Homeಸಿನಿಮಾಕ್ರೀಡೆಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರಗತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆ ಆರಂಭವಾಗಿ ಟೀಕೆಗೆ ಒಳಗಾಗಿ, ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಅರ್ಧಕ್ಕೆ ನಿಂತುಹೋಗಿದ್ದ ಐಪಿಎಲ್‌-2021 ಇದೀಗ ಮತ್ತೆ ಆರಂಭವಾಗುತ್ತಿದೆ. ಮೇ ತಿಂಗಳ ಆರಂಭದಲ್ಲಿ ಐಪಿಎಲ್‌ ಪಂದ್ಯಗಳು ಅರ್ಧಕ್ಕೆ ನಿಂತು ಹೋಗಿದ್ದವು. ನಾಲ್ಕು ತಿಂಗಳ ನಂತರ ಇಂದು (ಭಾನುವಾರ) ಮುಂಬೈ ಮತ್ತು ಚೆನೈ ತಂಡಗಳ ನಡುವೆ ದುಬೈನಲ್ಲಿ ಸಂಜೆ 7:30ಕ್ಕೆ ಪಂದ್ಯ ನಡೆಯಲಿದೆ.

ಕೊರೊನಾದಿಂದ ಅರ್ಧಕ್ಕೆ ನಿಂತಿದ್ದ ಪಂದ್ಯಗಳ ಪೈಕಿ ಇನ್ನೂ 31 ಪಂದ್ಯಗಳು ನಡೆಯಬೇಕಿದೆ. ಈ ಪಂದ್ಯಗಳು ದುಬೈ, ಶಾರ್ಜಾ, ಅಬುಧಾಬಿಯಲ್ಲಿ ನಡೆಯಲಿದ್ದು, ಫೈನಲ್‌ ಪಂದ್ಯ ಅಕ್ಟೋಬರ್ 15 ರಂದು ನಡೆಯಲಿದೆ.

ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್‌-ಡೆಲ್ಲಿ ನಡುವಿನ ಮುಖಾಮುಖಿ ಬಳಿಕ ಕೊರೊನಾ ಕಾರಣದಿಂದಾಗಿ ಪಂದ್ಯಾವಳಿಯನ್ನು ನಿಲ್ಲಿಸಲಾಗಿತ್ತು. ಮೊದಲಿದ್ದ ವೇಳಾಪಟ್ಟಿಯನ್ನು ಬದಲಿಸಲಾಗಿದೆ. ಇಲ್ಲಿನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಾಗಲಿವೆ.

ಈ ಬಾರಿಯ ಐಪಿಎಲ್‌ನಿಂದ ಡೇವಿಡ್‌ ಮಲಾನ್‌, ಕ್ರಿಸ್‌ ವೋಕ್ಸ್‌, ಜಾನಿ ಬೇರ್‌ಸ್ಟೊ, ಜಾಸ್‌ ಬಟ್ಲರ್‌, ಜೋಫ್ರ ಆರ್ಚರ್‌, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌, ಪ್ಯಾಟ್‌ ಕಮಿನ್ಸ್‌ ಮೊದಲಾದ ವಿದೇಶಿ ಆಟಗಾರರು ಹೊರಗುಳಿದ್ದಾರೆ. ಕೆಲವು ಸ್ಟಾರ್‌ ವಿದೇಶಿ ಆಟಗಾರರು ಹಿಂದೆ ಸರಿದರೂ ಕೂಟದ ಆಕರ್ಷಣೆಯೇನೂ ಕಡಿಮೆ ಆಗದೆಂಬುದೊಂದು ಲೆಕ್ಕಾಚಾರವಿದೆ.

ಇದನ್ನೂ ಓದಿ: ಕೊಹ್ಲಿ ನಿರ್ಧಾರಕ್ಕೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಪ್ರತಿಕ್ರಿಯೆ

2019ರ ಬಳಿಕ ಪ್ರೇಕ್ಷಕರಿಗೆ ಬಾಗಿಲು ತೆರೆಯುವ ಕಾರಣಕ್ಕಾಗಿಯೂ ಯುಎಇ ಆವೃತ್ತಿಯ ಐಪಿಎಲ್‌ ಆಕರ್ಷಣೆ ಹೆಚ್ಚಿದೆ. ಸ್ಟೇಡಿಯಂ ಸಾಮರ್ಥ್ಯದ ಶೇ. 50 ವೀಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಪ್ರೇಕ್ಷಕರು ಆನ್‌ಲೈನ್‌ನಲ್ಲೇ ಟಿಕೆಟ್‌ಗಳನ್ನು ಖರೀದಿಸಿ ಪಂದ್ಯ ವೀಕ್ಷಿಸಬಹುದಾಗಿದೆ.

ಐಪಿಎಲ್ ಆರಂಭದಲ್ಲಿ ಭಾರತದಲ್ಲಿ ನಡೆದ 29 ಪಂದ್ಯಗಳಲ್ಲಿ 2020ರ ರನ್ನರ್ ಅಪ್‌ ಡೆಲ್ಲಿ ಕ್ಯಾಪಿಟಲ್ಸ್‌ 12 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಡಿದ 8 ಪಂದ್ಯಗಳಲ್ಲಿ ಆರನ್ನು ಗೆದ್ದಿದೆ. ಚೆನ್ನೈ ಮತ್ತು ಆರ್‌ಸಿಬಿ ತಲಾ 10 ಅಂಕ ಗಳಿಸಿವೆ. ಆದರೆ ರನ್‌ರೇಟ್‌ನಲ್ಲಿ ಮುಂದಿರುವ ಧೋನಿ ಪಡೆ ದ್ವಿತೀಯ ಸ್ಥಾನದಲ್ಲಿದೆ. ಕೊಹ್ಲಿ ಟೀಮ್‌ಗೆ 3ನೇ ಸ್ಥಾನ. ಭಾನುವಾರದ ಮೊದಲ ಪಂದ್ಯವನ್ನು ಗೆದ್ದರೆ ಚೆನ್ನೈ ಅಗ್ರಸ್ಥಾನಕ್ಕೆ ಜಿಗಿಯಲಿದೆ.

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದ ಬಗ್ಗೆ ಅಂತರಾಷ್ಟ್ರೀಯ ಪತ್ರಿಕೆಗಳು ವರದಿ ಮಾಡಿದ್ದವು. ಈ ನಡುವೆ ಐಪಿಎಲ್ ಆರಂಭಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ:  ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...