Homeಸಿನಿಮಾಕ್ರೀಡೆIPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು - ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

IPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು – ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ಸೋಲಿನ ಸುಳಿಯಲ್ಲಿವೆ.

- Advertisement -
- Advertisement -

2022ರ ಸಾಲಿನ ಐಪಿಲ್ ಆರಂಭಗೊಂಡಿದೆ. ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎಂಬ ಎರಡು ಹೊಸ ತಂಡಗಳ ಆಗಮನದೊಂದಿಗೆ ಕ್ರಿಕೆಟ್ ಮೆರಗು ಮತ್ತಷ್ಟು ಹೆಚ್ಚಿದೆ. ಲೀಗ್ ಹಂತದ 18 ಪಂದ್ಯಗಳು ಮುಕ್ತಾಯವಾಗಿದ್ದು, ಹಲವು ರೋಚಕ ಪಂದ್ಯಗಳನ್ನು ಅಭಿಮಾನಿಗಳು ಸವಿದಿದ್ದಾರೆ. ಈ ವರ್ಷದ ಐಪಿಎಲ್‌ನ ವಿಶೇಷತೆಯೆಂದರೆ ಹಲವು ಬಾರಿ ಚಾಂಪಿಯನ್ ಆಗಿರುವ ದಿಗ್ಗಜ ತಂಡಗಳು ಸತತವಾಗಿ ಮುಗ್ಗರಿಸುತ್ತಿದ್ದರೆ, ಹೊಸ ತಂಡಗಳು ಗೆಲುವಿನ ನಗೆ ಬೀರುತ್ತಿವೆ.

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಮತ್ತು ಹಾಲಿ ಚಾಂಪಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಿದ್ದು ನಾಲ್ಕರಲ್ಲಿಯೂ ಸೋಲೊಪ್ಪಿಕೊಂಡಿವೆ. ಇದಕ್ಕೆ ತದ್ವಿರುದ್ಧವಾಗಿ ಹೊಸದಾಗಿ ಆಗಮಿಸಿದ ಗುಜರಾತ್ ಟೈಟನ್ಸ್ ತಂಡ ತಾನಾಡಿದ ಮೂರು ಪಂದ್ಯಗಳಲ್ಲಿಯೂ ಜಯಗಳಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರನ್ನು ಜಯಿಸಿದೆ!.

ಸದ್ಯಕ್ಕೆ 4 ಪಂದ್ಯಗಳಲ್ಲಿ ಮೂರನ್ನು ಜಯಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲಿದ್ದರೆ, ಅಷ್ಟೇ ಅಂಕಗಳನ್ನು ಪಡೆದಿರುವ ಗುಜರಾತ್ ಟೈಟನ್ಸ್ ಎಡನೇ ಸ್ಥಾನ, ಆರ್‌ಸಿಬಿ ಮೂರನೇ ಸ್ಥಾನ ಮತ್ತು ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಎರಡು ಪಂದ್ಯ ಜಯಿಸಿರುವ ರಾಜಸ್ಥಾನ್ ರಾಯಲ್ಸ್ ಐದನೇ ಸ್ಥಾನ, ಪಂಜಾಬ್ ಕಿಂಗ್ಸ್ ಆರನೇ ಸ್ಥಾನ ಪಡೆದಿವೆ. ಒಂದು ಪಂದ್ಯ ಜಯಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಏಳನೇ ಸ್ಥಾನ ಮತ್ತು ಸನ್‌ ರೈಸರ್ಸ್ ಹೈದರಾಬಾದ್ ಎಂಟನೇ ಸ್ಥಾನದಲ್ಲಿವೆ. ಒಂದೂ ಗೆಲುವು ಕಾಣದ ಮುಂಬೈ ಇಂಡಿಯನ್ಸ್ ಒಂಭತ್ತನೆ ಸ್ಥಾನದಲ್ಲಿದ್ದರೆ, ಚನ್ನೈ ಕೊನೆಯ ಸ್ಥಾನದಲ್ಲಿದೆ.

