HomeಮುಖಪುಟIPL-2021 ವೇಳಾಪಟ್ಟಿ ಬಿಡುಗಡೆ: ಏಪ್ರಿಲ್ 9ಕ್ಕೆ ಆರಂಭ, ಮೋದಿ ಸ್ಟೇಡಿಯಂನಲ್ಲಿ ಫೈನಲ್

IPL-2021 ವೇಳಾಪಟ್ಟಿ ಬಿಡುಗಡೆ: ಏಪ್ರಿಲ್ 9ಕ್ಕೆ ಆರಂಭ, ಮೋದಿ ಸ್ಟೇಡಿಯಂನಲ್ಲಿ ಫೈನಲ್

ಆರಂಭದಲ್ಲಿ ಪ್ರೇಕ್ಷಕರಿಗೆ ನೇರ ಮ್ಯಾಚ್ ನೋಡುವ ಅವಕಾಶವಿಲ್ಲ. ಆದರೆ ನಂತರದ ಹಂತಗಳಲ್ಲಿ ಪ್ರೇಕ್ಷಕರನ್ನು ಅನುಮತಿಸುವ ಕರೆ ನೀಡಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

- Advertisement -
- Advertisement -

ಕಳೆದ ವರ್ಷದ IPL ನೆನಪುಗಳು ಮಾಸುವ ಮುನ್ನವೇ ಈ ವರ್ಷದ IPL ಘೋಷಣೆಯಾಗಿದೆ. ಕೊರೋನಾ ಕಾರಣಕ್ಕೆ ಕಳೆದ ವರ್ಷ ಅರಬ್ಬರ ನೆಲದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2021 ರ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. IPL 2021ರ ಸೀಸನ್ ಏಪ್ರಿಲ್ 9 ರಂದು ಚೆನ್ನೈನಲ್ಲಿ ಪ್ರಾರಂಭವಾಗಲಿದ್ದು, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಫೈನಲ್ ಪಂದ್ಯ ಮೇ 30 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಹಿಂದಿನ ಋತುವಿನ ರನ್ನರ್ಸ್ ಅಪ್ ದೆಹಲಿ ಕ್ಯಾಪಿಟಲ್ಸ್ ಏಪ್ರಿಲ್ 10 ರಂದು ಮುಂಬೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತಮ್ಮ ಮೊದಲ ಪಂದ್ಯ ಆಡಲಿದೆ. ಚೆನ್ನೈ, ಮುಂಬೈ, ಅಹಮದಾಬಾದ್, ದೆಹಲಿ, ಬೆಂಗಳೂರು ಮತ್ತು ಕೋಲ್ಕತಾ ಈ ಆರು ನಗರಗಳಲ್ಲಿ ಪಂದ್ಯಾವಳಿ ನಡೆಯಲಿದೆ.

ಪ್ರತಿ ತಂಡವು ಲೀಗ್ ಹಂತದಲ್ಲಿ ಆರು ಗೊತ್ತುಪಡಿಸಿದ ಸ್ಥಳಗಳಲ್ಲಿ ನಾಲ್ಕನ್ನು ಆಡಲಿದೆ ಎಂದು IPL ಪ್ರಕಟಣೆ ತಿಳಿಸಿದೆ.

ವಿಶೇಷವೆಂದರೆ, ಪ್ರತಿ ಪಂದ್ಯವು ತಟಸ್ಥ ಸ್ಥಳದಲ್ಲಿ ನಡೆಯಲಿದ್ದು, ಯಾವುದೇ ತಂಡವು ತಮ್ಮ ತವರು ಕ್ರೀಡಾಂಗಣದಲ್ಲಿ ಆಡಲು ಅವಕಾಶ ಒದಗಿಸಿಲ್ಲ.

ಇದನ್ನೂ ಓದಿ: ಕನ್ನಡದ ಹುಡುಗನಿಗೆ ಅಚ್ಚರಿಯ ಡಿಮ್ಯಾಂಡ್: ಐಪಿಎಲ್‌ನಲ್ಲಿ ಕೆ.ಗೌತಮ್ ಮೌಲ್ಯ 9.25 ಕೋಟಿ ರೂ!

ಚೆನ್ನೈ, ಮುಂಬೈ, ಕೋಲ್ಕತ್ತಾ ಮತ್ತು ಬೆಂಗಳೂರು ತಲಾ 10 ಪಂದ್ಯಗಳ ಆತಿಥ್ಯ ವಹಿಸಲಿದ್ದು, ಲೀಗ್ ಹಂತಗಳಲ್ಲಿ ಅಹಮದಾಬಾದ್ ಮತ್ತು ದೆಹಲಿ ತಲಾ ಎಂಟು ಪಂದ್ಯಗಳನ್ನು ಆಯೋಜಿಸುತ್ತವೆ.

ಸ್ಪರ್ಧೆಯ ನಾಕೌಟ್ ಹಂತಗಳು ಸಂಪೂರ್ಣವಾಗಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್‌ನ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕೊರೋನ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಸುರಕ್ಷತಾ ಕ್ರಮಗಳ ಭಾಗವಾಗಿ, ಲೀಗ್ ಹಂತದಲ್ಲಿ ಪ್ರತಿ ತಂಡವು ಮೂರು ಬಾರಿ ಮಾತ್ರ ಪ್ರಯಾಣಿಸಬೇಕಾಗುತ್ತದೆ ಎಂದು ಸಂಘಟಕರು ಖಚಿತಪಡಿಸಿದ್ದಾರೆ.

ಆರಂಭದಲ್ಲಿ ಪ್ರೇಕ್ಷಕರಿಗೆ ನೇರ ಮ್ಯಾಚ್ ನೋಡುವ ಅವಕಾಶವಿಲ್ಲ. ಆದರೆ ನಂತರದ ಹಂತಗಳಲ್ಲಿ ಪ್ರೇಕ್ಷಕರನ್ನು ಅನುಮತಿಸುವ ಕರೆ ನೀಡಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಪಂದ್ಯಾವಳಿಯಲ್ಲಿ 11 ಡಬಲ್-ಹೆಡರ್‌ಗಳಿದ್ದು, ಆರು ತಂಡಗಳು ಮೂರು ಮಧ್ಯಾಹ್ನ ಪಂದ್ಯಗಳನ್ನು ಮತ್ತು ಎರಡು ತಂಡಗಳು ಎರಡು ಮಧ್ಯಾಹ್ನ ಪಂದ್ಯಗಳನ್ನು ಆಡಲಿವೆ.


ಇದನ್ನೂ ಓದಿ: ಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...