Homeಸಿನಿಮಾಕ್ರೀಡೆIPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು - ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

IPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು – ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ಸೋಲಿನ ಸುಳಿಯಲ್ಲಿವೆ.

- Advertisement -
- Advertisement -

2022ರ ಸಾಲಿನ ಐಪಿಲ್ ಆರಂಭಗೊಂಡಿದೆ. ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎಂಬ ಎರಡು ಹೊಸ ತಂಡಗಳ ಆಗಮನದೊಂದಿಗೆ ಕ್ರಿಕೆಟ್ ಮೆರಗು ಮತ್ತಷ್ಟು ಹೆಚ್ಚಿದೆ. ಲೀಗ್ ಹಂತದ 18 ಪಂದ್ಯಗಳು ಮುಕ್ತಾಯವಾಗಿದ್ದು, ಹಲವು ರೋಚಕ ಪಂದ್ಯಗಳನ್ನು ಅಭಿಮಾನಿಗಳು ಸವಿದಿದ್ದಾರೆ. ಈ ವರ್ಷದ ಐಪಿಎಲ್‌ನ ವಿಶೇಷತೆಯೆಂದರೆ ಹಲವು ಬಾರಿ ಚಾಂಪಿಯನ್ ಆಗಿರುವ ದಿಗ್ಗಜ ತಂಡಗಳು ಸತತವಾಗಿ ಮುಗ್ಗರಿಸುತ್ತಿದ್ದರೆ, ಹೊಸ ತಂಡಗಳು ಗೆಲುವಿನ ನಗೆ ಬೀರುತ್ತಿವೆ.

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಮತ್ತು ಹಾಲಿ ಚಾಂಪಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಿದ್ದು ನಾಲ್ಕರಲ್ಲಿಯೂ ಸೋಲೊಪ್ಪಿಕೊಂಡಿವೆ. ಇದಕ್ಕೆ ತದ್ವಿರುದ್ಧವಾಗಿ ಹೊಸದಾಗಿ ಆಗಮಿಸಿದ ಗುಜರಾತ್ ಟೈಟನ್ಸ್ ತಂಡ ತಾನಾಡಿದ ಮೂರು ಪಂದ್ಯಗಳಲ್ಲಿಯೂ ಜಯಗಳಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರನ್ನು ಜಯಿಸಿದೆ!.

ಸದ್ಯಕ್ಕೆ 4 ಪಂದ್ಯಗಳಲ್ಲಿ ಮೂರನ್ನು ಜಯಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲಿದ್ದರೆ, ಅಷ್ಟೇ ಅಂಕಗಳನ್ನು ಪಡೆದಿರುವ ಗುಜರಾತ್ ಟೈಟನ್ಸ್ ಎಡನೇ ಸ್ಥಾನ, ಆರ್‌ಸಿಬಿ ಮೂರನೇ ಸ್ಥಾನ ಮತ್ತು ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಎರಡು ಪಂದ್ಯ ಜಯಿಸಿರುವ ರಾಜಸ್ಥಾನ್ ರಾಯಲ್ಸ್ ಐದನೇ ಸ್ಥಾನ, ಪಂಜಾಬ್ ಕಿಂಗ್ಸ್ ಆರನೇ ಸ್ಥಾನ ಪಡೆದಿವೆ. ಒಂದು ಪಂದ್ಯ ಜಯಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಏಳನೇ ಸ್ಥಾನ ಮತ್ತು ಸನ್‌ ರೈಸರ್ಸ್ ಹೈದರಾಬಾದ್ ಎಂಟನೇ ಸ್ಥಾನದಲ್ಲಿವೆ. ಒಂದೂ ಗೆಲುವು ಕಾಣದ ಮುಂಬೈ ಇಂಡಿಯನ್ಸ್ ಒಂಭತ್ತನೆ ಸ್ಥಾನದಲ್ಲಿದ್ದರೆ, ಚನ್ನೈ ಕೊನೆಯ ಸ್ಥಾನದಲ್ಲಿದೆ.

