Homeಸಿನಿಮಾಕ್ರೀಡೆ'ಈ ಸಲ ಕಪ್ ನಮ್ದೆ' ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ...

‘ಈ ಸಲ ಕಪ್ ನಮ್ದೆ’ ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು

ಪ್ಲೇಆಫ್‌ ಪ್ರವೇಶಿಸಿದರೆ ಅಲ್ಲಿನ ಎಲಿಮಿನೇಟರ್, ಕ್ವಾಲಿಫೈಯರ್ ಮತ್ತು ಫೈನಲ್ ಈ ಎಲ್ಲಾ ಪಂದ್ಯಗಳಲ್ಲಿ RCB ಗೆಲ್ಲಲೇಬೇಕಿದೆ.

- Advertisement -
- Advertisement -

‘ಈ ಸಲ ಕಪ್ ನಮ್ದೆ’ ಇದು RCB ಅಭಿಮಾನಿಗಳ 13 ವರ್ಷದ ಕೂಗು. ಆದರೆ ಇದುವರೆಗೂ 3 ಬಾರಿ ಫೈನಲ್ ತಲುಪಿರುವ RCB ತಂಡ ಒಮ್ಮೆಯೂ ಗೆಲುವು ಸಾಧಿಸಿ ಕಪ್ ತನ್ನದಾಗಿಸಿಕೊಳ್ಳಲು ಸಾಧ್ಯವಾಗಿಲ್ಲ. 15ನೇ ಆವೃತ್ತಿಯ ಈ ಬಾರಿಯ IPL2022 ನಲ್ಲಿ ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ ಅದು ನಂತರ ಸೋಲುಗಳ ಸುಳಿಗೆ ಸಿಲುಕಿ ಪ್ಲೇಆಫ್ ತಲುಪಲು ಒದ್ದಾಡುತ್ತಿದೆ. ಈ ಬಾರಿಯಾದರೂ ಆರ್‌ಸಿಬಿ ಕಪ್ ಗೆಲ್ಲಬೇಕಾದರೆ ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ಗೆದ್ದರಷ್ಟೆ ಅದು ಮುಂದಕ್ಕೆ ಸಾಗಲು ಸಾಧ್ಯ. ಇಲ್ಲದಿದ್ದಲ್ಲೆ ಮನೆಗೆ ಹೋಗಬೇಕಾಗುತ್ತದೆ. ಜೊತೆಗೆ ಅದೃಷ್ಟ ಎಂದರೆ ಮೇ 21ರ ಶನಿವಾರ ನಡೆಯುವ ಮುಂಬೈ ಮತ್ತು ಡೆಲ್ಲಿ ನಡುವಿನ ಪಂದ್ಯದಲ್ಲಿ ಡೆಲ್ಲಿ ಸೋತರಷ್ಟೇ ಆರ್‌ಸಿಬಿಗೆ ಅವಕಾಶ. ಒಂದು ವೇಳೆ ಆ ಪಂದ್ಯದಲ್ಲಿ ಡೆಲ್ಲಿ ಗೆಲುವು ಸಾಧಿಸಿದರೆ ಅದು ಪ್ಲೇಆಫ್ ಪ್ರವೇಶಿಸುತ್ತದೆ. ಆರ್‌ಸಿಬಿ ಟೂರ್ನಿಯಿಂದ ಹೊರಬೀಳುತ್ತದೆ. ಅದು ಹೇಗೆಂದು ವಿವರವಾಗಿ ನೋಡೋಣ.

ಟೂರ್ನಿಯುದ್ದಕ್ಕೂ ಸಾಂಘಿಕ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ 10 ಗೆಲುವುಗಳೊಂದಿಗೆ 20 ಅಂಕ ಗಳಿಸಿ ಅಗ್ರಸ್ಥಾನದೊಂದಿಗೆ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ತಲಾ 16 ಅಂಕ ಪಡೆದಿದ್ದು, ಉಳಿದ ತಲಾ ಒಂದೊಂದು ಪಂದ್ಯಗಳಲ್ಲಿ ಗೆದ್ದರೂ, ಸೋತರೂ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಉಳಿದ ಒಂದು ಸ್ಥಾನಕ್ಕಾಗಿ RCB ಸೇರಿದಂತೆ 5 ತಂಡಗಳು ಸೆಣಸಾಟ ನಡೆಸುತ್ತಿವೆ. ಆದರೆ ಹೆಚ್ಚಿನ ಸಾಧ್ಯತೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು RCB ತಂಡಕ್ಕಿದೆ.

