Homeಮುಖಪುಟಪತ್ರಕರ್ತರ ಮೇಲೆ UAPA ವಿಧಿಸಿರುವುದು ಅಘೋಷಿತ ತುರ್ತು ಪರಿಸ್ಥಿತಿಯನ್ನು ಸೂಚಿಸುತ್ತದೆ: NWMI

ಪತ್ರಕರ್ತರ ಮೇಲೆ UAPA ವಿಧಿಸಿರುವುದು ಅಘೋಷಿತ ತುರ್ತು ಪರಿಸ್ಥಿತಿಯನ್ನು ಸೂಚಿಸುತ್ತದೆ: NWMI

- Advertisement -
- Advertisement -

ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ, ಇಂಡಿಯಾ (ಎನ್‌ಡಬ್ಲ್ಯುಎಂಐ) ಚೆನ್ನೈ ಘಟಕದ ಸದಸ್ಯರು, ನ್ಯೂಸ್‌ಕ್ಲಿಕ್‌ ವಿರುದ್ಧದ ಪೊಲೀಸರ ಕ್ರಮವನ್ನು ವಿರೋಧಿಸಿ ಶನಿವಾರ ಚೆನ್ನೈ ಪ್ರೆಸ್ ಕ್ಲಬ್‌ನ ಹೊರಗೆ ಪ್ರತಿಭಟಿಸಿದ್ದು, ಪೊಲೀಸರ ಕ್ರಮ ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಹೇಳಿದ್ದಾರೆ.

ಅವರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA)ಯನ್ನು ಪತ್ರಕರ್ತರ ಮೇಲೆ ವಿಧಿಸಿರುವುದನ್ನು ‘ಅಘೋಷಿತ ತುರ್ತುಪರಿಸ್ಥಿತಿ’ ಎಂದು ಕರೆದಿದ್ದಾರೆ. UAPAಯ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಸಂಗ್ರಹಣೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಕಾಯ್ದೆಯಲ್ಲಿನ ಪದಗಳು ಅಸ್ಪಷ್ಟವಾಗಿರುವುದರಿಂದ, ಪ್ರಾಸಿಕ್ಯೂಷನ್ ಯಾವುದೇ ಕೃತ್ಯವನ್ನು ಅಪರಾಧ ಅಥವಾ ಭಯೋತ್ಪಾದನೆ ಎಂದು ಹೆಸರಿಸಬಹುದು. ಯಾವುದೇ ಸಂಸ್ಥೆಗೆ ಸಂಬಂಧಿಸಿದ ಪುಸ್ತಕ ಅಥವಾ ವಸ್ತುವನ್ನು ಹೊಂದಿರುವುದು ಈ ಹಿಂದೆ ದೋಷಾರೋಪಣೆ ಎಂದು ಪರಿಗಣಿಸಲಾಗಿದೆ ಎಂದು ಫ್ರಂಟ್‌ಲೈನ್‌ನ ಸಂಪಾದಕ ವೈಷ್ಣಾ ರಾಯ್ ಹೇಳಿದ್ದಾರೆ.

ನ್ಯೂಸ್‌ಕ್ಲಿಕ್ ಚೀನಿಯರಿಂದ ಹಣವನ್ನು ತೆಗೆದುಕೊಂಡಿದೆ ಎಂದು ಎಫ್‌ಐಆರ್ ಹೇಳಿಕೊಂಡಿದೆ. ಭಾರತ ಸರ್ಕಾರದ ವಿರುದ್ಧ ಪೇಯ್ಡ್ ನ್ಯೂಸ್ ಪ್ರಕಟಿಸಲು ನ್ಯೂಸ್‌ಕ್ಲಿಕ್ ಚೀನಿಯರಿಂದ ಹಣ ಪಡೆದಿದೆ ಎಂದು ಎಫ್‌ಐಆರ್ ಹೇಳಿಕೊಂಡಿದ್ದರೂ, ಅಂತಹ ಯಾವುದೇ ಸುದ್ದಿಯನ್ನು ಪರಿಶೀಲನೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂನ ಅಧ್ಯಕ್ಷ ಶಶಿಕುಮಾರ್ ಮಾತನಾಡಿ, 1975ರ ತುರ್ತು ಪರಿಸ್ಥಿತಿಗೆ ದೇಶದ ಪರಿಸ್ಥಿತಿಯನ್ನು ಹೋಲಿಸಲು ಹಿಂಜರಿಯುತ್ತಿದ್ದವರೂ ಸಹ ಈಗ ಅದೇ ಪರಿಸ್ಥಿತಿಯನ್ನು ಹೊಂದಿದ್ದಾರೆ ಎಂಬುದನ್ನು ಮನವರಿಕೆಮಾಡಿಕೊಂಡಿದ್ದಾರೆ. ಇದು ಅಘೋಷಿತ ತುರ್ತು ಪರಿಸ್ಥಿತಿ. ನೀವು ಮುಕ್ತ ಮಾದ್ಯಮವನ್ನು ಕಂಬಿಯ ಹಿಂದೆ ಹಾಕಿದರೆ, ನಿಮ್ಮನ್ನು ನೀವು ಪ್ರಜಾಪ್ರಭುತ್ವ ವಾದಿಗಳು ಎಂದು ಕರೆಯುವ ಹಕ್ಕಿಲ್ಲ. ಚುನಾವಣೆಯಲ್ಲಿ ಅನೇಕ ಫ್ಯಾಸಿಸ್ಟರು ಆಯ್ಕೆಯಾಗಿ ಅಧಿಕಾರಕ್ಕೆ ಬಂದರೆ ಚುನಾವಣೆಗಳು ಪ್ರಜಾಪ್ರಭುತ್ವವನ್ನು ರೂಪಿಸುವುದಿಲ್ಲ ಎಂದು ಅವರು ಹೇಳಿದರು.

ಇದನ್ನು ಓದಿ: ಇಸ್ರೇಲ್ ಮೇಲೆ ಹಮಾಸ್ ಗುಂಪಿನ ರಾಕೆಟ್‌ ದಾಳಿಯಲ್ಲಿ ಕನಿಷ್ಠ 40 ಜನರು ಸಾವು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...