Homeಸಿನಿಮಾಕ್ರೀಡೆ'ಈ ಸಲ ಕಪ್ ನಮ್ದೆ' ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ...

‘ಈ ಸಲ ಕಪ್ ನಮ್ದೆ’ ಆಗಲು RCB ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು

ಪ್ಲೇಆಫ್‌ ಪ್ರವೇಶಿಸಿದರೆ ಅಲ್ಲಿನ ಎಲಿಮಿನೇಟರ್, ಕ್ವಾಲಿಫೈಯರ್ ಮತ್ತು ಫೈನಲ್ ಈ ಎಲ್ಲಾ ಪಂದ್ಯಗಳಲ್ಲಿ RCB ಗೆಲ್ಲಲೇಬೇಕಿದೆ.

- Advertisement -
- Advertisement -

‘ಈ ಸಲ ಕಪ್ ನಮ್ದೆ’ ಇದು RCB ಅಭಿಮಾನಿಗಳ 13 ವರ್ಷದ ಕೂಗು. ಆದರೆ ಇದುವರೆಗೂ 3 ಬಾರಿ ಫೈನಲ್ ತಲುಪಿರುವ RCB ತಂಡ ಒಮ್ಮೆಯೂ ಗೆಲುವು ಸಾಧಿಸಿ ಕಪ್ ತನ್ನದಾಗಿಸಿಕೊಳ್ಳಲು ಸಾಧ್ಯವಾಗಿಲ್ಲ. 15ನೇ ಆವೃತ್ತಿಯ ಈ ಬಾರಿಯ IPL2022 ನಲ್ಲಿ ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ ಅದು ನಂತರ ಸೋಲುಗಳ ಸುಳಿಗೆ ಸಿಲುಕಿ ಪ್ಲೇಆಫ್ ತಲುಪಲು ಒದ್ದಾಡುತ್ತಿದೆ. ಈ ಬಾರಿಯಾದರೂ ಆರ್‌ಸಿಬಿ ಕಪ್ ಗೆಲ್ಲಬೇಕಾದರೆ ಮುಂದಿನ ನಾಲ್ಕೂ ಪಂದ್ಯಗಳನ್ನು ಗೆಲ್ಲಲೇಬೇಕು, ಜೊತೆಗೆ ಅದೃಷ್ಟವೂ ಇರಬೇಕು. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ಗೆದ್ದರಷ್ಟೆ ಅದು ಮುಂದಕ್ಕೆ ಸಾಗಲು ಸಾಧ್ಯ. ಇಲ್ಲದಿದ್ದಲ್ಲೆ ಮನೆಗೆ ಹೋಗಬೇಕಾಗುತ್ತದೆ. ಜೊತೆಗೆ ಅದೃಷ್ಟ ಎಂದರೆ ಮೇ 21ರ ಶನಿವಾರ ನಡೆಯುವ ಮುಂಬೈ ಮತ್ತು ಡೆಲ್ಲಿ ನಡುವಿನ ಪಂದ್ಯದಲ್ಲಿ ಡೆಲ್ಲಿ ಸೋತರಷ್ಟೇ ಆರ್‌ಸಿಬಿಗೆ ಅವಕಾಶ. ಒಂದು ವೇಳೆ ಆ ಪಂದ್ಯದಲ್ಲಿ ಡೆಲ್ಲಿ ಗೆಲುವು ಸಾಧಿಸಿದರೆ ಅದು ಪ್ಲೇಆಫ್ ಪ್ರವೇಶಿಸುತ್ತದೆ. ಆರ್‌ಸಿಬಿ ಟೂರ್ನಿಯಿಂದ ಹೊರಬೀಳುತ್ತದೆ. ಅದು ಹೇಗೆಂದು ವಿವರವಾಗಿ ನೋಡೋಣ.

ಟೂರ್ನಿಯುದ್ದಕ್ಕೂ ಸಾಂಘಿಕ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ 10 ಗೆಲುವುಗಳೊಂದಿಗೆ 20 ಅಂಕ ಗಳಿಸಿ ಅಗ್ರಸ್ಥಾನದೊಂದಿಗೆ ಈಗಾಗಲೇ ಪ್ಲೇಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ತಲಾ 16 ಅಂಕ ಪಡೆದಿದ್ದು, ಉಳಿದ ತಲಾ ಒಂದೊಂದು ಪಂದ್ಯಗಳಲ್ಲಿ ಗೆದ್ದರೂ, ಸೋತರೂ ಸುಲಭವಾಗಿ ಪ್ಲೇ ಆಫ್ ಪ್ರವೇಶಿಸಲಿವೆ. ಉಳಿದ ಒಂದು ಸ್ಥಾನಕ್ಕಾಗಿ RCB ಸೇರಿದಂತೆ 5 ತಂಡಗಳು ಸೆಣಸಾಟ ನಡೆಸುತ್ತಿವೆ. ಆದರೆ ಹೆಚ್ಚಿನ ಸಾಧ್ಯತೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು RCB ತಂಡಕ್ಕಿದೆ.