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿವೆ. ಉಳಿದ ಹೈದರಾಬಾದ್ ಸನ್‌ರೈಸರ್ಸ್ (10 ಅಂಕ), ಪಂಜಾಬ್ ಕಿಂಗ್ಸ್ (12 ಅಂಕ), ಕೋಲ್ಕತ್ತಾ ನೈಟ್ ರೈಡರ್ಸ್ (12 ಅಂಕ), ಡೆಲ್ಲಿ ಕ್ಯಾಪಿಟಲ್ಸ್ (14 ಅಂಕ) ಮತ್ತು RCB (14 ಅಂಕ) ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಂಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಈ ಐದು ತಂಡಗಳಲ್ಲಿ ಒಂದು ತಂಡ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. 14 ಅಂಕ ಗಳಿಸಿರುವ RCB ಪ್ಲೇ ಆಫ್‌ ತಲುಪಬೇಕಾದರೆ ಅದು ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ದೊಡ್ಡ ಅಂತರದಲ್ಲಿ ಜಯಿಸಬೇಕು. ಆಗ ಅದು 16 ಅಂಕ ಗಳಿಸಿರುತ್ತದೆ. ಇನ್ನೂ ವಿವರವಾಗಿ ನೋಡುವ ಮೊದಲು ಅಂಕ ಪಟ್ಟಿಯ ಮೇಲೆ ಕಣ್ಣಾಡಿಸೋಣ ಬನ್ನಿ.

ಮೇ 16ರ ಸೋಮವಾರದ ಪಂದ್ಯದ ಅಂತ್ಯಕ್ಕೆ

ಆರ್‌ಸಿಬಿ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಸಹ ಅದರ ನೆಟ್‌ ರನ್‌ರೇಟ್ -323 ಇರುವುದು ಸಮಸ್ಯೆಯಾಗಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದೆ ಮತ್ತು ಅದರ ನೆಟ್‌ ರನ್‌ರೇಟ್ +255 ಇರುವುದು ಅದಕ್ಕೆ ವರವಾಗಿ ಪರಿಣಮಿಸಿದೆ.

ಗುರುವಾರ ಆರ್‌ಸಿಬಿ ತಂಡ ತನ್ನ ಲೀಗ್‌ನ ಕೊನೆಯ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಎದುರು ಕಣಕ್ಕಿಳಿಯಲಿದೆ. ಅಲ್ಲಿ ಗೆದ್ದರಷ್ಟೆ ಅದಕ್ಕೆ ಅವಕಾಶ. ಗೆಲುವು ಸಾಧಿಸಿದರೆ 16 ಅಂಕಗಳೊಂದಿಗೆ ತನ್ನ ಲೀಗ್ ಹೋರಾಟ ಮುಕ್ತಾಯಗೊಳಿಸಿ ಡೆಲ್ಲಿ ಸೋಲಿಗಾಗಿ ಕಾಯುತ್ತಾ ಕೂರಬೇಕಿದೆ. ಒಂದು ವೇಳೆ ಆ ಪಂದ್ಯದಲ್ಲಿ ಆರ್‌ಸಿಬಿ ಸೋತಲ್ಲಿ ಅದು ಟೂರ್ನಿಯಿಂದ ಹೊರಬೀಳುತ್ತದೆ. ಏಕೆಂದರೆ ಆಗ ಅದು ಕೇವಲ 14 ಅಂಕ ಗಳಿಸಿರುತ್ತದೆ ಮತ್ತು ಅದರ ನೆಟ್ ರನ್‌ ರೇಟ್ ಡೆಲ್ಲಿ, ಕೋಲ್ಕತಾ ತಂಡಗಳಿಗಿಂತ ಕಡಿಮೆ ಇರುವುದರಿಂದ ಅವುಗಳಿಗೆ ಪ್ಲೇ ಆಫ್ ಅವಕಾಶವಿರುತ್ತದೆ.

