Homeಸಿನಿಮಾಕ್ರೀಡೆಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ಇಂದಿನಿಂದ ಐಪಿಎಲ್‌ ಮತ್ತೆ ಆರಂಭ: ಮುಂಬೈ ಮತ್ತು ಚೆನೈ ತಂಡಗಳ ನಡುವೆ ಸೆಣಸಾಟ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರಗತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆ ಆರಂಭವಾಗಿ ಟೀಕೆಗೆ ಒಳಗಾಗಿ, ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಅರ್ಧಕ್ಕೆ ನಿಂತುಹೋಗಿದ್ದ ಐಪಿಎಲ್‌-2021 ಇದೀಗ ಮತ್ತೆ ಆರಂಭವಾಗುತ್ತಿದೆ. ಮೇ ತಿಂಗಳ ಆರಂಭದಲ್ಲಿ ಐಪಿಎಲ್‌ ಪಂದ್ಯಗಳು ಅರ್ಧಕ್ಕೆ ನಿಂತು ಹೋಗಿದ್ದವು. ನಾಲ್ಕು ತಿಂಗಳ ನಂತರ ಇಂದು (ಭಾನುವಾರ) ಮುಂಬೈ ಮತ್ತು ಚೆನೈ ತಂಡಗಳ ನಡುವೆ ದುಬೈನಲ್ಲಿ ಸಂಜೆ 7:30ಕ್ಕೆ ಪಂದ್ಯ ನಡೆಯಲಿದೆ.

ಕೊರೊನಾದಿಂದ ಅರ್ಧಕ್ಕೆ ನಿಂತಿದ್ದ ಪಂದ್ಯಗಳ ಪೈಕಿ ಇನ್ನೂ 31 ಪಂದ್ಯಗಳು ನಡೆಯಬೇಕಿದೆ. ಈ ಪಂದ್ಯಗಳು ದುಬೈ, ಶಾರ್ಜಾ, ಅಬುಧಾಬಿಯಲ್ಲಿ ನಡೆಯಲಿದ್ದು, ಫೈನಲ್‌ ಪಂದ್ಯ ಅಕ್ಟೋಬರ್ 15 ರಂದು ನಡೆಯಲಿದೆ.

ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್‌-ಡೆಲ್ಲಿ ನಡುವಿನ ಮುಖಾಮುಖಿ ಬಳಿಕ ಕೊರೊನಾ ಕಾರಣದಿಂದಾಗಿ ಪಂದ್ಯಾವಳಿಯನ್ನು ನಿಲ್ಲಿಸಲಾಗಿತ್ತು. ಮೊದಲಿದ್ದ ವೇಳಾಪಟ್ಟಿಯನ್ನು ಬದಲಿಸಲಾಗಿದೆ. ಇಲ್ಲಿನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಾಗಲಿವೆ.

ಈ ಬಾರಿಯ ಐಪಿಎಲ್‌ನಿಂದ ಡೇವಿಡ್‌ ಮಲಾನ್‌, ಕ್ರಿಸ್‌ ವೋಕ್ಸ್‌, ಜಾನಿ ಬೇರ್‌ಸ್ಟೊ, ಜಾಸ್‌ ಬಟ್ಲರ್‌, ಜೋಫ್ರ ಆರ್ಚರ್‌, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌, ಪ್ಯಾಟ್‌ ಕಮಿನ್ಸ್‌ ಮೊದಲಾದ ವಿದೇಶಿ ಆಟಗಾರರು ಹೊರಗುಳಿದ್ದಾರೆ. ಕೆಲವು ಸ್ಟಾರ್‌ ವಿದೇಶಿ ಆಟಗಾರರು ಹಿಂದೆ ಸರಿದರೂ ಕೂಟದ ಆಕರ್ಷಣೆಯೇನೂ ಕಡಿಮೆ ಆಗದೆಂಬುದೊಂದು ಲೆಕ್ಕಾಚಾರವಿದೆ.