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮತ್ತು ಚನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿವೆ. ಉಳಿದ ಹೈದರಾಬಾದ್ ಸನ್‌ರೈಸರ್ಸ್ (10 ಅಂಕ), ಪಂಜಾಬ್ ಕಿಂಗ್ಸ್ (12 ಅಂಕ), ಕೋಲ್ಕತ್ತಾ ನೈಟ್ ರೈಡರ್ಸ್ (12 ಅಂಕ), ಡೆಲ್ಲಿ ಕ್ಯಾಪಿಟಲ್ಸ್ (14 ಅಂಕ) ಮತ್ತು RCB (14 ಅಂಕ) ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಂಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಈ ಐದು ತಂಡಗಳಲ್ಲಿ ಒಂದು ತಂಡ ಮಾತ್ರ ಪ್ಲೇ ಆಫ್ ಪ್ರವೇಶ ಸಾಧ್ಯ. 14 ಅಂಕ ಗಳಿಸಿರುವ RCB ಪ್ಲೇ ಆಫ್‌ ತಲುಪಬೇಕಾದರೆ ಅದು ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದರು ದೊಡ್ಡ ಅಂತರದಲ್ಲಿ ಜಯಿಸಬೇಕು. ಆಗ ಅದು 16 ಅಂಕ ಗಳಿಸಿರುತ್ತದೆ. ಇನ್ನೂ ವಿವರವಾಗಿ ನೋಡುವ ಮೊದಲು ಅಂಕ ಪಟ್ಟಿಯ ಮೇಲೆ ಕಣ್ಣಾಡಿಸೋಣ ಬನ್ನಿ.

ಮೇ 16ರ ಸೋಮವಾರದ ಪಂದ್ಯದ ಅಂತ್ಯಕ್ಕೆ

ಆರ್‌ಸಿಬಿ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದ್ದರೂ ಸಹ ಅದರ ನೆಟ್‌ ರನ್‌ರೇಟ್ -323 ಇರುವುದು ಸಮಸ್ಯೆಯಾಗಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 13 ಪಂದ್ಯಗಳಲ್ಲಿ 14 ಅಂಕ ಗಳಿಸಿದೆ ಮತ್ತು ಅದರ ನೆಟ್‌ ರನ್‌ರೇಟ್ +255 ಇರುವುದು ಅದಕ್ಕೆ ವರವಾಗಿ ಪರಿಣಮಿಸಿದೆ.

ಗುರುವಾರ ಆರ್‌ಸಿಬಿ ತಂಡ ತನ್ನ ಲೀಗ್‌ನ ಕೊನೆಯ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಎದುರು ಕಣಕ್ಕಿಳಿಯಲಿದೆ. ಅಲ್ಲಿ ಗೆದ್ದರಷ್ಟೆ ಅದಕ್ಕೆ ಅವಕಾಶ. ಗೆಲುವು ಸಾಧಿಸಿದರೆ 16 ಅಂಕಗಳೊಂದಿಗೆ ತನ್ನ ಲೀಗ್ ಹೋರಾಟ ಮುಕ್ತಾಯಗೊಳಿಸಿ ಡೆಲ್ಲಿ ಸೋಲಿಗಾಗಿ ಕಾಯುತ್ತಾ ಕೂರಬೇಕಿದೆ. ಒಂದು ವೇಳೆ ಆ ಪಂದ್ಯದಲ್ಲಿ ಆರ್‌ಸಿಬಿ ಸೋತಲ್ಲಿ ಅದು ಟೂರ್ನಿಯಿಂದ ಹೊರಬೀಳುತ್ತದೆ. ಏಕೆಂದರೆ ಆಗ ಅದು ಕೇವಲ 14 ಅಂಕ ಗಳಿಸಿರುತ್ತದೆ ಮತ್ತು ಅದರ ನೆಟ್ ರನ್‌ ರೇಟ್ ಡೆಲ್ಲಿ, ಕೋಲ್ಕತಾ ತಂಡಗಳಿಗಿಂತ ಕಡಿಮೆ ಇರುವುದರಿಂದ ಅವುಗಳಿಗೆ ಪ್ಲೇ ಆಫ್ ಅವಕಾಶವಿರುತ್ತದೆ.

