Homeಸಿನಿಮಾಕ್ರೀಡೆಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರಗತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆ ಆರಂಭವಾಗಿ ಟೀಕೆಗೆ ಒಳಗಾಗಿ, ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಅರ್ಧಕ್ಕೆ ನಿಂತುಹೋಗಿದ್ದ ಐಪಿಎಲ್‌-2021 ಇದೀಗ ಮತ್ತೆ ಆರಂಭವಾಗುತ್ತಿದೆ. ಮೇ ತಿಂಗಳ ಆರಂಭದಲ್ಲಿ ಐಪಿಎಲ್‌ ಪಂದ್ಯಗಳು ಅರ್ಧಕ್ಕೆ ನಿಂತು ಹೋಗಿದ್ದವು. ನಾಲ್ಕು ತಿಂಗಳ ನಂತರ ಇಂದು (ಭಾನುವಾರ) ಮುಂಬೈ ಮತ್ತು ಚೆನೈ ತಂಡಗಳ ನಡುವೆ ದುಬೈನಲ್ಲಿ ಸಂಜೆ 7:30ಕ್ಕೆ ಪಂದ್ಯ ನಡೆಯಲಿದೆ.

ಕೊರೊನಾದಿಂದ ಅರ್ಧಕ್ಕೆ ನಿಂತಿದ್ದ ಪಂದ್ಯಗಳ ಪೈಕಿ ಇನ್ನೂ 31 ಪಂದ್ಯಗಳು ನಡೆಯಬೇಕಿದೆ. ಈ ಪಂದ್ಯಗಳು ದುಬೈ, ಶಾರ್ಜಾ, ಅಬುಧಾಬಿಯಲ್ಲಿ ನಡೆಯಲಿದ್ದು, ಫೈನಲ್‌ ಪಂದ್ಯ ಅಕ್ಟೋಬರ್ 15 ರಂದು ನಡೆಯಲಿದೆ.

ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್‌-ಡೆಲ್ಲಿ ನಡುವಿನ ಮುಖಾಮುಖಿ ಬಳಿಕ ಕೊರೊನಾ ಕಾರಣದಿಂದಾಗಿ ಪಂದ್ಯಾವಳಿಯನ್ನು ನಿಲ್ಲಿಸಲಾಗಿತ್ತು. ಮೊದಲಿದ್ದ ವೇಳಾಪಟ್ಟಿಯನ್ನು ಬದಲಿಸಲಾಗಿದೆ. ಇಲ್ಲಿನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಾಗಲಿವೆ.

ಈ ಬಾರಿಯ ಐಪಿಎಲ್‌ನಿಂದ ಡೇವಿಡ್‌ ಮಲಾನ್‌, ಕ್ರಿಸ್‌ ವೋಕ್ಸ್‌, ಜಾನಿ ಬೇರ್‌ಸ್ಟೊ, ಜಾಸ್‌ ಬಟ್ಲರ್‌, ಜೋಫ್ರ ಆರ್ಚರ್‌, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌, ಪ್ಯಾಟ್‌ ಕಮಿನ್ಸ್‌ ಮೊದಲಾದ ವಿದೇಶಿ ಆಟಗಾರರು ಹೊರಗುಳಿದ್ದಾರೆ. ಕೆಲವು ಸ್ಟಾರ್‌ ವಿದೇಶಿ ಆಟಗಾರರು ಹಿಂದೆ ಸರಿದರೂ ಕೂಟದ ಆಕರ್ಷಣೆಯೇನೂ ಕಡಿಮೆ ಆಗದೆಂಬುದೊಂದು ಲೆಕ್ಕಾಚಾರವಿದೆ.

ಇದನ್ನೂ ಓದಿ: ಕೊಹ್ಲಿ ನಿರ್ಧಾರಕ್ಕೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಪ್ರತಿಕ್ರಿಯೆ

2019ರ ಬಳಿಕ ಪ್ರೇಕ್ಷಕರಿಗೆ ಬಾಗಿಲು ತೆರೆಯುವ ಕಾರಣಕ್ಕಾಗಿಯೂ ಯುಎಇ ಆವೃತ್ತಿಯ ಐಪಿಎಲ್‌ ಆಕರ್ಷಣೆ ಹೆಚ್ಚಿದೆ. ಸ್ಟೇಡಿಯಂ ಸಾಮರ್ಥ್ಯದ ಶೇ. 50 ವೀಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಪ್ರೇಕ್ಷಕರು ಆನ್‌ಲೈನ್‌ನಲ್ಲೇ ಟಿಕೆಟ್‌ಗಳನ್ನು ಖರೀದಿಸಿ ಪಂದ್ಯ ವೀಕ್ಷಿಸಬಹುದಾಗಿದೆ.

ಐಪಿಎಲ್ ಆರಂಭದಲ್ಲಿ ಭಾರತದಲ್ಲಿ ನಡೆದ 29 ಪಂದ್ಯಗಳಲ್ಲಿ 2020ರ ರನ್ನರ್ ಅಪ್‌ ಡೆಲ್ಲಿ ಕ್ಯಾಪಿಟಲ್ಸ್‌ 12 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಡಿದ 8 ಪಂದ್ಯಗಳಲ್ಲಿ ಆರನ್ನು ಗೆದ್ದಿದೆ. ಚೆನ್ನೈ ಮತ್ತು ಆರ್‌ಸಿಬಿ ತಲಾ 10 ಅಂಕ ಗಳಿಸಿವೆ. ಆದರೆ ರನ್‌ರೇಟ್‌ನಲ್ಲಿ ಮುಂದಿರುವ ಧೋನಿ ಪಡೆ ದ್ವಿತೀಯ ಸ್ಥಾನದಲ್ಲಿದೆ. ಕೊಹ್ಲಿ ಟೀಮ್‌ಗೆ 3ನೇ ಸ್ಥಾನ. ಭಾನುವಾರದ ಮೊದಲ ಪಂದ್ಯವನ್ನು ಗೆದ್ದರೆ ಚೆನ್ನೈ ಅಗ್ರಸ್ಥಾನಕ್ಕೆ ಜಿಗಿಯಲಿದೆ.

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದ ಬಗ್ಗೆ ಅಂತರಾಷ್ಟ್ರೀಯ ಪತ್ರಿಕೆಗಳು ವರದಿ ಮಾಡಿದ್ದವು. ಈ ನಡುವೆ ಐಪಿಎಲ್ ಆರಂಭಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ:  ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...