Homeಸಿನಿಮಾಕ್ರೀಡೆಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರಗತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆ ಆರಂಭವಾಗಿ ಟೀಕೆಗೆ ಒಳಗಾಗಿ, ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಅರ್ಧಕ್ಕೆ ನಿಂತುಹೋಗಿದ್ದ ಐಪಿಎಲ್‌-2021 ಇದೀಗ ಮತ್ತೆ ಆರಂಭವಾಗುತ್ತಿದೆ. ಮೇ ತಿಂಗಳ ಆರಂಭದಲ್ಲಿ ಐಪಿಎಲ್‌ ಪಂದ್ಯಗಳು ಅರ್ಧಕ್ಕೆ ನಿಂತು ಹೋಗಿದ್ದವು. ನಾಲ್ಕು ತಿಂಗಳ ನಂತರ ಇಂದು (ಭಾನುವಾರ) ಮುಂಬೈ ಮತ್ತು ಚೆನೈ ತಂಡಗಳ ನಡುವೆ ದುಬೈನಲ್ಲಿ ಸಂಜೆ 7:30ಕ್ಕೆ ಪಂದ್ಯ ನಡೆಯಲಿದೆ.

ಕೊರೊನಾದಿಂದ ಅರ್ಧಕ್ಕೆ ನಿಂತಿದ್ದ ಪಂದ್ಯಗಳ ಪೈಕಿ ಇನ್ನೂ 31 ಪಂದ್ಯಗಳು ನಡೆಯಬೇಕಿದೆ. ಈ ಪಂದ್ಯಗಳು ದುಬೈ, ಶಾರ್ಜಾ, ಅಬುಧಾಬಿಯಲ್ಲಿ ನಡೆಯಲಿದ್ದು, ಫೈನಲ್‌ ಪಂದ್ಯ ಅಕ್ಟೋಬರ್ 15 ರಂದು ನಡೆಯಲಿದೆ.

ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್‌-ಡೆಲ್ಲಿ ನಡುವಿನ ಮುಖಾಮುಖಿ ಬಳಿಕ ಕೊರೊನಾ ಕಾರಣದಿಂದಾಗಿ ಪಂದ್ಯಾವಳಿಯನ್ನು ನಿಲ್ಲಿಸಲಾಗಿತ್ತು. ಮೊದಲಿದ್ದ ವೇಳಾಪಟ್ಟಿಯನ್ನು ಬದಲಿಸಲಾಗಿದೆ. ಇಲ್ಲಿನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಾಗಲಿವೆ.

ಈ ಬಾರಿಯ ಐಪಿಎಲ್‌ನಿಂದ ಡೇವಿಡ್‌ ಮಲಾನ್‌, ಕ್ರಿಸ್‌ ವೋಕ್ಸ್‌, ಜಾನಿ ಬೇರ್‌ಸ್ಟೊ, ಜಾಸ್‌ ಬಟ್ಲರ್‌, ಜೋಫ್ರ ಆರ್ಚರ್‌, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌, ಪ್ಯಾಟ್‌ ಕಮಿನ್ಸ್‌ ಮೊದಲಾದ ವಿದೇಶಿ ಆಟಗಾರರು ಹೊರಗುಳಿದ್ದಾರೆ. ಕೆಲವು ಸ್ಟಾರ್‌ ವಿದೇಶಿ ಆಟಗಾರರು ಹಿಂದೆ ಸರಿದರೂ ಕೂಟದ ಆಕರ್ಷಣೆಯೇನೂ ಕಡಿಮೆ ಆಗದೆಂಬುದೊಂದು ಲೆಕ್ಕಾಚಾರವಿದೆ.

ಇದನ್ನೂ ಓದಿ: ಕೊಹ್ಲಿ ನಿರ್ಧಾರಕ್ಕೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಪ್ರತಿಕ್ರಿಯೆ

2019ರ ಬಳಿಕ ಪ್ರೇಕ್ಷಕರಿಗೆ ಬಾಗಿಲು ತೆರೆಯುವ ಕಾರಣಕ್ಕಾಗಿಯೂ ಯುಎಇ ಆವೃತ್ತಿಯ ಐಪಿಎಲ್‌ ಆಕರ್ಷಣೆ ಹೆಚ್ಚಿದೆ. ಸ್ಟೇಡಿಯಂ ಸಾಮರ್ಥ್ಯದ ಶೇ. 50 ವೀಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಪ್ರೇಕ್ಷಕರು ಆನ್‌ಲೈನ್‌ನಲ್ಲೇ ಟಿಕೆಟ್‌ಗಳನ್ನು ಖರೀದಿಸಿ ಪಂದ್ಯ ವೀಕ್ಷಿಸಬಹುದಾಗಿದೆ.

ಐಪಿಎಲ್ ಆರಂಭದಲ್ಲಿ ಭಾರತದಲ್ಲಿ ನಡೆದ 29 ಪಂದ್ಯಗಳಲ್ಲಿ 2020ರ ರನ್ನರ್ ಅಪ್‌ ಡೆಲ್ಲಿ ಕ್ಯಾಪಿಟಲ್ಸ್‌ 12 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಡಿದ 8 ಪಂದ್ಯಗಳಲ್ಲಿ ಆರನ್ನು ಗೆದ್ದಿದೆ. ಚೆನ್ನೈ ಮತ್ತು ಆರ್‌ಸಿಬಿ ತಲಾ 10 ಅಂಕ ಗಳಿಸಿವೆ. ಆದರೆ ರನ್‌ರೇಟ್‌ನಲ್ಲಿ ಮುಂದಿರುವ ಧೋನಿ ಪಡೆ ದ್ವಿತೀಯ ಸ್ಥಾನದಲ್ಲಿದೆ. ಕೊಹ್ಲಿ ಟೀಮ್‌ಗೆ 3ನೇ ಸ್ಥಾನ. ಭಾನುವಾರದ ಮೊದಲ ಪಂದ್ಯವನ್ನು ಗೆದ್ದರೆ ಚೆನ್ನೈ ಅಗ್ರಸ್ಥಾನಕ್ಕೆ ಜಿಗಿಯಲಿದೆ.

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದ ಬಗ್ಗೆ ಅಂತರಾಷ್ಟ್ರೀಯ ಪತ್ರಿಕೆಗಳು ವರದಿ ಮಾಡಿದ್ದವು. ಈ ನಡುವೆ ಐಪಿಎಲ್ ಆರಂಭಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ:  ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...