಡಿಸಲು ಹೊರಟಿದ್ದಾರೆ‌. ಇದರ ಅಗತ್ಯವಿಲ್ಲ‌‌. ಸ್ಪೀಕರ್ ಖಾದರ್ ಸಾಹೇಬರು ಮೈ ಮರೆಯದಿರಲಿ. ಎಲ್ಲರಿಗೂ ಒಳ್ಳೆಯವರಾಗಲು ಹೋಗಿ ನಿಮ್ಮ ಕಾಲ ಮೇಲೆ ನೀವೇ ಕಲ್ಲು ಹಾಕಿಕೊಳ್ಳಬೇಡಿ.. ಯಾರದೋ ಮಾತನ್ನು ಕೇಳಿ ಜನ ಆಡಿಕೊಳ್ಳುವಂತೆ ಮಾಡಬೇಡಿ. ಶಾಸಕರಿಗೆ ಧಾರ್ಮಿಕ ಗುರುಗಳ ಪಾಠ ಸಂವಿಧಾನಕ್ಕೆ ಅಪಚಾರ ಎಂದು ಹಿರಿಯ ಪತ್ರಕರ್ತರಾದ ಸನತ್ ಕುಮಾರ ಬೆಳಗಲಿ ಅಭಿಪ್ರಾಯಪಟ್ಟಿದ್ದಾರೆ.

ಬಿ.ಎಲ್ ಶಂಕರ್ ರವರು ತಮ್ಮ 45 ನೇ ವಯಸ್ಸಿಗೆಲ್ಲ ಜನತಾ ಪಕ್ಶದಲ್ಲಿ ಹಲವಾರು ಅವಕಾಶಗಳನ್ನು ಪಡೆದಿದ್ದರು. ಆಮೇಲೆ ಕಾಂಗ್ರೆಸ್ ಸೇರಿ ಪಕ್ಶದ ವಕ್ತಾರರು ಪೋಸ್ಟ್ ನಿಂದ ಮೇಲಕ್ಕೆ ಏರಲಿಲ್ಲ. ಶಾಸಕರಿಗೆ ಟ್ರೈನಿಂಗ್ ಕೊಡಲು ಶಂಕರ್ ರವರಿಗಿಂತ ಸೂಪರ್ ಸಂಪನ್ಮೂಲ ವ್ಯಕ್ತಿ ಬೇಕಿಲ್ಲ. ಆದರೂ ಶಂಕರ್ ರವರಿಗೆ ಒಂದು ಬಾಶಣಕ್ಕೂ ಅವಕಾಶ ಇಲ್ಲ ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಕಿಡಿಕಾರಿದ್ದಾರೆ.

