HomeಮುಖಪುಟIPL-2021 ವೇಳಾಪಟ್ಟಿ ಬಿಡುಗಡೆ: ಏಪ್ರಿಲ್ 9ಕ್ಕೆ ಆರಂಭ, ಮೋದಿ ಸ್ಟೇಡಿಯಂನಲ್ಲಿ ಫೈನಲ್

IPL-2021 ವೇಳಾಪಟ್ಟಿ ಬಿಡುಗಡೆ: ಏಪ್ರಿಲ್ 9ಕ್ಕೆ ಆರಂಭ, ಮೋದಿ ಸ್ಟೇಡಿಯಂನಲ್ಲಿ ಫೈನಲ್

ಆರಂಭದಲ್ಲಿ ಪ್ರೇಕ್ಷಕರಿಗೆ ನೇರ ಮ್ಯಾಚ್ ನೋಡುವ ಅವಕಾಶವಿಲ್ಲ. ಆದರೆ ನಂತರದ ಹಂತಗಳಲ್ಲಿ ಪ್ರೇಕ್ಷಕರನ್ನು ಅನುಮತಿಸುವ ಕರೆ ನೀಡಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

- Advertisement -
- Advertisement -

ಕಳೆದ ವರ್ಷದ IPL ನೆನಪುಗಳು ಮಾಸುವ ಮುನ್ನವೇ ಈ ವರ್ಷದ IPL ಘೋಷಣೆಯಾಗಿದೆ. ಕೊರೋನಾ ಕಾರಣಕ್ಕೆ ಕಳೆದ ವರ್ಷ ಅರಬ್ಬರ ನೆಲದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2021 ರ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. IPL 2021ರ ಸೀಸನ್ ಏಪ್ರಿಲ್ 9 ರಂದು ಚೆನ್ನೈನಲ್ಲಿ ಪ್ರಾರಂಭವಾಗಲಿದ್ದು, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಫೈನಲ್ ಪಂದ್ಯ ಮೇ 30 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಹಿಂದಿನ ಋತುವಿನ ರನ್ನರ್ಸ್ ಅಪ್ ದೆಹಲಿ ಕ್ಯಾಪಿಟಲ್ಸ್ ಏಪ್ರಿಲ್ 10 ರಂದು ಮುಂಬೈನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತಮ್ಮ ಮೊದಲ ಪಂದ್ಯ ಆಡಲಿದೆ. ಚೆನ್ನೈ, ಮುಂಬೈ, ಅಹಮದಾಬಾದ್, ದೆಹಲಿ, ಬೆಂಗಳೂರು ಮತ್ತು ಕೋಲ್ಕತಾ ಈ ಆರು ನಗರಗಳಲ್ಲಿ ಪಂದ್ಯಾವಳಿ ನಡೆಯಲಿದೆ.

ಪ್ರತಿ ತಂಡವು ಲೀಗ್ ಹಂತದಲ್ಲಿ ಆರು ಗೊತ್ತುಪಡಿಸಿದ ಸ್ಥಳಗಳಲ್ಲಿ ನಾಲ್ಕನ್ನು ಆಡಲಿದೆ ಎಂದು IPL ಪ್ರಕಟಣೆ ತಿಳಿಸಿದೆ.

ವಿಶೇಷವೆಂದರೆ, ಪ್ರತಿ ಪಂದ್ಯವು ತಟಸ್ಥ ಸ್ಥಳದಲ್ಲಿ ನಡೆಯಲಿದ್ದು, ಯಾವುದೇ ತಂಡವು ತಮ್ಮ ತವರು ಕ್ರೀಡಾಂಗಣದಲ್ಲಿ ಆಡಲು ಅವಕಾಶ ಒದಗಿಸಿಲ್ಲ.

ಇದನ್ನೂ ಓದಿ: ಕನ್ನಡದ ಹುಡುಗನಿಗೆ ಅಚ್ಚರಿಯ ಡಿಮ್ಯಾಂಡ್: ಐಪಿಎಲ್‌ನಲ್ಲಿ ಕೆ.ಗೌತಮ್ ಮೌಲ್ಯ 9.25 ಕೋಟಿ ರೂ!

ಚೆನ್ನೈ, ಮುಂಬೈ, ಕೋಲ್ಕತ್ತಾ ಮತ್ತು ಬೆಂಗಳೂರು ತಲಾ 10 ಪಂದ್ಯಗಳ ಆತಿಥ್ಯ ವಹಿಸಲಿದ್ದು, ಲೀಗ್ ಹಂತಗಳಲ್ಲಿ ಅಹಮದಾಬಾದ್ ಮತ್ತು ದೆಹಲಿ ತಲಾ ಎಂಟು ಪಂದ್ಯಗಳನ್ನು ಆಯೋಜಿಸುತ್ತವೆ.

ಸ್ಪರ್ಧೆಯ ನಾಕೌಟ್ ಹಂತಗಳು ಸಂಪೂರ್ಣವಾಗಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್‌ನ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕೊರೋನ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಸುರಕ್ಷತಾ ಕ್ರಮಗಳ ಭಾಗವಾಗಿ, ಲೀಗ್ ಹಂತದಲ್ಲಿ ಪ್ರತಿ ತಂಡವು ಮೂರು ಬಾರಿ ಮಾತ್ರ ಪ್ರಯಾಣಿಸಬೇಕಾಗುತ್ತದೆ ಎಂದು ಸಂಘಟಕರು ಖಚಿತಪಡಿಸಿದ್ದಾರೆ.

ಆರಂಭದಲ್ಲಿ ಪ್ರೇಕ್ಷಕರಿಗೆ ನೇರ ಮ್ಯಾಚ್ ನೋಡುವ ಅವಕಾಶವಿಲ್ಲ. ಆದರೆ ನಂತರದ ಹಂತಗಳಲ್ಲಿ ಪ್ರೇಕ್ಷಕರನ್ನು ಅನುಮತಿಸುವ ಕರೆ ನೀಡಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಪಂದ್ಯಾವಳಿಯಲ್ಲಿ 11 ಡಬಲ್-ಹೆಡರ್‌ಗಳಿದ್ದು, ಆರು ತಂಡಗಳು ಮೂರು ಮಧ್ಯಾಹ್ನ ಪಂದ್ಯಗಳನ್ನು ಮತ್ತು ಎರಡು ತಂಡಗಳು ಎರಡು ಮಧ್ಯಾಹ್ನ ಪಂದ್ಯಗಳನ್ನು ಆಡಲಿವೆ.


ಇದನ್ನೂ ಓದಿ: ಸಚಿನ್ ಮಗನನ್ನು ಖರೀದಿಸಿದ ಮುಂಬೈ ಇಂಡಿಯನ್ಸ್: ಮ್ಯಾನೇಜ್‌ಮೆಂಟ್ ಕೋಟಾ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...