Homeಸಿನಿಮಾಕ್ರೀಡೆIPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು - ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

IPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು – ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ಸೋಲಿನ ಸುಳಿಯಲ್ಲಿವೆ.

- Advertisement -
- Advertisement -

2022ರ ಸಾಲಿನ ಐಪಿಲ್ ಆರಂಭಗೊಂಡಿದೆ. ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎಂಬ ಎರಡು ಹೊಸ ತಂಡಗಳ ಆಗಮನದೊಂದಿಗೆ ಕ್ರಿಕೆಟ್ ಮೆರಗು ಮತ್ತಷ್ಟು ಹೆಚ್ಚಿದೆ. ಲೀಗ್ ಹಂತದ 18 ಪಂದ್ಯಗಳು ಮುಕ್ತಾಯವಾಗಿದ್ದು, ಹಲವು ರೋಚಕ ಪಂದ್ಯಗಳನ್ನು ಅಭಿಮಾನಿಗಳು ಸವಿದಿದ್ದಾರೆ. ಈ ವರ್ಷದ ಐಪಿಎಲ್‌ನ ವಿಶೇಷತೆಯೆಂದರೆ ಹಲವು ಬಾರಿ ಚಾಂಪಿಯನ್ ಆಗಿರುವ ದಿಗ್ಗಜ ತಂಡಗಳು ಸತತವಾಗಿ ಮುಗ್ಗರಿಸುತ್ತಿದ್ದರೆ, ಹೊಸ ತಂಡಗಳು ಗೆಲುವಿನ ನಗೆ ಬೀರುತ್ತಿವೆ.

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಮತ್ತು ಹಾಲಿ ಚಾಂಪಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಿದ್ದು ನಾಲ್ಕರಲ್ಲಿಯೂ ಸೋಲೊಪ್ಪಿಕೊಂಡಿವೆ. ಇದಕ್ಕೆ ತದ್ವಿರುದ್ಧವಾಗಿ ಹೊಸದಾಗಿ ಆಗಮಿಸಿದ ಗುಜರಾತ್ ಟೈಟನ್ಸ್ ತಂಡ ತಾನಾಡಿದ ಮೂರು ಪಂದ್ಯಗಳಲ್ಲಿಯೂ ಜಯಗಳಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರನ್ನು ಜಯಿಸಿದೆ!.

ಸದ್ಯಕ್ಕೆ 4 ಪಂದ್ಯಗಳಲ್ಲಿ ಮೂರನ್ನು ಜಯಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲಿದ್ದರೆ, ಅಷ್ಟೇ ಅಂಕಗಳನ್ನು ಪಡೆದಿರುವ ಗುಜರಾತ್ ಟೈಟನ್ಸ್ ಎಡನೇ ಸ್ಥಾನ, ಆರ್‌ಸಿಬಿ ಮೂರನೇ ಸ್ಥಾನ ಮತ್ತು ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಎರಡು ಪಂದ್ಯ ಜಯಿಸಿರುವ ರಾಜಸ್ಥಾನ್ ರಾಯಲ್ಸ್ ಐದನೇ ಸ್ಥಾನ, ಪಂಜಾಬ್ ಕಿಂಗ್ಸ್ ಆರನೇ ಸ್ಥಾನ ಪಡೆದಿವೆ. ಒಂದು ಪಂದ್ಯ ಜಯಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಏಳನೇ ಸ್ಥಾನ ಮತ್ತು ಸನ್‌ ರೈಸರ್ಸ್ ಹೈದರಾಬಾದ್ ಎಂಟನೇ ಸ್ಥಾನದಲ್ಲಿವೆ. ಒಂದೂ ಗೆಲುವು ಕಾಣದ ಮುಂಬೈ ಇಂಡಿಯನ್ಸ್ ಒಂಭತ್ತನೆ ಸ್ಥಾನದಲ್ಲಿದ್ದರೆ, ಚನ್ನೈ ಕೊನೆಯ ಸ್ಥಾನದಲ್ಲಿದೆ.

