Homeಮುಖಪುಟಪತ್ರಕರ್ತರ ಮೇಲೆ UAPA ವಿಧಿಸಿರುವುದು ಅಘೋಷಿತ ತುರ್ತು ಪರಿಸ್ಥಿತಿಯನ್ನು ಸೂಚಿಸುತ್ತದೆ: NWMI

ಪತ್ರಕರ್ತರ ಮೇಲೆ UAPA ವಿಧಿಸಿರುವುದು ಅಘೋಷಿತ ತುರ್ತು ಪರಿಸ್ಥಿತಿಯನ್ನು ಸೂಚಿಸುತ್ತದೆ: NWMI

- Advertisement -
- Advertisement -

ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ, ಇಂಡಿಯಾ (ಎನ್‌ಡಬ್ಲ್ಯುಎಂಐ) ಚೆನ್ನೈ ಘಟಕದ ಸದಸ್ಯರು, ನ್ಯೂಸ್‌ಕ್ಲಿಕ್‌ ವಿರುದ್ಧದ ಪೊಲೀಸರ ಕ್ರಮವನ್ನು ವಿರೋಧಿಸಿ ಶನಿವಾರ ಚೆನ್ನೈ ಪ್ರೆಸ್ ಕ್ಲಬ್‌ನ ಹೊರಗೆ ಪ್ರತಿಭಟಿಸಿದ್ದು, ಪೊಲೀಸರ ಕ್ರಮ ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಹೇಳಿದ್ದಾರೆ.

ಅವರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA)ಯನ್ನು ಪತ್ರಕರ್ತರ ಮೇಲೆ ವಿಧಿಸಿರುವುದನ್ನು ‘ಅಘೋಷಿತ ತುರ್ತುಪರಿಸ್ಥಿತಿ’ ಎಂದು ಕರೆದಿದ್ದಾರೆ. UAPAಯ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಸಂಗ್ರಹಣೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಕಾಯ್ದೆಯಲ್ಲಿನ ಪದಗಳು ಅಸ್ಪಷ್ಟವಾಗಿರುವುದರಿಂದ, ಪ್ರಾಸಿಕ್ಯೂಷನ್ ಯಾವುದೇ ಕೃತ್ಯವನ್ನು ಅಪರಾಧ ಅಥವಾ ಭಯೋತ್ಪಾದನೆ ಎಂದು ಹೆಸರಿಸಬಹುದು. ಯಾವುದೇ ಸಂಸ್ಥೆಗೆ ಸಂಬಂಧಿಸಿದ ಪುಸ್ತಕ ಅಥವಾ ವಸ್ತುವನ್ನು ಹೊಂದಿರುವುದು ಈ ಹಿಂದೆ ದೋಷಾರೋಪಣೆ ಎಂದು ಪರಿಗಣಿಸಲಾಗಿದೆ ಎಂದು ಫ್ರಂಟ್‌ಲೈನ್‌ನ ಸಂಪಾದಕ ವೈಷ್ಣಾ ರಾಯ್ ಹೇಳಿದ್ದಾರೆ.

ನ್ಯೂಸ್‌ಕ್ಲಿಕ್ ಚೀನಿಯರಿಂದ ಹಣವನ್ನು ತೆಗೆದುಕೊಂಡಿದೆ ಎಂದು ಎಫ್‌ಐಆರ್ ಹೇಳಿಕೊಂಡಿದೆ. ಭಾರತ ಸರ್ಕಾರದ ವಿರುದ್ಧ ಪೇಯ್ಡ್ ನ್ಯೂಸ್ ಪ್ರಕಟಿಸಲು ನ್ಯೂಸ್‌ಕ್ಲಿಕ್ ಚೀನಿಯರಿಂದ ಹಣ ಪಡೆದಿದೆ ಎಂದು ಎಫ್‌ಐಆರ್ ಹೇಳಿಕೊಂಡಿದ್ದರೂ, ಅಂತಹ ಯಾವುದೇ ಸುದ್ದಿಯನ್ನು ಪರಿಶೀಲನೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂನ ಅಧ್ಯಕ್ಷ ಶಶಿಕುಮಾರ್ ಮಾತನಾಡಿ, 1975ರ ತುರ್ತು ಪರಿಸ್ಥಿತಿಗೆ ದೇಶದ ಪರಿಸ್ಥಿತಿಯನ್ನು ಹೋಲಿಸಲು ಹಿಂಜರಿಯುತ್ತಿದ್ದವರೂ ಸಹ ಈಗ ಅದೇ ಪರಿಸ್ಥಿತಿಯನ್ನು ಹೊಂದಿದ್ದಾರೆ ಎಂಬುದನ್ನು ಮನವರಿಕೆಮಾಡಿಕೊಂಡಿದ್ದಾರೆ. ಇದು ಅಘೋಷಿತ ತುರ್ತು ಪರಿಸ್ಥಿತಿ. ನೀವು ಮುಕ್ತ ಮಾದ್ಯಮವನ್ನು ಕಂಬಿಯ ಹಿಂದೆ ಹಾಕಿದರೆ, ನಿಮ್ಮನ್ನು ನೀವು ಪ್ರಜಾಪ್ರಭುತ್ವ ವಾದಿಗಳು ಎಂದು ಕರೆಯುವ ಹಕ್ಕಿಲ್ಲ. ಚುನಾವಣೆಯಲ್ಲಿ ಅನೇಕ ಫ್ಯಾಸಿಸ್ಟರು ಆಯ್ಕೆಯಾಗಿ ಅಧಿಕಾರಕ್ಕೆ ಬಂದರೆ ಚುನಾವಣೆಗಳು ಪ್ರಜಾಪ್ರಭುತ್ವವನ್ನು ರೂಪಿಸುವುದಿಲ್ಲ ಎಂದು ಅವರು ಹೇಳಿದರು.

ಇದನ್ನು ಓದಿ: ಇಸ್ರೇಲ್ ಮೇಲೆ ಹಮಾಸ್ ಗುಂಪಿನ ರಾಕೆಟ್‌ ದಾಳಿಯಲ್ಲಿ ಕನಿಷ್ಠ 40 ಜನರು ಸಾವು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...