Homeಸಿನಿಮಾಕ್ರೀಡೆಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರಗತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆ ಆರಂಭವಾಗಿ ಟೀಕೆಗೆ ಒಳಗಾಗಿ, ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಅರ್ಧಕ್ಕೆ ನಿಂತುಹೋಗಿದ್ದ ಐಪಿಎಲ್‌-2021 ಇದೀಗ ಮತ್ತೆ ಆರಂಭವಾಗುತ್ತಿದೆ. ಮೇ ತಿಂಗಳ ಆರಂಭದಲ್ಲಿ ಐಪಿಎಲ್‌ ಪಂದ್ಯಗಳು ಅರ್ಧಕ್ಕೆ ನಿಂತು ಹೋಗಿದ್ದವು. ನಾಲ್ಕು ತಿಂಗಳ ನಂತರ ಇಂದು (ಭಾನುವಾರ) ಮುಂಬೈ ಮತ್ತು ಚೆನೈ ತಂಡಗಳ ನಡುವೆ ದುಬೈನಲ್ಲಿ ಸಂಜೆ 7:30ಕ್ಕೆ ಪಂದ್ಯ ನಡೆಯಲಿದೆ.

ಕೊರೊನಾದಿಂದ ಅರ್ಧಕ್ಕೆ ನಿಂತಿದ್ದ ಪಂದ್ಯಗಳ ಪೈಕಿ ಇನ್ನೂ 31 ಪಂದ್ಯಗಳು ನಡೆಯಬೇಕಿದೆ. ಈ ಪಂದ್ಯಗಳು ದುಬೈ, ಶಾರ್ಜಾ, ಅಬುಧಾಬಿಯಲ್ಲಿ ನಡೆಯಲಿದ್ದು, ಫೈನಲ್‌ ಪಂದ್ಯ ಅಕ್ಟೋಬರ್ 15 ರಂದು ನಡೆಯಲಿದೆ.

ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್‌-ಡೆಲ್ಲಿ ನಡುವಿನ ಮುಖಾಮುಖಿ ಬಳಿಕ ಕೊರೊನಾ ಕಾರಣದಿಂದಾಗಿ ಪಂದ್ಯಾವಳಿಯನ್ನು ನಿಲ್ಲಿಸಲಾಗಿತ್ತು. ಮೊದಲಿದ್ದ ವೇಳಾಪಟ್ಟಿಯನ್ನು ಬದಲಿಸಲಾಗಿದೆ. ಇಲ್ಲಿನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಾಗಲಿವೆ.

ಈ ಬಾರಿಯ ಐಪಿಎಲ್‌ನಿಂದ ಡೇವಿಡ್‌ ಮಲಾನ್‌, ಕ್ರಿಸ್‌ ವೋಕ್ಸ್‌, ಜಾನಿ ಬೇರ್‌ಸ್ಟೊ, ಜಾಸ್‌ ಬಟ್ಲರ್‌, ಜೋಫ್ರ ಆರ್ಚರ್‌, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌, ಪ್ಯಾಟ್‌ ಕಮಿನ್ಸ್‌ ಮೊದಲಾದ ವಿದೇಶಿ ಆಟಗಾರರು ಹೊರಗುಳಿದ್ದಾರೆ. ಕೆಲವು ಸ್ಟಾರ್‌ ವಿದೇಶಿ ಆಟಗಾರರು ಹಿಂದೆ ಸರಿದರೂ ಕೂಟದ ಆಕರ್ಷಣೆಯೇನೂ ಕಡಿಮೆ ಆಗದೆಂಬುದೊಂದು ಲೆಕ್ಕಾಚಾರವಿದೆ.

ಇದನ್ನೂ ಓದಿ: ಕೊಹ್ಲಿ ನಿರ್ಧಾರಕ್ಕೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಪ್ರತಿಕ್ರಿಯೆ

2019ರ ಬಳಿಕ ಪ್ರೇಕ್ಷಕರಿಗೆ ಬಾಗಿಲು ತೆರೆಯುವ ಕಾರಣಕ್ಕಾಗಿಯೂ ಯುಎಇ ಆವೃತ್ತಿಯ ಐಪಿಎಲ್‌ ಆಕರ್ಷಣೆ ಹೆಚ್ಚಿದೆ. ಸ್ಟೇಡಿಯಂ ಸಾಮರ್ಥ್ಯದ ಶೇ. 50 ವೀಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಪ್ರೇಕ್ಷಕರು ಆನ್‌ಲೈನ್‌ನಲ್ಲೇ ಟಿಕೆಟ್‌ಗಳನ್ನು ಖರೀದಿಸಿ ಪಂದ್ಯ ವೀಕ್ಷಿಸಬಹುದಾಗಿದೆ.

ಐಪಿಎಲ್ ಆರಂಭದಲ್ಲಿ ಭಾರತದಲ್ಲಿ ನಡೆದ 29 ಪಂದ್ಯಗಳಲ್ಲಿ 2020ರ ರನ್ನರ್ ಅಪ್‌ ಡೆಲ್ಲಿ ಕ್ಯಾಪಿಟಲ್ಸ್‌ 12 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಡಿದ 8 ಪಂದ್ಯಗಳಲ್ಲಿ ಆರನ್ನು ಗೆದ್ದಿದೆ. ಚೆನ್ನೈ ಮತ್ತು ಆರ್‌ಸಿಬಿ ತಲಾ 10 ಅಂಕ ಗಳಿಸಿವೆ. ಆದರೆ ರನ್‌ರೇಟ್‌ನಲ್ಲಿ ಮುಂದಿರುವ ಧೋನಿ ಪಡೆ ದ್ವಿತೀಯ ಸ್ಥಾನದಲ್ಲಿದೆ. ಕೊಹ್ಲಿ ಟೀಮ್‌ಗೆ 3ನೇ ಸ್ಥಾನ. ಭಾನುವಾರದ ಮೊದಲ ಪಂದ್ಯವನ್ನು ಗೆದ್ದರೆ ಚೆನ್ನೈ ಅಗ್ರಸ್ಥಾನಕ್ಕೆ ಜಿಗಿಯಲಿದೆ.

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದ ಬಗ್ಗೆ ಅಂತರಾಷ್ಟ್ರೀಯ ಪತ್ರಿಕೆಗಳು ವರದಿ ಮಾಡಿದ್ದವು. ಈ ನಡುವೆ ಐಪಿಎಲ್ ಆರಂಭಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ:  ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...