ಉತ್ತಮ ಆರಂಭ ಕಂಡ ಗುಜರಾತ್, ಲಕ್ನೋ

ಗುಜರಾತ್ ಟೈಟನ್ಸ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಉತ್ತಮ ಆರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ಲಕ್ನೋವನ್ನು ಮಣಿಸಿ ಶುಭಾರಂಭ ಮಾಡಿದ ಅದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಅನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಶುಭ್‌ಮನ್ ಗಿಲ್, ಹಾರ್ದಿಕ್ ಪಾಂಡ್ಯ ಮತ್ತು ರಾಹುಲ್ ತಿವಾಟಿಯ ಉತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ಅದೇ ರೀತಿ ಮೊಹಮ್ಮದ್ ಶಮಿ, ರಶೀದ್ ಖಾನ್ ವಿಕೆಟ್ ಕಬಳಿಸುತ್ತಾ ತಂಡಕ್ಕೆ ಬೆನ್ನೆಲುಬಾಗಿದ್ದಾರೆ. ಮುಂದಿನ ಪಂದ್ಯದಲ್ಲಿ ಹೈದರಾಬಾದ್ ಅನ್ನು ಎದುರಿಸಲಿದ್ದಾರೆ.

ಲಕ್ನೋ ತಂಡವು ಮೊದಲ ಪಂದ್ಯ ಸೋತ ನಂತರ ಸತತ ಮೂರು ಪಂದ್ಯಗಳಲ್ಲಿ ಜಯಗಳಿಸಿದೆ. ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಅದ್ಭುತ ಬ್ಯಾಟಿಂಗ್ ಲೈನ್ ಅಪ್ ಹೊಂದಿದೆ. ಅವರೊಟ್ಟಿಗೆ ಕ್ವಿಂಟನ್ ಡಿ ಕಾಕ್, ಎವಿನ್ ಲೆವಿಸ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಬೌಲಿಂಗ್‌ನಲ್ಲಿ ಆವೇಶ್ ಖಾನ್ ಮತ್ತು ರವಿ ಬಿಷ್ಣೋಯಿ ಪರಿಣಾಮಕಾರಿ ಪ್ರದರ್ಶನ ನೀಡುತ್ತಿದ್ದಾರೆ. ಲಕ್ನೋ ಇಂದು ರಾತ್ರಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಸೆಣಸಲಿದೆ.

ಹೀನಾಯ ಸ್ಥಿತಿಯಲ್ಲಿ ಮುಂಬೈ ಮತ್ತು ಚನ್ನೈ

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಈ ಆವೃತ್ತಿಯಲ್ಲಿ ಗೆಲುವಿಗಾಗಿ ಪರಿತಪಿಸುತ್ತಿದೆ. ನಾಲ್ಕು ಪಂದ್ಯ ಆಡಿರುವ ಅದು ನಾಲ್ಕರಲ್ಲಿಯೂ ಸೋತಿದೆ. ಇಶಾಂತ್ ಕಿಶನ್, ಸೂರ್ಯಕುಮಾರ್ ಯಾದವ್‌ ಅದ್ಭುತ ಬ್ಯಾಟಿಂಗ್ ಆಡುತ್ತಿದ್ದರೂ, ಇಡೀ ತಂಡ ಸಾಂಘಿಕ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಜಸ್ಪ್ರಿತ್ ಬುಮ್ರ ಮತ್ತು ಪೊಲಾರ್ಡ್ ವಿಕೆಟ್ ಪಡೆಯುವಲ್ಲಿ ವಿಫಲವಾಗುತ್ತಿರುವುದು ತಂಡದ ಮೇಲೆ ಪರಿಣಾಮ ಬೀರಿದೆ. ಮುಂದಿನ ಪಂದ್ಯ ಏಪ್ರಿಲ್ 13 ರಂದು ಪಂಜಾಬ್ ಕಿಂಗ್ಸ್ ಎದುರು ಆಡಲಿದ್ದು, ಗೆಲುವಿನ ಲಯಕ್ಕೆ ಮರಳಬೇಕಿದೆ.

ಚನ್ನೈ ತಂಡವೂ ಒತ್ತಡದಲ್ಲಿದೆ. ತಂಡದ ಯಾವುದೇ ಬ್ಯಾಟ್ಸ್‌ಮನ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅನುಭವಿ ಆಟಗಾರರಿದ್ದರೂ ಉತ್ತರ ಪ್ರದರ್ಶನ ಬಾರದ ಕಾರಣ ಸತತ 4 ಸೋಲು ಕಂಡಿದೆ. ಮುಂದಿನ ಪಂದ್ಯ ಏಪ್ರಿಲ್ 12 ರಂದು ಆರ್‌ಸಿಬಿ ಎದುರು ಆಡಬೇಕಿದೆ. ಸತತ ಮೂರು ಗೆಲುವಿನೊಂದಿಗೆ ಆರ್‌ಸಿಬಿ ಆತ್ಮವಿಶ್ವಾಸದಲ್ಲಿದ್ದರೆ ಚನ್ನೈಗೆ ಗೆಲುವು ಬೇಕೆ ಬೇಕಿದೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...