Homeಸಿನಿಮಾಕ್ರೀಡೆಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರಗತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆ ಆರಂಭವಾಗಿ ಟೀಕೆಗೆ ಒಳಗಾಗಿ, ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಅರ್ಧಕ್ಕೆ ನಿಂತುಹೋಗಿದ್ದ ಐಪಿಎಲ್‌-2021 ಇದೀಗ ಮತ್ತೆ ಆರಂಭವಾಗುತ್ತಿದೆ. ಮೇ ತಿಂಗಳ ಆರಂಭದಲ್ಲಿ ಐಪಿಎಲ್‌ ಪಂದ್ಯಗಳು ಅರ್ಧಕ್ಕೆ ನಿಂತು ಹೋಗಿದ್ದವು. ನಾಲ್ಕು ತಿಂಗಳ ನಂತರ ಇಂದು (ಭಾನುವಾರ) ಮುಂಬೈ ಮತ್ತು ಚೆನೈ ತಂಡಗಳ ನಡುವೆ ದುಬೈನಲ್ಲಿ ಸಂಜೆ 7:30ಕ್ಕೆ ಪಂದ್ಯ ನಡೆಯಲಿದೆ.

ಕೊರೊನಾದಿಂದ ಅರ್ಧಕ್ಕೆ ನಿಂತಿದ್ದ ಪಂದ್ಯಗಳ ಪೈಕಿ ಇನ್ನೂ 31 ಪಂದ್ಯಗಳು ನಡೆಯಬೇಕಿದೆ. ಈ ಪಂದ್ಯಗಳು ದುಬೈ, ಶಾರ್ಜಾ, ಅಬುಧಾಬಿಯಲ್ಲಿ ನಡೆಯಲಿದ್ದು, ಫೈನಲ್‌ ಪಂದ್ಯ ಅಕ್ಟೋಬರ್ 15 ರಂದು ನಡೆಯಲಿದೆ.

ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್‌-ಡೆಲ್ಲಿ ನಡುವಿನ ಮುಖಾಮುಖಿ ಬಳಿಕ ಕೊರೊನಾ ಕಾರಣದಿಂದಾಗಿ ಪಂದ್ಯಾವಳಿಯನ್ನು ನಿಲ್ಲಿಸಲಾಗಿತ್ತು. ಮೊದಲಿದ್ದ ವೇಳಾಪಟ್ಟಿಯನ್ನು ಬದಲಿಸಲಾಗಿದೆ. ಇಲ್ಲಿನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಾಗಲಿವೆ.

ಈ ಬಾರಿಯ ಐಪಿಎಲ್‌ನಿಂದ ಡೇವಿಡ್‌ ಮಲಾನ್‌, ಕ್ರಿಸ್‌ ವೋಕ್ಸ್‌, ಜಾನಿ ಬೇರ್‌ಸ್ಟೊ, ಜಾಸ್‌ ಬಟ್ಲರ್‌, ಜೋಫ್ರ ಆರ್ಚರ್‌, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌, ಪ್ಯಾಟ್‌ ಕಮಿನ್ಸ್‌ ಮೊದಲಾದ ವಿದೇಶಿ ಆಟಗಾರರು ಹೊರಗುಳಿದ್ದಾರೆ. ಕೆಲವು ಸ್ಟಾರ್‌ ವಿದೇಶಿ ಆಟಗಾರರು ಹಿಂದೆ ಸರಿದರೂ ಕೂಟದ ಆಕರ್ಷಣೆಯೇನೂ ಕಡಿಮೆ ಆಗದೆಂಬುದೊಂದು ಲೆಕ್ಕಾಚಾರವಿದೆ.

ಇದನ್ನೂ ಓದಿ: ಕೊಹ್ಲಿ ನಿರ್ಧಾರಕ್ಕೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಪ್ರತಿಕ್ರಿಯೆ

2019ರ ಬಳಿಕ ಪ್ರೇಕ್ಷಕರಿಗೆ ಬಾಗಿಲು ತೆರೆಯುವ ಕಾರಣಕ್ಕಾಗಿಯೂ ಯುಎಇ ಆವೃತ್ತಿಯ ಐಪಿಎಲ್‌ ಆಕರ್ಷಣೆ ಹೆಚ್ಚಿದೆ. ಸ್ಟೇಡಿಯಂ ಸಾಮರ್ಥ್ಯದ ಶೇ. 50 ವೀಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಪ್ರೇಕ್ಷಕರು ಆನ್‌ಲೈನ್‌ನಲ್ಲೇ ಟಿಕೆಟ್‌ಗಳನ್ನು ಖರೀದಿಸಿ ಪಂದ್ಯ ವೀಕ್ಷಿಸಬಹುದಾಗಿದೆ.

ಐಪಿಎಲ್ ಆರಂಭದಲ್ಲಿ ಭಾರತದಲ್ಲಿ ನಡೆದ 29 ಪಂದ್ಯಗಳಲ್ಲಿ 2020ರ ರನ್ನರ್ ಅಪ್‌ ಡೆಲ್ಲಿ ಕ್ಯಾಪಿಟಲ್ಸ್‌ 12 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಡಿದ 8 ಪಂದ್ಯಗಳಲ್ಲಿ ಆರನ್ನು ಗೆದ್ದಿದೆ. ಚೆನ್ನೈ ಮತ್ತು ಆರ್‌ಸಿಬಿ ತಲಾ 10 ಅಂಕ ಗಳಿಸಿವೆ. ಆದರೆ ರನ್‌ರೇಟ್‌ನಲ್ಲಿ ಮುಂದಿರುವ ಧೋನಿ ಪಡೆ ದ್ವಿತೀಯ ಸ್ಥಾನದಲ್ಲಿದೆ. ಕೊಹ್ಲಿ ಟೀಮ್‌ಗೆ 3ನೇ ಸ್ಥಾನ. ಭಾನುವಾರದ ಮೊದಲ ಪಂದ್ಯವನ್ನು ಗೆದ್ದರೆ ಚೆನ್ನೈ ಅಗ್ರಸ್ಥಾನಕ್ಕೆ ಜಿಗಿಯಲಿದೆ.

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದ ಬಗ್ಗೆ ಅಂತರಾಷ್ಟ್ರೀಯ ಪತ್ರಿಕೆಗಳು ವರದಿ ಮಾಡಿದ್ದವು. ಈ ನಡುವೆ ಐಪಿಎಲ್ ಆರಂಭಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ:  ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...