Homeಸಿನಿಮಾಕ್ರೀಡೆಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರಗತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆ ಆರಂಭವಾಗಿ ಟೀಕೆಗೆ ಒಳಗಾಗಿ, ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಅರ್ಧಕ್ಕೆ ನಿಂತುಹೋಗಿದ್ದ ಐಪಿಎಲ್‌-2021 ಇದೀಗ ಮತ್ತೆ ಆರಂಭವಾಗುತ್ತಿದೆ. ಮೇ ತಿಂಗಳ ಆರಂಭದಲ್ಲಿ ಐಪಿಎಲ್‌ ಪಂದ್ಯಗಳು ಅರ್ಧಕ್ಕೆ ನಿಂತು ಹೋಗಿದ್ದವು. ನಾಲ್ಕು ತಿಂಗಳ ನಂತರ ಇಂದು (ಭಾನುವಾರ) ಮುಂಬೈ ಮತ್ತು ಚೆನೈ ತಂಡಗಳ ನಡುವೆ ದುಬೈನಲ್ಲಿ ಸಂಜೆ 7:30ಕ್ಕೆ ಪಂದ್ಯ ನಡೆಯಲಿದೆ.

ಕೊರೊನಾದಿಂದ ಅರ್ಧಕ್ಕೆ ನಿಂತಿದ್ದ ಪಂದ್ಯಗಳ ಪೈಕಿ ಇನ್ನೂ 31 ಪಂದ್ಯಗಳು ನಡೆಯಬೇಕಿದೆ. ಈ ಪಂದ್ಯಗಳು ದುಬೈ, ಶಾರ್ಜಾ, ಅಬುಧಾಬಿಯಲ್ಲಿ ನಡೆಯಲಿದ್ದು, ಫೈನಲ್‌ ಪಂದ್ಯ ಅಕ್ಟೋಬರ್ 15 ರಂದು ನಡೆಯಲಿದೆ.

ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್‌-ಡೆಲ್ಲಿ ನಡುವಿನ ಮುಖಾಮುಖಿ ಬಳಿಕ ಕೊರೊನಾ ಕಾರಣದಿಂದಾಗಿ ಪಂದ್ಯಾವಳಿಯನ್ನು ನಿಲ್ಲಿಸಲಾಗಿತ್ತು. ಮೊದಲಿದ್ದ ವೇಳಾಪಟ್ಟಿಯನ್ನು ಬದಲಿಸಲಾಗಿದೆ. ಇಲ್ಲಿನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಾಗಲಿವೆ.

ಈ ಬಾರಿಯ ಐಪಿಎಲ್‌ನಿಂದ ಡೇವಿಡ್‌ ಮಲಾನ್‌, ಕ್ರಿಸ್‌ ವೋಕ್ಸ್‌, ಜಾನಿ ಬೇರ್‌ಸ್ಟೊ, ಜಾಸ್‌ ಬಟ್ಲರ್‌, ಜೋಫ್ರ ಆರ್ಚರ್‌, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌, ಪ್ಯಾಟ್‌ ಕಮಿನ್ಸ್‌ ಮೊದಲಾದ ವಿದೇಶಿ ಆಟಗಾರರು ಹೊರಗುಳಿದ್ದಾರೆ. ಕೆಲವು ಸ್ಟಾರ್‌ ವಿದೇಶಿ ಆಟಗಾರರು ಹಿಂದೆ ಸರಿದರೂ ಕೂಟದ ಆಕರ್ಷಣೆಯೇನೂ ಕಡಿಮೆ ಆಗದೆಂಬುದೊಂದು ಲೆಕ್ಕಾಚಾರವಿದೆ.

ಇದನ್ನೂ ಓದಿ: ಕೊಹ್ಲಿ ನಿರ್ಧಾರಕ್ಕೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಪ್ರತಿಕ್ರಿಯೆ

2019ರ ಬಳಿಕ ಪ್ರೇಕ್ಷಕರಿಗೆ ಬಾಗಿಲು ತೆರೆಯುವ ಕಾರಣಕ್ಕಾಗಿಯೂ ಯುಎಇ ಆವೃತ್ತಿಯ ಐಪಿಎಲ್‌ ಆಕರ್ಷಣೆ ಹೆಚ್ಚಿದೆ. ಸ್ಟೇಡಿಯಂ ಸಾಮರ್ಥ್ಯದ ಶೇ. 50 ವೀಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಪ್ರೇಕ್ಷಕರು ಆನ್‌ಲೈನ್‌ನಲ್ಲೇ ಟಿಕೆಟ್‌ಗಳನ್ನು ಖರೀದಿಸಿ ಪಂದ್ಯ ವೀಕ್ಷಿಸಬಹುದಾಗಿದೆ.

ಐಪಿಎಲ್ ಆರಂಭದಲ್ಲಿ ಭಾರತದಲ್ಲಿ ನಡೆದ 29 ಪಂದ್ಯಗಳಲ್ಲಿ 2020ರ ರನ್ನರ್ ಅಪ್‌ ಡೆಲ್ಲಿ ಕ್ಯಾಪಿಟಲ್ಸ್‌ 12 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಡಿದ 8 ಪಂದ್ಯಗಳಲ್ಲಿ ಆರನ್ನು ಗೆದ್ದಿದೆ. ಚೆನ್ನೈ ಮತ್ತು ಆರ್‌ಸಿಬಿ ತಲಾ 10 ಅಂಕ ಗಳಿಸಿವೆ. ಆದರೆ ರನ್‌ರೇಟ್‌ನಲ್ಲಿ ಮುಂದಿರುವ ಧೋನಿ ಪಡೆ ದ್ವಿತೀಯ ಸ್ಥಾನದಲ್ಲಿದೆ. ಕೊಹ್ಲಿ ಟೀಮ್‌ಗೆ 3ನೇ ಸ್ಥಾನ. ಭಾನುವಾರದ ಮೊದಲ ಪಂದ್ಯವನ್ನು ಗೆದ್ದರೆ ಚೆನ್ನೈ ಅಗ್ರಸ್ಥಾನಕ್ಕೆ ಜಿಗಿಯಲಿದೆ.

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದ ಬಗ್ಗೆ ಅಂತರಾಷ್ಟ್ರೀಯ ಪತ್ರಿಕೆಗಳು ವರದಿ ಮಾಡಿದ್ದವು. ಈ ನಡುವೆ ಐಪಿಎಲ್ ಆರಂಭಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ:  ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...