Homeಸಿನಿಮಾಕ್ರೀಡೆIPL ಫೈನಲ್: ಅಹಮದಾಬಾದ್‌ನಲ್ಲಿ ಇಂದು ಮಳೆ ಬಂದು ಪಂದ್ಯ ರದ್ದಾದರೆ ಟ್ರೋಫಿ ಯಾರಿಗೆ?

IPL ಫೈನಲ್: ಅಹಮದಾಬಾದ್‌ನಲ್ಲಿ ಇಂದು ಮಳೆ ಬಂದು ಪಂದ್ಯ ರದ್ದಾದರೆ ಟ್ರೋಫಿ ಯಾರಿಗೆ?

- Advertisement -
- Advertisement -

ಮೇ 28ರ ಭಾನುವಾರ ಗುಜರಾತ್‌ನ ಅಹಮದಾಬಾದ್‌ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳ ನಡುವೆ IPL ಫೈನಲ್ ಪಂದ್ಯ ನಡೆಯಬೇಕಿತ್ತು. ಆದರೆ ಭಾರೀ ಮಳೆಗೆ ಒಂದು ಬಾಲ್ ಸಹ ಹಾಕಲಾಗದೆ ಪಂದ್ಯವನ್ನು ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಗಿದೆ. ಅಹಮದಾಬಾದ್‌ನಲ್ಲಿ ಇಂದು ಸಹ ಹೆಚ್ಚು ಮಳೆ ಬಂದು ಪಂದ್ಯ ರದ್ದಾದರೆ ಟ್ರೋಫಿ ಯಾರಿಗೆ ಎಂಬ ವಿಷಯದ ಕುರಿತು ಚರ್ಚೆ ನಡೆಯುತ್ತಿದೆ. ಈ ಕುರಿತು ಬಿಸಿಸಿಐ ನಿಯಮಗಳು ಏನು ಹೇಳುತ್ತವೆ ಎಂಬುದನ್ನು ನೋಡೋಣ.

ಇಂದು ಸಂಜೆ 7.30ಕ್ಕೆ ಫೈನಲ್ ಪಂದ್ಯ ಆರಂಭವಾಗಬೇಕಿದೆ. ಆದರೆ ಮಳೆ ಬಂದಲ್ಲಿ ಪಂದ್ಯವನ್ನು ಕೆಲ ಕಾಲ ಮುಂದೂಡಲಾಗುತ್ತದೆ. 9.30ರ ನಂತರವೂ ಮಳೆ ಬಂದರೆ ಓವರ್‌ಗಳನ್ನು ಕಡಿತಗೊಳಿಸಿ ಪಂದ್ಯ ಆಡಿಸಲಾಗುತ್ತದೆ. ಒಂದು ವೇಳೆ ಮತ್ತೆ ಬಂದಲ್ಲಿ ರಾತ್ರಿ 12 ಗಂಟೆಯವರೆಗೂ ಮಳೆ ನಿಲ್ಲಲು ಕಾಯಲಾಗುತ್ತದೆ. ಆಗ ಮಳೆ ನಿಂತಲ್ಲಿ ತಲಾ 5 ಓವರ್‌ಗಳ ಪಂದ್ಯ ಆಡಿಸಲಾಗುತ್ತದೆ. ಮಳೆ ನಿಂತು ಗ್ರೌಂಡ್ ಅನ್ನು ಒಣಗಿಸಲು ಸಮಯ ಬೇಕಾದರೆ 1 ಓವರ್‌ಗಳ ಸೂಪರ್ ಓವರ್ ಪಂದ್ಯ ಆಡಿಸಲಾಗುತ್ತದೆ.

ಪೂರ್ತಿ ಮಳೆ ಬಂದು ಪಂದ್ಯವೇ ರದ್ದಾಗಬೇಕಾದರೆ??

ಇಂದು ಸಹ ಧಾರಾಕಾರ ಮಳೆ ಸುರಿದು 1 ಓವರ್ ಕೂಡ ಆಡದೇ ಪಂದ್ಯ ರದ್ದಾದರೆ ಆಗ ಐಪಿಎಲ್ ನಿಯಮಗಳ ಪ್ರಕಾರ ಲೀಗ್ ಹಂತದ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡವನ್ನು ಚಾಂಪಿಯನ್ಸ್ ಎಂದು ಘೋಷಿಸಲಾಗುತ್ತದೆ. ಆ ಪ್ರಕಾರ ಈ ಋತುವಿನಲ್ಲಿ ಗುಜರಾತ್ ಟೈಟನ್ಸ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ. ಅದು 14 ಪಂದ್ಯಗಳಲ್ಲಿ 10 ಗೆಲುವು ಮತ್ತು 4 ಸೋಲಿನೊಂದಿಗೆ 20 ಅಂಕಗಳನ್ನು ಪಡೆದಿದ್ದು, ಮಳೆ ಬಂದು ಪಂದ್ಯ ರದ್ದಾದರೆ ಗುಜರಾತ್ ಟೈಟನ್ಸ್ ಚಾಂಪಿಯನ್ ಆಗಲಿದೆ.

ಇನ್ನೊಂದೆಡೆ ಚನ್ನೈ ಸೂಪರ್ ಕಿಂಗ್ಸ್ ತಂಡವು 14 ಪಂದ್ಯಗಳಲ್ಲಿ 8 ಗೆಲುವು, ಒಂದು ಪಂದ್ಯ ರದ್ದು ಮತ್ತು 5 ಸೋಲಿನೊಂದಿಗೆ 17 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಮಳೆ ಬಂದರೆ ಅದು ಚನ್ನೈಗೆ ಅನಾನುಕೂಲವಾಗಲಿದೆ.

ಇದನ್ನೂ ಓದಿ:  ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಟೀಕಿಸಿದ ಬಿಜೆಪಿಗೆ ತಿರುಗೇಟು ಕೊಟ್ಟ ಶೆಟ್ಟರ್, ಸವದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...