ಡೆಲ್ಲಿ ತಂಡವೂ ಸಹ ಆರ್‌ಸಿಬಿ ಸೋಲಿಗಾಗಿ ಕಾಯುತ್ತಿದೆ. ಏಕೆಂದರೆ ಅದು ತನ್ನ ಕೊನೆಯ ಪಂದ್ಯ ಮುಂಬೈ ಇಂಡಿಯನ್ಸ್ ಎದುರು ಆಡಲಿದೆ. ಅಲ್ಲಿ ಗೆದ್ದರೆ ಅದು ಸುಲಭವಾಗಿ ಪ್ಲೇ ಆಫ್ ಪ್ರವೇಶಿಸುತ್ತದೆ. ಒಂದು ವೇಳೆ ಅಲ್ಲಿ ಸೋತರೂ ಕೂಡ 14 ಅಂಕಗಳೊಂದಿಗೆ ಉತ್ತಮ ನೆಟ್ ರನ್‌ರೇಟ್ ಇರುವುದರಿಂದ ಅದಕ್ಕೆ ಪ್ಲೇ ಆಫ್ ಅವಕಾಶ ಹೆಚ್ಚು. ಅದಕ್ಕಾಗಿ ಅದು ಆರ್‌ಸಿಬಿ ಸೋಲನ್ನು ಎದುರು ನೋಡುತ್ತಿದೆ.

ಇನ್ನು ಕೋಲ್ಕತ್ತಾ ಮತ್ತು ಪಂಜಾಬ್ ತಂಡಗಳು ಡೆಲ್ಲಿ ಮತ್ತು ಆರ್‌ಸಿಬಿ ಎರಡೂ ತಂಡಗಳ ಸೋಲಿಗಾಗಿ ಪ್ರಾರ್ಥಿಸುತ್ತಿವೆ. ಏಕೆಂದರೆ ಆ ಎರಡು ತಂಡಗಳು ತಲಾ 12 ಅಂಕ ಗಳಿಸಿದ್ದು ತಮ್ಮ ಕಡೆಯ ಪಂದ್ಯದಲ್ಲಿ ಅತಿ ದೊಡ್ಡ ಅಂತರದಲ್ಲಿ ಗೆದ್ದು ನೆಟ್ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್‌ಗೇರಲು ಕನಸು ಕಾಣುತ್ತಿವೆ. ಹೈದರಾಬಾದ್ ಸನ್‌ರೈಸರ್ಸ್ ತಂಡ ಕೇವಲ 10 ಅಂಕ ಗಳಿಸಿದ್ದು, ಉಳಿದ ಎರಡೂ ಪಂದ್ಯ ದೊಡ್ಡ ಅಂತರದಲ್ಲಿ ಗೆದದ್ದು 14 ಅಂಕ ಮತ್ತು ಉತ್ತಮ ರನ್ ರೇಟ್ ಆಧಾರದಲ್ಲಿ ಪ್ಲೇ ಆಫ್ ಕನಸು ಕಾಣುತ್ತಿದೆ. ಆದರೆ ಅದರ ಸಾಧ್ಯತೆ ತೀರಾ ಕಡಿಮೆ ಇದೆ.

ಒಂದು ವೇಳೆ ಆರ್‌ಸಿಬಿ ಬಯಸಿದಂತೆ ಅದು ಗುಜರಾತ್ ಎದುರು ಗೆದ್ದು, ಡೆಲ್ಲಿ ತಂಡವು ಮುಂಬೈ ಎದುರು ಸೋತರೆ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುತ್ತದೆ. ಆದರೆ ಅಲ್ಲಿ ಅದು ಅಗ್ರ 4ರಲ್ಲಿ 4 ಸ್ಥಾನದಲ್ಲಿರುವುದರಿಂದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ 3ನೇ ಸ್ಥಾನದ ತಂಡದೊಂದಿಗೆ ಕಣಕ್ಕಿಳಿದು ಗೆಲುವು ಸಾಧಿಸಬೇಕು. ನಂತರ ಸೆಮಿಫೈನಲ್ (2ನೇ ಕ್ವಾಲಿಫೈಯರ್) ಪಂದ್ಯದಲ್ಲಿ ಗೆಲುವು ಸಾಧಿಸಬೇಕು ಮತ್ತು ಅಂತಿಮವಾಗಿ ಫೈನಲ್‌ ನಲ್ಲಿ ಗೆಲುವು ಸಾಧಿಸಿದರೆ ಈ ಸಲ ಕಪ್ ನಮ್ದೆ ಎಂಬ ಘೋಷಣೆ ನಿಜವಾಗುತ್ತದೆ. ಕಷ್ಟದ ಹಾದಿ ಮುಂದಿದೆ. ಆದರೆ ಅಸಾಧ್ಯವಾದುದ್ದೇನಲ್ಲ. ಆರ್‌ಸಿಬಿ ಯಾವ ರೀತಿ ಪ್ರದರ್ಶನ ನೀಡುತ್ತದೆ ನೋಡೋಣ.

ಇದನ್ನೂ ಓದಿ: ಥಾಮಸ್ ಕಪ್: ಚೊಚ್ಚಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತ

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...