Homeಸಿನಿಮಾಕ್ರೀಡೆIPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು - ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

IPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು – ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ಸೋಲಿನ ಸುಳಿಯಲ್ಲಿವೆ.

- Advertisement -
- Advertisement -

2022ರ ಸಾಲಿನ ಐಪಿಲ್ ಆರಂಭಗೊಂಡಿದೆ. ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎಂಬ ಎರಡು ಹೊಸ ತಂಡಗಳ ಆಗಮನದೊಂದಿಗೆ ಕ್ರಿಕೆಟ್ ಮೆರಗು ಮತ್ತಷ್ಟು ಹೆಚ್ಚಿದೆ. ಲೀಗ್ ಹಂತದ 18 ಪಂದ್ಯಗಳು ಮುಕ್ತಾಯವಾಗಿದ್ದು, ಹಲವು ರೋಚಕ ಪಂದ್ಯಗಳನ್ನು ಅಭಿಮಾನಿಗಳು ಸವಿದಿದ್ದಾರೆ. ಈ ವರ್ಷದ ಐಪಿಎಲ್‌ನ ವಿಶೇಷತೆಯೆಂದರೆ ಹಲವು ಬಾರಿ ಚಾಂಪಿಯನ್ ಆಗಿರುವ ದಿಗ್ಗಜ ತಂಡಗಳು ಸತತವಾಗಿ ಮುಗ್ಗರಿಸುತ್ತಿದ್ದರೆ, ಹೊಸ ತಂಡಗಳು ಗೆಲುವಿನ ನಗೆ ಬೀರುತ್ತಿವೆ.

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಮತ್ತು ಹಾಲಿ ಚಾಂಪಿಯನ್ಸ್ ಹಾಗೂ ನಾಲ್ಕು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಚನ್ನೈ ಸೂಪರ್ ಸಿಂಗ್ಸ್ ಎರಡೂ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಿದ್ದು ನಾಲ್ಕರಲ್ಲಿಯೂ ಸೋಲೊಪ್ಪಿಕೊಂಡಿವೆ. ಇದಕ್ಕೆ ತದ್ವಿರುದ್ಧವಾಗಿ ಹೊಸದಾಗಿ ಆಗಮಿಸಿದ ಗುಜರಾತ್ ಟೈಟನ್ಸ್ ತಂಡ ತಾನಾಡಿದ ಮೂರು ಪಂದ್ಯಗಳಲ್ಲಿಯೂ ಜಯಗಳಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರನ್ನು ಜಯಿಸಿದೆ!.

ಸದ್ಯಕ್ಕೆ 4 ಪಂದ್ಯಗಳಲ್ಲಿ ಮೂರನ್ನು ಜಯಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲಿದ್ದರೆ, ಅಷ್ಟೇ ಅಂಕಗಳನ್ನು ಪಡೆದಿರುವ ಗುಜರಾತ್ ಟೈಟನ್ಸ್ ಎಡನೇ ಸ್ಥಾನ, ಆರ್‌ಸಿಬಿ ಮೂರನೇ ಸ್ಥಾನ ಮತ್ತು ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಎರಡು ಪಂದ್ಯ ಜಯಿಸಿರುವ ರಾಜಸ್ಥಾನ್ ರಾಯಲ್ಸ್ ಐದನೇ ಸ್ಥಾನ, ಪಂಜಾಬ್ ಕಿಂಗ್ಸ್ ಆರನೇ ಸ್ಥಾನ ಪಡೆದಿವೆ. ಒಂದು ಪಂದ್ಯ ಜಯಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಏಳನೇ ಸ್ಥಾನ ಮತ್ತು ಸನ್‌ ರೈಸರ್ಸ್ ಹೈದರಾಬಾದ್ ಎಂಟನೇ ಸ್ಥಾನದಲ್ಲಿವೆ. ಒಂದೂ ಗೆಲುವು ಕಾಣದ ಮುಂಬೈ ಇಂಡಿಯನ್ಸ್ ಒಂಭತ್ತನೆ ಸ್ಥಾನದಲ್ಲಿದ್ದರೆ, ಚನ್ನೈ ಕೊನೆಯ ಸ್ಥಾನದಲ್ಲಿದೆ.