ಉತ್ತಮ ಆರಂಭ ಕಂಡ ಗುಜರಾತ್, ಲಕ್ನೋ

ಗುಜರಾತ್ ಟೈಟನ್ಸ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಉತ್ತಮ ಆರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ಲಕ್ನೋವನ್ನು ಮಣಿಸಿ ಶುಭಾರಂಭ ಮಾಡಿದ ಅದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಅನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಶುಭ್‌ಮನ್ ಗಿಲ್, ಹಾರ್ದಿಕ್ ಪಾಂಡ್ಯ ಮತ್ತು ರಾಹುಲ್ ತಿವಾಟಿಯ ಉತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ಅದೇ ರೀತಿ ಮೊಹಮ್ಮದ್ ಶಮಿ, ರಶೀದ್ ಖಾನ್ ವಿಕೆಟ್ ಕಬಳಿಸುತ್ತಾ ತಂಡಕ್ಕೆ ಬೆನ್ನೆಲುಬಾಗಿದ್ದಾರೆ. ಮುಂದಿನ ಪಂದ್ಯದಲ್ಲಿ ಹೈದರಾಬಾದ್ ಅನ್ನು ಎದುರಿಸಲಿದ್ದಾರೆ.

ಲಕ್ನೋ ತಂಡವು ಮೊದಲ ಪಂದ್ಯ ಸೋತ ನಂತರ ಸತತ ಮೂರು ಪಂದ್ಯಗಳಲ್ಲಿ ಜಯಗಳಿಸಿದೆ. ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಅದ್ಭುತ ಬ್ಯಾಟಿಂಗ್ ಲೈನ್ ಅಪ್ ಹೊಂದಿದೆ. ಅವರೊಟ್ಟಿಗೆ ಕ್ವಿಂಟನ್ ಡಿ ಕಾಕ್, ಎವಿನ್ ಲೆವಿಸ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಬೌಲಿಂಗ್‌ನಲ್ಲಿ ಆವೇಶ್ ಖಾನ್ ಮತ್ತು ರವಿ ಬಿಷ್ಣೋಯಿ ಪರಿಣಾಮಕಾರಿ ಪ್ರದರ್ಶನ ನೀಡುತ್ತಿದ್ದಾರೆ. ಲಕ್ನೋ ಇಂದು ರಾತ್ರಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಸೆಣಸಲಿದೆ.

ಹೀನಾಯ ಸ್ಥಿತಿಯಲ್ಲಿ ಮುಂಬೈ ಮತ್ತು ಚನ್ನೈ

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಈ ಆವೃತ್ತಿಯಲ್ಲಿ ಗೆಲುವಿಗಾಗಿ ಪರಿತಪಿಸುತ್ತಿದೆ. ನಾಲ್ಕು ಪಂದ್ಯ ಆಡಿರುವ ಅದು ನಾಲ್ಕರಲ್ಲಿಯೂ ಸೋತಿದೆ. ಇಶಾಂತ್ ಕಿಶನ್, ಸೂರ್ಯಕುಮಾರ್ ಯಾದವ್‌ ಅದ್ಭುತ ಬ್ಯಾಟಿಂಗ್ ಆಡುತ್ತಿದ್ದರೂ, ಇಡೀ ತಂಡ ಸಾಂಘಿಕ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಜಸ್ಪ್ರಿತ್ ಬುಮ್ರ ಮತ್ತು ಪೊಲಾರ್ಡ್ ವಿಕೆಟ್ ಪಡೆಯುವಲ್ಲಿ ವಿಫಲವಾಗುತ್ತಿರುವುದು ತಂಡದ ಮೇಲೆ ಪರಿಣಾಮ ಬೀರಿದೆ. ಮುಂದಿನ ಪಂದ್ಯ ಏಪ್ರಿಲ್ 13 ರಂದು ಪಂಜಾಬ್ ಕಿಂಗ್ಸ್ ಎದುರು ಆಡಲಿದ್ದು, ಗೆಲುವಿನ ಲಯಕ್ಕೆ ಮರಳಬೇಕಿದೆ.

ಚನ್ನೈ ತಂಡವೂ ಒತ್ತಡದಲ್ಲಿದೆ. ತಂಡದ ಯಾವುದೇ ಬ್ಯಾಟ್ಸ್‌ಮನ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅನುಭವಿ ಆಟಗಾರರಿದ್ದರೂ ಉತ್ತರ ಪ್ರದರ್ಶನ ಬಾರದ ಕಾರಣ ಸತತ 4 ಸೋಲು ಕಂಡಿದೆ. ಮುಂದಿನ ಪಂದ್ಯ ಏಪ್ರಿಲ್ 12 ರಂದು ಆರ್‌ಸಿಬಿ ಎದುರು ಆಡಬೇಕಿದೆ. ಸತತ ಮೂರು ಗೆಲುವಿನೊಂದಿಗೆ ಆರ್‌ಸಿಬಿ ಆತ್ಮವಿಶ್ವಾಸದಲ್ಲಿದ್ದರೆ ಚನ್ನೈಗೆ ಗೆಲುವು ಬೇಕೆ ಬೇಕಿದೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...