ಡೆಲ್ಲಿ ತಂಡವೂ ಸಹ ಆರ್‌ಸಿಬಿ ಸೋಲಿಗಾಗಿ ಕಾಯುತ್ತಿದೆ. ಏಕೆಂದರೆ ಅದು ತನ್ನ ಕೊನೆಯ ಪಂದ್ಯ ಮುಂಬೈ ಇಂಡಿಯನ್ಸ್ ಎದುರು ಆಡಲಿದೆ. ಅಲ್ಲಿ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ಪ್ರವೇಶಿಸುತ್ತದೆ. ಒಂದು ವೇಳೆ ಅಲ್ಲಿ ಸೋತರೂ ಕೂಡ 14 ಅಂಕಗಳೊಂದಿಗೆ ಉತ್ತಮ ನೆಟ್ ರನ್‌ರೇಟ್ ಇರುವುದರಿಂದ ಅದಕ್ಕೆ ಪ್ಲೇ ಆಫ್ ಅವಕಾಶ ಹೆಚ್ಚು. ಅದಕ್ಕಾಗಿ ಅದು ಆರ್‌ಸಿಬಿ ಸೋಲನ್ನು ಎದುರು ನೋಡುತ್ತಿದೆ.

ಇನ್ನು ಕೋಲ್ಕತ್ತಾ ಮತ್ತು ಪಂಜಾಬ್ ತಂಡಗಳು ಡೆಲ್ಲಿ ಮತ್ತು ಆರ್‌ಸಿಬಿ ಎರಡೂ ತಂಡಗಳ ಸೋಲಿಗಾಗಿ ಪ್ರಾರ್ಥಿಸುತ್ತಿವೆ. ಏಕೆಂದರೆ ಆ ಎರಡು ತಂಡಗಳು ತಲಾ 12 ಅಂಕ ಗಳಿಸಿದ್ದು ತಮ್ಮ ಕಡೆಯ ಪಂದ್ಯದಲ್ಲಿ ಅತಿ ದೊಡ್ಡ ಅಂತರದಲ್ಲಿ ಗೆದ್ದು ನೆಟ್ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್‌ಗೇರಲು ಕನಸು ಕಾಣುತ್ತಿವೆ. ಹೈದರಾಬಾದ್ ಸನ್‌ರೈಸರ್ಸ್ ತಂಡ ಕೇವಲ 10 ಅಂಕ ಗಳಿಸಿದ್ದು, ಉಳಿದ ಎರಡೂ ಪಂದ್ಯ ದೊಡ್ಡ ಅಂತರದಲ್ಲಿ ಗೆದದ್ದು 14 ಅಂಕ ಮತ್ತು ಉತ್ತಮ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್ ಕನಸು ಕಾಣುತ್ತಿದೆ. ಆದರೆ ಅದರ ಸಾಧ್ಯತೆ ತೀರಾ ಕಡಿಮೆ ಇದೆ.

ಒಂದು ವೇಳೆ ಆರ್‌ಸಿಬಿ ಬಯಸಿದಂತೆ ಅದು ಗುಜರಾತ್ ಎದುರು ಗೆದ್ದು, ಡೆಲ್ಲಿ ತಂಡವು ಮುಂಬೈ ಎದುರು ಸೋತರೆ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುತ್ತದೆ. ಆದರೆ ಅಲ್ಲಿ ಅದು ಅಗ್ರ 4ರಲ್ಲಿ 4 ಸ್ಥಾನದಲ್ಲಿರುವುದರಿಂದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ 3ನೇ ಸ್ಥಾನದ ತಂಡದೊಂದಿಗೆ ಕಣಕ್ಕಿಳಿದು ಗೆಲುವು ಸಾಧಿಸಬೇಕು. ನಂತರ ಸೆಮಿಫೈನಲ್ (2ನೇ ಕ್ವಾಲಿಫೈಯರ್) ಪಂದ್ಯದಲ್ಲಿ ಗೆಲುವು ಸಾಧಿಸಬೇಕು ಮತ್ತು ಅಂತಿಮವಾಗಿ ಫೈನಲ್‌ ನಲ್ಲಿ ಗೆಲುವು ಸಾಧಿಸಿದರೆ ಈ ಸಲ ಕಪ್ ನಮ್ದೆ ಎಂಬ ಘೋಷಣೆ ನಿಜವಾಗುತ್ತದೆ. ಕಷ್ಟದ ಹಾದಿ ಮುಂದಿದೆ. ಆದರೆ ಅಸಾಧ್ಯವಾದುದ್ದೇನಲ್ಲ. ಆರ್‌ಸಿಬಿ ಯಾವ ರೀತಿ ಪ್ರದರ್ಶನ ನೀಡುತ್ತದೆ ನೋಡೋಣ.

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...