ಇದನ್ನೂ ಓದಿ: ಕೊಹ್ಲಿ ನಿರ್ಧಾರಕ್ಕೆ ಬಿಸಿಸಿಐ ಅಧ್ಯಕ್ಷ ಗಂಗೂಲಿ ಪ್ರತಿಕ್ರಿಯೆ

2019ರ ಬಳಿಕ ಪ್ರೇಕ್ಷಕರಿಗೆ ಬಾಗಿಲು ತೆರೆಯುವ ಕಾರಣಕ್ಕಾಗಿಯೂ ಯುಎಇ ಆವೃತ್ತಿಯ ಐಪಿಎಲ್‌ ಆಕರ್ಷಣೆ ಹೆಚ್ಚಿದೆ. ಸ್ಟೇಡಿಯಂ ಸಾಮರ್ಥ್ಯದ ಶೇ. 50 ವೀಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಎರಡೂ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವ ಪ್ರೇಕ್ಷಕರು ಆನ್‌ಲೈನ್‌ನಲ್ಲೇ ಟಿಕೆಟ್‌ಗಳನ್ನು ಖರೀದಿಸಿ ಪಂದ್ಯ ವೀಕ್ಷಿಸಬಹುದಾಗಿದೆ.

ಐಪಿಎಲ್ ಆರಂಭದಲ್ಲಿ ಭಾರತದಲ್ಲಿ ನಡೆದ 29 ಪಂದ್ಯಗಳಲ್ಲಿ 2020ರ ರನ್ನರ್ ಅಪ್‌ ಡೆಲ್ಲಿ ಕ್ಯಾಪಿಟಲ್ಸ್‌ 12 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಡಿದ 8 ಪಂದ್ಯಗಳಲ್ಲಿ ಆರನ್ನು ಗೆದ್ದಿದೆ. ಚೆನ್ನೈ ಮತ್ತು ಆರ್‌ಸಿಬಿ ತಲಾ 10 ಅಂಕ ಗಳಿಸಿವೆ. ಆದರೆ ರನ್‌ರೇಟ್‌ನಲ್ಲಿ ಮುಂದಿರುವ ಧೋನಿ ಪಡೆ ದ್ವಿತೀಯ ಸ್ಥಾನದಲ್ಲಿದೆ. ಕೊಹ್ಲಿ ಟೀಮ್‌ಗೆ 3ನೇ ಸ್ಥಾನ. ಭಾನುವಾರದ ಮೊದಲ ಪಂದ್ಯವನ್ನು ಗೆದ್ದರೆ ಚೆನ್ನೈ ಅಗ್ರಸ್ಥಾನಕ್ಕೆ ಜಿಗಿಯಲಿದೆ.

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ತೀವ್ರ ರೀತಿಯಲ್ಲಿ ಹರಡುತ್ತಿದ್ದ ಸಮಯದಲ್ಲಿ ಐಪಿಎಲ್ ಆರಂಭವಾಗಿ ಭಾರಿ ಟೀಕೆಗೆ ಗುರಿಯಾಗಿತ್ತು. ಆಮ್ಲಜನಕವಿಲ್ಲದ, ಆಸ್ಪತ್ರೆಗಳಲ್ಲಿ ಬೆಡ್‌ಗಳು ಸಿಗದ ಜನರ ಆಕ್ರಂದನ ಮುಗಿಲು ಮುಟ್ಟಿದ್ದ ಬಗ್ಗೆ ಅಂತರಾಷ್ಟ್ರೀಯ ಪತ್ರಿಕೆಗಳು ವರದಿ ಮಾಡಿದ್ದವು. ಈ ನಡುವೆ ಐಪಿಎಲ್ ಆರಂಭಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಸಾಮಾಜಿಕ ಕಾರ್ಯಕರ್ತ ನಿಖಿಲ್ ಜೆ ಆಳ್ವಾ ಅವರು, “ಪ್ರಾಚೀನ ಕಾಲದಲ್ಲಿ, ಪರಿಸ್ಥಿತಿಯು ಕೆಟ್ಟದಾಗಿದ್ದಾಗ ನಾಗರೀಕರ ಗಮನವನ್ನು ಬೇರೆಡೆಗೆ ಸೆಳೆಯಲು ರೋಮ್‌ನ ಚಕ್ರವರ್ತಿಗಳು ಕಾಲೊಸಿಯಂನಲ್ಲಿ ಗ್ಲಾಡಿಯೇಟರ್ ಆಟಗಳನ್ನು ಆಯೋಜಿಸಿಸುತ್ತಿದ್ದರು. ಭಾರತದಲ್ಲಿ ನಮಗೆ ಐಪಿಎಲ್ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ:  ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...