ಉತ್ತಮ ಆರಂಭ ಕಂಡ ಗುಜರಾತ್, ಲಕ್ನೋ

ಗುಜರಾತ್ ಟೈಟನ್ಸ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಉತ್ತಮ ಆರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ಲಕ್ನೋವನ್ನು ಮಣಿಸಿ ಶುಭಾರಂಭ ಮಾಡಿದ ಅದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಅನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಶುಭ್‌ಮನ್ ಗಿಲ್, ಹಾರ್ದಿಕ್ ಪಾಂಡ್ಯ ಮತ್ತು ರಾಹುಲ್ ತಿವಾಟಿಯ ಉತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ಅದೇ ರೀತಿ ಮೊಹಮ್ಮದ್ ಶಮಿ, ರಶೀದ್ ಖಾನ್ ವಿಕೆಟ್ ಕಬಳಿಸುತ್ತಾ ತಂಡಕ್ಕೆ ಬೆನ್ನೆಲುಬಾಗಿದ್ದಾರೆ. ಮುಂದಿನ ಪಂದ್ಯದಲ್ಲಿ ಹೈದರಾಬಾದ್ ಅನ್ನು ಎದುರಿಸಲಿದ್ದಾರೆ.

ಲಕ್ನೋ ತಂಡವು ಮೊದಲ ಪಂದ್ಯ ಸೋತ ನಂತರ ಸತತ ಮೂರು ಪಂದ್ಯಗಳಲ್ಲಿ ಜಯಗಳಿಸಿದೆ. ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಅದ್ಭುತ ಬ್ಯಾಟಿಂಗ್ ಲೈನ್ ಅಪ್ ಹೊಂದಿದೆ. ಅವರೊಟ್ಟಿಗೆ ಕ್ವಿಂಟನ್ ಡಿ ಕಾಕ್, ಎವಿನ್ ಲೆವಿಸ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಬೌಲಿಂಗ್‌ನಲ್ಲಿ ಆವೇಶ್ ಖಾನ್ ಮತ್ತು ರವಿ ಬಿಷ್ಣೋಯಿ ಪರಿಣಾಮಕಾರಿ ಪ್ರದರ್ಶನ ನೀಡುತ್ತಿದ್ದಾರೆ. ಲಕ್ನೋ ಇಂದು ರಾತ್ರಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಸೆಣಸಲಿದೆ.

ಹೀನಾಯ ಸ್ಥಿತಿಯಲ್ಲಿ ಮುಂಬೈ ಮತ್ತು ಚನ್ನೈ

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಈ ಆವೃತ್ತಿಯಲ್ಲಿ ಗೆಲುವಿಗಾಗಿ ಪರಿತಪಿಸುತ್ತಿದೆ. ನಾಲ್ಕು ಪಂದ್ಯ ಆಡಿರುವ ಅದು ನಾಲ್ಕರಲ್ಲಿಯೂ ಸೋತಿದೆ. ಇಶಾಂತ್ ಕಿಶನ್, ಸೂರ್ಯಕುಮಾರ್ ಯಾದವ್‌ ಅದ್ಭುತ ಬ್ಯಾಟಿಂಗ್ ಆಡುತ್ತಿದ್ದರೂ, ಇಡೀ ತಂಡ ಸಾಂಘಿಕ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಜಸ್ಪ್ರಿತ್ ಬುಮ್ರ ಮತ್ತು ಪೊಲಾರ್ಡ್ ವಿಕೆಟ್ ಪಡೆಯುವಲ್ಲಿ ವಿಫಲವಾಗುತ್ತಿರುವುದು ತಂಡದ ಮೇಲೆ ಪರಿಣಾಮ ಬೀರಿದೆ. ಮುಂದಿನ ಪಂದ್ಯ ಏಪ್ರಿಲ್ 13 ರಂದು ಪಂಜಾಬ್ ಕಿಂಗ್ಸ್ ಎದುರು ಆಡಲಿದ್ದು, ಗೆಲುವಿನ ಲಯಕ್ಕೆ ಮರಳಬೇಕಿದೆ.

ಚನ್ನೈ ತಂಡವೂ ಒತ್ತಡದಲ್ಲಿದೆ. ತಂಡದ ಯಾವುದೇ ಬ್ಯಾಟ್ಸ್‌ಮನ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅನುಭವಿ ಆಟಗಾರರಿದ್ದರೂ ಉತ್ತರ ಪ್ರದರ್ಶನ ಬಾರದ ಕಾರಣ ಸತತ 4 ಸೋಲು ಕಂಡಿದೆ. ಮುಂದಿನ ಪಂದ್ಯ ಏಪ್ರಿಲ್ 12 ರಂದು ಆರ್‌ಸಿಬಿ ಎದುರು ಆಡಬೇಕಿದೆ. ಸತತ ಮೂರು ಗೆಲುವಿನೊಂದಿಗೆ ಆರ್‌ಸಿಬಿ ಆತ್ಮವಿಶ್ವಾಸದಲ್ಲಿದ್ದರೆ ಚನ್ನೈಗೆ ಗೆಲುವು ಬೇಕೆ ಬೇಕಿದೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...