ಯು.ಟಿ.ಖಾದರ್ ಸಾಹೇಬರೇ.. ಈವರೆಗೆ ಈ ರಾಜ್ಯದಲ್ಲಿ ಅದೆಷ್ಟೋ ಸ್ಪೀಕರ್‌ಗಳು ಆಗಿ ಹೋಗಿದ್ದಾರೆ. ಅವರ್ಯಾರೂ ಮಾಡಿಸಿರದಂತಹ ಈ ಮೋಟಿವೇಶನಲ್ ಟಾಕ್‌ಗಳ ಅಗತ್ಯ ಈ ರಾಜ್ಯದ ಜನಪ್ರತಿನಿಧಿಗಳಿಗೆ ಯಾಕೆ ಬೇಕಿತ್ತು? ಇದನ್ನು ಮಾಡಿಸುವ ಮೂಲಕ ಖಂಡಿತಾ ನೀವು ಒಳ್ಳೆಯ ಹೆಸರನ್ನು ಗಳಿಸಲಾರಿರಿ ಎಂದು ಇಸ್ಮತ್ ಪಜೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಡಿಯಲಾಜಿಕಲ್ ಪಾಲಿಟಿಕ್ಸ್ ನಿಮಗೆ ಗೊತ್ತಿಲ್ಲದಿರಬಹುದು. ಆದರೆ ನಿಮ್ಮನ್ನು ರಾಜಕೀಯವಾಗಿ ಈ ಹಂತದವರೆಗೆ ತಂದ ಪಕ್ಷವನ್ನು ಅದರ ಜಾತ್ಯಾತೀತ ಸಿದ್ಧಾಂತವನ್ನು ಒಪ್ಪುವವರು ಯಾರು ಎಂಬ ಕನಿಷ್ಠ ಪ್ರಜ್ಞೆ ನಿಮಗಿಲ್ಲದಾಯಿತೇ..? ಈ ಜಾತ್ಯಾತೀತತೆ ಎಂದರೆ ಯಾರದೇ ಔದಾರ್ಯವಲ್ಲ.ಅದು ಈ ನೆಲದ ಮೂಲಗುಣ, ಈ ದೇಶದ ಸಂವಿಧಾನದ ಅಂತಃ ಸತ್ವ ಅಡಗಿರುವುದೇ ಅದರ ಪರಮ ಜಾತ್ಯಾತೀತ ಗುಣದಲ್ಲಿ.
ಅದನ್ನು ಬಿಲ್ಕುಲ್ ಒಪ್ಪದ ರವಿಶಂಕರ್ , ಸ್ಪಷ್ಟವಾಗಿ ಬಿಜೆಪಿಯೊಂದಿಗೆ ಗುರುತಿಸಿರುವ ವೀರೇಂದ್ರ ಹೆಗ್ಗಡೆ, ಮೊನ್ನೆ ಮೊನ್ನೆ ನಿಮ್ಮದೇ ಸರಕಾರ ಪಠ್ಯಪುಸ್ತಕಗಳ ವಿಚಾರದಲ್ಲಿ ತೆಗೆದುಕೊಂಡ ನಿಲುವನ್ನು ಯಾವ ಮುಚ್ಚುಮರೆಯೂ ಇಲ್ಲದೇ ವಿರೋಧಿಸಿ ಹಿಂದಿನ ಜನವಿರೋಧೀ ಬಿಜೆಪಿ ಸರಕಾರ ವಿಷಯುಕ್ತಗೊಳಿಸಿದ ಪಠ್ಯ ಪುಸ್ತಕಗಳ ಪರ ವಕಾಲತ್ತು ವಹಿಸಿದ ಗುರುರಾಜ ಕರ್ಜಗಿ ಮುಂತಾದವರಿಂದ ಎಂತಹ ಮೋಟಿವೇಶನಲ್ ಕ್ಲಾಸ್‌ಗಳು ಸಿಗಬಹುದು..? ಮೊನ್ನೆ ಮೊನ್ನೆಯವರೆಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೆಂದು ಶ್ರಮಿಸಿದ ದೇವನೂರು ಮಹಾದೇವ, ಪುರುಷೋತ್ತಮ ಬಿಳಿಮಲೆ ಮುಂತಾದ ಹಿರಿಯರನ್ನು ತಾವು ಇಷ್ಟು ಬೇಗ ಮರೆತಿರಾ..?

ನಾವು ಈಗಲೂ ಹೇಳುತ್ತೇವೆ. ನೀವು ನಮ್ಮ ಸೆಕ್ಯುಲರ್ ಸಾಹಿತಿಗಳನ್ನೂ ಕರೆಯಬೇಡಿ.
ನಮ್ಮ ದೇಶದಲ್ಲಿ ನಮ್ಮ ಪವಿತ್ರ ಸಂವಿಧಾನಕ್ಕಿಂತ ಮಿಗಿಲಾದ ಮೋಟಿವೇಟರ್ ಬೇರೊಂದಿಲ್ಲ. ಅದನ್ನೇ ಒಪ್ಪದವರಿಂದ ನೀವೆಂತಹ ಮೋಟಿವೇಶನ್ ಮಾಡಿಸಬಲ್ಲಿರಿ..? ನಮ್ಮ ಜನಪ್ರತಿನಿಧಿಗಳಿಗೆ ಎಲ್ಲಕ್ಕಿಂತ ತುರ್ತಾಗಿ ಬೇಕಿರುವುದು ಸಂವಿಧಾನದ ಅರಿವು. ಅದನ್ನು ಮನವರಿಕೆ ಮಾಡಿಸಿ ಕೊಡುವ ಒಂದು ತರಗತಿಯನ್ನು ವ್ಯವಸ್ಥೆ ಮಾಡಿಸಿ ಪುಣ್ಯ ಕಟ್ಕೊಳ್ಳಿ.. ಸೆಕ್ಯುಲರಿಸಮ್ಮನ್ನು ಮತ್ತು ಸಂವಿಧಾನವನ್ನು ಒಪ್ಪದವರಿಂದ ಮಾಡಿಸ ಹೊರಟ ಮೋಟಿವೇಶನಲ್ ಸೆಶನ್ ಕೂಡಲೇ ನಿಲ್ಲಿಸಿ ಎಂದು ಇಸ್ಮತ್ ಪಜೀರ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...