ಉತ್ತಮ ಆರಂಭ ಕಂಡ ಗುಜರಾತ್, ಲಕ್ನೋ

ಗುಜರಾತ್ ಟೈಟನ್ಸ್ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಉತ್ತಮ ಆರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ಲಕ್ನೋವನ್ನು ಮಣಿಸಿ ಶುಭಾರಂಭ ಮಾಡಿದ ಅದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಅನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಶುಭ್‌ಮನ್ ಗಿಲ್, ಹಾರ್ದಿಕ್ ಪಾಂಡ್ಯ ಮತ್ತು ರಾಹುಲ್ ತಿವಾಟಿಯ ಉತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ಅದೇ ರೀತಿ ಮೊಹಮ್ಮದ್ ಶಮಿ, ರಶೀದ್ ಖಾನ್ ವಿಕೆಟ್ ಕಬಳಿಸುತ್ತಾ ತಂಡಕ್ಕೆ ಬೆನ್ನೆಲುಬಾಗಿದ್ದಾರೆ. ಮುಂದಿನ ಪಂದ್ಯದಲ್ಲಿ ಹೈದರಾಬಾದ್ ಅನ್ನು ಎದುರಿಸಲಿದ್ದಾರೆ.

ಲಕ್ನೋ ತಂಡವು ಮೊದಲ ಪಂದ್ಯ ಸೋತ ನಂತರ ಸತತ ಮೂರು ಪಂದ್ಯಗಳಲ್ಲಿ ಜಯಗಳಿಸಿದೆ. ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಅದ್ಭುತ ಬ್ಯಾಟಿಂಗ್ ಲೈನ್ ಅಪ್ ಹೊಂದಿದೆ. ಅವರೊಟ್ಟಿಗೆ ಕ್ವಿಂಟನ್ ಡಿ ಕಾಕ್, ಎವಿನ್ ಲೆವಿಸ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಬೌಲಿಂಗ್‌ನಲ್ಲಿ ಆವೇಶ್ ಖಾನ್ ಮತ್ತು ರವಿ ಬಿಷ್ಣೋಯಿ ಪರಿಣಾಮಕಾರಿ ಪ್ರದರ್ಶನ ನೀಡುತ್ತಿದ್ದಾರೆ. ಲಕ್ನೋ ಇಂದು ರಾತ್ರಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಸೆಣಸಲಿದೆ.

ಹೀನಾಯ ಸ್ಥಿತಿಯಲ್ಲಿ ಮುಂಬೈ ಮತ್ತು ಚನ್ನೈ

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಈ ಆವೃತ್ತಿಯಲ್ಲಿ ಗೆಲುವಿಗಾಗಿ ಪರಿತಪಿಸುತ್ತಿದೆ. ನಾಲ್ಕು ಪಂದ್ಯ ಆಡಿರುವ ಅದು ನಾಲ್ಕರಲ್ಲಿಯೂ ಸೋತಿದೆ. ಇಶಾಂತ್ ಕಿಶನ್, ಸೂರ್ಯಕುಮಾರ್ ಯಾದವ್‌ ಅದ್ಭುತ ಬ್ಯಾಟಿಂಗ್ ಆಡುತ್ತಿದ್ದರೂ, ಇಡೀ ತಂಡ ಸಾಂಘಿಕ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಜಸ್ಪ್ರಿತ್ ಬುಮ್ರ ಮತ್ತು ಪೊಲಾರ್ಡ್ ವಿಕೆಟ್ ಪಡೆಯುವಲ್ಲಿ ವಿಫಲವಾಗುತ್ತಿರುವುದು ತಂಡದ ಮೇಲೆ ಪರಿಣಾಮ ಬೀರಿದೆ. ಮುಂದಿನ ಪಂದ್ಯ ಏಪ್ರಿಲ್ 13 ರಂದು ಪಂಜಾಬ್ ಕಿಂಗ್ಸ್ ಎದುರು ಆಡಲಿದ್ದು, ಗೆಲುವಿನ ಲಯಕ್ಕೆ ಮರಳಬೇಕಿದೆ.

ಚನ್ನೈ ತಂಡವೂ ಒತ್ತಡದಲ್ಲಿದೆ. ತಂಡದ ಯಾವುದೇ ಬ್ಯಾಟ್ಸ್‌ಮನ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅನುಭವಿ ಆಟಗಾರರಿದ್ದರೂ ಉತ್ತರ ಪ್ರದರ್ಶನ ಬಾರದ ಕಾರಣ ಸತತ 4 ಸೋಲು ಕಂಡಿದೆ. ಮುಂದಿನ ಪಂದ್ಯ ಏಪ್ರಿಲ್ 12 ರಂದು ಆರ್‌ಸಿಬಿ ಎದುರು ಆಡಬೇಕಿದೆ. ಸತತ ಮೂರು ಗೆಲುವಿನೊಂದಿಗೆ ಆರ್‌ಸಿಬಿ ಆತ್ಮವಿಶ್ವಾಸದಲ್ಲಿದ್ದರೆ ಚನ್ನೈಗೆ ಗೆಲುವು ಬೇಕೆ ಬೇಕಿದೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...